Homeಮುಖಪುಟಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

ಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

- Advertisement -
- Advertisement -

ಈಗ ಮಾಧ್ಯಮಗಳಲ್ಲೆಲ್ಲಾ ಪ್ರಧಾನಿಗಳ ಜನ್ಮದಿನದಂದು ತಂದು ಬಿಡಲಾದ ಕನ್ನಡದ ಸಿವಂಗಿ ಎಂದು ಹೆಸರುಳ್ಳ ಚೀತಾಗಳದ್ದೇ ಸುದ್ದಿ. ಇದಕ್ಕೆ, ನಮ್ಮ ದೇಶದಿಂದ ಅಳಿದುಹೋದ ಪ್ರಬೇಧವೊಂದನ್ನು ಮತ್ತೆ ಅವತರಿಸುವಂತೆ ಮಾಡಲು ಮೋದಿಯವರೇ ಬರಬೇಕಾಯಿತು ಎಂದೆಲ್ಲ ಪ್ರಚಾರವನ್ನೂ ಕೊಡಲಾಯಿತು. ಆದರೆ ವಾಸ್ತವದ ವಿಷಯವೆಂದರೆ ಭಾರತದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ ಮತ್ತು ಆಫ್ರಿಕಾದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ. ಹೇಗೆ ಆಫ್ರಿಕಾದ ಸಿಂಹಗಳನ್ನು ಭಾರತದ ಗಿರ್ ಅರಣ್ಯದಲ್ಲಿರುವ ಸಿಂಹಗಳೆನ್ನಲಾಗದೋ, ಹೇಗೆ ಸೈಬೀರಿಯಾದ ಹುಲಿಗಳನ್ನು ಭಾರತದ ಹುಲಿಗಳೆನ್ನಲಾಗದೋ, ಹಾಗೆಯೇ ಆಫ್ರಿಕಾದ ಸಿವಂಗಿಗಳು ಆನುವಂಶಿಕವಾಗಿ ಭಾರತದ ಅಥವಾ ಏಷ್ಯಾದ ಸಿವಂಗಿಗಳಾಗಲಾರವು. ಐತಿಹಾಸಿಕವಾಗಿ ಏಷಿಯಾದ ಸಿವಂಗಿಗಳು ಮಧ್ಯಪ್ರಾಚ್ಯದಿಂದ ಹಿಡಿದು ಭಾರತದವರೆಗಿನ ಭೂ ಪ್ರದೇಶದಲ್ಲಿ ಕಂಡುಬರುತ್ತಿದ್ದವು. ಆದರೆ ಅತಿಯಾದ ಬೇಟೆ ಮತ್ತು ಆವಾಸದ ಕುಗ್ಗುವಿಕೆಯ ಕಾರಣಗಳಿಂದಾಗಿ ಕಳೆದ ಶತಮಾನದ ಮಧ್ಯಭಾಗದಲ್ಲಿ ತಮ್ಮ ವ್ಯಾಪ್ತಿಯ ಬಹುಪಾಲು ಪ್ರದೇಶಗಳಲ್ಲಿ ಈ ಸಿವಂಗಿಗಳು ಅವಸಾನ ಹೊಂದಿದವು. ಈಗಲೂ ಕೂಡ ಏಷಿಯಾದ ಸಿವಂಗಿಗಳು ಇರಾನಿನ ಕೆಲ ಸಂರಕ್ಷಿತ ಪ್ರದೇಶದಲ್ಲಿ ಉಳಿದುಕೊಂಡಿವೆ. ಆದರೆ ಅವುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ಹತ್ತು ವರ್ಷಗಳ ಹಿಂದೆ ಸುಮಾರು 80ರಷ್ಟು ಮಾತ್ರ ಇದ್ದ ಸಿವಂಗಿಗಳು ಈಗಿನ ಗಣತಿಯ ಪ್ರಕಾರ 20ಕ್ಕೂ ಕಡಿಮೆ ಎಂದು ಅಂದಾಜಿಸಲಾಗಿದೆ.

