Homeಅಂಕಣಗಳುಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

- Advertisement -
- Advertisement -

ಸಂತೆಗೆ ಹೋದ ಮಾದಣ್ಣ ಮಡದಿ ಹೇಳಿದ ಸಾಮಾನುಗಳನ್ನ ಬಿಟ್ಟು ಬೆಕ್ಕಿನ ಮರಿ ತಂದನಂತಲ್ಲಾ. ಅದನ್ನು ನೋಡಿದ ಮದಡಿ, “ಅಯ್ಯೊ ನಿನ್ನ ಮನಿಮಾರತ್ತ, ಮನಿಗೆ ಬೇಕಾದ ಸಾಮಾನು ತರದು ಬುಟ್ಟು ಕೊತ್ತಿಮರಿ ತಂದಿದ್ದಿಯಲ್ಲಾ, ನಿನ್ನ ಮರುಳು ಬುದ್ದಿಗೇನೆಳನಾ” ಎಂದು ಜಗಳಾ ತೆಗೆದಳಂತಲ್ಲಾ. ಆಗ ಬೆಕ್ಕಿನ ತಲೆ ಸವರಿದ ಮಾದಣ್ಣ, “ಮನೆಲಿ ಇಲಿ ಜಾಸ್ತಿಯಾಗ್ಯವೆ” ಅಂತ ನೀನೆ ಹೇಳಿದಲ್ಲಾ ಎಂದಾಗ, “ಇಲಿ ಜಾಸ್ತಿಯಾಗ್ಯವೆ ಸರಿ ಇಲಿ ಅವುಸ್ತಿ ತರಕ್ಕೇನಾಗಿತ್ತು? ಈ ಬೆಕ್ಕಿನ ಮರಿ ಸಾಕಕ್ಕೆ ಹಾಲು ಬೇಕು, ಹಾಲು ಬೇಕಾದ್ರೆ ಹಸ ತರಬೇಕು, ಅದಕೆ ಹುಲ್ಲು ಹಾಕಬೇಕು, ಸಗಣಿ ತಗಿಬೇಕು, ಗಂಜಲ ಬಳಿಬೇಕು, ಇದನ್ಯಲ್ಲ ಮಾಡೋಳು ನಾನು” ಎಂದು ಗೊಣಗುತ್ತಿರುವಾಗ ಮಾದಣ್ಣ, ಬೆಕ್ಕಿನ ಮರಿಯನ್ನ ವಿವಿಧ ಭಂಗಿಯಲ್ಲಿ ನಿಲ್ಲಿಸಿ ’ವಾಹ್ ಏನು ಭಂಗಿ, ಆ ಕಣ್ಣೇನು, ಆ ಮೀಸೆಯೇನು’ ಎಂದು ವರ್ಣಿಸುತ್ತ ಕಣ್ಣಿನಲ್ಲೇ ಫೋಟೋ ಕ್ಲಿಕ್ಕಿಸುತ್ತಿದ್ದನಂತಲ್ಲಾ, ಥೊತ್ತೇರಿ.

