Homeಮುಖಪುಟಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

ಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

- Advertisement -
- Advertisement -

ಈಗ ಮಾಧ್ಯಮಗಳಲ್ಲೆಲ್ಲಾ ಪ್ರಧಾನಿಗಳ ಜನ್ಮದಿನದಂದು ತಂದು ಬಿಡಲಾದ ಕನ್ನಡದ ಸಿವಂಗಿ ಎಂದು ಹೆಸರುಳ್ಳ ಚೀತಾಗಳದ್ದೇ ಸುದ್ದಿ. ಇದಕ್ಕೆ, ನಮ್ಮ ದೇಶದಿಂದ ಅಳಿದುಹೋದ ಪ್ರಬೇಧವೊಂದನ್ನು ಮತ್ತೆ ಅವತರಿಸುವಂತೆ ಮಾಡಲು ಮೋದಿಯವರೇ ಬರಬೇಕಾಯಿತು ಎಂದೆಲ್ಲ ಪ್ರಚಾರವನ್ನೂ ಕೊಡಲಾಯಿತು. ಆದರೆ ವಾಸ್ತವದ ವಿಷಯವೆಂದರೆ ಭಾರತದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ ಮತ್ತು ಆಫ್ರಿಕಾದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ. ಹೇಗೆ ಆಫ್ರಿಕಾದ ಸಿಂಹಗಳನ್ನು ಭಾರತದ ಗಿರ್ ಅರಣ್ಯದಲ್ಲಿರುವ ಸಿಂಹಗಳೆನ್ನಲಾಗದೋ, ಹೇಗೆ ಸೈಬೀರಿಯಾದ ಹುಲಿಗಳನ್ನು ಭಾರತದ ಹುಲಿಗಳೆನ್ನಲಾಗದೋ, ಹಾಗೆಯೇ ಆಫ್ರಿಕಾದ ಸಿವಂಗಿಗಳು ಆನುವಂಶಿಕವಾಗಿ ಭಾರತದ ಅಥವಾ ಏಷ್ಯಾದ ಸಿವಂಗಿಗಳಾಗಲಾರವು. ಐತಿಹಾಸಿಕವಾಗಿ ಏಷಿಯಾದ ಸಿವಂಗಿಗಳು ಮಧ್ಯಪ್ರಾಚ್ಯದಿಂದ ಹಿಡಿದು ಭಾರತದವರೆಗಿನ ಭೂ ಪ್ರದೇಶದಲ್ಲಿ ಕಂಡುಬರುತ್ತಿದ್ದವು. ಆದರೆ ಅತಿಯಾದ ಬೇಟೆ ಮತ್ತು ಆವಾಸದ ಕುಗ್ಗುವಿಕೆಯ ಕಾರಣಗಳಿಂದಾಗಿ ಕಳೆದ ಶತಮಾನದ ಮಧ್ಯಭಾಗದಲ್ಲಿ ತಮ್ಮ ವ್ಯಾಪ್ತಿಯ ಬಹುಪಾಲು ಪ್ರದೇಶಗಳಲ್ಲಿ ಈ ಸಿವಂಗಿಗಳು ಅವಸಾನ ಹೊಂದಿದವು. ಈಗಲೂ ಕೂಡ ಏಷಿಯಾದ ಸಿವಂಗಿಗಳು ಇರಾನಿನ ಕೆಲ ಸಂರಕ್ಷಿತ ಪ್ರದೇಶದಲ್ಲಿ ಉಳಿದುಕೊಂಡಿವೆ. ಆದರೆ ಅವುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ಹತ್ತು ವರ್ಷಗಳ ಹಿಂದೆ ಸುಮಾರು 80ರಷ್ಟು ಮಾತ್ರ ಇದ್ದ ಸಿವಂಗಿಗಳು ಈಗಿನ ಗಣತಿಯ ಪ್ರಕಾರ 20ಕ್ಕೂ ಕಡಿಮೆ ಎಂದು ಅಂದಾಜಿಸಲಾಗಿದೆ.

