Homeಅಂಕಣಗಳುಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

- Advertisement -
- Advertisement -

ಸಂತೆಗೆ ಹೋದ ಮಾದಣ್ಣ ಮಡದಿ ಹೇಳಿದ ಸಾಮಾನುಗಳನ್ನ ಬಿಟ್ಟು ಬೆಕ್ಕಿನ ಮರಿ ತಂದನಂತಲ್ಲಾ. ಅದನ್ನು ನೋಡಿದ ಮದಡಿ, “ಅಯ್ಯೊ ನಿನ್ನ ಮನಿಮಾರತ್ತ, ಮನಿಗೆ ಬೇಕಾದ ಸಾಮಾನು ತರದು ಬುಟ್ಟು ಕೊತ್ತಿಮರಿ ತಂದಿದ್ದಿಯಲ್ಲಾ, ನಿನ್ನ ಮರುಳು ಬುದ್ದಿಗೇನೆಳನಾ” ಎಂದು ಜಗಳಾ ತೆಗೆದಳಂತಲ್ಲಾ. ಆಗ ಬೆಕ್ಕಿನ ತಲೆ ಸವರಿದ ಮಾದಣ್ಣ, “ಮನೆಲಿ ಇಲಿ ಜಾಸ್ತಿಯಾಗ್ಯವೆ” ಅಂತ ನೀನೆ ಹೇಳಿದಲ್ಲಾ ಎಂದಾಗ, “ಇಲಿ ಜಾಸ್ತಿಯಾಗ್ಯವೆ ಸರಿ ಇಲಿ ಅವುಸ್ತಿ ತರಕ್ಕೇನಾಗಿತ್ತು? ಈ ಬೆಕ್ಕಿನ ಮರಿ ಸಾಕಕ್ಕೆ ಹಾಲು ಬೇಕು, ಹಾಲು ಬೇಕಾದ್ರೆ ಹಸ ತರಬೇಕು, ಅದಕೆ ಹುಲ್ಲು ಹಾಕಬೇಕು, ಸಗಣಿ ತಗಿಬೇಕು, ಗಂಜಲ ಬಳಿಬೇಕು, ಇದನ್ಯಲ್ಲ ಮಾಡೋಳು ನಾನು” ಎಂದು ಗೊಣಗುತ್ತಿರುವಾಗ ಮಾದಣ್ಣ, ಬೆಕ್ಕಿನ ಮರಿಯನ್ನ ವಿವಿಧ ಭಂಗಿಯಲ್ಲಿ ನಿಲ್ಲಿಸಿ ’ವಾಹ್ ಏನು ಭಂಗಿ, ಆ ಕಣ್ಣೇನು, ಆ ಮೀಸೆಯೇನು’ ಎಂದು ವರ್ಣಿಸುತ್ತ ಕಣ್ಣಿನಲ್ಲೇ ಫೋಟೋ ಕ್ಲಿಕ್ಕಿಸುತ್ತಿದ್ದನಂತಲ್ಲಾ, ಥೊತ್ತೇರಿ.

