Homeಮುಖಪುಟಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

ಸಿವಂಗಿಗಳೇನೋ ತಂದಿರಿ; ಹುಲ್ಲುಗಾವಲುಗಳ ರಕ್ಷಣೆ ಯಾವಾಗ?

- Advertisement -
- Advertisement -

ಈಗ ಮಾಧ್ಯಮಗಳಲ್ಲೆಲ್ಲಾ ಪ್ರಧಾನಿಗಳ ಜನ್ಮದಿನದಂದು ತಂದು ಬಿಡಲಾದ ಕನ್ನಡದ ಸಿವಂಗಿ ಎಂದು ಹೆಸರುಳ್ಳ ಚೀತಾಗಳದ್ದೇ ಸುದ್ದಿ. ಇದಕ್ಕೆ, ನಮ್ಮ ದೇಶದಿಂದ ಅಳಿದುಹೋದ ಪ್ರಬೇಧವೊಂದನ್ನು ಮತ್ತೆ ಅವತರಿಸುವಂತೆ ಮಾಡಲು ಮೋದಿಯವರೇ ಬರಬೇಕಾಯಿತು ಎಂದೆಲ್ಲ ಪ್ರಚಾರವನ್ನೂ ಕೊಡಲಾಯಿತು. ಆದರೆ ವಾಸ್ತವದ ವಿಷಯವೆಂದರೆ ಭಾರತದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ ಮತ್ತು ಆಫ್ರಿಕಾದಲ್ಲಿದ್ದ ಸಿವಂಗಿಯ ಉಪ ಪ್ರಬೇಧವೇ ಬೇರೆ. ಹೇಗೆ ಆಫ್ರಿಕಾದ ಸಿಂಹಗಳನ್ನು ಭಾರತದ ಗಿರ್ ಅರಣ್ಯದಲ್ಲಿರುವ ಸಿಂಹಗಳೆನ್ನಲಾಗದೋ, ಹೇಗೆ ಸೈಬೀರಿಯಾದ ಹುಲಿಗಳನ್ನು ಭಾರತದ ಹುಲಿಗಳೆನ್ನಲಾಗದೋ, ಹಾಗೆಯೇ ಆಫ್ರಿಕಾದ ಸಿವಂಗಿಗಳು ಆನುವಂಶಿಕವಾಗಿ ಭಾರತದ ಅಥವಾ ಏಷ್ಯಾದ ಸಿವಂಗಿಗಳಾಗಲಾರವು. ಐತಿಹಾಸಿಕವಾಗಿ ಏಷಿಯಾದ ಸಿವಂಗಿಗಳು ಮಧ್ಯಪ್ರಾಚ್ಯದಿಂದ ಹಿಡಿದು ಭಾರತದವರೆಗಿನ ಭೂ ಪ್ರದೇಶದಲ್ಲಿ ಕಂಡುಬರುತ್ತಿದ್ದವು. ಆದರೆ ಅತಿಯಾದ ಬೇಟೆ ಮತ್ತು ಆವಾಸದ ಕುಗ್ಗುವಿಕೆಯ ಕಾರಣಗಳಿಂದಾಗಿ ಕಳೆದ ಶತಮಾನದ ಮಧ್ಯಭಾಗದಲ್ಲಿ ತಮ್ಮ ವ್ಯಾಪ್ತಿಯ ಬಹುಪಾಲು ಪ್ರದೇಶಗಳಲ್ಲಿ ಈ ಸಿವಂಗಿಗಳು ಅವಸಾನ ಹೊಂದಿದವು. ಈಗಲೂ ಕೂಡ ಏಷಿಯಾದ ಸಿವಂಗಿಗಳು ಇರಾನಿನ ಕೆಲ ಸಂರಕ್ಷಿತ ಪ್ರದೇಶದಲ್ಲಿ ಉಳಿದುಕೊಂಡಿವೆ. ಆದರೆ ಅವುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ಹತ್ತು ವರ್ಷಗಳ ಹಿಂದೆ ಸುಮಾರು 80ರಷ್ಟು ಮಾತ್ರ ಇದ್ದ ಸಿವಂಗಿಗಳು ಈಗಿನ ಗಣತಿಯ ಪ್ರಕಾರ 20ಕ್ಕೂ ಕಡಿಮೆ ಎಂದು ಅಂದಾಜಿಸಲಾಗಿದೆ.

