Homeಮುಖಪುಟಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

ಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

- Advertisement -
- Advertisement -

ಈಗ ಮಾಧ್ಯಮಗಳಲ್ಲೆಲ್ಲಾ ಪ್ರಧಾನಿಗಳ ಜನ್ಮದಿನದಂದು ತಂದು ಬಿಡಲಾದ ಕನ್ನಡದ ಸಿವಂಗಿ ಎಂದು ಹೆಸರುಳ್ಳ ಚೀತಾಗಳದ್ದೇ ಸುದ್ದಿ. ಇದಕ್ಕೆ, ನಮ್ಮ ದೇಶದಿಂದ ಅಳಿದುಹೋದ ಪ್ರಬೇಧವೊಂದನ್ನು ಮತ್ತೆ ಅವತರಿಸುವಂತೆ ಮಾಡಲು ಮೋದಿಯವರೇ ಬರಬೇಕಾಯಿತು ಎಂದೆಲ್ಲ ಪ್ರಚಾರವನ್ನೂ ಕೊಡಲಾಯಿತು. ಆದರೆ ವಾಸ್ತವದ ವಿಷಯವೆಂದರೆ ಭಾರತದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ ಮತ್ತು ಆಫ್ರಿಕಾದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ. ಹೇಗೆ ಆಫ್ರಿಕಾದ ಸಿಂಹಗಳನ್ನು ಭಾರತದ ಗಿರ್ ಅರಣ್ಯದಲ್ಲಿರುವ ಸಿಂಹಗಳೆನ್ನಲಾಗದೋ, ಹೇಗೆ ಸೈಬೀರಿಯಾದ ಹುಲಿಗಳನ್ನು ಭಾರತದ ಹುಲಿಗಳೆನ್ನಲಾಗದೋ, ಹಾಗೆಯೇ ಆಫ್ರಿಕಾದ ಸಿವಂಗಿಗಳು ಆನುವಂಶಿಕವಾಗಿ ಭಾರತದ ಅಥವಾ ಏಷ್ಯಾದ ಸಿವಂಗಿಗಳಾಗಲಾರವು. ಐತಿಹಾಸಿಕವಾಗಿ ಏಷಿಯಾದ ಸಿವಂಗಿಗಳು ಮಧ್ಯಪ್ರಾಚ್ಯದಿಂದ ಹಿಡಿದು ಭಾರತದವರೆಗಿನ ಭೂ ಪ್ರದೇಶದಲ್ಲಿ ಕಂಡುಬರುತ್ತಿದ್ದವು. ಆದರೆ ಅತಿಯಾದ ಬೇಟೆ ಮತ್ತು ಆವಾಸದ ಕುಗ್ಗುವಿಕೆಯ ಕಾರಣಗಳಿಂದಾಗಿ ಕಳೆದ ಶತಮಾನದ ಮಧ್ಯಭಾಗದಲ್ಲಿ ತಮ್ಮ ವ್ಯಾಪ್ತಿಯ ಬಹುಪಾಲು ಪ್ರದೇಶಗಳಲ್ಲಿ ಈ ಸಿವಂಗಿಗಳು ಅವಸಾನ ಹೊಂದಿದವು. ಈಗಲೂ ಕೂಡ ಏಷಿಯಾದ ಸಿವಂಗಿಗಳು ಇರಾನಿನ ಕೆಲ ಸಂರಕ್ಷಿತ ಪ್ರದೇಶದಲ್ಲಿ ಉಳಿದುಕೊಂಡಿವೆ. ಆದರೆ ಅವುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ಹತ್ತು ವರ್ಷಗಳ ಹಿಂದೆ ಸುಮಾರು 80ರಷ್ಟು ಮಾತ್ರ ಇದ್ದ ಸಿವಂಗಿಗಳು ಈಗಿನ ಗಣತಿಯ ಪ್ರಕಾರ 20ಕ್ಕೂ ಕಡಿಮೆ ಎಂದು ಅಂದಾಜಿಸಲಾಗಿದೆ.

