Homeಮುಖಪುಟಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

ಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

- Advertisement -
- Advertisement -

ಈಗ ಮಾಧ್ಯಮಗಳಲ್ಲೆಲ್ಲಾ ಪ್ರಧಾನಿಗಳ ಜನ್ಮದಿನದಂದು ತಂದು ಬಿಡಲಾದ ಕನ್ನಡದ ಸಿವಂಗಿ ಎಂದು ಹೆಸರುಳ್ಳ ಚೀತಾಗಳದ್ದೇ ಸುದ್ದಿ. ಇದಕ್ಕೆ, ನಮ್ಮ ದೇಶದಿಂದ ಅಳಿದುಹೋದ ಪ್ರಬೇಧವೊಂದನ್ನು ಮತ್ತೆ ಅವತರಿಸುವಂತೆ ಮಾಡಲು ಮೋದಿಯವರೇ ಬರಬೇಕಾಯಿತು ಎಂದೆಲ್ಲ ಪ್ರಚಾರವನ್ನೂ ಕೊಡಲಾಯಿತು. ಆದರೆ ವಾಸ್ತವದ ವಿಷಯವೆಂದರೆ ಭಾರತದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ ಮತ್ತು ಆಫ್ರಿಕಾದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ. ಹೇಗೆ ಆಫ್ರಿಕಾದ ಸಿಂಹಗಳನ್ನು ಭಾರತದ ಗಿರ್ ಅರಣ್ಯದಲ್ಲಿರುವ ಸಿಂಹಗಳೆನ್ನಲಾಗದೋ, ಹೇಗೆ ಸೈಬೀರಿಯಾದ ಹುಲಿಗಳನ್ನು ಭಾರತದ ಹುಲಿಗಳೆನ್ನಲಾಗದೋ, ಹಾಗೆಯೇ ಆಫ್ರಿಕಾದ ಸಿವಂಗಿಗಳು ಆನುವಂಶಿಕವಾಗಿ ಭಾರತದ ಅಥವಾ ಏಷ್ಯಾದ ಸಿವಂಗಿಗಳಾಗಲಾರವು. ಐತಿಹಾಸಿಕವಾಗಿ ಏಷಿಯಾದ ಸಿವಂಗಿಗಳು ಮಧ್ಯಪ್ರಾಚ್ಯದಿಂದ ಹಿಡಿದು ಭಾರತದವರೆಗಿನ ಭೂ ಪ್ರದೇಶದಲ್ಲಿ ಕಂಡುಬರುತ್ತಿದ್ದವು. ಆದರೆ ಅತಿಯಾದ ಬೇಟೆ ಮತ್ತು ಆವಾಸದ ಕುಗ್ಗುವಿಕೆಯ ಕಾರಣಗಳಿಂದಾಗಿ ಕಳೆದ ಶತಮಾನದ ಮಧ್ಯಭಾಗದಲ್ಲಿ ತಮ್ಮ ವ್ಯಾಪ್ತಿಯ ಬಹುಪಾಲು ಪ್ರದೇಶಗಳಲ್ಲಿ ಈ ಸಿವಂಗಿಗಳು ಅವಸಾನ ಹೊಂದಿದವು. ಈಗಲೂ ಕೂಡ ಏಷಿಯಾದ ಸಿವಂಗಿಗಳು ಇರಾನಿನ ಕೆಲ ಸಂರಕ್ಷಿತ ಪ್ರದೇಶದಲ್ಲಿ ಉಳಿದುಕೊಂಡಿವೆ. ಆದರೆ ಅವುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ಹತ್ತು ವರ್ಷಗಳ ಹಿಂದೆ ಸುಮಾರು 80ರಷ್ಟು ಮಾತ್ರ ಇದ್ದ ಸಿವಂಗಿಗಳು ಈಗಿನ ಗಣತಿಯ ಪ್ರಕಾರ 20ಕ್ಕೂ ಕಡಿಮೆ ಎಂದು ಅಂದಾಜಿಸಲಾಗಿದೆ.