ಸಿವಂಗಿಗಳು ಕಾಣಬರುವುದು ಉಷ್ಣ ಪ್ರದೇಶದ ಹುಲ್ಲುಗಾವಲು ಮತ್ತು ಅರೆ ಮರುಭೂಮಿಯಂತಹ ಪ್ರದೇಶಗಳಲ್ಲಿ. ಅವುಗಳ ಅಳಿವಿಗೆ ಸೂಕ್ತ ಆವಾಸದ ನಾಶವೇ ಮುಖ್ಯವಾದ ಕಾರಣ. ನಮ್ಮ ದೇಶದಲ್ಲಿ ಸಿವಂಗಿಗಳು ಇರಬಹುದಾದ ಆವಾಸವು ಹೆಚ್ಚಿನ ಪ್ರಮಾಣದಲ್ಲೇನೂ ಉಳಿದಿಲ್ಲ. ಅವೆಲ್ಲ ಖರಾಬು ಅಥವಾ ಬರಡು ಭೂಮಿಗಳೆಂದು ಪರಿಗಣಿಸಲ್ಪಟ್ಟು ಕೈಗಾರಿಕೆ ಮತ್ತಿತರ ಅರಣ್ಯೇತರ ಬಳಕೆಗೆ ವಿನಿಯೋಗಿಸಲ್ಪಟ್ಟಿವೆ. ನಮ್ಮ ದೇಶದಿಂದ ಸಿವಂಗಿಗಳೇನೋ ದಶಕಗಳ ಹಿಂದೆ ನಶಿಸಿ ಹೋದವು ಆದರೆ ಲಕ್ಷಾಂತರ ವರ್ಷಗಳಿಂದ ಇದೇ ಸಿವಂಗಿಗಳ ಜೊತೆಯಲ್ಲಿಯೇ ಆವಾಸವನ್ನು ಹಂಚಿಕೊಂಡಿದ್ದ ಇತರ ಜೀವ ಪ್ರಬೇಧಗಳ ಪರಿಸ್ಥಿತಿಯೇನು? ಸಿವಂಗಿಗಳಂತೆಯೇ ಹುಲ್ಲುಗಾವಲು ಮತ್ತು ಅರೆ ಮರುಭೂಮಿ ಪ್ರದೇಶದ ಮೇಲೆ ಅವಲಂಬಿತವಾದ ಅನೇಕ ಜೀವಿ ಪ್ರಬೇಧಗಳು ಅಳಿವಿನತ್ತ ಮುಖಮಾಡಿ ನಿಂತಿವೆ.

ರಾಜಸ್ಥಾನ, ಗುಜರಾತಿನ ಅರೆ ಮರುಭೂಮಿ ಪ್ರದೇಶಗಳು, ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಮತ್ತು ಕರ್ನಾಟಕವನ್ನೂ ಒಳಗೊಂಡ ದಖ್ಖನ್ ಪ್ರಸ್ಥಭೂಮಿಯ ಒಣ ಹುಲ್ಲುಗಾವಲಿನಲ್ಲಿ ಕಂಡುಬರುವ, ಕನ್ನಡದಲ್ಲಿ ಎರ್ಲಡ್ಡು ಅಥವಾ ದೊರವಾಯನ ಹಕ್ಕಿ ಎಂದು ಕರೆಸಿಕೊಳ್ಳುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಹಕ್ಕಿಯು ಇಂಥದೇ ಹುಲ್ಲುಗಾವಲನ್ನು ಅವಲಂಬಿಸಿದ ಜೀವಿ. ಮೊದಲು ವ್ಯಾಪಕವಾಗಿ ಕಂಡುಬರುತ್ತಿದ್ದ ಈ ಹಕ್ಕಿಗಳು ಆವಾಸದ ನಾಶ ಮತ್ತು ಬೇಟೆಯ ಕಾರಣಗಳಿಂದ ಅಳಿವಿನಂಚಿಗೆ ಬಂದುನಿಂತಿವೆ. ಕೆಲವೇ ನೂರರಷ್ಟು ಮಾತ್ರ ಉಳಿದುಕೊಂಡಿರುವ ಈ ಹಕ್ಕಿಗಳು ಒಮ್ಮೆ ನಾಶವಾದರೆ ಮತ್ತೆಲ್ಲಿಂದಲೂ ಇವುಗಳನ್ನು ತರಲಾಗದು. ನಿಯಂತ್ರಣ ಇಲ್ಲದ ಅಭಿವೃದ್ಧಿ, ಅಗತ್ಯವಿಲ್ಲದೆಯೂ ನಿರ್ಮಾಣಗೊಳ್ಳುವ ರಸ್ತೆಗಳು ಮತ್ತು ಹೈಟೆನ್ಷನ್ ವಿದ್ಯುತ್ ತಂತಿಗಳು ಇವುಗಳಿಗೆ ಮಾರಕವಾಗಿವೆ.