ಸಿವಂಗಿಗಳು ಕಾಣಬರುವುದು ಉಷ್ಣ ಪ್ರದೇಶದ ಹುಲ್ಲುಗಾವಲು ಮತ್ತು ಅರೆ ಮರುಭೂಮಿಯಂತಹ ಪ್ರದೇಶಗಳಲ್ಲಿ. ಅವುಗಳ ಅಳಿವಿಗೆ ಸೂಕ್ತ ಆವಾಸದ ನಾಶವೇ ಮುಖ್ಯವಾದ ಕಾರಣ. ನಮ್ಮ ದೇಶದಲ್ಲಿ ಸಿವಂಗಿಗಳು ಇರಬಹುದಾದ ಆವಾಸವು ಹೆಚ್ಚಿನ ಪ್ರಮಾಣದಲ್ಲೇನೂ ಉಳಿದಿಲ್ಲ. ಅವೆಲ್ಲ ಖರಾಬು ಅಥವಾ ಬರಡು ಭೂಮಿಗಳೆಂದು ಪರಿಗಣಿಸಲ್ಪಟ್ಟು ಕೈಗಾರಿಕೆ ಮತ್ತಿತರ ಅರಣ್ಯೇತರ ಬಳಕೆಗೆ ವಿನಿಯೋಗಿಸಲ್ಪಟ್ಟಿವೆ. ನಮ್ಮ ದೇಶದಿಂದ ಸಿವಂಗಿಗಳೇನೋ ದಶಕಗಳ ಹಿಂದೆ ನಶಿಸಿ ಹೋದವು ಆದರೆ ಲಕ್ಷಾಂತರ ವರ್ಷಗಳಿಂದ ಇದೇ ಸಿವಂಗಿಗಳ ಜೊತೆಯಲ್ಲಿಯೇ ಆವಾಸವನ್ನು ಹಂಚಿಕೊಂಡಿದ್ದ ಇತರ ಜೀವ ಪ್ರಬೇಧಗಳ ಪರಿಸ್ಥಿತಿಯೇನು? ಸಿವಂಗಿಗಳಂತೆಯೇ ಹುಲ್ಲುಗಾವಲು ಮತ್ತು ಅರೆ ಮರುಭೂಮಿ ಪ್ರದೇಶದ ಮೇಲೆ ಅವಲಂಬಿತವಾದ ಅನೇಕ ಜೀವಿ ಪ್ರಬೇಧಗಳು ಅಳಿವಿನತ್ತ ಮುಖಮಾಡಿ ನಿಂತಿವೆ.

ರಾಜಸ್ಥಾನ, ಗುಜರಾತಿನ ಅರೆ ಮರುಭೂಮಿ ಪ್ರದೇಶಗಳು, ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಮತ್ತು ಕರ್ನಾಟಕವನ್ನೂ ಒಳಗೊಂಡ ದಖ್ಖನ್ ಪ್ರಸ್ಥಭೂಮಿಯ ಒಣ ಹುಲ್ಲುಗಾವಲಿನಲ್ಲಿ ಕಂಡುಬರುವ, ಕನ್ನಡದಲ್ಲಿ ಎರ್ಲಡ್ಡು ಅಥವಾ ದೊರವಾಯನ ಹಕ್ಕಿ ಎಂದು ಕರೆಸಿಕೊಳ್ಳುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಹಕ್ಕಿಯು ಇಂಥದೇ ಹುಲ್ಲುಗಾವಲನ್ನು ಅವಲಂಬಿಸಿದ ಜೀವಿ. ಮೊದಲು ವ್ಯಾಪಕವಾಗಿ ಕಂಡುಬರುತ್ತಿದ್ದ ಈ ಹಕ್ಕಿಗಳು ಆವಾಸದ ನಾಶ ಮತ್ತು ಬೇಟೆಯ ಕಾರಣಗಳಿಂದ ಅಳಿವಿನಂಚಿಗೆ ಬಂದುನಿಂತಿವೆ. ಕೆಲವೇ ನೂರರಷ್ಟು ಮಾತ್ರ ಉಳಿದುಕೊಂಡಿರುವ ಈ ಹಕ್ಕಿಗಳು ಒಮ್ಮೆ ನಾಶವಾದರೆ ಮತ್ತೆಲ್ಲಿಂದಲೂ ಇವುಗಳನ್ನು ತರಲಾಗದು. ನಿಯಂತ್ರಣ ಇಲ್ಲದ ಅಭಿವೃದ್ಧಿ, ಅಗತ್ಯವಿಲ್ಲದೆಯೂ ನಿರ್ಮಾಣಗೊಳ್ಳುವ ರಸ್ತೆಗಳು ಮತ್ತು ಹೈಟೆನ್ಷನ್ ವಿದ್ಯುತ್ ತಂತಿಗಳು ಇವುಗಳಿಗೆ ಮಾರಕವಾಗಿವೆ.