ಸಿವಂಗಿಗಳು ಕಾಣಬರುವುದು ಉಷ್ಣ ಪ್ರದೇಶದ ಹುಲ್ಲುಗಾವಲು ಮತ್ತು ಅರೆ ಮರುಭೂಮಿಯಂತಹ ಪ್ರದೇಶಗಳಲ್ಲಿ. ಅವುಗಳ ಅಳಿವಿಗೆ ಸೂಕ್ತ ಆವಾಸದ ನಾಶವೇ ಮುಖ್ಯವಾದ ಕಾರಣ. ನಮ್ಮ ದೇಶದಲ್ಲಿ ಸಿವಂಗಿಗಳು ಇರಬಹುದಾದ ಆವಾಸವು ಹೆಚ್ಚಿನ ಪ್ರಮಾಣದಲ್ಲೇನೂ ಉಳಿದಿಲ್ಲ. ಅವೆಲ್ಲ ಖರಾಬು ಅಥವಾ ಬರಡು ಭೂಮಿಗಳೆಂದು ಪರಿಗಣಿಸಲ್ಪಟ್ಟು ಕೈಗಾರಿಕೆ ಮತ್ತಿತರ ಅರಣ್ಯೇತರ ಬಳಕೆಗೆ ವಿನಿಯೋಗಿಸಲ್ಪಟ್ಟಿವೆ. ನಮ್ಮ ದೇಶದಿಂದ ಸಿವಂಗಿಗಳೇನೋ ದಶಕಗಳ ಹಿಂದೆ ನಶಿಸಿ ಹೋದವು ಆದರೆ ಲಕ್ಷಾಂತರ ವರ್ಷಗಳಿಂದ ಇದೇ ಸಿವಂಗಿಗಳ ಜೊತೆಯಲ್ಲಿಯೇ ಆವಾಸವನ್ನು ಹಂಚಿಕೊಂಡಿದ್ದ ಇತರ ಜೀವ ಪ್ರಬೇಧಗಳ ಪರಿಸ್ಥಿತಿಯೇನು? ಸಿವಂಗಿಗಳಂತೆಯೇ ಹುಲ್ಲುಗಾವಲು ಮತ್ತು ಅರೆ ಮರುಭೂಮಿ ಪ್ರದೇಶದ ಮೇಲೆ ಅವಲಂಬಿತವಾದ ಅನೇಕ ಜೀವಿ ಪ್ರಬೇಧಗಳು ಅಳಿವಿನತ್ತ ಮುಖಮಾಡಿ ನಿಂತಿವೆ.

ರಾಜಸ್ಥಾನ, ಗುಜರಾತಿನ ಅರೆ ಮರುಭೂಮಿ ಪ್ರದೇಶಗಳು, ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಮತ್ತು ಕರ್ನಾಟಕವನ್ನೂ ಒಳಗೊಂಡ ದಖ್ಖನ್ ಪ್ರಸ್ಥಭೂಮಿಯ ಒಣ ಹುಲ್ಲುಗಾವಲಿನಲ್ಲಿ ಕಂಡುಬರುವ, ಕನ್ನಡದಲ್ಲಿ ಎರ್ಲಡ್ಡು ಅಥವಾ ದೊರವಾಯನ ಹಕ್ಕಿ ಎಂದು ಕರೆಸಿಕೊಳ್ಳುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಹಕ್ಕಿಯು ಇಂಥದೇ ಹುಲ್ಲುಗಾವಲನ್ನು ಅವಲಂಬಿಸಿದ ಜೀವಿ. ಮೊದಲು ವ್ಯಾಪಕವಾಗಿ ಕಂಡುಬರುತ್ತಿದ್ದ ಈ ಹಕ್ಕಿಗಳು ಆವಾಸದ ನಾಶ ಮತ್ತು ಬೇಟೆಯ ಕಾರಣಗಳಿಂದ ಅಳಿವಿನಂಚಿಗೆ ಬಂದುನಿಂತಿವೆ. ಕೆಲವೇ ನೂರರಷ್ಟು ಮಾತ್ರ ಉಳಿದುಕೊಂಡಿರುವ ಈ ಹಕ್ಕಿಗಳು ಒಮ್ಮೆ ನಾಶವಾದರೆ ಮತ್ತೆಲ್ಲಿಂದಲೂ ಇವುಗಳನ್ನು ತರಲಾಗದು. ನಿಯಂತ್ರಣ ಇಲ್ಲದ ಅಭಿವೃದ್ಧಿ, ಅಗತ್ಯವಿಲ್ಲದೆಯೂ ನಿರ್ಮಾಣಗೊಳ್ಳುವ ರಸ್ತೆಗಳು ಮತ್ತು ಹೈಟೆನ್ಷನ್ ವಿದ್ಯುತ್ ತಂತಿಗಳು ಇವುಗಳಿಗೆ ಮಾರಕವಾಗಿವೆ.

