Homeಅಂಕಣಗಳುಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

- Advertisement -
- Advertisement -

ಸಂತೆಗೆ ಹೋದ ಮಾದಣ್ಣ ಮಡದಿ ಹೇಳಿದ ಸಾಮಾನುಗಳನ್ನ ಬಿಟ್ಟು ಬೆಕ್ಕಿನ ಮರಿ ತಂದನಂತಲ್ಲಾ. ಅದನ್ನು ನೋಡಿದ ಮದಡಿ, “ಅಯ್ಯೊ ನಿನ್ನ ಮನಿಮಾರತ್ತ, ಮನಿಗೆ ಬೇಕಾದ ಸಾಮಾನು ತರದು ಬುಟ್ಟು ಕೊತ್ತಿಮರಿ ತಂದಿದ್ದಿಯಲ್ಲಾ, ನಿನ್ನ ಮರುಳು ಬುದ್ದಿಗೇನೆಳನಾ” ಎಂದು ಜಗಳಾ ತೆಗೆದಳಂತಲ್ಲಾ. ಆಗ ಬೆಕ್ಕಿನ ತಲೆ ಸವರಿದ ಮಾದಣ್ಣ, “ಮನೆಲಿ ಇಲಿ ಜಾಸ್ತಿಯಾಗ್ಯವೆ” ಅಂತ ನೀನೆ ಹೇಳಿದಲ್ಲಾ ಎಂದಾಗ, “ಇಲಿ ಜಾಸ್ತಿಯಾಗ್ಯವೆ ಸರಿ ಇಲಿ ಅವುಸ್ತಿ ತರಕ್ಕೇನಾಗಿತ್ತು? ಈ ಬೆಕ್ಕಿನ ಮರಿ ಸಾಕಕ್ಕೆ ಹಾಲು ಬೇಕು, ಹಾಲು ಬೇಕಾದ್ರೆ ಹಸ ತರಬೇಕು, ಅದಕೆ ಹುಲ್ಲು ಹಾಕಬೇಕು, ಸಗಣಿ ತಗಿಬೇಕು, ಗಂಜಲ ಬಳಿಬೇಕು, ಇದನ್ಯಲ್ಲ ಮಾಡೋಳು ನಾನು” ಎಂದು ಗೊಣಗುತ್ತಿರುವಾಗ ಮಾದಣ್ಣ, ಬೆಕ್ಕಿನ ಮರಿಯನ್ನ ವಿವಿಧ ಭಂಗಿಯಲ್ಲಿ ನಿಲ್ಲಿಸಿ ’ವಾಹ್ ಏನು ಭಂಗಿ, ಆ ಕಣ್ಣೇನು, ಆ ಮೀಸೆಯೇನು’ ಎಂದು ವರ್ಣಿಸುತ್ತ ಕಣ್ಣಿನಲ್ಲೇ ಫೋಟೋ ಕ್ಲಿಕ್ಕಿಸುತ್ತಿದ್ದನಂತಲ್ಲಾ, ಥೊತ್ತೇರಿ.