ಸಿವಂಗಿಗಳು ಕಾಣಬರುವುದು ಉಷ್ಣ ಪ್ರದೇಶದ ಹುಲ್ಲುಗಾವಲು ಮತ್ತು ಅರೆ ಮರುಭೂಮಿಯಂತಹ ಪ್ರದೇಶಗಳಲ್ಲಿ. ಅವುಗಳ ಅಳಿವಿಗೆ ಸೂಕ್ತ ಆವಾಸದ ನಾಶವೇ ಮುಖ್ಯವಾದ ಕಾರಣ. ನಮ್ಮ ದೇಶದಲ್ಲಿ ಸಿವಂಗಿಗಳು ಇರಬಹುದಾದ ಆವಾಸವು ಹೆಚ್ಚಿನ ಪ್ರಮಾಣದಲ್ಲೇನೂ ಉಳಿದಿಲ್ಲ. ಅವೆಲ್ಲ ಖರಾಬು ಅಥವಾ ಬರಡು ಭೂಮಿಗಳೆಂದು ಪರಿಗಣಿಸಲ್ಪಟ್ಟು ಕೈಗಾರಿಕೆ ಮತ್ತಿತರ ಅರಣ್ಯೇತರ ಬಳಕೆಗೆ ವಿನಿಯೋಗಿಸಲ್ಪಟ್ಟಿವೆ. ನಮ್ಮ ದೇಶದಿಂದ ಸಿವಂಗಿಗಳೇನೋ ದಶಕಗಳ ಹಿಂದೆ ನಶಿಸಿ ಹೋದವು ಆದರೆ ಲಕ್ಷಾಂತರ ವರ್ಷಗಳಿಂದ ಇದೇ ಸಿವಂಗಿಗಳ ಜೊತೆಯಲ್ಲಿಯೇ ಆವಾಸವನ್ನು ಹಂಚಿಕೊಂಡಿದ್ದ ಇತರ ಜೀವ ಪ್ರಬೇಧಗಳ ಪರಿಸ್ಥಿತಿಯೇನು? ಸಿವಂಗಿಗಳಂತೆಯೇ ಹುಲ್ಲುಗಾವಲು ಮತ್ತು ಅರೆ ಮರುಭೂಮಿ ಪ್ರದೇಶದ ಮೇಲೆ ಅವಲಂಬಿತವಾದ ಅನೇಕ ಜೀವಿ ಪ್ರಬೇಧಗಳು ಅಳಿವಿನತ್ತ ಮುಖಮಾಡಿ ನಿಂತಿವೆ.

ರಾಜಸ್ಥಾನ, ಗುಜರಾತಿನ ಅರೆ ಮರುಭೂಮಿ ಪ್ರದೇಶಗಳು, ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಮತ್ತು ಕರ್ನಾಟಕವನ್ನೂ ಒಳಗೊಂಡ ದಖ್ಖನ್ ಪ್ರಸ್ಥಭೂಮಿಯ ಒಣ ಹುಲ್ಲುಗಾವಲಿನಲ್ಲಿ ಕಂಡುಬರುವ, ಕನ್ನಡದಲ್ಲಿ ಎರ್ಲಡ್ಡು ಅಥವಾ ದೊರವಾಯನ ಹಕ್ಕಿ ಎಂದು ಕರೆಸಿಕೊಳ್ಳುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಹಕ್ಕಿಯು ಇಂಥದೇ ಹುಲ್ಲುಗಾವಲನ್ನು ಅವಲಂಬಿಸಿದ ಜೀವಿ. ಮೊದಲು ವ್ಯಾಪಕವಾಗಿ ಕಂಡುಬರುತ್ತಿದ್ದ ಈ ಹಕ್ಕಿಗಳು ಆವಾಸದ ನಾಶ ಮತ್ತು ಬೇಟೆಯ ಕಾರಣಗಳಿಂದ ಅಳಿವಿನಂಚಿಗೆ ಬಂದುನಿಂತಿವೆ. ಕೆಲವೇ ನೂರರಷ್ಟು ಮಾತ್ರ ಉಳಿದುಕೊಂಡಿರುವ ಈ ಹಕ್ಕಿಗಳು ಒಮ್ಮೆ ನಾಶವಾದರೆ ಮತ್ತೆಲ್ಲಿಂದಲೂ ಇವುಗಳನ್ನು ತರಲಾಗದು. ನಿಯಂತ್ರಣ ಇಲ್ಲದ ಅಭಿವೃದ್ಧಿ, ಅಗತ್ಯವಿಲ್ಲದೆಯೂ ನಿರ್ಮಾಣಗೊಳ್ಳುವ ರಸ್ತೆಗಳು ಮತ್ತು ಹೈಟೆನ್ಷನ್ ವಿದ್ಯುತ್ ತಂತಿಗಳು ಇವುಗಳಿಗೆ ಮಾರಕವಾಗಿವೆ.