*****

ಈ ಬೆಕ್ಕಿನ ಕತೆ ಟೈಮಿನಲ್ಲೇ ನೆನಪಿಗೆ ಬಂದಿದ್ದೇನೆಂದರೆ, ಮುಸ್ಲಿಮ್ ದೊರೆಗಳು ಈ ದೇಶಕ್ಕೆ ದಾಳಿಯ ಮುಖಾಂತರ ಬಂದವರು; ಧನ ಕನಕ ವಸ್ತುಗಳನ್ನು ಲೂಟಿ ಮಾಡುವ ಮನಸ್ಸಿನಿಂದ ರೂಪುಗೊಂಡದ್ದು ದಾಳಿ. ಹಾಗೆ ಬಂದ ಮುಸ್ಲಿಮರು ದಾಳಿ ಮಾಡಿಕೊಂಡು ಓಡಲಿಲ್ಲ, ಬದಲಿಗೆ ಇಲ್ಲೇ ನಿಂತರು. ಆಗ ನಮ್ಮ ಪುರೋಹಿತಶಾಹಿಗಳು ದೇವಸ್ಥಾನದ ಗರ್ಭಗುಡಿಯಲ್ಲಿ ಭದ್ರವಾಗಿ ಕುಳಿತು ಭಜನೆ ಮಾಡುತ್ತಿದ್ದರು. ನಂತರ ಪ್ರಸಾದ ಪಾನಕ ಪಡೆಯುತ್ತಿದ್ದರು. ಹೊರಬಂದು ನೋಡಿದಾಗ ಮುಸಲ್ಮಾನ ದೊರೆಗಳು ಊರನ್ನೇ ಅಕ್ರಮಿಸಿ ರಾಜರುಗಳಾಗಿ ಮೆರೆಯುತ್ತಿದ್ದರು. ತಡಮಾಡದೆ ಪುರೋಹಿತಶಾಹಿಗಳು ಮುಸ್ಲಿಂ ರಾಜರ ಆಸ್ಥಾನಕ್ಕೆ ನುಗ್ಗಿ ಕರಣಿಕರಾದರು, ಮಂತ್ರಿಗಳಾದರು, ರಾಜನನ್ನು ನಗಿಸುವ ವಿಧೂಷಕರಾದರು, ಸಂಗೀತಗಾರರಾದರು. ಇದು ಸುಮಾರು ಆರುನೂರು ವರ್ಷಗಳು ಸತತವಾಗಿ ನಡೆಯಿತು. ಈ ಪುರೋಹಿತರು ತಮ್ಮ ಬುದ್ಧಿಯನ್ನು ಶೂದ್ರರಿಗೂ ಅಂಟಿಸಿದ ಫಲವಾಗಿ, ಅವರನ್ನಾಳುತ್ತಿರುವ ನಾಯಕ, ಪ್ರವಾಹದಿಂದ ಉತ್ತರ ಭಾರತವೇ ನಲುಗಿಹೋಗುತ್ತಿರುವ ಸಮಯದಲ್ಲಿ ತಲೆಕೆಡಿಸಿಕೊಳ್ಳದೆ, ನಮೀಬಿಯಾದಿಂದ ಚೀತಾ ತಂದು, ಬೋನಿನಿಂದ ಹೊರಬಿಟ್ಟು, ಎಲ್ಲರೂ ಕೈ ಎತ್ತಿ ಚಿರತೆಗಳನ್ನು ಸ್ವಾಗತಿಸಿ ಚಪ್ಪಾಳೆ ಹೊಡೆಯಿರಿ ಎಂದರಂತಲ್ಲಾ. ಆ ಕೂಡಲೇ ಜನಸ್ತೋಮ ಅಂಗೈ ಉರಿಯುವಂತೆ ಚಪ್ಪಾಳೆ ತಟ್ಟಿ ಗಾಳಿ ಹಾಕಿಕೊಂಡವಂತಲ್ಲಾ, ಥೂತ್ತೇರಿ

*****

ಭಾರತದಿಂದ ಚೀತಾ ಕಣ್ಮರೆಯಾದ ನಂತರ ಹುಟ್ಟಿದ ಮೋದಿಯವರು, ಹಾಗೆಯೇ ವಿರಳವಾಗುತ್ತಿರುವ ಗುಳ್ಳೆ ನರಿಗಳ ಬಗ್ಗೆ ತಲೆಕೆಡಿಸಿಕೊಳ್ಳುವರೆಂದು ಆಶಿಸುವ ಸಮಯದಲ್ಲೇ ಕಿಡಿಗೇಡಿಗಳು, ಗುಳ್ಳೆನರಿಗಳ ಗುಣವನ್ನು ವಿಶ್ಲೇಷಣೆ ಮಾಡಿದ್ದಾರಲ್ಲಾ. ಗುಳ್ಳೆ ನರಿ ಎಂದೂ ಶ್ರಮವಹಿಸಿ ಭೇಟೆಯಾಡಿದ್ದಿಲ್ಲ. ದೊಡ್ಡಪ್ರಾಣಿ ಮಾಡುವ ಬೇಟೆಯನ್ನು ಕದಿಯುವ ಸಂಚುರೂಪಿಸುತ್ತದೆ. ಬಲಿಯಾದ ನಂತರ ಪೊದೆಮರೆಯಿಂದ ಓಡಿಬಂದು ಬೇಕಾದ ಖಂಡವನ್ನು ಬಾಯಿಗಾಕಿಕೊಂಡು ಹೊಟ್ಟೆಹೊರಿಯುತ್ತದೆ. ಈ ಪ್ರಾಣಿಗೆ ಹೋಲುವ ಮನುಷ್ಯರು ಹೇರಳವಾಗಿದ್ದು, ಅದೂ ಮೋದಿ ಸುತ್ತಲೂ ಇರುವುದರಿಂದ, ಗುಳ್ಳೆನರಿ ತರುವುದು ಬೇಡವೆಂದು ಬುದ್ಧೀಜೀವಿಗಳು ವಾದಿಸುತ್ತಿದ್ದಾರಲ್ಲಾ, ಥೂತ್ತೇರಿ