ಸಿವಂಗಿಗಳು ಕಾಣಬರುವುದು ಉಷ್ಣ ಪ್ರದೇಶದ ಹುಲ್ಲುಗಾವಲು ಮತ್ತು ಅರೆ ಮರುಭೂಮಿಯಂತಹ ಪ್ರದೇಶಗಳಲ್ಲಿ. ಅವುಗಳ ಅಳಿವಿಗೆ ಸೂಕ್ತ ಆವಾಸದ ನಾಶವೇ ಮುಖ್ಯವಾದ ಕಾರಣ. ನಮ್ಮ ದೇಶದಲ್ಲಿ ಸಿವಂಗಿಗಳು ಇರಬಹುದಾದ ಆವಾಸವು ಹೆಚ್ಚಿನ ಪ್ರಮಾಣದಲ್ಲೇನೂ ಉಳಿದಿಲ್ಲ. ಅವೆಲ್ಲ ಖರಾಬು ಅಥವಾ ಬರಡು ಭೂಮಿಗಳೆಂದು ಪರಿಗಣಿಸಲ್ಪಟ್ಟು ಕೈಗಾರಿಕೆ ಮತ್ತಿತರ ಅರಣ್ಯೇತರ ಬಳಕೆಗೆ ವಿನಿಯೋಗಿಸಲ್ಪಟ್ಟಿವೆ. ನಮ್ಮ ದೇಶದಿಂದ ಸಿವಂಗಿಗಳೇನೋ ದಶಕಗಳ ಹಿಂದೆ ನಶಿಸಿ ಹೋದವು ಆದರೆ ಲಕ್ಷಾಂತರ ವರ್ಷಗಳಿಂದ ಇದೇ ಸಿವಂಗಿಗಳ ಜೊತೆಯಲ್ಲಿಯೇ ಆವಾಸವನ್ನು ಹಂಚಿಕೊಂಡಿದ್ದ ಇತರ ಜೀವ ಪ್ರಬೇಧಗಳ ಪರಿಸ್ಥಿತಿಯೇನು? ಸಿವಂಗಿಗಳಂತೆಯೇ ಹುಲ್ಲುಗಾವಲು ಮತ್ತು ಅರೆ ಮರುಭೂಮಿ ಪ್ರದೇಶದ ಮೇಲೆ ಅವಲಂಬಿತವಾದ ಅನೇಕ ಜೀವಿ ಪ್ರಬೇಧಗಳು ಅಳಿವಿನತ್ತ ಮುಖಮಾಡಿ ನಿಂತಿವೆ.

ರಾಜಸ್ಥಾನ, ಗುಜರಾತಿನ ಅರೆ ಮರುಭೂಮಿ ಪ್ರದೇಶಗಳು, ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಮತ್ತು ಕರ್ನಾಟಕವನ್ನೂ ಒಳಗೊಂಡ ದಖ್ಖನ್ ಪ್ರಸ್ಥಭೂಮಿಯ ಒಣ ಹುಲ್ಲುಗಾವಲಿನಲ್ಲಿ ಕಂಡುಬರುವ, ಕನ್ನಡದಲ್ಲಿ ಎರ್ಲಡ್ಡು ಅಥವಾ ದೊರವಾಯನ ಹಕ್ಕಿ ಎಂದು ಕರೆಸಿಕೊಳ್ಳುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಹಕ್ಕಿಯು ಇಂಥದೇ ಹುಲ್ಲುಗಾವಲನ್ನು ಅವಲಂಬಿಸಿದ ಜೀವಿ. ಮೊದಲು ವ್ಯಾಪಕವಾಗಿ ಕಂಡುಬರುತ್ತಿದ್ದ ಈ ಹಕ್ಕಿಗಳು ಆವಾಸದ ನಾಶ ಮತ್ತು ಬೇಟೆಯ ಕಾರಣಗಳಿಂದ ಅಳಿವಿನಂಚಿಗೆ ಬಂದುನಿಂತಿವೆ. ಕೆಲವೇ ನೂರರಷ್ಟು ಮಾತ್ರ ಉಳಿದುಕೊಂಡಿರುವ ಈ ಹಕ್ಕಿಗಳು ಒಮ್ಮೆ ನಾಶವಾದರೆ ಮತ್ತೆಲ್ಲಿಂದಲೂ ಇವುಗಳನ್ನು ತರಲಾಗದು. ನಿಯಂತ್ರಣ ಇಲ್ಲದ ಅಭಿವೃದ್ಧಿ, ಅಗತ್ಯವಿಲ್ಲದೆಯೂ ನಿರ್ಮಾಣಗೊಳ್ಳುವ ರಸ್ತೆಗಳು ಮತ್ತು ಹೈಟೆನ್ಷನ್ ವಿದ್ಯುತ್ ತಂತಿಗಳು ಇವುಗಳಿಗೆ ಮಾರಕವಾಗಿವೆ.

