Homeಮುಖಪುಟಲೈಂಗಿಕ ಬಯಕೆ ಇಲ್ಲದೆ ನಾಡಿಮಿಡಿತ ಪರಿಶೀಲಿಸುವುದು ಅಪರಾಧವಲ್ಲ: ಆರೋಪಿ ಬ್ರಿಜ್ ಭೂಷಣ್ ಪರ ವಕೀಲರ ವಾದ

ಲೈಂಗಿಕ ಬಯಕೆ ಇಲ್ಲದೆ ನಾಡಿಮಿಡಿತ ಪರಿಶೀಲಿಸುವುದು ಅಪರಾಧವಲ್ಲ: ಆರೋಪಿ ಬ್ರಿಜ್ ಭೂಷಣ್ ಪರ ವಕೀಲರ ವಾದ

- Advertisement -
- Advertisement -

ಲೈಂಗಿಕ ಬಯಕೆ ಇಲ್ಲದೆ ನಾಡಿಮಿಡಿತವನ್ನು ಪರಿಶೀಲಿಸುವುದು ಅಪರಾಧವಲ್ಲ ಎಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಪರ ವಕೀಲರು ಕೋರ್ಟ್​ನಲ್ಲಿ ವಾದ ಮಂಡಿಸಿದ್ದಾರೆ.

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆ ಸೋಮವಾರ (ಅಕ್ಟೋಬರ್ 16) ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಿತು. ಭಾರತೀಯ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು.

”ಆರೋಪಿಗಳ ವಿರುದ್ಧ ಹೊರಿಸಲಾಗಿರುವ ಆರೋಪಗಳಿಗೆ ಯಾವುದೇ ಆಧಾರವಿಲ್ಲ. ಬ್ರಿಜ್‌ಭೂಷಣ್ ಶರಣ್ ಸಿಂಗ್ ನಾಡಿಮಿಡಿತವನ್ನು ಮಾತ್ರ ಪರಿಶೀಲಿಸಿದ್ದಾರೆ. ಯಾವುದೇ ಲೈಂಗಿಕ ಬಯಕೆಯಿಲ್ಲದೆ ನಾಡಿಮಿಡಿತವನ್ನು ಪರಿಶೀಲಿಸುವುದು ಅಪರಾಧವಲ್ಲ” ಎಂದು ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಪರ ವಕೀಲ ರಾಜೀವ್ ಮೋಹನ್ ವಾದ ಮಂಡಿಸಿದ್ದಾರೆ..

ಆರು ಮಹಿಳಾ ಕುಸ್ತಿಪಟುಗಳ ದೂರಿನ ಆಧಾರದ ಮೇಲೆ ದಾಖಲಾದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ವಿನೋದ್ ತೋಮರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಯಾವುದೇ ದೂರಿನ ಆಧಾರದ ಮೇಲೆ ಮೇಲುಸ್ತುವಾರಿ ಸಮಿತಿ ರಚಿಸಿಲ್ಲ ಎಂದು ವಕೀಲರು ತಿಳಿಸಿದ್ದಾರೆ.

2023ರ ಜನವರಿ 18ರಂದು ಜಂತರ್ ಮಂತರ್‌ನಲ್ಲಿ ಮೊದಲ ಪ್ರತಿಭಟನೆ ಆರಂಭವಾಗಿದ್ದು, ಜನವರಿ 19ರಂದು ಕುಸ್ತಿಪಟುಗಳಲ್ಲೊಬ್ಬರಾದ ಬಬಿತಾ ಫೋಗಟ್ ಕೇಂದ್ರ ಕ್ರೀಡಾ ಸಚಿವರನ್ನು ಭೇಟಿಯಾಗಿದ್ದರು. ಸಿಂಗ್ ಪರ ವಾದ ಮಂಡಿಸಿದ ವಕೀಲ ರಾಜೀವ್ ಮೋಹನ್, ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ.

”ನಾನು ಯಾರನ್ನೂ ನನ್ನ ಡಬ್ಲ್ಯುಎಫ್‌ಐ ಕಚೇರಿಗೆ ಕರೆದಿಲ್ಲ ಎಂದು ಹೇಳಿದ್ದಾರೆ. ದೂರುದಾರರೇ ನನ್ನನ್ನು ಭೇಟಿಯಾಗಲು ಬಂದಿದ್ದರು. ಕಿರುಕುಳ ನೀಡುವುದು ನನ್ನ ಉದ್ದೇಶವಾಗಿದ್ದರೆ, ನಾನು ಹೊಟ್ಟೆಯನ್ನು ಸ್ಪರ್ಶಿಸಿ ಉಸಿರಾಟದ ವಿಧಾನವನ್ನು ಏಕೆ ಪರಿಶೀಲಿಸಬೇಕು” ಎಂದು ಪ್ರಶ್ನೆ ಮಾಡಿದ್ದಾರೆ.

ಬ್ರಿಜ್ ಭೂಷಣ್ ಶರಣ್​ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಮಹಿಳಾ ಕುಸ್ತಿಪಟುಗಳು 2 ತಿಂಗಳುಗಳ ಕಾಲ ಪ್ರತಿಭಟನೆ ನಡೆಸಿದ್ದರು.

ಕ್ರೀಡಾ ಸಚಿವರು ಮತ್ತು ಗೃಹ ಸಚಿವರನ್ನು ಉದ್ದೇಶಿಸಿ ಮಾಡಿದ ಪ್ರತಿಭಟನೆಗಳು ಮತ್ತು ಟ್ವೀಟ್‌ಗಳು ಸೇರಿದಂತೆ ಕಾಲಾನುಕ್ರಮದ ಘಟನೆಗಳನ್ನು ಮೋಹನ್ ಗಮನಸೆಳೆದರು, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಹೊರಹೊಮ್ಮುವವರೆಗೂ ಅಧಿಕೃತ ದೂರಿನ ಅನುಪಸ್ಥಿತಿಯನ್ನು ಒತ್ತಿಹೇಳಿದರು.

ಇದನ್ನೂ ಓದಿ: ‘ನನ್ನ ಟಿಕೆಟ್‌ ರದ್ದುಗೊಳಿಸುವ ಧೈರ್ಯ ಯಾರಿಗಿದೆ?’: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...