*****

ಈ ಬೆಕ್ಕಿನ ಕತೆ ಟೈಮಿನಲ್ಲೇ ನೆನಪಿಗೆ ಬಂದಿದ್ದೇನೆಂದರೆ, ಮುಸ್ಲಿಮ್ ದೊರೆಗಳು ಈ ದೇಶಕ್ಕೆ ದಾಳಿಯ ಮುಖಾಂತರ ಬಂದವರು; ಧನ ಕನಕ ವಸ್ತುಗಳನ್ನು ಲೂಟಿ ಮಾಡುವ ಮನಸ್ಸಿನಿಂದ ರೂಪುಗೊಂಡದ್ದು ದಾಳಿ. ಹಾಗೆ ಬಂದ ಮುಸ್ಲಿಮರು ದಾಳಿ ಮಾಡಿಕೊಂಡು ಓಡಲಿಲ್ಲ, ಬದಲಿಗೆ ಇಲ್ಲೇ ನಿಂತರು. ಆಗ ನಮ್ಮ ಪುರೋಹಿತಶಾಹಿಗಳು ದೇವಸ್ಥಾನದ ಗರ್ಭಗುಡಿಯಲ್ಲಿ ಭದ್ರವಾಗಿ ಕುಳಿತು ಭಜನೆ ಮಾಡುತ್ತಿದ್ದರು. ನಂತರ ಪ್ರಸಾದ ಪಾನಕ ಪಡೆಯುತ್ತಿದ್ದರು. ಹೊರಬಂದು ನೋಡಿದಾಗ ಮುಸಲ್ಮಾನ ದೊರೆಗಳು ಊರನ್ನೇ ಅಕ್ರಮಿಸಿ ರಾಜರುಗಳಾಗಿ ಮೆರೆಯುತ್ತಿದ್ದರು. ತಡಮಾಡದೆ ಪುರೋಹಿತಶಾಹಿಗಳು ಮುಸ್ಲಿಂ ರಾಜರ ಆಸ್ಥಾನಕ್ಕೆ ನುಗ್ಗಿ ಕರಣಿಕರಾದರು, ಮಂತ್ರಿಗಳಾದರು, ರಾಜನನ್ನು ನಗಿಸುವ ವಿಧೂಷಕರಾದರು, ಸಂಗೀತಗಾರರಾದರು. ಇದು ಸುಮಾರು ಆರುನೂರು ವರ್ಷಗಳು ಸತತವಾಗಿ ನಡೆಯಿತು. ಈ ಪುರೋಹಿತರು ತಮ್ಮ ಬುದ್ಧಿಯನ್ನು ಶೂದ್ರರಿಗೂ ಅಂಟಿಸಿದ ಫಲವಾಗಿ, ಅವರನ್ನಾಳುತ್ತಿರುವ ನಾಯಕ, ಪ್ರವಾಹದಿಂದ ಉತ್ತರ ಭಾರತವೇ ನಲುಗಿಹೋಗುತ್ತಿರುವ ಸಮಯದಲ್ಲಿ ತಲೆಕೆಡಿಸಿಕೊಳ್ಳದೆ, ನಮೀಬಿಯಾದಿಂದ ಚೀತಾ ತಂದು, ಬೋನಿನಿಂದ ಹೊರಬಿಟ್ಟು, ಎಲ್ಲರೂ ಕೈ ಎತ್ತಿ ಚಿರತೆಗಳನ್ನು ಸ್ವಾಗತಿಸಿ ಚಪ್ಪಾಳೆ ಹೊಡೆಯಿರಿ ಎಂದರಂತಲ್ಲಾ. ಆ ಕೂಡಲೇ ಜನಸ್ತೋಮ ಅಂಗೈ ಉರಿಯುವಂತೆ ಚಪ್ಪಾಳೆ ತಟ್ಟಿ ಗಾಳಿ ಹಾಕಿಕೊಂಡವಂತಲ್ಲಾ, ಥೂತ್ತೇರಿ

*****

ಭಾರತದಿಂದ ಚೀತಾ ಕಣ್ಮರೆಯಾದ ನಂತರ ಹುಟ್ಟಿದ ಮೋದಿಯವರು, ಹಾಗೆಯೇ ವಿರಳವಾಗುತ್ತಿರುವ ಗುಳ್ಳೆ ನರಿಗಳ ಬಗ್ಗೆ ತಲೆಕೆಡಿಸಿಕೊಳ್ಳುವರೆಂದು ಆಶಿಸುವ ಸಮಯದಲ್ಲೇ ಕಿಡಿಗೇಡಿಗಳು, ಗುಳ್ಳೆನರಿಗಳ ಗುಣವನ್ನು ವಿಶ್ಲೇಷಣೆ ಮಾಡಿದ್ದಾರಲ್ಲಾ. ಗುಳ್ಳೆ ನರಿ ಎಂದೂ ಶ್ರಮವಹಿಸಿ ಭೇಟೆಯಾಡಿದ್ದಿಲ್ಲ. ದೊಡ್ಡಪ್ರಾಣಿ ಮಾಡುವ ಬೇಟೆಯನ್ನು ಕದಿಯುವ ಸಂಚುರೂಪಿಸುತ್ತದೆ. ಬಲಿಯಾದ ನಂತರ ಪೊದೆಮರೆಯಿಂದ ಓಡಿಬಂದು ಬೇಕಾದ ಖಂಡವನ್ನು ಬಾಯಿಗಾಕಿಕೊಂಡು ಹೊಟ್ಟೆಹೊರಿಯುತ್ತದೆ. ಈ ಪ್ರಾಣಿಗೆ ಹೋಲುವ ಮನುಷ್ಯರು ಹೇರಳವಾಗಿದ್ದು, ಅದೂ ಮೋದಿ ಸುತ್ತಲೂ ಇರುವುದರಿಂದ, ಗುಳ್ಳೆನರಿ ತರುವುದು ಬೇಡವೆಂದು ಬುದ್ಧೀಜೀವಿಗಳು ವಾದಿಸುತ್ತಿದ್ದಾರಲ್ಲಾ, ಥೂತ್ತೇರಿ