ಸರಿಸುಮಾರು ಇದೇ ರೀತಿಯ ಆವಾಸದಲ್ಲಿ ಕಂಡುಬರುವ ಮತ್ತು ಮುಂಚೆ ವ್ಯಾಪಕವಾಗಿದ್ದ ಲೆಸ್ಸರ್ ಫ್ಲೋರಿಕನ್ ಅಥವಾ ಚೊಟ್ಟಿ ನವಿಲಕ್ಕಿ ಎಂದು ಕರೆಯಲ್ಪಡುವ ಹಕ್ಕಿಯು ಕೂಡ ಇಂದು ಇಲ್ಲವೆನ್ನುವಷ್ಟು ಕಡಿಮೆಯಾಗಿದೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಹತ್ತಿರದ ಹೆಸರಘಟ್ಟದ ಹುಲ್ಲುಗಾವಲಿನಲ್ಲಿ ಅಕಸ್ಮಾತ್ತಾಗಿ ಕಂಡ ಈ ಹಕ್ಕಿಯು ಸ್ಥಳೀಯ ಪಕ್ಷಿ ವೀಕ್ಷಕರಲ್ಲಿ ರೋಮಾಂಚನವನ್ನೇ ಸೃಷ್ಟಿಸಿತ್ತು. ಯಾಕೆಂದರೆ ದಶಕಗಳಿಂದೀಚೆಗೆ ಆ ಹಕ್ಕಿಯು ಸ್ಥಳೀಯವಾಗಿ ಕಾಣಿಸಿರಲೇ ಇಲ್ಲ. ಇದೇ ಹುಲ್ಲುಗಾವಲನ್ನು ಸಂರಕ್ಷಣಾ ಮೀಸಲು ಪ್ರದೇಶವಾಗಿ ಘೋಷಣೆ ಮಾಡುವಂತೆ ಸ್ಥಳೀಯ ವನ್ಯಜೀವಿ ಆಸಕ್ತರು ಒತ್ತಾಯಿಸುತ್ತಿದ್ದಾರೆ. ಇಲ್ಲವಾದರೆ ಬೆಂಗಳೂರಿಗೆ ಈ ಹಕ್ಕಿಗಳು ಬರುವ ಸಾಧ್ಯತೆಯು ಶಾಶ್ವತವಾಗಿ ಇಲ್ಲವಾಗುತ್ತದೆ. ಹಾಗೆಯೇ, ಒಣ ಪ್ರದೇಶದ ಹುಲ್ಲುಗಾವಲಿನಲ್ಲಿ ಮಾತ್ರ ಕಂಡುಬರುತ್ತಿದ್ದ ಜೇರ್ಡನ್ಸ್ ಕೋರ್ಸರ್ ಎಂಬ ಹಕ್ಕಿ ಕೂಡ ಬಹುಪಾಲು ನಾಶವಾಗಿದೆ. ಇದು ಈಗ ಆಂಧ್ರದ ಲಂಕಾಮಲ್ಲೇಶ್ವರ ವನ್ಯಜೀವಿಧಾಮದಲ್ಲಿ ಮಾತ್ರ ಇರಬಹುದೆಂದು ನಂಬಲಾಗಿದೆ. ಕೊನೆಯ ಬಾರಿಗೆ ಈ ಹಕ್ಕಿಯನ್ನು ನೋಡಿ ದಶಕಗಳೇ ಕಳೆದಿವೆ. ಹೀಗೆ ಸಿವಂಗಿಯ ಜೊತೆಗೆ ಇವೆಲ್ಲ ಪ್ರಬೇಧದ ಜೀವಿಗಳು ಒಂದೊಂದಾಗಿ ಅಳಿವಿನತ್ತ ನಡೆದಿವೆ.

