Homeಕರ್ನಾಟಕBJP ಟಿಕೆಟ್ ಕೊಡಿಸುವುದಾಗಿ ವಂಚನೆ, ಕಟೀಲ್ ಶಾಮೀಲು: ಆರೋಪ

BJP ಟಿಕೆಟ್ ಕೊಡಿಸುವುದಾಗಿ ವಂಚನೆ, ಕಟೀಲ್ ಶಾಮೀಲು: ಆರೋಪ

- Advertisement -
- Advertisement -

ಚೈತ್ರಾ ವಂಚನೆ ಪ್ರಕರಣದ ಮಾದರಿಯಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿರುವ ಕುರಿತು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರದ ಟಿಕೆಟ್ ಕೋಡಿಸುವುದಾಗಿ ಕೊಟ್ಟೂರು ತಾಲೂಕಿನ ಬೆನಕನಹಳ್ಳಿಯ ರೇವಣಸಿದ್ದಪ್ಪ ಮತ್ತು ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್ ಪಿ ಎಂಬವರು ಒಟ್ಟು 2.03 ಕೋಟಿ ರೂ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ನಿವೃತ್ತ ಎಂಜಿನಿಯರ್ ಸಿ ಶಿವಮೂರ್ತಿ ಅವರು ದೂರು ದಾಖಲಿಸಿದ್ದಾರೆ.

”ಈ ವಂಚನೆ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರೂ ಶಾಮೀಲಾಗಿದ್ದಾರೆ. ಹಣವನ್ನು ವಾಪಾಸ್ ಕೊಡುವಂತೆ ಒತ್ತಾಯಿಸಿದರೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಲೋಕೋಪಯೋಗಿ (ಪಿಡಬ್ಲ್ಯುಡಿ) ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ರವಿವಾರ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಮೂರ್ತಿ ಅವರು, ”ಕೊಟ್ಟೂರಿನ ರೇವಣ ಸಿದ್ದಪ್ಪ ನನ್ನ ನಿವೃತ್ತಿ ಕಾರ್ಯಕ್ರಮದಲ್ಲಿ ಪರಿಚಯವಾಗಿ 2023ರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ನನ್ನನ್ನು ಪದೇ ಪದೇ ಭೇಟಿ ಮಾಡಿ ಬಿಜೆಪಿಯ ಟಿಕೆಟನ್ನು ನಿಮಗೆ ಕೊಡಿಸುವೆ, ನೀವು ಟಿಕೆಟ್ ಪಡೆಯಲು ಯೋಗ್ಯರು.. ಎಂದು ಪುಸಲಾಯಿಸುವ ಮಾತುಗಳನ್ನು ಹೇಳಿ ನನಗೆ ಟಿಕೆಟ್ ಮೇಲೆ ಶ್ರದ್ಧೆ ಬರುವ ರೀತಿಯಲ್ಲಿ ನಡೆದುಕೊಂಡಿದ್ದರು. 2022ರ ಅ.23ರಂದು ರೇವಣಸಿದ್ದಪ್ಪ ನನ್ನನ್ನು ಬೆಂಗಳೂರಿಗೆ ಕರೆತಂದು ಒಂದು ಹೋಟೆಲ್‌ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದರು” ಎಂದು ವಿವರಿಸಿದರು.

”ಶೇಖರ್ ಎಸ್.ಪಿ. ನನಗೆ ಪರಿಚಯ ಆದ ಮೇಲೆ, ಮಲ್ಲೇಶ್ವರದ ಬಿಜೆಪಿ ಕಚೇರಿ ಜಗನ್ನಾಥ ವನಕ್ಕೆ ಕರೆದುಕೊಂಡು ಹೋಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಸಿದರು. ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್ ವಿಚಾರದ ಎಲ್ಲ ವ್ಯವಹಾರವನ್ನು ಶೇಖರ್ ಎನ್.ಪಿ. ಅವರ ಬಳಿಯೇ ಮಾತನಾಡಿ” ಎಂದು ತಿಳಿಸಿದರು.

”ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಶೇಖರ್ ಎನ್.ಪಿ. ನನ್ನ ಬಳಿ ಹಣ ಕೇಳಿದರು. ಟಿಕೆಟ್ ಸಿಗದೇ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ ನೀಡುತ್ತೇನೆಂದು ತಿಳಿಸಿದರು. ಹೀಗೆ 2022ರ ಅ.9ರಿಂದ ಆರಂಭವಾದ ನಮ್ಮ ಹಣದ ವ್ಯವಹಾರ ಎಪ್ರಿಲ್ 2023ಕ್ಕೆ 2.55 ಕೋಟಿ ರೂ. ಪಡೆದುಕೊಂಡಿದ್ದಾರೆ” ಎಂದು ಅವರು ದೂರಿದರು.

