Homeಮುಖಪುಟಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

- Advertisement -
- Advertisement -

ನಮೀಬಿಯಾದಿಂದ ತರಲಾದ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬಿಟ್ಟಿದ್ದಾರೆ. ಭಾರತದಲ್ಲಿ ಏಳು ದಶಕಗಳ ಹಿಂದೆಯೇ ಚೀತಾಗಳು ನಿರ್ನಾಮವಾದ ಕಾರಣ, ಸರ್ಕಾರ ಮಾಡಿರುವ ಈ ಕೆಲಸ ಮಹತ್ವದೆಂದು ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ಆದರೆ ಈ ಚೀತಾಗಳ ಹಿಂದೆಯೇ ಹಲವಾರು ಪ್ರಶ್ನೆಗಳು ಹುಟ್ಟಿಕೊಂಡಿವೆ. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತರಲಾಗಿರುವ ಪ್ರಾಣಿಗಳ ಮೇಲೆ ಬೀರುವ ಪರಿಣಾಮಗಳೇನು? ಏನೆಲ್ಲ ಎಚ್ಚರ ವಹಿಸಬೇಕಾಗುತ್ತದೆ? ಕುನೋ ಪ್ರದೇಶದಲ್ಲಿರುವ ಆದಿವಾಸಿಗಳ ಕಥೆ ಏನು? ಇತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ. ಪರಿಸರತಜ್ಞರು ಈ ಕುರಿತು ಹಲವಾರು ಆತಂಕಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪರಿಸರ ತಜ್ಞರಾದ ಕಲ್ಕುಳಿ ವಿಠಲ ಹೆಗ್ಡೆ ಹಾಗೂ ಪರಿಸರ ವಿಜ್ಞಾನಿ ನಾಗೇಶ ಹೆಗಡೆಯವರು ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಕಲ್ಕುಳಿ ವಿಠಲ ಹೆಗ್ಡೆಯವರು ಮಾತನಾಡಿ, “ಎಲ್ಲ ಪ್ರಾಣಿಗಳೂ ತಮ್ಮದೇ ಆದ ಸೀಮಿತ ಪ್ರದೇಶಕ್ಕೆ ಹೊಂದಿಕೊಂಡಿರುತ್ತವೆ. ಅವುಗಳು ತಮ್ಮ ಪ್ರದೇಶವನ್ನು ಗುರುತು ಹಾಕಿಕೊಂಡಿರುತ್ತವೆ. ಚಿರತೆ, ಹುಲಿಯಂತಹ ಪ್ರಾಣಿಗಳು ತಾವು ಹೊಂದಿಕೊಂಡ ಪ್ರದೇಶವನ್ನು ಬಿಟ್ಟು ಹೋಗುವುದಿಲ್ಲ. ತಮ್ಮ ವ್ಯಾಪ್ತಿಯನ್ನು ವಿಸ್ತರಿಸುವುದಕ್ಕೂ ಇಚ್ಛಿಸುವುದಿಲ್ಲ. ಯಾಕೆಂದರೆ ಬೇರೆ ಪ್ರದೇಶಕ್ಕೆ ಹೋದರೆ ಘರ್ಷಣೆಯಾಗುತ್ತದೆ. ಹೀಗಾಗಿ ಪ್ರಾಣಿಗಳಲ್ಲಿ ಪ್ರಾದೇಶಿಕವಾದ ಹೊಂದಾಣಿಕೆ ಇರುತ್ತದೆ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮೀಬಿಯಾದಲ್ಲಿನ ವಾತಾವರಣಕ್ಕೂ ಕುನೋ ರಾಷ್ಟ್ರೀಯ ಉದ್ಯಾನದಲ್ಲಿನ ವಾತಾವರಣಕ್ಕೂ ಯಾವುದೇ ವ್ಯತ್ಯಾಸವಿಲ್ಲದೆ ಇರಬಹುದು. ಆದರೆ ತನ್ನದಲ್ಲದ ಪ್ರದೇಶದಲ್ಲಿ ಈ ಪ್ರಾಣಿಗಳು ಬದುಕಿದಾಗ ಅತಿಹೆಚ್ಚು ಕ್ರೂರವಾಗುವ ಸಾಧ್ಯತೆಗಳು ಇರುತ್ತವೆ. ಯಾಕೆಂದರೆ ಈ ಪ್ರಾಣಿಗಳು ಸಹಜವಾಗಿ ಭಯಗೊಂಡಿರುತ್ತವೆ. ಕಂಡಕಂಡವರ ಮೇಲೆಲ್ಲಾ ಎರಗಲು ಮುಂದಾಗುತ್ತವೆ. ಕೃತಕವಾದ ಆಹಾರವನ್ನು ಕೊಡದಿದ್ದರೆ ಅವು ಭಯಗೊಂಡು ಸತ್ತೂ ಹೋಗಬಹುದು. ಎರಡು ಸಾಧ್ಯತೆ ಇದೆ. ಚೀತಾಗಳೇ ತಮ್ಮ ಸಾಮ್ರಾಜ್ಯವನ್ನು ಸ್ಥಾಪಿಸಿ ಎಲ್ಲವನ್ನೂ ಮುಗಿಸಬಹುದು, ಅಥವಾ ಹೆದರಿಕೊಂಡು ತಾವೇ ಸಾಯಬಹುದು” ಎಂದು ವಿವರಿಸಿದರು.

