Homeಮುಖಪುಟಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

ಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

- Advertisement -
- Advertisement -

ಈಗ ಮಾಧ್ಯಮಗಳಲ್ಲೆಲ್ಲಾ ಪ್ರಧಾನಿಗಳ ಜನ್ಮದಿನದಂದು ತಂದು ಬಿಡಲಾದ ಕನ್ನಡದ ಸಿವಂಗಿ ಎಂದು ಹೆಸರುಳ್ಳ ಚೀತಾಗಳದ್ದೇ ಸುದ್ದಿ. ಇದಕ್ಕೆ, ನಮ್ಮ ದೇಶದಿಂದ ಅಳಿದುಹೋದ ಪ್ರಬೇಧವೊಂದನ್ನು ಮತ್ತೆ ಅವತರಿಸುವಂತೆ ಮಾಡಲು ಮೋದಿಯವರೇ ಬರಬೇಕಾಯಿತು ಎಂದೆಲ್ಲ ಪ್ರಚಾರವನ್ನೂ ಕೊಡಲಾಯಿತು. ಆದರೆ ವಾಸ್ತವದ ವಿಷಯವೆಂದರೆ ಭಾರತದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ ಮತ್ತು ಆಫ್ರಿಕಾದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ. ಹೇಗೆ ಆಫ್ರಿಕಾದ ಸಿಂಹಗಳನ್ನು ಭಾರತದ ಗಿರ್ ಅರಣ್ಯದಲ್ಲಿರುವ ಸಿಂಹಗಳೆನ್ನಲಾಗದೋ, ಹೇಗೆ ಸೈಬೀರಿಯಾದ ಹುಲಿಗಳನ್ನು ಭಾರತದ ಹುಲಿಗಳೆನ್ನಲಾಗದೋ, ಹಾಗೆಯೇ ಆಫ್ರಿಕಾದ ಸಿವಂಗಿಗಳು ಆನುವಂಶಿಕವಾಗಿ ಭಾರತದ ಅಥವಾ ಏಷ್ಯಾದ ಸಿವಂಗಿಗಳಾಗಲಾರವು. ಐತಿಹಾಸಿಕವಾಗಿ ಏಷಿಯಾದ ಸಿವಂಗಿಗಳು ಮಧ್ಯಪ್ರಾಚ್ಯದಿಂದ ಹಿಡಿದು ಭಾರತದವರೆಗಿನ ಭೂ ಪ್ರದೇಶದಲ್ಲಿ ಕಂಡುಬರುತ್ತಿದ್ದವು. ಆದರೆ ಅತಿಯಾದ ಬೇಟೆ ಮತ್ತು ಆವಾಸದ ಕುಗ್ಗುವಿಕೆಯ ಕಾರಣಗಳಿಂದಾಗಿ ಕಳೆದ ಶತಮಾನದ ಮಧ್ಯಭಾಗದಲ್ಲಿ ತಮ್ಮ ವ್ಯಾಪ್ತಿಯ ಬಹುಪಾಲು ಪ್ರದೇಶಗಳಲ್ಲಿ ಈ ಸಿವಂಗಿಗಳು ಅವಸಾನ ಹೊಂದಿದವು. ಈಗಲೂ ಕೂಡ ಏಷಿಯಾದ ಸಿವಂಗಿಗಳು ಇರಾನಿನ ಕೆಲ ಸಂರಕ್ಷಿತ ಪ್ರದೇಶದಲ್ಲಿ ಉಳಿದುಕೊಂಡಿವೆ. ಆದರೆ ಅವುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ಹತ್ತು ವರ್ಷಗಳ ಹಿಂದೆ ಸುಮಾರು 80ರಷ್ಟು ಮಾತ್ರ ಇದ್ದ ಸಿವಂಗಿಗಳು ಈಗಿನ ಗಣತಿಯ ಪ್ರಕಾರ 20ಕ್ಕೂ ಕಡಿಮೆ ಎಂದು ಅಂದಾಜಿಸಲಾಗಿದೆ.