ಸರಿಸುಮಾರು ಇದೇ ರೀತಿಯ ಆವಾಸದಲ್ಲಿ ಕಂಡುಬರುವ ಮತ್ತು ಮುಂಚೆ ವ್ಯಾಪಕವಾಗಿದ್ದ ಲೆಸ್ಸರ್ ಫ್ಲೋರಿಕನ್ ಅಥವಾ ಚೊಟ್ಟಿ ನವಿಲಕ್ಕಿ ಎಂದು ಕರೆಯಲ್ಪಡುವ ಹಕ್ಕಿಯು ಕೂಡ ಇಂದು ಇಲ್ಲವೆನ್ನುವಷ್ಟು ಕಡಿಮೆಯಾಗಿದೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಹತ್ತಿರದ ಹೆಸರಘಟ್ಟದ ಹುಲ್ಲುಗಾವಲಿನಲ್ಲಿ ಅಕಸ್ಮಾತ್ತಾಗಿ ಕಂಡ ಈ ಹಕ್ಕಿಯು ಸ್ಥಳೀಯ ಪಕ್ಷಿ ವೀಕ್ಷಕರಲ್ಲಿ ರೋಮಾಂಚನವನ್ನೇ ಸೃಷ್ಟಿಸಿತ್ತು. ಯಾಕೆಂದರೆ ದಶಕಗಳಿಂದೀಚೆಗೆ ಆ ಹಕ್ಕಿಯು ಸ್ಥಳೀಯವಾಗಿ ಕಾಣಿಸಿರಲೇ ಇಲ್ಲ. ಇದೇ ಹುಲ್ಲುಗಾವಲನ್ನು ಸಂರಕ್ಷಣಾ ಮೀಸಲು ಪ್ರದೇಶವಾಗಿ ಘೋಷಣೆ ಮಾಡುವಂತೆ ಸ್ಥಳೀಯ ವನ್ಯಜೀವಿ ಆಸಕ್ತರು ಒತ್ತಾಯಿಸುತ್ತಿದ್ದಾರೆ. ಇಲ್ಲವಾದರೆ ಬೆಂಗಳೂರಿಗೆ ಈ ಹಕ್ಕಿಗಳು ಬರುವ ಸಾಧ್ಯತೆಯು ಶಾಶ್ವತವಾಗಿ ಇಲ್ಲವಾಗುತ್ತದೆ. ಹಾಗೆಯೇ, ಒಣ ಪ್ರದೇಶದ ಹುಲ್ಲುಗಾವಲಿನಲ್ಲಿ ಮಾತ್ರ ಕಂಡುಬರುತ್ತಿದ್ದ ಜೇರ್ಡನ್ಸ್ ಕೋರ್ಸರ್ ಎಂಬ ಹಕ್ಕಿ ಕೂಡ ಬಹುಪಾಲು ನಾಶವಾಗಿದೆ. ಇದು ಈಗ ಆಂಧ್ರದ ಲಂಕಾಮಲ್ಲೇಶ್ವರ ವನ್ಯಜೀವಿಧಾಮದಲ್ಲಿ ಮಾತ್ರ ಇರಬಹುದೆಂದು ನಂಬಲಾಗಿದೆ. ಕೊನೆಯ ಬಾರಿಗೆ ಈ ಹಕ್ಕಿಯನ್ನು ನೋಡಿ ದಶಕಗಳೇ ಕಳೆದಿವೆ. ಹೀಗೆ ಸಿವಂಗಿಯ ಜೊತೆಗೆ ಇವೆಲ್ಲ ಪ್ರಬೇಧದ ಜೀವಿಗಳು ಒಂದೊಂದಾಗಿ ಅಳಿವಿನತ್ತ ನಡೆದಿವೆ.