ಸರಿಸುಮಾರು ಇದೇ ರೀತಿಯ ಆವಾಸದಲ್ಲಿ ಕಂಡುಬರುವ ಮತ್ತು ಮುಂಚೆ ವ್ಯಾಪಕವಾಗಿದ್ದ ಲೆಸ್ಸರ್ ಫ್ಲೋರಿಕನ್ ಅಥವಾ ಚೊಟ್ಟಿ ನವಿಲಕ್ಕಿ ಎಂದು ಕರೆಯಲ್ಪಡುವ ಹಕ್ಕಿಯು ಕೂಡ ಇಂದು ಇಲ್ಲವೆನ್ನುವಷ್ಟು ಕಡಿಮೆಯಾಗಿದೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಹತ್ತಿರದ ಹೆಸರಘಟ್ಟದ ಹುಲ್ಲುಗಾವಲಿನಲ್ಲಿ ಅಕಸ್ಮಾತ್ತಾಗಿ ಕಂಡ ಈ ಹಕ್ಕಿಯು ಸ್ಥಳೀಯ ಪಕ್ಷಿ ವೀಕ್ಷಕರಲ್ಲಿ ರೋಮಾಂಚನವನ್ನೇ ಸೃಷ್ಟಿಸಿತ್ತು. ಯಾಕೆಂದರೆ ದಶಕಗಳಿಂದೀಚೆಗೆ ಆ ಹಕ್ಕಿಯು ಸ್ಥಳೀಯವಾಗಿ ಕಾಣಿಸಿರಲೇ ಇಲ್ಲ. ಇದೇ ಹುಲ್ಲುಗಾವಲನ್ನು ಸಂರಕ್ಷಣಾ ಮೀಸಲು ಪ್ರದೇಶವಾಗಿ ಘೋಷಣೆ ಮಾಡುವಂತೆ ಸ್ಥಳೀಯ ವನ್ಯಜೀವಿ ಆಸಕ್ತರು ಒತ್ತಾಯಿಸುತ್ತಿದ್ದಾರೆ. ಇಲ್ಲವಾದರೆ ಬೆಂಗಳೂರಿಗೆ ಈ ಹಕ್ಕಿಗಳು ಬರುವ ಸಾಧ್ಯತೆಯು ಶಾಶ್ವತವಾಗಿ ಇಲ್ಲವಾಗುತ್ತದೆ. ಹಾಗೆಯೇ, ಒಣ ಪ್ರದೇಶದ ಹುಲ್ಲುಗಾವಲಿನಲ್ಲಿ ಮಾತ್ರ ಕಂಡುಬರುತ್ತಿದ್ದ ಜೇರ್ಡನ್ಸ್ ಕೋರ್ಸರ್ ಎಂಬ ಹಕ್ಕಿ ಕೂಡ ಬಹುಪಾಲು ನಾಶವಾಗಿದೆ. ಇದು ಈಗ ಆಂಧ್ರದ ಲಂಕಾಮಲ್ಲೇಶ್ವರ ವನ್ಯಜೀವಿಧಾಮದಲ್ಲಿ ಮಾತ್ರ ಇರಬಹುದೆಂದು ನಂಬಲಾಗಿದೆ. ಕೊನೆಯ ಬಾರಿಗೆ ಈ ಹಕ್ಕಿಯನ್ನು ನೋಡಿ ದಶಕಗಳೇ ಕಳೆದಿವೆ. ಹೀಗೆ ಸಿವಂಗಿಯ ಜೊತೆಗೆ ಇವೆಲ್ಲ ಪ್ರಬೇಧದ ಜೀವಿಗಳು ಒಂದೊಂದಾಗಿ ಅಳಿವಿನತ್ತ ನಡೆದಿವೆ.