ಸಿವಂಗಿಗಳು ಕಾಣಬರುವುದು ಉಷ್ಣ ಪ್ರದೇಶದ ಹುಲ್ಲುಗಾವಲು ಮತ್ತು ಅರೆ ಮರುಭೂಮಿಯಂತಹ ಪ್ರದೇಶಗಳಲ್ಲಿ. ಅವುಗಳ ಅಳಿವಿಗೆ ಸೂಕ್ತ ಆವಾಸದ ನಾಶವೇ ಮುಖ್ಯವಾದ ಕಾರಣ. ನಮ್ಮ ದೇಶದಲ್ಲಿ ಸಿವಂಗಿಗಳು ಇರಬಹುದಾದ ಆವಾಸವು ಹೆಚ್ಚಿನ ಪ್ರಮಾಣದಲ್ಲೇನೂ ಉಳಿದಿಲ್ಲ. ಅವೆಲ್ಲ ಖರಾಬು ಅಥವಾ ಬರಡು ಭೂಮಿಗಳೆಂದು ಪರಿಗಣಿಸಲ್ಪಟ್ಟು ಕೈಗಾರಿಕೆ ಮತ್ತಿತರ ಅರಣ್ಯೇತರ ಬಳಕೆಗೆ ವಿನಿಯೋಗಿಸಲ್ಪಟ್ಟಿವೆ. ನಮ್ಮ ದೇಶದಿಂದ ಸಿವಂಗಿಗಳೇನೋ ದಶಕಗಳ ಹಿಂದೆ ನಶಿಸಿ ಹೋದವು ಆದರೆ ಲಕ್ಷಾಂತರ ವರ್ಷಗಳಿಂದ ಇದೇ ಸಿವಂಗಿಗಳ ಜೊತೆಯಲ್ಲಿಯೇ ಆವಾಸವನ್ನು ಹಂಚಿಕೊಂಡಿದ್ದ ಇತರ ಜೀವ ಪ್ರಬೇಧಗಳ ಪರಿಸ್ಥಿತಿಯೇನು? ಸಿವಂಗಿಗಳಂತೆಯೇ ಹುಲ್ಲುಗಾವಲು ಮತ್ತು ಅರೆ ಮರುಭೂಮಿ ಪ್ರದೇಶದ ಮೇಲೆ ಅವಲಂಬಿತವಾದ ಅನೇಕ ಜೀವಿ ಪ್ರಬೇಧಗಳು ಅಳಿವಿನತ್ತ ಮುಖಮಾಡಿ ನಿಂತಿವೆ.

ರಾಜಸ್ಥಾನ, ಗುಜರಾತಿನ ಅರೆ ಮರುಭೂಮಿ ಪ್ರದೇಶಗಳು, ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಮತ್ತು ಕರ್ನಾಟಕವನ್ನೂ ಒಳಗೊಂಡ ದಖ್ಖನ್ ಪ್ರಸ್ಥಭೂಮಿಯ ಒಣ ಹುಲ್ಲುಗಾವಲಿನಲ್ಲಿ ಕಂಡುಬರುವ, ಕನ್ನಡದಲ್ಲಿ ಎರ್ಲಡ್ಡು ಅಥವಾ ದೊರವಾಯನ ಹಕ್ಕಿ ಎಂದು ಕರೆಸಿಕೊಳ್ಳುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಹಕ್ಕಿಯು ಇಂಥದೇ ಹುಲ್ಲುಗಾವಲನ್ನು ಅವಲಂಬಿಸಿದ ಜೀವಿ. ಮೊದಲು ವ್ಯಾಪಕವಾಗಿ ಕಂಡುಬರುತ್ತಿದ್ದ ಈ ಹಕ್ಕಿಗಳು ಆವಾಸದ ನಾಶ ಮತ್ತು ಬೇಟೆಯ ಕಾರಣಗಳಿಂದ ಅಳಿವಿನಂಚಿಗೆ ಬಂದುನಿಂತಿವೆ. ಕೆಲವೇ ನೂರರಷ್ಟು ಮಾತ್ರ ಉಳಿದುಕೊಂಡಿರುವ ಈ ಹಕ್ಕಿಗಳು ಒಮ್ಮೆ ನಾಶವಾದರೆ ಮತ್ತೆಲ್ಲಿಂದಲೂ ಇವುಗಳನ್ನು ತರಲಾಗದು. ನಿಯಂತ್ರಣ ಇಲ್ಲದ ಅಭಿವೃದ್ಧಿ, ಅಗತ್ಯವಿಲ್ಲದೆಯೂ ನಿರ್ಮಾಣಗೊಳ್ಳುವ ರಸ್ತೆಗಳು ಮತ್ತು ಹೈಟೆನ್ಷನ್ ವಿದ್ಯುತ್ ತಂತಿಗಳು ಇವುಗಳಿಗೆ ಮಾರಕವಾಗಿವೆ.

