Homeಕರ್ನಾಟಕದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

ದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಅಧ್ಯಕ್ಷ ಮಹೇಶ ಜೋಶಿಯವರು ಮಹಿಳಾ ನೌಕರರೊಬ್ಬರಿಗೆ ವಂಚನೆ ಮಾಡಿದ್ದಾರೆಂಬ ಗುರುತರ ಆರೋಪ ಹೊರಬಿದ್ದಿದೆ.

ಪ್ರಕರಣವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೆಟ್ಟಿಲೇರಿದ್ದು, ಕಸಾಪ ಕಾರ್ಯದರ್ಶಿಗೆ ಇಲಾಖೆಯ ನಿರ್ದೇಶಕರು ಪತ್ರ ಬರೆದಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೇವೆಯಲ್ಲಿರುವ ಕೆ.ನಾಗರತ್ನಮ್ಮನವರು ಹಾಲಿ ಅಧೀಕ್ಷಕ ಹುದ್ದೆಯಲ್ಲಿದ್ದು, ಖಾಲಿ ಇರುವ ವ್ಯವಸ್ಥಾಪಕ ಹುದ್ದೆಗೆ ಅರ್ಹರಾಗಿರುತ್ತಾರೆ. ಇವರು ಇರಬೇಕಾದ ಹುದ್ದೆಯಲ್ಲಿ ಇವರಿಗಿಂತ ಕಿರಿಯ ಹುದ್ದೆಯ ಪ್ರಥಮ ದರ್ಜೆ ಸಹಾಯಕ ಪಾರ್ಶ್ವನಾಥ ಅವರನ್ನು ಪ್ರಭಾರದಲ್ಲಿ ಇರಿಸಿರುವುದು ವಿವಾದಕ್ಕೆ ಕಾರಣವಾಗಿದೆ.

“ವ್ಯವಸ್ಥಾಪಕ ಹುದ್ದೆಯನ್ನು ಕೆ.ನಾಗರತ್ನಮ್ಮ ಅವರಿಗೆ ನೀಡದೆ ಮಹೇಶ ಜೋಶಿಯವರು ವಂಚನೆ ಮಾಡಿದ್ದಾರೆ. ಮಹಿಳಾ ನೌಕರರಾದ ನಾಗರತ್ನಮ್ಮನವರಿಗೆ ರಕ್ಷಣೆ ನೀಡದೆ ನಿರ್ಲಕ್ಷ್ಯ ಮಾಡಲಾಗಿದೆ. ದಲಿತರ ರಕ್ಷಣೆಗಾಗಿ ಇರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಗಮನಕ್ಕೂ ಈ ವಿಷಯವನ್ನು ತರಲಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಸಾಹಿತ್ಯ ಪರಿಷತ್‌ನಲ್ಲಿ ಈ ದಲಿತ ಮಹಿಳೆ ಮಾನಸಿಕ ಅಪಮಾನಕ್ಕೆ ಗುರಿಯಾಗಿದ್ದಾರೆ. ಇದರ ಮೂಲಕ ದಲಿತ ಮಹಿಳೆಗೆ ವಂಚನೆ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ. ಸದರಿ ವಿಷಯದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಂಪೂರ್ಣ ವರದಿಯನ್ನು ತುರ್ತಾಗಿ ಇಲಾಖೆಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಇಲಾಖೆಯಲ್ಲಿ ಸ್ವೀಕೃತವಾಗಿರುವ ಮನವಿಗಳನ್ನು ಕಸಾಪಕ್ಕೆ ವರ್ಗಾಯಿಸಿ ಮಾಹಿತಿಯನ್ನು ಸಂಬಂಧಪಟ್ಟವರಿಗೆ ನೀಡಿ ಅದರ ಪ್ರತಿಯನ್ನು ಇಲಾಖೆಗೆ ಕಳುಹಿಸಿಕೊಡಲು ತಿಳಿಸಲಾಗಿದೆ. ಆದರೆ ಇಲ್ಲಿಯವರೆಗೂ ತಮ್ಮಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪತ್ರಗಳು ಬಂದಿಲ್ಲ” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

“ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಮಹಾಸಭಾವು ಮಾಹಿತಿ ಹಕ್ಕು ಅಧಿನಿಯಮದಡಿ ಮೊದಲೇ ಮೇಲ್ಮನವಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಅರ್ಜಿಯನ್ನು ಇತ್ಯರ್ಥ ಪಡಿಸಬೇಕಾಗಿರುವುದರಿಂದ ದಲಿತ ಮಹಾಸಭಾದವರು ಮಾಹಿತಿ ಹಕ್ಕು ಅಧಿನಿಯಮದಡಿ ಕೋರಿರುವ ಮಾಹಿತಿಯನ್ನು ನೀಡಲಾಗಿದಯೇ? ಅಥವಾ ಇಲ್ಲವೇ ಎಂಬ ಬಗ್ಗೆ ಈ ಪತ್ರ ತಲುಪಿದ ದಿನವೇ ಕಳುಹಿಸಿಕೊಡಬೇಕು” ಎಂದು ಪತ್ರದಲ್ಲಿ ಕೋರಲಾಗಿದೆ.

ಇದನ್ನೂ ಓದಿರಿ: ಶುರುವಾದ ಮಹೇಶ ಜೋಶಿ ಮಂತ್ರಗಳು!

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಹಿತಿ ಹಕ್ಕು ತಜ್ಞರಾದ ಜೆ.ಎಂ.ರಾಜಶೇಖರ ಅವರು, “ದಲಿತ ಮಹಿಳೆಗೆ ವಂಚನೆ ಸಂಬಂಧ ಮಹೇಶ ಜೋಷಿ ವಿರುದ್ಧ ತನಿಖೆಗೆ ದೂರು. ದಿನಕ್ಕೊಂದೊಂದು ರಾದ್ಧಾಂತ ಮೈಮೇಲೆಳೆದುಕೊಂಡು ಕಸಾಪ ಮಾನ, ಘನತೆ ಹರಾಜು ಹಾಕುತ್ತಿರುವ ಹೆಸರಾಂತ ನಾಡಿನ ಸಾಹಿತಿ! ಏನ್ ಗ್ರಹಚಾರನಪ ಛೇ ಛೇ ಛೇ!?” ಎಂದು ಟೀಕಿಸಿದ್ದಾರೆ.

ಮಹೇಶ ಜೋಶಿಯವರ ಸರ್ವಾಧಿಕಾರ

ಕಸಾಪ ಅಧ್ಯಕ್ಷರಾದ ಮಹೇಶ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದರು. ಅಧ್ಯಕ್ಷ ಜೋಶಿ ಅವರ ಈ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿತ್ತು.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...