*****

ಮೋದಿ ತಂದಿರುವ ಚೀತಾಗಳು ಒಂದು ಕಾಲದಲ್ಲಿ ನಾಯಿಗಳಂತಿದ್ದವು ಎಂದು ಭಾರತಕ್ಕೆ ಬಂದ ಪ್ರವಾಸಿಗರು ದಾಖಲಿಸಿ ಹೋಗಿದ್ದಾರೆ. ಇವುಗಳ ಸಂಖ್ಯೆಯ ಹೆಚ್ಚಳದಿಂದ ಕಾಡಿನಲ್ಲಿ ಜಿಂಕೆ, ಕಡವೆ, ಮೊಲ ಮತ್ತು ಹಂದಿಗಳ ಸಂಖ್ಯೆ ನಿರ್ನಾಮವಾಗುತ್ತದೆಂದು ಕಾಡಿನ ಮಾಂಸ ಪ್ರಿಯರು ಇದರ ನಿರ್ನಾಮಕ್ಕೆ ಕಾರಣರಾದರು. ಇದನ್ನ ಮರಳಿ ತರಬೇಕಾದರೆ ಎಪ್ಪತ್ತು ವರ್ಷಗಳ ಹಿಂದಿದ್ದ ಕಾಡು ಈಗಿದೆಯೆ? ಅಂದಿನ ಪ್ರಾಣಿಗಳು ಈಗಿವೆಯೇ? ಎಂಟು ಚೀತಾಗಳು ಮುಂದೆ ಸಂತಾನೋತ್ಪತ್ತಿ ಮಾಡಿ, ಪ್ರತಿದಿನ ಅವುಗಳು ಬೇಟಿಯಾಡಿದರೆ ಇನ್ಯಾವ ಪ್ರಾಣಿ ಸಂಕುಲ ನಿರ್ನಾಮವಾಗುತ್ತದೊ ಹೇಳಲು ಬರುವುದಿಲ್ಲ. ಯಾವ ಮುಂದಾಲೋಚನೆಯೂ ಇಲ್ಲದ ಜನ ನಾಯಕರು ಮತ್ತು ಚೀತಾಗಳು ಬಂದ ಕೂಡಲೇ ಮೋದಿ ಆಜ್ಞೆಯಂತೆ ಚಪ್ಪಾಳೆ ಹೊಡೆದ ಜನಸ್ತೋಮದ ಸಂಭ್ರಮ ನೋಡಿದ ಕಾಂಗೈಗಳು, ಚೀತಾಗಳನ್ನ ಮತ್ತೆ ತಂದು ನಮ್ಮ ಕಾಡಿಲ್ಲದ ನಾಡಿಗೆ ಬಿಡುವ ಯೋಜನೆ ನಮ್ಮದು. ಈಗ ಬಂದಿರುವ ಚೀತಾಗಳು ನಮಗೆ ಕೃತಜ್ಞತೆ ಸಲ್ಲಿಸಬೇಕೆಂದು ಹೇಳಿದ್ದಾರಂತಲ್ಲಾ, ಥೂತ್ತೇರಿ.

