Homeಕರ್ನಾಟಕBJP ಟಿಕೆಟ್ ಕೊಡಿಸುವುದಾಗಿ ವಂಚನೆ, ಕಟೀಲ್ ಶಾಮೀಲು: ಆರೋಪ

BJP ಟಿಕೆಟ್ ಕೊಡಿಸುವುದಾಗಿ ವಂಚನೆ, ಕಟೀಲ್ ಶಾಮೀಲು: ಆರೋಪ

- Advertisement -
- Advertisement -

ಚೈತ್ರಾ ವಂಚನೆ ಪ್ರಕರಣದ ಮಾದರಿಯಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿರುವ ಕುರಿತು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರದ ಟಿಕೆಟ್ ಕೋಡಿಸುವುದಾಗಿ ಕೊಟ್ಟೂರು ತಾಲೂಕಿನ ಬೆನಕನಹಳ್ಳಿಯ ರೇವಣಸಿದ್ದಪ್ಪ ಮತ್ತು ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್ ಪಿ ಎಂಬವರು ಒಟ್ಟು 2.03 ಕೋಟಿ ರೂ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ನಿವೃತ್ತ ಎಂಜಿನಿಯರ್ ಸಿ ಶಿವಮೂರ್ತಿ ಅವರು ದೂರು ದಾಖಲಿಸಿದ್ದಾರೆ.

”ಈ ವಂಚನೆ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರೂ ಶಾಮೀಲಾಗಿದ್ದಾರೆ. ಹಣವನ್ನು ವಾಪಾಸ್ ಕೊಡುವಂತೆ ಒತ್ತಾಯಿಸಿದರೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಲೋಕೋಪಯೋಗಿ (ಪಿಡಬ್ಲ್ಯುಡಿ) ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ರವಿವಾರ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಮೂರ್ತಿ ಅವರು, ”ಕೊಟ್ಟೂರಿನ ರೇವಣ ಸಿದ್ದಪ್ಪ ನನ್ನ ನಿವೃತ್ತಿ ಕಾರ್ಯಕ್ರಮದಲ್ಲಿ ಪರಿಚಯವಾಗಿ 2023ರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ನನ್ನನ್ನು ಪದೇ ಪದೇ ಭೇಟಿ ಮಾಡಿ ಬಿಜೆಪಿಯ ಟಿಕೆಟನ್ನು ನಿಮಗೆ ಕೊಡಿಸುವೆ, ನೀವು ಟಿಕೆಟ್ ಪಡೆಯಲು ಯೋಗ್ಯರು.. ಎಂದು ಪುಸಲಾಯಿಸುವ ಮಾತುಗಳನ್ನು ಹೇಳಿ ನನಗೆ ಟಿಕೆಟ್ ಮೇಲೆ ಶ್ರದ್ಧೆ ಬರುವ ರೀತಿಯಲ್ಲಿ ನಡೆದುಕೊಂಡಿದ್ದರು. 2022ರ ಅ.23ರಂದು ರೇವಣಸಿದ್ದಪ್ಪ ನನ್ನನ್ನು ಬೆಂಗಳೂರಿಗೆ ಕರೆತಂದು ಒಂದು ಹೋಟೆಲ್‌ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದರು” ಎಂದು ವಿವರಿಸಿದರು.

”ಶೇಖರ್ ಎಸ್.ಪಿ. ನನಗೆ ಪರಿಚಯ ಆದ ಮೇಲೆ, ಮಲ್ಲೇಶ್ವರದ ಬಿಜೆಪಿ ಕಚೇರಿ ಜಗನ್ನಾಥ ವನಕ್ಕೆ ಕರೆದುಕೊಂಡು ಹೋಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಸಿದರು. ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್ ವಿಚಾರದ ಎಲ್ಲ ವ್ಯವಹಾರವನ್ನು ಶೇಖರ್ ಎನ್.ಪಿ. ಅವರ ಬಳಿಯೇ ಮಾತನಾಡಿ” ಎಂದು ತಿಳಿಸಿದರು.

”ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಶೇಖರ್ ಎನ್.ಪಿ. ನನ್ನ ಬಳಿ ಹಣ ಕೇಳಿದರು. ಟಿಕೆಟ್ ಸಿಗದೇ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ ನೀಡುತ್ತೇನೆಂದು ತಿಳಿಸಿದರು. ಹೀಗೆ 2022ರ ಅ.9ರಿಂದ ಆರಂಭವಾದ ನಮ್ಮ ಹಣದ ವ್ಯವಹಾರ ಎಪ್ರಿಲ್ 2023ಕ್ಕೆ 2.55 ಕೋಟಿ ರೂ. ಪಡೆದುಕೊಂಡಿದ್ದಾರೆ” ಎಂದು ಅವರು ದೂರಿದರು.