ಸರಿಸುಮಾರು ಇದೇ ರೀತಿಯ ಆವಾಸದಲ್ಲಿ ಕಂಡುಬರುವ ಮತ್ತು ಮುಂಚೆ ವ್ಯಾಪಕವಾಗಿದ್ದ ಲೆಸ್ಸರ್ ಫ್ಲೋರಿಕನ್ ಅಥವಾ ಚೊಟ್ಟಿ ನವಿಲಕ್ಕಿ ಎಂದು ಕರೆಯಲ್ಪಡುವ ಹಕ್ಕಿಯು ಕೂಡ ಇಂದು ಇಲ್ಲವೆನ್ನುವಷ್ಟು ಕಡಿಮೆಯಾಗಿದೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಹತ್ತಿರದ ಹೆಸರಘಟ್ಟದ ಹುಲ್ಲುಗಾವಲಿನಲ್ಲಿ ಅಕಸ್ಮಾತ್ತಾಗಿ ಕಂಡ ಈ ಹಕ್ಕಿಯು ಸ್ಥಳೀಯ ಪಕ್ಷಿ ವೀಕ್ಷಕರಲ್ಲಿ ರೋಮಾಂಚನವನ್ನೇ ಸೃಷ್ಟಿಸಿತ್ತು. ಯಾಕೆಂದರೆ ದಶಕಗಳಿಂದೀಚೆಗೆ ಆ ಹಕ್ಕಿಯು ಸ್ಥಳೀಯವಾಗಿ ಕಾಣಿಸಿರಲೇ ಇಲ್ಲ. ಇದೇ ಹುಲ್ಲುಗಾವಲನ್ನು ಸಂರಕ್ಷಣಾ ಮೀಸಲು ಪ್ರದೇಶವಾಗಿ ಘೋಷಣೆ ಮಾಡುವಂತೆ ಸ್ಥಳೀಯ ವನ್ಯಜೀವಿ ಆಸಕ್ತರು ಒತ್ತಾಯಿಸುತ್ತಿದ್ದಾರೆ. ಇಲ್ಲವಾದರೆ ಬೆಂಗಳೂರಿಗೆ ಈ ಹಕ್ಕಿಗಳು ಬರುವ ಸಾಧ್ಯತೆಯು ಶಾಶ್ವತವಾಗಿ ಇಲ್ಲವಾಗುತ್ತದೆ. ಹಾಗೆಯೇ, ಒಣ ಪ್ರದೇಶದ ಹುಲ್ಲುಗಾವಲಿನಲ್ಲಿ ಮಾತ್ರ ಕಂಡುಬರುತ್ತಿದ್ದ ಜೇರ್ಡನ್ಸ್ ಕೋರ್ಸರ್ ಎಂಬ ಹಕ್ಕಿ ಕೂಡ ಬಹುಪಾಲು ನಾಶವಾಗಿದೆ. ಇದು ಈಗ ಆಂಧ್ರದ ಲಂಕಾಮಲ್ಲೇಶ್ವರ ವನ್ಯಜೀವಿಧಾಮದಲ್ಲಿ ಮಾತ್ರ ಇರಬಹುದೆಂದು ನಂಬಲಾಗಿದೆ. ಕೊನೆಯ ಬಾರಿಗೆ ಈ ಹಕ್ಕಿಯನ್ನು ನೋಡಿ ದಶಕಗಳೇ ಕಳೆದಿವೆ. ಹೀಗೆ ಸಿವಂಗಿಯ ಜೊತೆಗೆ ಇವೆಲ್ಲ ಪ್ರಬೇಧದ ಜೀವಿಗಳು ಒಂದೊಂದಾಗಿ ಅಳಿವಿನತ್ತ ನಡೆದಿವೆ.