”2022ರ ಅ.15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಎನ್.ಪಿ. ಕುಂದಾಪುರದ ಅರ್ಜುನ ಎಂಬವನನ್ನು ಕಳುಹಿಸಿ 50 ಲಕ್ಷ ರೂ. ಪಡೆದಿದ್ದಾರೆ. ಆನಂತರ ಆನ್ಲೈನ್ ಪೇಮೆಂಟ್ ಸೇರಿ ಇದೇ ರೀತಿಯಲ್ಲಿ 1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸಂದಾಯವಾಗಿದೆ” ಎಂದು ಶಿವಮೂರ್ತಿ ವಿವರ ನೀಡಿದರು.

”ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದು ಬಿನ್ ಸಿದ್ದಲಿಂಗಪ್ಪ ಒಂದು ಹೋಟೆಲ್‌ ಗೆ ಕರೆದುಕೊಂಡು ಹೋಗಿ, ಬಿಜೆಪಿ ಹಿರಿಯ ನಾಯಕರಿಗೆ ಮತ್ತು ಇತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ನಗದನ್ನು ಕುಗ್ಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸೆಸ್ಸ್ ಮುಖಂಡರಾದ ನಾಗಣ್ಣ ಅವರು ಪಡೆದಿರುತ್ತಾರೆ” ಎಂದು ಶಿವಮೂರ್ತಿ ಹೇಳಿದರು.

”ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಾಟ ಮಾರಿ ನನ್ನ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ಮಾಡಿ, ನನ್ನ ಆಪ್ತ ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರ(ಎಸ್ಸಿ)ದ ಬಿಜೆಪಿ ಟಿಕೆಟ್ ನನಗೆ ಬರುವುದಿಲ್ಲ. ಬದಲಿಗೆ ಬಿ.ರಾಮು ಎಂಬವರಿಗೆ ಸಿಗುತ್ತದೆ” ಎಂದು ಬೇಸರ ಹೊರಹಾಕಿದರು.

”ಇದರಿಂದ ಆಘಾತವಾದ ನನಗೆ ಏನು ಮಾಡಬೇಕೆಂದು ತಿಳಿಯದೆ ಮೇಲೆ ತಿಳಿಸಿರುವ ಹಣ ಪಡೆದವರಿಗೆ ಕರೆ ಮಾಡಿದಾಗ ಒಂದು ತಿಂಗಳು ಅವರು ನನ್ನ ಕರೆಯನ್ನು ಸ್ವೀಕರಿಸಲಿಲ್ಲ. ಬೇರೆಯವರ ನಂಬರಿನಿಂದ ಕರೆ ಮಾಡಿದಾಗ ಸ್ವೀಕರಿಸಿದ್ದಾರೆ. ಆಗ ನನ್ನ ಬಳಿ ಮಾತನಾಡಿದ ಇವರು ಹಣ ವಾಪಸ್ ನೀಡಲು ಹಲವಾರು ದಿನಾಂಕಗಳು, ಸಬೂಬುಗಳನ್ನು ನೀಡುತ್ತಾ ಬಂದಿದ್ದು, ಈವರೆಗೆ ಹಣ ನೀಡಲು ಸತಾಯಿಸುತ್ತಿದ್ದಾರೆ” ಎಂದು ಅವರು ದೂರಿದರು.

”ನನ್ನ ತಮ್ಮನ ಸ್ನೇಹಿತರು, ಕೆಲ ಸಂಘಟನೆಯವರ ಬಳಿ ಮಾತನಾಡಿದಾಗ ಚೆಕ್ ಕೊಟ್ಟರು. ಅವುಗಳು ಬೌನ್ಸ್ ಆಗಿವೆ. ಹಾಗಾಗಿ ನಾನು ಅನಿವಾರ್ಯವಾಗಿ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದೇನೆ. ಈಗ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆಯನ್ನು ಒಡ್ಡುತ್ತಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ, ನ್ಯಾಯ ಒದಗಿಸಬೇಕು” ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯಿಸಿದರು.

ಹಣ ವಾಪಸ್ ಕೇಳಿದ್ದಕ್ಕೆ ಧಮಕಿ ಆರೋಪ

”ನಾಲ್ವರು ತಂಡದಿಂದ ಹಂತ ಹಂತವಾಗಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಅವರು 1.90 ಕೋಟಿ ಹಣ ಪ್ರೂಫ್ ಸಮೇತ ನೀಡಿದ್ದಾರೆ. ಇನ್ನೂ ಪಡೆದ ಹಣ ವಾಪಸ್ ಕೇಳಿದ್ದಕ್ಕೆ ಧಮಕಿ ಹಾಕುತ್ತಿದ್ದಾರೆ” ಎಂದು ಆರೋಪ ಅವರು ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...