*****

ಈ ಬೆಕ್ಕಿನ ಕತೆ ಟೈಮಿನಲ್ಲೇ ನೆನಪಿಗೆ ಬಂದಿದ್ದೇನೆಂದರೆ, ಮುಸ್ಲಿಮ್ ದೊರೆಗಳು ಈ ದೇಶಕ್ಕೆ ದಾಳಿಯ ಮುಖಾಂತರ ಬಂದವರು; ಧನ ಕನಕ ವಸ್ತುಗಳನ್ನು ಲೂಟಿ ಮಾಡುವ ಮನಸ್ಸಿನಿಂದ ರೂಪುಗೊಂಡದ್ದು ದಾಳಿ. ಹಾಗೆ ಬಂದ ಮುಸ್ಲಿಮರು ದಾಳಿ ಮಾಡಿಕೊಂಡು ಓಡಲಿಲ್ಲ, ಬದಲಿಗೆ ಇಲ್ಲೇ ನಿಂತರು. ಆಗ ನಮ್ಮ ಪುರೋಹಿತಶಾಹಿಗಳು ದೇವಸ್ಥಾನದ ಗರ್ಭಗುಡಿಯಲ್ಲಿ ಭದ್ರವಾಗಿ ಕುಳಿತು ಭಜನೆ ಮಾಡುತ್ತಿದ್ದರು. ನಂತರ ಪ್ರಸಾದ ಪಾನಕ ಪಡೆಯುತ್ತಿದ್ದರು. ಹೊರಬಂದು ನೋಡಿದಾಗ ಮುಸಲ್ಮಾನ ದೊರೆಗಳು ಊರನ್ನೇ ಅಕ್ರಮಿಸಿ ರಾಜರುಗಳಾಗಿ ಮೆರೆಯುತ್ತಿದ್ದರು. ತಡಮಾಡದೆ ಪುರೋಹಿತಶಾಹಿಗಳು ಮುಸ್ಲಿಂ ರಾಜರ ಆಸ್ಥಾನಕ್ಕೆ ನುಗ್ಗಿ ಕರಣಿಕರಾದರು, ಮಂತ್ರಿಗಳಾದರು, ರಾಜನನ್ನು ನಗಿಸುವ ವಿಧೂಷಕರಾದರು, ಸಂಗೀತಗಾರರಾದರು. ಇದು ಸುಮಾರು ಆರುನೂರು ವರ್ಷಗಳು ಸತತವಾಗಿ ನಡೆಯಿತು. ಈ ಪುರೋಹಿತರು ತಮ್ಮ ಬುದ್ಧಿಯನ್ನು ಶೂದ್ರರಿಗೂ ಅಂಟಿಸಿದ ಫಲವಾಗಿ, ಅವರನ್ನಾಳುತ್ತಿರುವ ನಾಯಕ, ಪ್ರವಾಹದಿಂದ ಉತ್ತರ ಭಾರತವೇ ನಲುಗಿಹೋಗುತ್ತಿರುವ ಸಮಯದಲ್ಲಿ ತಲೆಕೆಡಿಸಿಕೊಳ್ಳದೆ, ನಮೀಬಿಯಾದಿಂದ ಚೀತಾ ತಂದು, ಬೋನಿನಿಂದ ಹೊರಬಿಟ್ಟು, ಎಲ್ಲರೂ ಕೈ ಎತ್ತಿ ಚಿರತೆಗಳನ್ನು ಸ್ವಾಗತಿಸಿ ಚಪ್ಪಾಳೆ ಹೊಡೆಯಿರಿ ಎಂದರಂತಲ್ಲಾ. ಆ ಕೂಡಲೇ ಜನಸ್ತೋಮ ಅಂಗೈ ಉರಿಯುವಂತೆ ಚಪ್ಪಾಳೆ ತಟ್ಟಿ ಗಾಳಿ ಹಾಕಿಕೊಂಡವಂತಲ್ಲಾ, ಥೂತ್ತೇರಿ

*****

ಭಾರತದಿಂದ ಚೀತಾ ಕಣ್ಮರೆಯಾದ ನಂತರ ಹುಟ್ಟಿದ ಮೋದಿಯವರು, ಹಾಗೆಯೇ ವಿರಳವಾಗುತ್ತಿರುವ ಗುಳ್ಳೆ ನರಿಗಳ ಬಗ್ಗೆ ತಲೆಕೆಡಿಸಿಕೊಳ್ಳುವರೆಂದು ಆಶಿಸುವ ಸಮಯದಲ್ಲೇ ಕಿಡಿಗೇಡಿಗಳು, ಗುಳ್ಳೆನರಿಗಳ ಗುಣವನ್ನು ವಿಶ್ಲೇಷಣೆ ಮಾಡಿದ್ದಾರಲ್ಲಾ. ಗುಳ್ಳೆ ನರಿ ಎಂದೂ ಶ್ರಮವಹಿಸಿ ಭೇಟೆಯಾಡಿದ್ದಿಲ್ಲ. ದೊಡ್ಡಪ್ರಾಣಿ ಮಾಡುವ ಬೇಟೆಯನ್ನು ಕದಿಯುವ ಸಂಚುರೂಪಿಸುತ್ತದೆ. ಬಲಿಯಾದ ನಂತರ ಪೊದೆಮರೆಯಿಂದ ಓಡಿಬಂದು ಬೇಕಾದ ಖಂಡವನ್ನು ಬಾಯಿಗಾಕಿಕೊಂಡು ಹೊಟ್ಟೆಹೊರಿಯುತ್ತದೆ. ಈ ಪ್ರಾಣಿಗೆ ಹೋಲುವ ಮನುಷ್ಯರು ಹೇರಳವಾಗಿದ್ದು, ಅದೂ ಮೋದಿ ಸುತ್ತಲೂ ಇರುವುದರಿಂದ, ಗುಳ್ಳೆನರಿ ತರುವುದು ಬೇಡವೆಂದು ಬುದ್ಧೀಜೀವಿಗಳು ವಾದಿಸುತ್ತಿದ್ದಾರಲ್ಲಾ, ಥೂತ್ತೇರಿ