ವರ್ಷದ ಬಹುಪಾಲು ಮೇಲ್ನೋಟಕ್ಕೆ ಒಣಗಿದಂತೆ ಕಾಣುವ ಹುಲ್ಲುಗಾವಲುಗಳ ಆವಾಸದ ವಿಶೇಷತೆಯೇ ಬೇರೆ, ಇವುಗಳು ಪೋಷಿಸುವ ಜೀವವೈವಿಧ್ಯ ನಿಜಕ್ಕೂ ಅಚ್ಚರಿ ಹುಟ್ಟಿಸುವಂತದ್ದು. ಇವುಗಳ ಕುರಿತು ನಮ್ಮ ಅರಿವು ಕೂಡ ಕಡಿಮೆಯೇ; ಏಕೆಂದರೆ ಈ ಆವಾಸವನ್ನು ನಾವೀಗಾಗಲೇ ಬರಡು ಭೂಮಿಯೆಂದೂ ಕೃಷಿಗೆ ಯೋಗ್ಯವಲ್ಲದ ಭೂಮಿಯೆಂದೂ ವರ್ಗೀಕರಿಸಿಯಾಗಿದೆ. ಈ ಪ್ರದೇಶಗಳಲ್ಲಿ ನಾವು ಮಾಡುವ ಎಲ್ಲ ಚಟುವಟಿಕೆಗಳೂ ಅಲ್ಲಿನ ಜೀವ ಪ್ರಬೇಧಕ್ಕೆ ಕಂಟಕವೇ ಆಗುತ್ತದೆ. ಉದಾಹರಣೆಗೆ, ಅತ್ಯಂತ ಜನಪ್ರಿಯವಾದ ಪರಿಸರ ಪ್ರೇಮಿ ಚಟುವಟಿಕೆಯೆಂದು ಕರೆಸಿಕೊಳ್ಳಲ್ಪಡುವ ಗಿಡ ನೆಡುವ ಚಟುವಟಿಕೆ ಹುಲ್ಲುಗಾವಲಿಗೆ ಮತ್ತು ಅಲ್ಲಿನ ಜೀವಿಗಳಿಗೆ ಮಾರಕ. ಹುಲ್ಲುಗಾವಲನ್ನು ನಾವು ಅರಣ್ಯವಾಗಿ ಪರಿವರ್ತಿಸಿದರೆ ಅಲ್ಲಿನ ಸ್ಥಳೀಯ ಜೀವಪ್ರಬೇಧಗಳು ಅಲ್ಲಿಂದ ಮಾಯವಾಗುತ್ತವೆ. ಅದೇ ರೀತಿ ಜಾಗತಿಕ ತಾಪಮಾನದಿಂದ ರಕ್ಷಿಸುವ ಮತ್ತು ಪರಿಸರ ಸ್ನೇಹಿ ಎಂದು ನಂಬಲ್ಪಡುವ ಸೌರ ವಿದ್ಯುತ್ ಕೂಡ ಹುಲ್ಲುಗಾವಲಿನ ಆವಾಸಕ್ಕೆ ಕಂಟಕವೇ ಆಗಿದೆ. ನಮ್ಮದೇ ನಾಡಿನ ಪಾವಗಡದಲ್ಲಿ ಸ್ಥಾಪಿಸಲಾದ ಏಷಿಯಾದ ಅತಿದೊಡ್ಡ ಸೌರ ವಿದ್ಯುತ್ ಘಟಕವು ಇಂತಹುದೇ ಹುಲ್ಲುಗಾವಲು ಮತ್ತು ಮಳೆಯಾಧಾರಿತ ಒಣ ಕೃಷಿ ಭೂಮಿಯಲ್ಲಿಯೇ ಇದೆ. ಶಾಶ್ವತವಾಗಿ ಹುಲ್ಲುಗಾವಲನ್ನು ಮುಚ್ಚಿಹಾಕುವ ಸೌರ ಫಲಕಗಳು, ಅವುಗಳ ಸುತ್ತ ಹುಲ್ಲು ಮತ್ತಿತರ ಸಸ್ಯಗಳು ಬೆಳೆಯದಂತೆ ಸಿಂಪಡಿಸುವ ಕಳೆನಾಶಕಗಳು ಮತ್ತು ಈ ಸೌರ ಫಲಕಗಳನ್ನು ಸ್ವಚ್ಛಗೊಳಿಸಲು ಬಳಸುವ ಕೋಟಿಗಟ್ಟಲೆ ಲೀಟರ್‌ನಷ್ಟು ನೀರು, ಇವೆಲ್ಲವೂ ಈ ಯೋಜನೆಗಳು ಎಷ್ಟು ಪರಿಸರ ಸ್ನೇಹಿ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿತ್ತವೆ.