ಸರಿಸುಮಾರು ಇದೇ ರೀತಿಯ ಆವಾಸದಲ್ಲಿ ಕಂಡುಬರುವ ಮತ್ತು ಮುಂಚೆ ವ್ಯಾಪಕವಾಗಿದ್ದ ಲೆಸ್ಸರ್ ಫ್ಲೋರಿಕನ್ ಅಥವಾ ಚೊಟ್ಟಿ ನವಿಲಕ್ಕಿ ಎಂದು ಕರೆಯಲ್ಪಡುವ ಹಕ್ಕಿಯು ಕೂಡ ಇಂದು ಇಲ್ಲವೆನ್ನುವಷ್ಟು ಕಡಿಮೆಯಾಗಿದೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಹತ್ತಿರದ ಹೆಸರಘಟ್ಟದ ಹುಲ್ಲುಗಾವಲಿನಲ್ಲಿ ಅಕಸ್ಮಾತ್ತಾಗಿ ಕಂಡ ಈ ಹಕ್ಕಿಯು ಸ್ಥಳೀಯ ಪಕ್ಷಿ ವೀಕ್ಷಕರಲ್ಲಿ ರೋಮಾಂಚನವನ್ನೇ ಸೃಷ್ಟಿಸಿತ್ತು. ಯಾಕೆಂದರೆ ದಶಕಗಳಿಂದೀಚೆಗೆ ಆ ಹಕ್ಕಿಯು ಸ್ಥಳೀಯವಾಗಿ ಕಾಣಿಸಿರಲೇ ಇಲ್ಲ. ಇದೇ ಹುಲ್ಲುಗಾವಲನ್ನು ಸಂರಕ್ಷಣಾ ಮೀಸಲು ಪ್ರದೇಶವಾಗಿ ಘೋಷಣೆ ಮಾಡುವಂತೆ ಸ್ಥಳೀಯ ವನ್ಯಜೀವಿ ಆಸಕ್ತರು ಒತ್ತಾಯಿಸುತ್ತಿದ್ದಾರೆ. ಇಲ್ಲವಾದರೆ ಬೆಂಗಳೂರಿಗೆ ಈ ಹಕ್ಕಿಗಳು ಬರುವ ಸಾಧ್ಯತೆಯು ಶಾಶ್ವತವಾಗಿ ಇಲ್ಲವಾಗುತ್ತದೆ. ಹಾಗೆಯೇ, ಒಣ ಪ್ರದೇಶದ ಹುಲ್ಲುಗಾವಲಿನಲ್ಲಿ ಮಾತ್ರ ಕಂಡುಬರುತ್ತಿದ್ದ ಜೇರ್ಡನ್ಸ್ ಕೋರ್ಸರ್ ಎಂಬ ಹಕ್ಕಿ ಕೂಡ ಬಹುಪಾಲು ನಾಶವಾಗಿದೆ. ಇದು ಈಗ ಆಂಧ್ರದ ಲಂಕಾಮಲ್ಲೇಶ್ವರ ವನ್ಯಜೀವಿಧಾಮದಲ್ಲಿ ಮಾತ್ರ ಇರಬಹುದೆಂದು ನಂಬಲಾಗಿದೆ. ಕೊನೆಯ ಬಾರಿಗೆ ಈ ಹಕ್ಕಿಯನ್ನು ನೋಡಿ ದಶಕಗಳೇ ಕಳೆದಿವೆ. ಹೀಗೆ ಸಿವಂಗಿಯ ಜೊತೆಗೆ ಇವೆಲ್ಲ ಪ್ರಬೇಧದ ಜೀವಿಗಳು ಒಂದೊಂದಾಗಿ ಅಳಿವಿನತ್ತ ನಡೆದಿವೆ.