ಸರಿಸುಮಾರು ಇದೇ ರೀತಿಯ ಆವಾಸದಲ್ಲಿ ಕಂಡುಬರುವ ಮತ್ತು ಮುಂಚೆ ವ್ಯಾಪಕವಾಗಿದ್ದ ಲೆಸ್ಸರ್ ಫ್ಲೋರಿಕನ್ ಅಥವಾ ಚೊಟ್ಟಿ ನವಿಲಕ್ಕಿ ಎಂದು ಕರೆಯಲ್ಪಡುವ ಹಕ್ಕಿಯು ಕೂಡ ಇಂದು ಇಲ್ಲವೆನ್ನುವಷ್ಟು ಕಡಿಮೆಯಾಗಿದೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಹತ್ತಿರದ ಹೆಸರಘಟ್ಟದ ಹುಲ್ಲುಗಾವಲಿನಲ್ಲಿ ಅಕಸ್ಮಾತ್ತಾಗಿ ಕಂಡ ಈ ಹಕ್ಕಿಯು ಸ್ಥಳೀಯ ಪಕ್ಷಿ ವೀಕ್ಷಕರಲ್ಲಿ ರೋಮಾಂಚನವನ್ನೇ ಸೃಷ್ಟಿಸಿತ್ತು. ಯಾಕೆಂದರೆ ದಶಕಗಳಿಂದೀಚೆಗೆ ಆ ಹಕ್ಕಿಯು ಸ್ಥಳೀಯವಾಗಿ ಕಾಣಿಸಿರಲೇ ಇಲ್ಲ. ಇದೇ ಹುಲ್ಲುಗಾವಲನ್ನು ಸಂರಕ್ಷಣಾ ಮೀಸಲು ಪ್ರದೇಶವಾಗಿ ಘೋಷಣೆ ಮಾಡುವಂತೆ ಸ್ಥಳೀಯ ವನ್ಯಜೀವಿ ಆಸಕ್ತರು ಒತ್ತಾಯಿಸುತ್ತಿದ್ದಾರೆ. ಇಲ್ಲವಾದರೆ ಬೆಂಗಳೂರಿಗೆ ಈ ಹಕ್ಕಿಗಳು ಬರುವ ಸಾಧ್ಯತೆಯು ಶಾಶ್ವತವಾಗಿ ಇಲ್ಲವಾಗುತ್ತದೆ. ಹಾಗೆಯೇ, ಒಣ ಪ್ರದೇಶದ ಹುಲ್ಲುಗಾವಲಿನಲ್ಲಿ ಮಾತ್ರ ಕಂಡುಬರುತ್ತಿದ್ದ ಜೇರ್ಡನ್ಸ್ ಕೋರ್ಸರ್ ಎಂಬ ಹಕ್ಕಿ ಕೂಡ ಬಹುಪಾಲು ನಾಶವಾಗಿದೆ. ಇದು ಈಗ ಆಂಧ್ರದ ಲಂಕಾಮಲ್ಲೇಶ್ವರ ವನ್ಯಜೀವಿಧಾಮದಲ್ಲಿ ಮಾತ್ರ ಇರಬಹುದೆಂದು ನಂಬಲಾಗಿದೆ. ಕೊನೆಯ ಬಾರಿಗೆ ಈ ಹಕ್ಕಿಯನ್ನು ನೋಡಿ ದಶಕಗಳೇ ಕಳೆದಿವೆ. ಹೀಗೆ ಸಿವಂಗಿಯ ಜೊತೆಗೆ ಇವೆಲ್ಲ ಪ್ರಬೇಧದ ಜೀವಿಗಳು ಒಂದೊಂದಾಗಿ ಅಳಿವಿನತ್ತ ನಡೆದಿವೆ.