ವರ್ಷದ ಬಹುಪಾಲು ಮೇಲ್ನೋಟಕ್ಕೆ ಒಣಗಿದಂತೆ ಕಾಣುವ ಹುಲ್ಲುಗಾವಲುಗಳ ಆವಾಸದ ವಿಶೇಷತೆಯೇ ಬೇರೆ, ಇವುಗಳು ಪೋಷಿಸುವ ಜೀವವೈವಿಧ್ಯ ನಿಜಕ್ಕೂ ಅಚ್ಚರಿ ಹುಟ್ಟಿಸುವಂತದ್ದು. ಇವುಗಳ ಕುರಿತು ನಮ್ಮ ಅರಿವು ಕೂಡ ಕಡಿಮೆಯೇ; ಏಕೆಂದರೆ ಈ ಆವಾಸವನ್ನು ನಾವೀಗಾಗಲೇ ಬರಡು ಭೂಮಿಯೆಂದೂ ಕೃಷಿಗೆ ಯೋಗ್ಯವಲ್ಲದ ಭೂಮಿಯೆಂದೂ ವರ್ಗೀಕರಿಸಿಯಾಗಿದೆ. ಈ ಪ್ರದೇಶಗಳಲ್ಲಿ ನಾವು ಮಾಡುವ ಎಲ್ಲ ಚಟುವಟಿಕೆಗಳೂ ಅಲ್ಲಿನ ಜೀವ ಪ್ರಬೇಧಕ್ಕೆ ಕಂಟಕವೇ ಆಗುತ್ತದೆ. ಉದಾಹರಣೆಗೆ, ಅತ್ಯಂತ ಜನಪ್ರಿಯವಾದ ಪರಿಸರ ಪ್ರೇಮಿ ಚಟುವಟಿಕೆಯೆಂದು ಕರೆಸಿಕೊಳ್ಳಲ್ಪಡುವ ಗಿಡ ನೆಡುವ ಚಟುವಟಿಕೆ ಹುಲ್ಲುಗಾವಲಿಗೆ ಮತ್ತು ಅಲ್ಲಿನ ಜೀವಿಗಳಿಗೆ ಮಾರಕ. ಹುಲ್ಲುಗಾವಲನ್ನು ನಾವು ಅರಣ್ಯವಾಗಿ ಪರಿವರ್ತಿಸಿದರೆ ಅಲ್ಲಿನ ಸ್ಥಳೀಯ ಜೀವಪ್ರಬೇಧಗಳು ಅಲ್ಲಿಂದ ಮಾಯವಾಗುತ್ತವೆ. ಅದೇ ರೀತಿ ಜಾಗತಿಕ ತಾಪಮಾನದಿಂದ ರಕ್ಷಿಸುವ ಮತ್ತು ಪರಿಸರ ಸ್ನೇಹಿ ಎಂದು ನಂಬಲ್ಪಡುವ ಸೌರ ವಿದ್ಯುತ್ ಕೂಡ ಹುಲ್ಲುಗಾವಲಿನ ಆವಾಸಕ್ಕೆ ಕಂಟಕವೇ ಆಗಿದೆ. ನಮ್ಮದೇ ನಾಡಿನ ಪಾವಗಡದಲ್ಲಿ ಸ್ಥಾಪಿಸಲಾದ ಏಷಿಯಾದ ಅತಿದೊಡ್ಡ ಸೌರ ವಿದ್ಯುತ್ ಘಟಕವು ಇಂತಹುದೇ ಹುಲ್ಲುಗಾವಲು ಮತ್ತು ಮಳೆಯಾಧಾರಿತ ಒಣ ಕೃಷಿ ಭೂಮಿಯಲ್ಲಿಯೇ ಇದೆ. ಶಾಶ್ವತವಾಗಿ ಹುಲ್ಲುಗಾವಲನ್ನು ಮುಚ್ಚಿಹಾಕುವ ಸೌರ ಫಲಕಗಳು, ಅವುಗಳ ಸುತ್ತ ಹುಲ್ಲು ಮತ್ತಿತರ ಸಸ್ಯಗಳು ಬೆಳೆಯದಂತೆ ಸಿಂಪಡಿಸುವ ಕಳೆನಾಶಕಗಳು ಮತ್ತು ಈ ಸೌರ ಫಲಕಗಳನ್ನು ಸ್ವಚ್ಛಗೊಳಿಸಲು ಬಳಸುವ ಕೋಟಿಗಟ್ಟಲೆ ಲೀಟರ್‌ನಷ್ಟು ನೀರು, ಇವೆಲ್ಲವೂ ಈ ಯೋಜನೆಗಳು ಎಷ್ಟು ಪರಿಸರ ಸ್ನೇಹಿ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿತ್ತವೆ.