*****

ಮೋದಿ ತಂದಿರುವ ಚೀತಾಗಳು ಒಂದು ಕಾಲದಲ್ಲಿ ನಾಯಿಗಳಂತಿದ್ದವು ಎಂದು ಭಾರತಕ್ಕೆ ಬಂದ ಪ್ರವಾಸಿಗರು ದಾಖಲಿಸಿ ಹೋಗಿದ್ದಾರೆ. ಇವುಗಳ ಸಂಖ್ಯೆಯ ಹೆಚ್ಚಳದಿಂದ ಕಾಡಿನಲ್ಲಿ ಜಿಂಕೆ, ಕಡವೆ, ಮೊಲ ಮತ್ತು ಹಂದಿಗಳ ಸಂಖ್ಯೆ ನಿರ್ನಾಮವಾಗುತ್ತದೆಂದು ಕಾಡಿನ ಮಾಂಸ ಪ್ರಿಯರು ಇದರ ನಿರ್ನಾಮಕ್ಕೆ ಕಾರಣರಾದರು. ಇದನ್ನ ಮರಳಿ ತರಬೇಕಾದರೆ ಎಪ್ಪತ್ತು ವರ್ಷಗಳ ಹಿಂದಿದ್ದ ಕಾಡು ಈಗಿದೆಯೆ? ಅಂದಿನ ಪ್ರಾಣಿಗಳು ಈಗಿವೆಯೇ? ಎಂಟು ಚೀತಾಗಳು ಮುಂದೆ ಸಂತಾನೋತ್ಪತ್ತಿ ಮಾಡಿ, ಪ್ರತಿದಿನ ಅವುಗಳು ಬೇಟಿಯಾಡಿದರೆ ಇನ್ಯಾವ ಪ್ರಾಣಿ ಸಂಕುಲ ನಿರ್ನಾಮವಾಗುತ್ತದೊ ಹೇಳಲು ಬರುವುದಿಲ್ಲ. ಯಾವ ಮುಂದಾಲೋಚನೆಯೂ ಇಲ್ಲದ ಜನ ನಾಯಕರು ಮತ್ತು ಚೀತಾಗಳು ಬಂದ ಕೂಡಲೇ ಮೋದಿ ಆಜ್ಞೆಯಂತೆ ಚಪ್ಪಾಳೆ ಹೊಡೆದ ಜನಸ್ತೋಮದ ಸಂಭ್ರಮ ನೋಡಿದ ಕಾಂಗೈಗಳು, ಚೀತಾಗಳನ್ನ ಮತ್ತೆ ತಂದು ನಮ್ಮ ಕಾಡಿಲ್ಲದ ನಾಡಿಗೆ ಬಿಡುವ ಯೋಜನೆ ನಮ್ಮದು. ಈಗ ಬಂದಿರುವ ಚೀತಾಗಳು ನಮಗೆ ಕೃತಜ್ಞತೆ ಸಲ್ಲಿಸಬೇಕೆಂದು ಹೇಳಿದ್ದಾರಂತಲ್ಲಾ, ಥೂತ್ತೇರಿ.