ವರ್ಷದ ಬಹುಪಾಲು ಮೇಲ್ನೋಟಕ್ಕೆ ಒಣಗಿದಂತೆ ಕಾಣುವ ಹುಲ್ಲುಗಾವಲುಗಳ ಆವಾಸದ ವಿಶೇಷತೆಯೇ ಬೇರೆ, ಇವುಗಳು ಪೋಷಿಸುವ ಜೀವವೈವಿಧ್ಯ ನಿಜಕ್ಕೂ ಅಚ್ಚರಿ ಹುಟ್ಟಿಸುವಂತದ್ದು. ಇವುಗಳ ಕುರಿತು ನಮ್ಮ ಅರಿವು ಕೂಡ ಕಡಿಮೆಯೇ; ಏಕೆಂದರೆ ಈ ಆವಾಸವನ್ನು ನಾವೀಗಾಗಲೇ ಬರಡು ಭೂಮಿಯೆಂದೂ ಕೃಷಿಗೆ ಯೋಗ್ಯವಲ್ಲದ ಭೂಮಿಯೆಂದೂ ವರ್ಗೀಕರಿಸಿಯಾಗಿದೆ. ಈ ಪ್ರದೇಶಗಳಲ್ಲಿ ನಾವು ಮಾಡುವ ಎಲ್ಲ ಚಟುವಟಿಕೆಗಳೂ ಅಲ್ಲಿನ ಜೀವ ಪ್ರಬೇಧಕ್ಕೆ ಕಂಟಕವೇ ಆಗುತ್ತದೆ. ಉದಾಹರಣೆಗೆ, ಅತ್ಯಂತ ಜನಪ್ರಿಯವಾದ ಪರಿಸರ ಪ್ರೇಮಿ ಚಟುವಟಿಕೆಯೆಂದು ಕರೆಸಿಕೊಳ್ಳಲ್ಪಡುವ ಗಿಡ ನೆಡುವ ಚಟುವಟಿಕೆ ಹುಲ್ಲುಗಾವಲಿಗೆ ಮತ್ತು ಅಲ್ಲಿನ ಜೀವಿಗಳಿಗೆ ಮಾರಕ. ಹುಲ್ಲುಗಾವಲನ್ನು ನಾವು ಅರಣ್ಯವಾಗಿ ಪರಿವರ್ತಿಸಿದರೆ ಅಲ್ಲಿನ ಸ್ಥಳೀಯ ಜೀವಪ್ರಬೇಧಗಳು ಅಲ್ಲಿಂದ ಮಾಯವಾಗುತ್ತವೆ. ಅದೇ ರೀತಿ ಜಾಗತಿಕ ತಾಪಮಾನದಿಂದ ರಕ್ಷಿಸುವ ಮತ್ತು ಪರಿಸರ ಸ್ನೇಹಿ ಎಂದು ನಂಬಲ್ಪಡುವ ಸೌರ ವಿದ್ಯುತ್ ಕೂಡ ಹುಲ್ಲುಗಾವಲಿನ ಆವಾಸಕ್ಕೆ ಕಂಟಕವೇ ಆಗಿದೆ. ನಮ್ಮದೇ ನಾಡಿನ ಪಾವಗಡದಲ್ಲಿ ಸ್ಥಾಪಿಸಲಾದ ಏಷಿಯಾದ ಅತಿದೊಡ್ಡ ಸೌರ ವಿದ್ಯುತ್ ಘಟಕವು ಇಂತಹುದೇ ಹುಲ್ಲುಗಾವಲು ಮತ್ತು ಮಳೆಯಾಧಾರಿತ ಒಣ ಕೃಷಿ ಭೂಮಿಯಲ್ಲಿಯೇ ಇದೆ. ಶಾಶ್ವತವಾಗಿ ಹುಲ್ಲುಗಾವಲನ್ನು ಮುಚ್ಚಿಹಾಕುವ ಸೌರ ಫಲಕಗಳು, ಅವುಗಳ ಸುತ್ತ ಹುಲ್ಲು ಮತ್ತಿತರ ಸಸ್ಯಗಳು ಬೆಳೆಯದಂತೆ ಸಿಂಪಡಿಸುವ ಕಳೆನಾಶಕಗಳು ಮತ್ತು ಈ ಸೌರ ಫಲಕಗಳನ್ನು ಸ್ವಚ್ಛಗೊಳಿಸಲು ಬಳಸುವ ಕೋಟಿಗಟ್ಟಲೆ ಲೀಟರ್‌ನಷ್ಟು ನೀರು, ಇವೆಲ್ಲವೂ ಈ ಯೋಜನೆಗಳು ಎಷ್ಟು ಪರಿಸರ ಸ್ನೇಹಿ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿತ್ತವೆ.