*****

ಅಂಬೇಡ್ಕರ್‌ರವರ ನಿಜವಾದ ಅನುಯಾಯಿ ಮೋದೀಜಿಯವರು ಎಂದು ಮಾಜಿ ರಾಷ್ಟಪತಿಗಳಾದ ಕೋವಿಂದಣ್ಣನವರು ಹೇಳಿ ಸಾಮಾನ್ಯ ಜನರನ್ನ ದಂಗುಬಡಿಸಿದ್ದಾರಲ್ಲಾ. ಈ ಶತಮಾನದ ತಮಾಷೆಯೆಂದರೆ ಇದೇ. ಕೋವಿಂದ್ ಅವರು ರಾಷ್ಟಪತಿ ಸ್ಥಾನ ಅಲಂಕರಿಸಬೇಕಾದರೆ, ಆ ಪರಂಪರೆಯನ್ನ ತಿಳಿದವರು, ನಮ್ಮ ಗ್ರಹಿಕೆಗೆ ನಿಲುಕದ ಯಾವುದೋ ವಿದ್ವತ್ತು ಕೋವಿಂದರಲ್ಲಿರಬಹುದೆಂದು ಭಾವಿಸಿದ್ದರು. ಏಕೆಂದರೆ ಭಾರತದ ಹಿಂದಿನ ಹಲವು ರಾಷ್ಟ್ರಪತಿಗಳು ವಿದ್ವತ್ತಿನ ಪಂಡಿತರಾಗಿದ್ದರು. ಬಾಬು ರಾಜೇಂದ್ರ ಪ್ರಸಾದ್, ಡಾ. ಸರ್ವಪಲ್ಲಿ ರಾಥಾಕೃಷ್ಣ, ವಿ.ವಿ ಗಿರಿ ಇವರೆಲ್ಲಾ ಪ್ರಪಂಚದ ಬಹುದೊಡ್ಡ ಪ್ರಜಾಪ್ರಭುತ್ವದ ದೇಶಕ್ಕೆ ಕಳಸವಿಟ್ಟಂತೆ ಕಂಡರು. ಆ ಸ್ಥಾನ ಕೆಳಗಿಳಿದದ್ದು ಫಕ್ರುದ್ದೀನ್ ಆಲಿ ಅಹಮದ್ ಕಾಲದಲ್ಲಿ. ಯಾಕೆಂದರೆ ಅವರು ತುರ್ತುಪರಿಸ್ಥಿತಿ ಬಿಲ್ಲಿಗೆ ಸಹಿಮಾಡಿದರು. ಆದರೂ ಆ ನಂತರ ಬಂದವರೆಲ್ಲಾ ಆ ಸ್ಥಾನಕ್ಕೆ ಗೌರವ ತಂದಿದ್ದರು. ಈಗಿನ ವಿಪರ್ಯಾಸವೆಂದರೆ ಅಂಬೇಡ್ಕರ್ ಮತ್ತು ಮೋದಿಯನ್ನು ಒಂದೇ ತಕ್ಕಡಿಯಲ್ಲಿ ತೂಗಿ ನೋಡಿರುವ ಕೋವಿಂದಣ್ಣ ಮುಂದೆ ಯಾರ್‍ಯಾರನ್ನು ಹೋಲಿಕೆ ಮಾಡುತ್ತಾರೆಂದು ಜನಕ್ಕೆ ದಿಗಿಲಾಗಿದೆಯಂತಲ್ಲಾ. ಏಕೆಂದರೆ ಕೋವಿಂದ್ ಅವರು ಅಡಿರುವ ಮಾತು ಆದಿತ್ಯನಾಥರಿಂದಲೋ ಚಕ್ರವರ್ತಿ ಸೂಲಿಬೆಲೆ ಅಥವಾ ಸಿ.ಟಿ ರವಿ ಬಾಯಿಂದಲೊ ಬರುವ ಮಾತು. ಸಂವಿಧಾನ ರಚನೆ ಮಾಡಿದ ಅಂಬೇಡ್ಕರನ್ನ ಸಂವಿಧಾನವನ್ನೇ ಮೂಲೆಗುಂಪು ಮಾಡ ಹೊರಟ ಮೋದಿಗೆ ಹೋಲಿಸಿದ್ದು ಅಜ್ಞಾನದ ಪರಮಾವಧಿ ಎಂದು ಹೇಳಲು ಭಯವಾಗುತ್ತಿದೆಯಲ್ಲಾ, ಥೂತ್ತೇರಿ..


ಇದನ್ನೂ ಓದಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...