ಸಾಹಿತ್ಯವಿಲ್ಲದ ಹೋರಾಟ, ಹೋರಾಟವಿಲ್ಲದ ಸಾಹಿತ್ಯ ಜೊಳ್ಳು: ಕಲ್ಕುಳಿ ವಿಠಲ ಹೆಗ್ಡೆ | Prajavani
ಕಲ್ಕುಳಿ ವಿಠಲ ಹೆಗ್ಡೆ

“ನಮ್ಮಲ್ಲಿ ಯಾರಾದರೂ ಹಾವುಗಳನ್ನು ಹಿಡಿದಾಗ, ಯಾವುದೋ ಒಂದು ದೂರದ ಪ್ರದೇಶಕ್ಕೆ ಬಿಡುವುದನ್ನು ನೋಡಿದ್ದೇವೆ. ತನ್ನದಲ್ಲದ ಪ್ರದೇಶವೆಂದರೆ ಈ ಹಾವಿಗೆ ಬೇರೆಯ ದೇಶಕ್ಕೆ ಹೋದಂತೆ ಭಾಸವಾಗುತ್ತದೆ. ತನಗೆ ಪರಿಚಯವಿಲ್ಲದ ನೆಲದಲ್ಲಿ ಹೊಂದಾಣಿಕೆ ಮಾಡಿಕೊಂಡು ಬದುಕಬೇಕಾದರೆ ಬಹಳ ಕಾಲ ಬೇಕಾಗುತ್ತದೆ. ಪೇಟೆಗಳಲ್ಲಿ ಮಂಗನ ಕಾಟ ಹೆಚ್ಚಾದಾಗ ಗುಟ್ಟಾಗಿ ಅವುಗಳನ್ನು ಹಿಡಿದು, ಆಗುಂಬೆ ಕಾಡಿಗೆ ತಂದು ಬಿಡುವವರು ಇದ್ದಾರೆ. ಈ ವರ್ಷ ತಂದು ಬಿಟ್ಟ ಮಂಗಗಳಲ್ಲಿ ಅರ್ಧದಷ್ಟು ಮುಂದಿನ ವರ್ಷ ಇರುವುದಿಲ್ಲ” ಎಂದರು.

“ಆಫ್ರಿಕಾದಲ್ಲಿ ಮನುಷ್ಯರೊಟ್ಟಿಗೆ ಬದುಕಿದ ಪ್ರಾಣಿಗಳನ್ನು (ಅಂದರೆ ಮೃಗಾಲಯದಲ್ಲಿ ಬೆಳೆದ ಪ್ರಾಣಿಗಳನ್ನು) ತಂದಿದ್ದಾರೆ. ಇವುಗಳು ಕಾಡಲ್ಲಿ ಬೆಳೆದ ಪ್ರಾಣಿಗಳಲ್ಲ. ಹೀಗಾಗಿ ಮನುಷ್ಯರೊಟ್ಟಿಗೆ ಬೆಳೆದ ಪ್ರಾಣಿಗಳನ್ನು ಮನುಷ್ಯರೇ ಬೆಳೆಸಬೇಕು. ಇವುಗಳು ಸ್ವತಂತ್ರವಾಗಿ ಬೆಳೆಯಲೆಂದು ಬಿಟ್ಟು ಉಪವಾಸ ಕೆಡವಿದರೆ ಮೊದಲು ದಾಳಿ ಮಾಡುವುದು ಮನುಷ್ಯರ ಮೇಲೆಯೇ. ಯಾಕೆಂದರೆ ಈ ಪ್ರಾಣಿಗಳಿಗೆ ಮನುಷ್ಯರ ವಿಷಯ ಮಾತ್ರ ಗೊತ್ತಿರುತ್ತದೆ” ಎಂದು ಎಚ್ಚರಿಸಿದರು.