ವನ್ಯಜೀವಿ ಸಂರಕ್ಷಣೆಯೆಂಬುದು, ಹಿಂದಿನ ಅಂಕಿ ಅಂಶಗಳನ್ನು ನೋಡಿ ಅದರ ಆಧಾರದ ಮೇಲೆ ದಶಕಗಳಷ್ಟು ಮುಂದಿನ ಯೋಜನೆಯನ್ನಿಟ್ಟುಕೊಂಡು ಮಾಡುವ ಒಂದು ವೈಜ್ಞಾನಿಕ ಪ್ರಕ್ರಿಯಯಾಗಿದೆ. ಈ ಹಿಂದೆ ಮಾಡಿದ ತಪ್ಪುಗಳಿಂದ ನಾವು ಎಷ್ಟು ಜೀವ ಸಂಪತ್ತನ್ನು ಕಳೆದುಕೊಂಡಿದ್ದೇವೆ ಮತ್ತು ಅದು ಮರುಕಳಿಸದಂತೆ ನಾವು ಕೈಗೊಳ್ಳಬೇಕಾದ ಕ್ರಮಗಳೇನೆಂಬ ಸಂಗತಿಗಳು, ಯಾವುದೋ ಪ್ರದೇಶದ, ಬೇರೊಂದು ಉಪ ಪ್ರಬೇಧದ ಜೀವಿಯೊಂದನ್ನು ನಮ್ಮಲ್ಲಿಗೆ ತಂದು ಬಿಡುವುದಕ್ಕಿಂತ ಹೆಚ್ಚಿನ ಮಹತ್ವ ಪಡೆದುಕೊಳ್ಳಬೇಕು. ಇಲ್ಲದೆ ಹೋದರೆ ಲಕ್ಷಾಂತರ ವರ್ಷಗಳಿಂದ ಭೂಮಿಯ ಮೇಲಿದ್ದ ಒಂದೊಂದೇ ಜೀವಪ್ರಬೇಧಗಳನ್ನು ನಾವು ಶಾಶ್ವತವಾಗಿ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತೇವೆ.

ಗುರುಪ್ರಸಾದ್ ತಿಮ್ಮಾಪುರ

ಗುರುಪ್ರಸಾದ್ ತಿಮ್ಮಾಪುರ
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಗುರು ಪರಿಸರ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪರಿಸರ ಕಾಳಜಿಗೆ ಸಂಬಂಧಿಸಿದಂತೆ ಹಲವು ಲೇಖನಗಳನ್ನು ಬರೆದಿದ್ದಾರೆ.


ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ಬಿಜೆಪಿ...

ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...

ಕೇರಳ| ನಿರ್ಗಮಿತ ದಲಿತ ಪಂಚಾಯತ್ ಅಧ್ಯಕ್ಷರ ವಿರುದ್ಧ ‘ಶುದ್ಧೀಕರಣ ಆಚರಣೆ’; ವರದಿ ಕೇಳಿದ ಎಸ್‌ಸಿ/ಎಸ್‌ಟಿ ಆಯೋಗ

ಕೋಝಿಕ್ಕೋಡ್‌ನ ಪೆರಂಬ್ರಾದ ಚಂಗರೋತ್ ಪಂಚಾಯತ್ ಕಚೇರಿಯ ಮುಂದೆ ದಲಿತ ಸಮುದಾಯಕ್ಕೆ ಸೇರಿದ ನಿರ್ಗಮಿತ ಅಧ್ಯಕ್ಷ ಉನ್ನಿ ವೆಂಗೇರಿ ಅವರನ್ನು ಅವಮಾನಿಸಲು "ಶುದ್ಧೀಕರಣ ಆಚರಣೆ" ನಡೆಸಲಾಗಿದೆ ಎಂಬ ಆರೋಪದ ಮೇಲೆ ಕೇರಳ ರಾಜ್ಯ ಪರಿಶಿಷ್ಟ...

ಬೆಳ್ತಂಗಡಿ | ಆಭರಣ ಮಳಿಗೆ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ : ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣದಲ್ಲಿ ಸೋಮವಾರ (ಡಿ.16) ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ...

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಡಿಸೆಂಬರ್ 13ರಂದು ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭೇಟಿ ನೀಡಿದ ಸಂದರ್ಭದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆ, ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ತನ್ನ...

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...