ವರ್ಷದ ಬಹುಪಾಲು ಮೇಲ್ನೋಟಕ್ಕೆ ಒಣಗಿದಂತೆ ಕಾಣುವ ಹುಲ್ಲುಗಾವಲುಗಳ ಆವಾಸದ ವಿಶೇಷತೆಯೇ ಬೇರೆ, ಇವುಗಳು ಪೋಷಿಸುವ ಜೀವವೈವಿಧ್ಯ ನಿಜಕ್ಕೂ ಅಚ್ಚರಿ ಹುಟ್ಟಿಸುವಂತದ್ದು. ಇವುಗಳ ಕುರಿತು ನಮ್ಮ ಅರಿವು ಕೂಡ ಕಡಿಮೆಯೇ; ಏಕೆಂದರೆ ಈ ಆವಾಸವನ್ನು ನಾವೀಗಾಗಲೇ ಬರಡು ಭೂಮಿಯೆಂದೂ ಕೃಷಿಗೆ ಯೋಗ್ಯವಲ್ಲದ ಭೂಮಿಯೆಂದೂ ವರ್ಗೀಕರಿಸಿಯಾಗಿದೆ. ಈ ಪ್ರದೇಶಗಳಲ್ಲಿ ನಾವು ಮಾಡುವ ಎಲ್ಲ ಚಟುವಟಿಕೆಗಳೂ ಅಲ್ಲಿನ ಜೀವ ಪ್ರಬೇಧಕ್ಕೆ ಕಂಟಕವೇ ಆಗುತ್ತದೆ. ಉದಾಹರಣೆಗೆ, ಅತ್ಯಂತ ಜನಪ್ರಿಯವಾದ ಪರಿಸರ ಪ್ರೇಮಿ ಚಟುವಟಿಕೆಯೆಂದು ಕರೆಸಿಕೊಳ್ಳಲ್ಪಡುವ ಗಿಡ ನೆಡುವ ಚಟುವಟಿಕೆ ಹುಲ್ಲುಗಾವಲಿಗೆ ಮತ್ತು ಅಲ್ಲಿನ ಜೀವಿಗಳಿಗೆ ಮಾರಕ. ಹುಲ್ಲುಗಾವಲನ್ನು ನಾವು ಅರಣ್ಯವಾಗಿ ಪರಿವರ್ತಿಸಿದರೆ ಅಲ್ಲಿನ ಸ್ಥಳೀಯ ಜೀವಪ್ರಬೇಧಗಳು ಅಲ್ಲಿಂದ ಮಾಯವಾಗುತ್ತವೆ. ಅದೇ ರೀತಿ ಜಾಗತಿಕ ತಾಪಮಾನದಿಂದ ರಕ್ಷಿಸುವ ಮತ್ತು ಪರಿಸರ ಸ್ನೇಹಿ ಎಂದು ನಂಬಲ್ಪಡುವ ಸೌರ ವಿದ್ಯುತ್ ಕೂಡ ಹುಲ್ಲುಗಾವಲಿನ ಆವಾಸಕ್ಕೆ ಕಂಟಕವೇ ಆಗಿದೆ. ನಮ್ಮದೇ ನಾಡಿನ ಪಾವಗಡದಲ್ಲಿ ಸ್ಥಾಪಿಸಲಾದ ಏಷಿಯಾದ ಅತಿದೊಡ್ಡ ಸೌರ ವಿದ್ಯುತ್ ಘಟಕವು ಇಂತಹುದೇ ಹುಲ್ಲುಗಾವಲು ಮತ್ತು ಮಳೆಯಾಧಾರಿತ ಒಣ ಕೃಷಿ ಭೂಮಿಯಲ್ಲಿಯೇ ಇದೆ. ಶಾಶ್ವತವಾಗಿ ಹುಲ್ಲುಗಾವಲನ್ನು ಮುಚ್ಚಿಹಾಕುವ ಸೌರ ಫಲಕಗಳು, ಅವುಗಳ ಸುತ್ತ ಹುಲ್ಲು ಮತ್ತಿತರ ಸಸ್ಯಗಳು ಬೆಳೆಯದಂತೆ ಸಿಂಪಡಿಸುವ ಕಳೆನಾಶಕಗಳು ಮತ್ತು ಈ ಸೌರ ಫಲಕಗಳನ್ನು ಸ್ವಚ್ಛಗೊಳಿಸಲು ಬಳಸುವ ಕೋಟಿಗಟ್ಟಲೆ ಲೀಟರ್‌ನಷ್ಟು ನೀರು, ಇವೆಲ್ಲವೂ ಈ ಯೋಜನೆಗಳು ಎಷ್ಟು ಪರಿಸರ ಸ್ನೇಹಿ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿತ್ತವೆ.

