Homeಕರ್ನಾಟಕದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

ದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಅಧ್ಯಕ್ಷ ಮಹೇಶ ಜೋಶಿಯವರು ಮಹಿಳಾ ನೌಕರರೊಬ್ಬರಿಗೆ ವಂಚನೆ ಮಾಡಿದ್ದಾರೆಂಬ ಗುರುತರ ಆರೋಪ ಹೊರಬಿದ್ದಿದೆ.

ಪ್ರಕರಣವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೆಟ್ಟಿಲೇರಿದ್ದು, ಕಸಾಪ ಕಾರ್ಯದರ್ಶಿಗೆ ಇಲಾಖೆಯ ನಿರ್ದೇಶಕರು ಪತ್ರ ಬರೆದಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೇವೆಯಲ್ಲಿರುವ ಕೆ.ನಾಗರತ್ನಮ್ಮನವರು ಹಾಲಿ ಅಧೀಕ್ಷಕ ಹುದ್ದೆಯಲ್ಲಿದ್ದು, ಖಾಲಿ ಇರುವ ವ್ಯವಸ್ಥಾಪಕ ಹುದ್ದೆಗೆ ಅರ್ಹರಾಗಿರುತ್ತಾರೆ. ಇವರು ಇರಬೇಕಾದ ಹುದ್ದೆಯಲ್ಲಿ ಇವರಿಗಿಂತ ಕಿರಿಯ ಹುದ್ದೆಯ ಪ್ರಥಮ ದರ್ಜೆ ಸಹಾಯಕ ಪಾರ್ಶ್ವನಾಥ ಅವರನ್ನು ಪ್ರಭಾರದಲ್ಲಿ ಇರಿಸಿರುವುದು ವಿವಾದಕ್ಕೆ ಕಾರಣವಾಗಿದೆ.

“ವ್ಯವಸ್ಥಾಪಕ ಹುದ್ದೆಯನ್ನು ಕೆ.ನಾಗರತ್ನಮ್ಮ ಅವರಿಗೆ ನೀಡದೆ ಮಹೇಶ ಜೋಶಿಯವರು ವಂಚನೆ ಮಾಡಿದ್ದಾರೆ. ಮಹಿಳಾ ನೌಕರರಾದ ನಾಗರತ್ನಮ್ಮನವರಿಗೆ ರಕ್ಷಣೆ ನೀಡದೆ ನಿರ್ಲಕ್ಷ್ಯ ಮಾಡಲಾಗಿದೆ. ದಲಿತರ ರಕ್ಷಣೆಗಾಗಿ ಇರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಗಮನಕ್ಕೂ ಈ ವಿಷಯವನ್ನು ತರಲಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಸಾಹಿತ್ಯ ಪರಿಷತ್‌ನಲ್ಲಿ ಈ ದಲಿತ ಮಹಿಳೆ ಮಾನಸಿಕ ಅಪಮಾನಕ್ಕೆ ಗುರಿಯಾಗಿದ್ದಾರೆ. ಇದರ ಮೂಲಕ ದಲಿತ ಮಹಿಳೆಗೆ ವಂಚನೆ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ. ಸದರಿ ವಿಷಯದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಂಪೂರ್ಣ ವರದಿಯನ್ನು ತುರ್ತಾಗಿ ಇಲಾಖೆಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಇಲಾಖೆಯಲ್ಲಿ ಸ್ವೀಕೃತವಾಗಿರುವ ಮನವಿಗಳನ್ನು ಕಸಾಪಕ್ಕೆ ವರ್ಗಾಯಿಸಿ ಮಾಹಿತಿಯನ್ನು ಸಂಬಂಧಪಟ್ಟವರಿಗೆ ನೀಡಿ ಅದರ ಪ್ರತಿಯನ್ನು ಇಲಾಖೆಗೆ ಕಳುಹಿಸಿಕೊಡಲು ತಿಳಿಸಲಾಗಿದೆ. ಆದರೆ ಇಲ್ಲಿಯವರೆಗೂ ತಮ್ಮಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪತ್ರಗಳು ಬಂದಿಲ್ಲ” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

“ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಮಹಾಸಭಾವು ಮಾಹಿತಿ ಹಕ್ಕು ಅಧಿನಿಯಮದಡಿ ಮೊದಲೇ ಮೇಲ್ಮನವಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಅರ್ಜಿಯನ್ನು ಇತ್ಯರ್ಥ ಪಡಿಸಬೇಕಾಗಿರುವುದರಿಂದ ದಲಿತ ಮಹಾಸಭಾದವರು ಮಾಹಿತಿ ಹಕ್ಕು ಅಧಿನಿಯಮದಡಿ ಕೋರಿರುವ ಮಾಹಿತಿಯನ್ನು ನೀಡಲಾಗಿದಯೇ? ಅಥವಾ ಇಲ್ಲವೇ ಎಂಬ ಬಗ್ಗೆ ಈ ಪತ್ರ ತಲುಪಿದ ದಿನವೇ ಕಳುಹಿಸಿಕೊಡಬೇಕು” ಎಂದು ಪತ್ರದಲ್ಲಿ ಕೋರಲಾಗಿದೆ.

ಇದನ್ನೂ ಓದಿರಿ: ಶುರುವಾದ ಮಹೇಶ ಜೋಶಿ ಮಂತ್ರಗಳು!

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಹಿತಿ ಹಕ್ಕು ತಜ್ಞರಾದ ಜೆ.ಎಂ.ರಾಜಶೇಖರ ಅವರು, “ದಲಿತ ಮಹಿಳೆಗೆ ವಂಚನೆ ಸಂಬಂಧ ಮಹೇಶ ಜೋಷಿ ವಿರುದ್ಧ ತನಿಖೆಗೆ ದೂರು. ದಿನಕ್ಕೊಂದೊಂದು ರಾದ್ಧಾಂತ ಮೈಮೇಲೆಳೆದುಕೊಂಡು ಕಸಾಪ ಮಾನ, ಘನತೆ ಹರಾಜು ಹಾಕುತ್ತಿರುವ ಹೆಸರಾಂತ ನಾಡಿನ ಸಾಹಿತಿ! ಏನ್ ಗ್ರಹಚಾರನಪ ಛೇ ಛೇ ಛೇ!?” ಎಂದು ಟೀಕಿಸಿದ್ದಾರೆ.

ಮಹೇಶ ಜೋಶಿಯವರ ಸರ್ವಾಧಿಕಾರ

ಕಸಾಪ ಅಧ್ಯಕ್ಷರಾದ ಮಹೇಶ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದರು. ಅಧ್ಯಕ್ಷ ಜೋಶಿ ಅವರ ಈ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿತ್ತು.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...