*****

ಮೋದಿ ತಂದಿರುವ ಚೀತಾಗಳು ಒಂದು ಕಾಲದಲ್ಲಿ ನಾಯಿಗಳಂತಿದ್ದವು ಎಂದು ಭಾರತಕ್ಕೆ ಬಂದ ಪ್ರವಾಸಿಗರು ದಾಖಲಿಸಿ ಹೋಗಿದ್ದಾರೆ. ಇವುಗಳ ಸಂಖ್ಯೆಯ ಹೆಚ್ಚಳದಿಂದ ಕಾಡಿನಲ್ಲಿ ಜಿಂಕೆ, ಕಡವೆ, ಮೊಲ ಮತ್ತು ಹಂದಿಗಳ ಸಂಖ್ಯೆ ನಿರ್ನಾಮವಾಗುತ್ತದೆಂದು ಕಾಡಿನ ಮಾಂಸ ಪ್ರಿಯರು ಇದರ ನಿರ್ನಾಮಕ್ಕೆ ಕಾರಣರಾದರು. ಇದನ್ನ ಮರಳಿ ತರಬೇಕಾದರೆ ಎಪ್ಪತ್ತು ವರ್ಷಗಳ ಹಿಂದಿದ್ದ ಕಾಡು ಈಗಿದೆಯೆ? ಅಂದಿನ ಪ್ರಾಣಿಗಳು ಈಗಿವೆಯೇ? ಎಂಟು ಚೀತಾಗಳು ಮುಂದೆ ಸಂತಾನೋತ್ಪತ್ತಿ ಮಾಡಿ, ಪ್ರತಿದಿನ ಅವುಗಳು ಬೇಟಿಯಾಡಿದರೆ ಇನ್ಯಾವ ಪ್ರಾಣಿ ಸಂಕುಲ ನಿರ್ನಾಮವಾಗುತ್ತದೊ ಹೇಳಲು ಬರುವುದಿಲ್ಲ. ಯಾವ ಮುಂದಾಲೋಚನೆಯೂ ಇಲ್ಲದ ಜನ ನಾಯಕರು ಮತ್ತು ಚೀತಾಗಳು ಬಂದ ಕೂಡಲೇ ಮೋದಿ ಆಜ್ಞೆಯಂತೆ ಚಪ್ಪಾಳೆ ಹೊಡೆದ ಜನಸ್ತೋಮದ ಸಂಭ್ರಮ ನೋಡಿದ ಕಾಂಗೈಗಳು, ಚೀತಾಗಳನ್ನ ಮತ್ತೆ ತಂದು ನಮ್ಮ ಕಾಡಿಲ್ಲದ ನಾಡಿಗೆ ಬಿಡುವ ಯೋಜನೆ ನಮ್ಮದು. ಈಗ ಬಂದಿರುವ ಚೀತಾಗಳು ನಮಗೆ ಕೃತಜ್ಞತೆ ಸಲ್ಲಿಸಬೇಕೆಂದು ಹೇಳಿದ್ದಾರಂತಲ್ಲಾ, ಥೂತ್ತೇರಿ.