ವರ್ಷದ ಬಹುಪಾಲು ಮೇಲ್ನೋಟಕ್ಕೆ ಒಣಗಿದಂತೆ ಕಾಣುವ ಹುಲ್ಲುಗಾವಲುಗಳ ಆವಾಸದ ವಿಶೇಷತೆಯೇ ಬೇರೆ, ಇವುಗಳು ಪೋಷಿಸುವ ಜೀವವೈವಿಧ್ಯ ನಿಜಕ್ಕೂ ಅಚ್ಚರಿ ಹುಟ್ಟಿಸುವಂತದ್ದು. ಇವುಗಳ ಕುರಿತು ನಮ್ಮ ಅರಿವು ಕೂಡ ಕಡಿಮೆಯೇ; ಏಕೆಂದರೆ ಈ ಆವಾಸವನ್ನು ನಾವೀಗಾಗಲೇ ಬರಡು ಭೂಮಿಯೆಂದೂ ಕೃಷಿಗೆ ಯೋಗ್ಯವಲ್ಲದ ಭೂಮಿಯೆಂದೂ ವರ್ಗೀಕರಿಸಿಯಾಗಿದೆ. ಈ ಪ್ರದೇಶಗಳಲ್ಲಿ ನಾವು ಮಾಡುವ ಎಲ್ಲ ಚಟುವಟಿಕೆಗಳೂ ಅಲ್ಲಿನ ಜೀವ ಪ್ರಬೇಧಕ್ಕೆ ಕಂಟಕವೇ ಆಗುತ್ತದೆ. ಉದಾಹರಣೆಗೆ, ಅತ್ಯಂತ ಜನಪ್ರಿಯವಾದ ಪರಿಸರ ಪ್ರೇಮಿ ಚಟುವಟಿಕೆಯೆಂದು ಕರೆಸಿಕೊಳ್ಳಲ್ಪಡುವ ಗಿಡ ನೆಡುವ ಚಟುವಟಿಕೆ ಹುಲ್ಲುಗಾವಲಿಗೆ ಮತ್ತು ಅಲ್ಲಿನ ಜೀವಿಗಳಿಗೆ ಮಾರಕ. ಹುಲ್ಲುಗಾವಲನ್ನು ನಾವು ಅರಣ್ಯವಾಗಿ ಪರಿವರ್ತಿಸಿದರೆ ಅಲ್ಲಿನ ಸ್ಥಳೀಯ ಜೀವಪ್ರಬೇಧಗಳು ಅಲ್ಲಿಂದ ಮಾಯವಾಗುತ್ತವೆ. ಅದೇ ರೀತಿ ಜಾಗತಿಕ ತಾಪಮಾನದಿಂದ ರಕ್ಷಿಸುವ ಮತ್ತು ಪರಿಸರ ಸ್ನೇಹಿ ಎಂದು ನಂಬಲ್ಪಡುವ ಸೌರ ವಿದ್ಯುತ್ ಕೂಡ ಹುಲ್ಲುಗಾವಲಿನ ಆವಾಸಕ್ಕೆ ಕಂಟಕವೇ ಆಗಿದೆ. ನಮ್ಮದೇ ನಾಡಿನ ಪಾವಗಡದಲ್ಲಿ ಸ್ಥಾಪಿಸಲಾದ ಏಷಿಯಾದ ಅತಿದೊಡ್ಡ ಸೌರ ವಿದ್ಯುತ್ ಘಟಕವು ಇಂತಹುದೇ ಹುಲ್ಲುಗಾವಲು ಮತ್ತು ಮಳೆಯಾಧಾರಿತ ಒಣ ಕೃಷಿ ಭೂಮಿಯಲ್ಲಿಯೇ ಇದೆ. ಶಾಶ್ವತವಾಗಿ ಹುಲ್ಲುಗಾವಲನ್ನು ಮುಚ್ಚಿಹಾಕುವ ಸೌರ ಫಲಕಗಳು, ಅವುಗಳ ಸುತ್ತ ಹುಲ್ಲು ಮತ್ತಿತರ ಸಸ್ಯಗಳು ಬೆಳೆಯದಂತೆ ಸಿಂಪಡಿಸುವ ಕಳೆನಾಶಕಗಳು ಮತ್ತು ಈ ಸೌರ ಫಲಕಗಳನ್ನು ಸ್ವಚ್ಛಗೊಳಿಸಲು ಬಳಸುವ ಕೋಟಿಗಟ್ಟಲೆ ಲೀಟರ್‌ನಷ್ಟು ನೀರು, ಇವೆಲ್ಲವೂ ಈ ಯೋಜನೆಗಳು ಎಷ್ಟು ಪರಿಸರ ಸ್ನೇಹಿ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿತ್ತವೆ.