”2022ರ ಅ.15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಎನ್.ಪಿ. ಕುಂದಾಪುರದ ಅರ್ಜುನ ಎಂಬವನನ್ನು ಕಳುಹಿಸಿ 50 ಲಕ್ಷ ರೂ. ಪಡೆದಿದ್ದಾರೆ. ಆನಂತರ ಆನ್ಲೈನ್ ಪೇಮೆಂಟ್ ಸೇರಿ ಇದೇ ರೀತಿಯಲ್ಲಿ 1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸಂದಾಯವಾಗಿದೆ” ಎಂದು ಶಿವಮೂರ್ತಿ ವಿವರ ನೀಡಿದರು.

”ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದು ಬಿನ್ ಸಿದ್ದಲಿಂಗಪ್ಪ ಒಂದು ಹೋಟೆಲ್‌ ಗೆ ಕರೆದುಕೊಂಡು ಹೋಗಿ, ಬಿಜೆಪಿ ಹಿರಿಯ ನಾಯಕರಿಗೆ ಮತ್ತು ಇತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ನಗದನ್ನು ಕುಗ್ಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸೆಸ್ಸ್ ಮುಖಂಡರಾದ ನಾಗಣ್ಣ ಅವರು ಪಡೆದಿರುತ್ತಾರೆ” ಎಂದು ಶಿವಮೂರ್ತಿ ಹೇಳಿದರು.

”ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಾಟ ಮಾರಿ ನನ್ನ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ಮಾಡಿ, ನನ್ನ ಆಪ್ತ ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರ(ಎಸ್ಸಿ)ದ ಬಿಜೆಪಿ ಟಿಕೆಟ್ ನನಗೆ ಬರುವುದಿಲ್ಲ. ಬದಲಿಗೆ ಬಿ.ರಾಮು ಎಂಬವರಿಗೆ ಸಿಗುತ್ತದೆ” ಎಂದು ಬೇಸರ ಹೊರಹಾಕಿದರು.

”ಇದರಿಂದ ಆಘಾತವಾದ ನನಗೆ ಏನು ಮಾಡಬೇಕೆಂದು ತಿಳಿಯದೆ ಮೇಲೆ ತಿಳಿಸಿರುವ ಹಣ ಪಡೆದವರಿಗೆ ಕರೆ ಮಾಡಿದಾಗ ಒಂದು ತಿಂಗಳು ಅವರು ನನ್ನ ಕರೆಯನ್ನು ಸ್ವೀಕರಿಸಲಿಲ್ಲ. ಬೇರೆಯವರ ನಂಬರಿನಿಂದ ಕರೆ ಮಾಡಿದಾಗ ಸ್ವೀಕರಿಸಿದ್ದಾರೆ. ಆಗ ನನ್ನ ಬಳಿ ಮಾತನಾಡಿದ ಇವರು ಹಣ ವಾಪಸ್ ನೀಡಲು ಹಲವಾರು ದಿನಾಂಕಗಳು, ಸಬೂಬುಗಳನ್ನು ನೀಡುತ್ತಾ ಬಂದಿದ್ದು, ಈವರೆಗೆ ಹಣ ನೀಡಲು ಸತಾಯಿಸುತ್ತಿದ್ದಾರೆ” ಎಂದು ಅವರು ದೂರಿದರು.

”ನನ್ನ ತಮ್ಮನ ಸ್ನೇಹಿತರು, ಕೆಲ ಸಂಘಟನೆಯವರ ಬಳಿ ಮಾತನಾಡಿದಾಗ ಚೆಕ್ ಕೊಟ್ಟರು. ಅವುಗಳು ಬೌನ್ಸ್ ಆಗಿವೆ. ಹಾಗಾಗಿ ನಾನು ಅನಿವಾರ್ಯವಾಗಿ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದೇನೆ. ಈಗ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆಯನ್ನು ಒಡ್ಡುತ್ತಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ, ನ್ಯಾಯ ಒದಗಿಸಬೇಕು” ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯಿಸಿದರು.

ಹಣ ವಾಪಸ್ ಕೇಳಿದ್ದಕ್ಕೆ ಧಮಕಿ ಆರೋಪ

”ನಾಲ್ವರು ತಂಡದಿಂದ ಹಂತ ಹಂತವಾಗಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಅವರು 1.90 ಕೋಟಿ ಹಣ ಪ್ರೂಫ್ ಸಮೇತ ನೀಡಿದ್ದಾರೆ. ಇನ್ನೂ ಪಡೆದ ಹಣ ವಾಪಸ್ ಕೇಳಿದ್ದಕ್ಕೆ ಧಮಕಿ ಹಾಕುತ್ತಿದ್ದಾರೆ” ಎಂದು ಆರೋಪ ಅವರು ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...