ವನ್ಯಜೀವಿ ಸಂರಕ್ಷಣೆಯೆಂಬುದು, ಹಿಂದಿನ ಅಂಕಿ ಅಂಶಗಳನ್ನು ನೋಡಿ ಅದರ ಆಧಾರದ ಮೇಲೆ ದಶಕಗಳಷ್ಟು ಮುಂದಿನ ಯೋಜನೆಯನ್ನಿಟ್ಟುಕೊಂಡು ಮಾಡುವ ಒಂದು ವೈಜ್ಞಾನಿಕ ಪ್ರಕ್ರಿಯಯಾಗಿದೆ. ಈ ಹಿಂದೆ ಮಾಡಿದ ತಪ್ಪುಗಳಿಂದ ನಾವು ಎಷ್ಟು ಜೀವ ಸಂಪತ್ತನ್ನು ಕಳೆದುಕೊಂಡಿದ್ದೇವೆ ಮತ್ತು ಅದು ಮರುಕಳಿಸದಂತೆ ನಾವು ಕೈಗೊಳ್ಳಬೇಕಾದ ಕ್ರಮಗಳೇನೆಂಬ ಸಂಗತಿಗಳು, ಯಾವುದೋ ಪ್ರದೇಶದ, ಬೇರೊಂದು ಉಪ ಪ್ರಬೇಧದ ಜೀವಿಯೊಂದನ್ನು ನಮ್ಮಲ್ಲಿಗೆ ತಂದು ಬಿಡುವುದಕ್ಕಿಂತ ಹೆಚ್ಚಿನ ಮಹತ್ವ ಪಡೆದುಕೊಳ್ಳಬೇಕು. ಇಲ್ಲದೆ ಹೋದರೆ ಲಕ್ಷಾಂತರ ವರ್ಷಗಳಿಂದ ಭೂಮಿಯ ಮೇಲಿದ್ದ ಒಂದೊಂದೇ ಜೀವಪ್ರಬೇಧಗಳನ್ನು ನಾವು ಶಾಶ್ವತವಾಗಿ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತೇವೆ.

ಗುರುಪ್ರಸಾದ್ ತಿಮ್ಮಾಪುರ

ಗುರುಪ್ರಸಾದ್ ತಿಮ್ಮಾಪುರ
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಗುರು ಪರಿಸರ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪರಿಸರ ಕಾಳಜಿಗೆ ಸಂಬಂಧಿಸಿದಂತೆ ಹಲವು ಲೇಖನಗಳನ್ನು ಬರೆದಿದ್ದಾರೆ.


ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...