ವನ್ಯಜೀವಿ ಸಂರಕ್ಷಣೆಯೆಂಬುದು, ಹಿಂದಿನ ಅಂಕಿ ಅಂಶಗಳನ್ನು ನೋಡಿ ಅದರ ಆಧಾರದ ಮೇಲೆ ದಶಕಗಳಷ್ಟು ಮುಂದಿನ ಯೋಜನೆಯನ್ನಿಟ್ಟುಕೊಂಡು ಮಾಡುವ ಒಂದು ವೈಜ್ಞಾನಿಕ ಪ್ರಕ್ರಿಯಯಾಗಿದೆ. ಈ ಹಿಂದೆ ಮಾಡಿದ ತಪ್ಪುಗಳಿಂದ ನಾವು ಎಷ್ಟು ಜೀವ ಸಂಪತ್ತನ್ನು ಕಳೆದುಕೊಂಡಿದ್ದೇವೆ ಮತ್ತು ಅದು ಮರುಕಳಿಸದಂತೆ ನಾವು ಕೈಗೊಳ್ಳಬೇಕಾದ ಕ್ರಮಗಳೇನೆಂಬ ಸಂಗತಿಗಳು, ಯಾವುದೋ ಪ್ರದೇಶದ, ಬೇರೊಂದು ಉಪ ಪ್ರಬೇಧದ ಜೀವಿಯೊಂದನ್ನು ನಮ್ಮಲ್ಲಿಗೆ ತಂದು ಬಿಡುವುದಕ್ಕಿಂತ ಹೆಚ್ಚಿನ ಮಹತ್ವ ಪಡೆದುಕೊಳ್ಳಬೇಕು. ಇಲ್ಲದೆ ಹೋದರೆ ಲಕ್ಷಾಂತರ ವರ್ಷಗಳಿಂದ ಭೂಮಿಯ ಮೇಲಿದ್ದ ಒಂದೊಂದೇ ಜೀವಪ್ರಬೇಧಗಳನ್ನು ನಾವು ಶಾಶ್ವತವಾಗಿ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತೇವೆ.

ಗುರುಪ್ರಸಾದ್ ತಿಮ್ಮಾಪುರ

ಗುರುಪ್ರಸಾದ್ ತಿಮ್ಮಾಪುರ
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಗುರು ಪರಿಸರ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪರಿಸರ ಕಾಳಜಿಗೆ ಸಂಬಂಧಿಸಿದಂತೆ ಹಲವು ಲೇಖನಗಳನ್ನು ಬರೆದಿದ್ದಾರೆ.


ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...