ವರ್ಷದ ಬಹುಪಾಲು ಮೇಲ್ನೋಟಕ್ಕೆ ಒಣಗಿದಂತೆ ಕಾಣುವ ಹುಲ್ಲುಗಾವಲುಗಳ ಆವಾಸದ ವಿಶೇಷತೆಯೇ ಬೇರೆ, ಇವುಗಳು ಪೋಷಿಸುವ ಜೀವವೈವಿಧ್ಯ ನಿಜಕ್ಕೂ ಅಚ್ಚರಿ ಹುಟ್ಟಿಸುವಂತದ್ದು. ಇವುಗಳ ಕುರಿತು ನಮ್ಮ ಅರಿವು ಕೂಡ ಕಡಿಮೆಯೇ; ಏಕೆಂದರೆ ಈ ಆವಾಸವನ್ನು ನಾವೀಗಾಗಲೇ ಬರಡು ಭೂಮಿಯೆಂದೂ ಕೃಷಿಗೆ ಯೋಗ್ಯವಲ್ಲದ ಭೂಮಿಯೆಂದೂ ವರ್ಗೀಕರಿಸಿಯಾಗಿದೆ. ಈ ಪ್ರದೇಶಗಳಲ್ಲಿ ನಾವು ಮಾಡುವ ಎಲ್ಲ ಚಟುವಟಿಕೆಗಳೂ ಅಲ್ಲಿನ ಜೀವ ಪ್ರಬೇಧಕ್ಕೆ ಕಂಟಕವೇ ಆಗುತ್ತದೆ. ಉದಾಹರಣೆಗೆ, ಅತ್ಯಂತ ಜನಪ್ರಿಯವಾದ ಪರಿಸರ ಪ್ರೇಮಿ ಚಟುವಟಿಕೆಯೆಂದು ಕರೆಸಿಕೊಳ್ಳಲ್ಪಡುವ ಗಿಡ ನೆಡುವ ಚಟುವಟಿಕೆ ಹುಲ್ಲುಗಾವಲಿಗೆ ಮತ್ತು ಅಲ್ಲಿನ ಜೀವಿಗಳಿಗೆ ಮಾರಕ. ಹುಲ್ಲುಗಾವಲನ್ನು ನಾವು ಅರಣ್ಯವಾಗಿ ಪರಿವರ್ತಿಸಿದರೆ ಅಲ್ಲಿನ ಸ್ಥಳೀಯ ಜೀವಪ್ರಬೇಧಗಳು ಅಲ್ಲಿಂದ ಮಾಯವಾಗುತ್ತವೆ. ಅದೇ ರೀತಿ ಜಾಗತಿಕ ತಾಪಮಾನದಿಂದ ರಕ್ಷಿಸುವ ಮತ್ತು ಪರಿಸರ ಸ್ನೇಹಿ ಎಂದು ನಂಬಲ್ಪಡುವ ಸೌರ ವಿದ್ಯುತ್ ಕೂಡ ಹುಲ್ಲುಗಾವಲಿನ ಆವಾಸಕ್ಕೆ ಕಂಟಕವೇ ಆಗಿದೆ. ನಮ್ಮದೇ ನಾಡಿನ ಪಾವಗಡದಲ್ಲಿ ಸ್ಥಾಪಿಸಲಾದ ಏಷಿಯಾದ ಅತಿದೊಡ್ಡ ಸೌರ ವಿದ್ಯುತ್ ಘಟಕವು ಇಂತಹುದೇ ಹುಲ್ಲುಗಾವಲು ಮತ್ತು ಮಳೆಯಾಧಾರಿತ ಒಣ ಕೃಷಿ ಭೂಮಿಯಲ್ಲಿಯೇ ಇದೆ. ಶಾಶ್ವತವಾಗಿ ಹುಲ್ಲುಗಾವಲನ್ನು ಮುಚ್ಚಿಹಾಕುವ ಸೌರ ಫಲಕಗಳು, ಅವುಗಳ ಸುತ್ತ ಹುಲ್ಲು ಮತ್ತಿತರ ಸಸ್ಯಗಳು ಬೆಳೆಯದಂತೆ ಸಿಂಪಡಿಸುವ ಕಳೆನಾಶಕಗಳು ಮತ್ತು ಈ ಸೌರ ಫಲಕಗಳನ್ನು ಸ್ವಚ್ಛಗೊಳಿಸಲು ಬಳಸುವ ಕೋಟಿಗಟ್ಟಲೆ ಲೀಟರ್‌ನಷ್ಟು ನೀರು, ಇವೆಲ್ಲವೂ ಈ ಯೋಜನೆಗಳು ಎಷ್ಟು ಪರಿಸರ ಸ್ನೇಹಿ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿತ್ತವೆ.