ವನ್ಯಜೀವಿ ಸಂರಕ್ಷಣೆಯೆಂಬುದು, ಹಿಂದಿನ ಅಂಕಿ ಅಂಶಗಳನ್ನು ನೋಡಿ ಅದರ ಆಧಾರದ ಮೇಲೆ ದಶಕಗಳಷ್ಟು ಮುಂದಿನ ಯೋಜನೆಯನ್ನಿಟ್ಟುಕೊಂಡು ಮಾಡುವ ಒಂದು ವೈಜ್ಞಾನಿಕ ಪ್ರಕ್ರಿಯಯಾಗಿದೆ. ಈ ಹಿಂದೆ ಮಾಡಿದ ತಪ್ಪುಗಳಿಂದ ನಾವು ಎಷ್ಟು ಜೀವ ಸಂಪತ್ತನ್ನು ಕಳೆದುಕೊಂಡಿದ್ದೇವೆ ಮತ್ತು ಅದು ಮರುಕಳಿಸದಂತೆ ನಾವು ಕೈಗೊಳ್ಳಬೇಕಾದ ಕ್ರಮಗಳೇನೆಂಬ ಸಂಗತಿಗಳು, ಯಾವುದೋ ಪ್ರದೇಶದ, ಬೇರೊಂದು ಉಪ ಪ್ರಬೇಧದ ಜೀವಿಯೊಂದನ್ನು ನಮ್ಮಲ್ಲಿಗೆ ತಂದು ಬಿಡುವುದಕ್ಕಿಂತ ಹೆಚ್ಚಿನ ಮಹತ್ವ ಪಡೆದುಕೊಳ್ಳಬೇಕು. ಇಲ್ಲದೆ ಹೋದರೆ ಲಕ್ಷಾಂತರ ವರ್ಷಗಳಿಂದ ಭೂಮಿಯ ಮೇಲಿದ್ದ ಒಂದೊಂದೇ ಜೀವಪ್ರಬೇಧಗಳನ್ನು ನಾವು ಶಾಶ್ವತವಾಗಿ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತೇವೆ.

ಗುರುಪ್ರಸಾದ್ ತಿಮ್ಮಾಪುರ

ಗುರುಪ್ರಸಾದ್ ತಿಮ್ಮಾಪುರ
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಗುರು ಪರಿಸರ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪರಿಸರ ಕಾಳಜಿಗೆ ಸಂಬಂಧಿಸಿದಂತೆ ಹಲವು ಲೇಖನಗಳನ್ನು ಬರೆದಿದ್ದಾರೆ.


ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...