*****

ಅಂಬೇಡ್ಕರ್‌ರವರ ನಿಜವಾದ ಅನುಯಾಯಿ ಮೋದೀಜಿಯವರು ಎಂದು ಮಾಜಿ ರಾಷ್ಟಪತಿಗಳಾದ ಕೋವಿಂದಣ್ಣನವರು ಹೇಳಿ ಸಾಮಾನ್ಯ ಜನರನ್ನ ದಂಗುಬಡಿಸಿದ್ದಾರಲ್ಲಾ. ಈ ಶತಮಾನದ ತಮಾಷೆಯೆಂದರೆ ಇದೇ. ಕೋವಿಂದ್ ಅವರು ರಾಷ್ಟಪತಿ ಸ್ಥಾನ ಅಲಂಕರಿಸಬೇಕಾದರೆ, ಆ ಪರಂಪರೆಯನ್ನ ತಿಳಿದವರು, ನಮ್ಮ ಗ್ರಹಿಕೆಗೆ ನಿಲುಕದ ಯಾವುದೋ ವಿದ್ವತ್ತು ಕೋವಿಂದರಲ್ಲಿರಬಹುದೆಂದು ಭಾವಿಸಿದ್ದರು. ಏಕೆಂದರೆ ಭಾರತದ ಹಿಂದಿನ ಹಲವು ರಾಷ್ಟ್ರಪತಿಗಳು ವಿದ್ವತ್ತಿನ ಪಂಡಿತರಾಗಿದ್ದರು. ಬಾಬು ರಾಜೇಂದ್ರ ಪ್ರಸಾದ್, ಡಾ. ಸರ್ವಪಲ್ಲಿ ರಾಥಾಕೃಷ್ಣ, ವಿ.ವಿ ಗಿರಿ ಇವರೆಲ್ಲಾ ಪ್ರಪಂಚದ ಬಹುದೊಡ್ಡ ಪ್ರಜಾಪ್ರಭುತ್ವದ ದೇಶಕ್ಕೆ ಕಳಸವಿಟ್ಟಂತೆ ಕಂಡರು. ಆ ಸ್ಥಾನ ಕೆಳಗಿಳಿದದ್ದು ಫಕ್ರುದ್ದೀನ್ ಆಲಿ ಅಹಮದ್ ಕಾಲದಲ್ಲಿ. ಯಾಕೆಂದರೆ ಅವರು ತುರ್ತುಪರಿಸ್ಥಿತಿ ಬಿಲ್ಲಿಗೆ ಸಹಿಮಾಡಿದರು. ಆದರೂ ಆ ನಂತರ ಬಂದವರೆಲ್ಲಾ ಆ ಸ್ಥಾನಕ್ಕೆ ಗೌರವ ತಂದಿದ್ದರು. ಈಗಿನ ವಿಪರ್ಯಾಸವೆಂದರೆ ಅಂಬೇಡ್ಕರ್ ಮತ್ತು ಮೋದಿಯನ್ನು ಒಂದೇ ತಕ್ಕಡಿಯಲ್ಲಿ ತೂಗಿ ನೋಡಿರುವ ಕೋವಿಂದಣ್ಣ ಮುಂದೆ ಯಾರ್‍ಯಾರನ್ನು ಹೋಲಿಕೆ ಮಾಡುತ್ತಾರೆಂದು ಜನಕ್ಕೆ ದಿಗಿಲಾಗಿದೆಯಂತಲ್ಲಾ. ಏಕೆಂದರೆ ಕೋವಿಂದ್ ಅವರು ಅಡಿರುವ ಮಾತು ಆದಿತ್ಯನಾಥರಿಂದಲೋ ಚಕ್ರವರ್ತಿ ಸೂಲಿಬೆಲೆ ಅಥವಾ ಸಿ.ಟಿ ರವಿ ಬಾಯಿಂದಲೊ ಬರುವ ಮಾತು. ಸಂವಿಧಾನ ರಚನೆ ಮಾಡಿದ ಅಂಬೇಡ್ಕರನ್ನ ಸಂವಿಧಾನವನ್ನೇ ಮೂಲೆಗುಂಪು ಮಾಡ ಹೊರಟ ಮೋದಿಗೆ ಹೋಲಿಸಿದ್ದು ಅಜ್ಞಾನದ ಪರಮಾವಧಿ ಎಂದು ಹೇಳಲು ಭಯವಾಗುತ್ತಿದೆಯಲ್ಲಾ, ಥೂತ್ತೇರಿ..


ಇದನ್ನೂ ಓದಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...