*****

ಅಂಬೇಡ್ಕರ್‌ರವರ ನಿಜವಾದ ಅನುಯಾಯಿ ಮೋದೀಜಿಯವರು ಎಂದು ಮಾಜಿ ರಾಷ್ಟಪತಿಗಳಾದ ಕೋವಿಂದಣ್ಣನವರು ಹೇಳಿ ಸಾಮಾನ್ಯ ಜನರನ್ನ ದಂಗುಬಡಿಸಿದ್ದಾರಲ್ಲಾ. ಈ ಶತಮಾನದ ತಮಾಷೆಯೆಂದರೆ ಇದೇ. ಕೋವಿಂದ್ ಅವರು ರಾಷ್ಟಪತಿ ಸ್ಥಾನ ಅಲಂಕರಿಸಬೇಕಾದರೆ, ಆ ಪರಂಪರೆಯನ್ನ ತಿಳಿದವರು, ನಮ್ಮ ಗ್ರಹಿಕೆಗೆ ನಿಲುಕದ ಯಾವುದೋ ವಿದ್ವತ್ತು ಕೋವಿಂದರಲ್ಲಿರಬಹುದೆಂದು ಭಾವಿಸಿದ್ದರು. ಏಕೆಂದರೆ ಭಾರತದ ಹಿಂದಿನ ಹಲವು ರಾಷ್ಟ್ರಪತಿಗಳು ವಿದ್ವತ್ತಿನ ಪಂಡಿತರಾಗಿದ್ದರು. ಬಾಬು ರಾಜೇಂದ್ರ ಪ್ರಸಾದ್, ಡಾ. ಸರ್ವಪಲ್ಲಿ ರಾಥಾಕೃಷ್ಣ, ವಿ.ವಿ ಗಿರಿ ಇವರೆಲ್ಲಾ ಪ್ರಪಂಚದ ಬಹುದೊಡ್ಡ ಪ್ರಜಾಪ್ರಭುತ್ವದ ದೇಶಕ್ಕೆ ಕಳಸವಿಟ್ಟಂತೆ ಕಂಡರು. ಆ ಸ್ಥಾನ ಕೆಳಗಿಳಿದದ್ದು ಫಕ್ರುದ್ದೀನ್ ಆಲಿ ಅಹಮದ್ ಕಾಲದಲ್ಲಿ. ಯಾಕೆಂದರೆ ಅವರು ತುರ್ತುಪರಿಸ್ಥಿತಿ ಬಿಲ್ಲಿಗೆ ಸಹಿಮಾಡಿದರು. ಆದರೂ ಆ ನಂತರ ಬಂದವರೆಲ್ಲಾ ಆ ಸ್ಥಾನಕ್ಕೆ ಗೌರವ ತಂದಿದ್ದರು. ಈಗಿನ ವಿಪರ್ಯಾಸವೆಂದರೆ ಅಂಬೇಡ್ಕರ್ ಮತ್ತು ಮೋದಿಯನ್ನು ಒಂದೇ ತಕ್ಕಡಿಯಲ್ಲಿ ತೂಗಿ ನೋಡಿರುವ ಕೋವಿಂದಣ್ಣ ಮುಂದೆ ಯಾರ್‍ಯಾರನ್ನು ಹೋಲಿಕೆ ಮಾಡುತ್ತಾರೆಂದು ಜನಕ್ಕೆ ದಿಗಿಲಾಗಿದೆಯಂತಲ್ಲಾ. ಏಕೆಂದರೆ ಕೋವಿಂದ್ ಅವರು ಅಡಿರುವ ಮಾತು ಆದಿತ್ಯನಾಥರಿಂದಲೋ ಚಕ್ರವರ್ತಿ ಸೂಲಿಬೆಲೆ ಅಥವಾ ಸಿ.ಟಿ ರವಿ ಬಾಯಿಂದಲೊ ಬರುವ ಮಾತು. ಸಂವಿಧಾನ ರಚನೆ ಮಾಡಿದ ಅಂಬೇಡ್ಕರನ್ನ ಸಂವಿಧಾನವನ್ನೇ ಮೂಲೆಗುಂಪು ಮಾಡ ಹೊರಟ ಮೋದಿಗೆ ಹೋಲಿಸಿದ್ದು ಅಜ್ಞಾನದ ಪರಮಾವಧಿ ಎಂದು ಹೇಳಲು ಭಯವಾಗುತ್ತಿದೆಯಲ್ಲಾ, ಥೂತ್ತೇರಿ..


ಇದನ್ನೂ ಓದಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....