ವನ್ಯಜೀವಿ ಸಂರಕ್ಷಣೆಯೆಂಬುದು, ಹಿಂದಿನ ಅಂಕಿ ಅಂಶಗಳನ್ನು ನೋಡಿ ಅದರ ಆಧಾರದ ಮೇಲೆ ದಶಕಗಳಷ್ಟು ಮುಂದಿನ ಯೋಜನೆಯನ್ನಿಟ್ಟುಕೊಂಡು ಮಾಡುವ ಒಂದು ವೈಜ್ಞಾನಿಕ ಪ್ರಕ್ರಿಯಯಾಗಿದೆ. ಈ ಹಿಂದೆ ಮಾಡಿದ ತಪ್ಪುಗಳಿಂದ ನಾವು ಎಷ್ಟು ಜೀವ ಸಂಪತ್ತನ್ನು ಕಳೆದುಕೊಂಡಿದ್ದೇವೆ ಮತ್ತು ಅದು ಮರುಕಳಿಸದಂತೆ ನಾವು ಕೈಗೊಳ್ಳಬೇಕಾದ ಕ್ರಮಗಳೇನೆಂಬ ಸಂಗತಿಗಳು, ಯಾವುದೋ ಪ್ರದೇಶದ, ಬೇರೊಂದು ಉಪ ಪ್ರಬೇಧದ ಜೀವಿಯೊಂದನ್ನು ನಮ್ಮಲ್ಲಿಗೆ ತಂದು ಬಿಡುವುದಕ್ಕಿಂತ ಹೆಚ್ಚಿನ ಮಹತ್ವ ಪಡೆದುಕೊಳ್ಳಬೇಕು. ಇಲ್ಲದೆ ಹೋದರೆ ಲಕ್ಷಾಂತರ ವರ್ಷಗಳಿಂದ ಭೂಮಿಯ ಮೇಲಿದ್ದ ಒಂದೊಂದೇ ಜೀವಪ್ರಬೇಧಗಳನ್ನು ನಾವು ಶಾಶ್ವತವಾಗಿ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತೇವೆ.

ಗುರುಪ್ರಸಾದ್ ತಿಮ್ಮಾಪುರ

ಗುರುಪ್ರಸಾದ್ ತಿಮ್ಮಾಪುರ
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಗುರು ಪರಿಸರ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪರಿಸರ ಕಾಳಜಿಗೆ ಸಂಬಂಧಿಸಿದಂತೆ ಹಲವು ಲೇಖನಗಳನ್ನು ಬರೆದಿದ್ದಾರೆ.


ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...