ವನ್ಯಜೀವಿ ಸಂರಕ್ಷಣೆಯೆಂಬುದು, ಹಿಂದಿನ ಅಂಕಿ ಅಂಶಗಳನ್ನು ನೋಡಿ ಅದರ ಆಧಾರದ ಮೇಲೆ ದಶಕಗಳಷ್ಟು ಮುಂದಿನ ಯೋಜನೆಯನ್ನಿಟ್ಟುಕೊಂಡು ಮಾಡುವ ಒಂದು ವೈಜ್ಞಾನಿಕ ಪ್ರಕ್ರಿಯಯಾಗಿದೆ. ಈ ಹಿಂದೆ ಮಾಡಿದ ತಪ್ಪುಗಳಿಂದ ನಾವು ಎಷ್ಟು ಜೀವ ಸಂಪತ್ತನ್ನು ಕಳೆದುಕೊಂಡಿದ್ದೇವೆ ಮತ್ತು ಅದು ಮರುಕಳಿಸದಂತೆ ನಾವು ಕೈಗೊಳ್ಳಬೇಕಾದ ಕ್ರಮಗಳೇನೆಂಬ ಸಂಗತಿಗಳು, ಯಾವುದೋ ಪ್ರದೇಶದ, ಬೇರೊಂದು ಉಪ ಪ್ರಬೇಧದ ಜೀವಿಯೊಂದನ್ನು ನಮ್ಮಲ್ಲಿಗೆ ತಂದು ಬಿಡುವುದಕ್ಕಿಂತ ಹೆಚ್ಚಿನ ಮಹತ್ವ ಪಡೆದುಕೊಳ್ಳಬೇಕು. ಇಲ್ಲದೆ ಹೋದರೆ ಲಕ್ಷಾಂತರ ವರ್ಷಗಳಿಂದ ಭೂಮಿಯ ಮೇಲಿದ್ದ ಒಂದೊಂದೇ ಜೀವಪ್ರಬೇಧಗಳನ್ನು ನಾವು ಶಾಶ್ವತವಾಗಿ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತೇವೆ.

ಗುರುಪ್ರಸಾದ್ ತಿಮ್ಮಾಪುರ

ಗುರುಪ್ರಸಾದ್ ತಿಮ್ಮಾಪುರ
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಗುರು ಪರಿಸರ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪರಿಸರ ಕಾಳಜಿಗೆ ಸಂಬಂಧಿಸಿದಂತೆ ಹಲವು ಲೇಖನಗಳನ್ನು ಬರೆದಿದ್ದಾರೆ.


ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...