“ಮೃಗಾಲಯದಲ್ಲಿ ಜನಿಸಿದ ಹುಲಿಗಳನ್ನು ನಾಗರಹೊಳೆ ಕಾಡಿಗೆ ಬಿಟ್ಟರು. ಹುಲಿ ಸಂತತಿ ಹೆಚ್ಚು ಮಾಡಬೇಕೆಂದು ಯೋಚಿಸಿದ್ದರು. ಈ ಹುಲಿಗಳು ಹಿಡಿದದ್ದು ಅರಣ್ಯಾ ಸಿಬ್ಬಂದಿಗಳನ್ನು ಎಂಬುದನ್ನು ಮರೆಯಬಾರದು. ಮನುಷ್ಯರ ಬಗ್ಗೆ ಈ ಪ್ರಾಣಿಗಳಿಗೆ ಗೊತ್ತಿರುತ್ತದೆಯೇ ಹೊರತು, ಶಿಕಾರಿ ಮಾಡಿ ಅಭ್ಯಾಸವಿರುವುದಿಲ್ಲ. ತಾನು ಶಿಕಾರಿ ಮಾಡಬೇಕಾದ ಸಸ್ಯಾಹಾರಿ ಪ್ರಾಣಿ ಎಲ್ಲಿರುತ್ತದೆ ಎಂದು ಈ ಚೀತಾಕ್ಕೆ ಗೊತ್ತಿರಬೇಕು, ಓಡಿಸಿಕೊಂಡು ಹೋಗಿ ಹಿಡಿಯಬೇಕು. ಆಫ್ರಿಕಾದಲ್ಲಿ ಇದ್ದ ಪರಿಸ್ಥಿತಿಗೂ ಇಲ್ಲಿಗೂ ಹೊಂದಿಕೊಳ್ಳಬೇಕು. ಇದು ಬಾಡಿಗೆ ಮನೆ ಬದಲಿಸಿದಷ್ಟು ಸುಲಭವಲ್ಲ” ಎಂದು ಅಭಿಪ್ರಾಯಪಟ್ಟರು.

“ಈ ಚೀತಾಗಳನ್ನು ಮೃಗಾಲಯದಲ್ಲಿ ಸಾಕಬಹುದಿತ್ತು. ಉದಾಹರಣೆಗೆ ಅಮೆರಿಕಾದಲ್ಲಿ ಹುಲಿ ಇರದಿದ್ದರೂ ಅಲ್ಲಿನ ಮೃಗಾಲಯಗಳಲ್ಲಿ ಭಾರತದ ಹುಲಿಗಳನ್ನು ನೋಡಬಹುದು. ಸೂಕ್ತ ವಾತಾವರಣ ಕಲ್ಪಿಸಿ ಪೋಷಣೆ ಮಾಡುತ್ತಾರೆ. ಆದರೆ ಇವುಗಳನ್ನು ಮುಕ್ತವಾದ ಕಾಡಿಗೆ ಬಿಟ್ಟರೆ ಉಳಿಯುವುದು ಕಷ್ಟ. ಮತ್ತಷ್ಟು ಅನಾಹುತಗಳಿಗೆ ಎಡೆಮಾಡಿಕೊಟ್ಟಂತೆ” ಎಂದು ಭವಿಷ್ಯ ನುಡಿದರು.

ಕಾನೂನಿನ ತೊಡಕು ಎದುರಾಗುತ್ತದೆ: ನಾಗೇಶ ಹೆಗಡೆ

ಪರಿಸರ ತಜ್ಞರಾದ ನಾಗೇಶ ಹೆಗಡೆಯವರು ಮಾತನಾಡಿ, “ಚೀತಾಗಳು ಹುಲ್ಲುಗಾವಲು ಪ್ರದೇಶದಲ್ಲಿ ಬದುಕುವ ಪ್ರಾಣಿಗಳಾಗಿವೆ. ಆದರೆ ಇಲ್ಲಿ ಹುಲ್ಲುಗಾವಲು ಇಲ್ಲ. ಇದ್ದಬದ್ಧ ಮರಗಳನ್ನು ಕಡಿದು ಹುಲ್ಲುಗಾವಲು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಅವುಗಳ ಆಹಾರಕ್ಕೆ ಸಾಕಾಗುವಷ್ಟು ಸಸ್ಯಾಹಾರಿ ಪ್ರಾಣಿಗಳು ಬೇಕು. ಸದ್ಯಕ್ಕೆ ಸಮಸ್ಯೆ ಇಲ್ಲವಾದರೂ ಮುಂದಿನ ವರ್ಷಗಳಲ್ಲಿ ಕೃಷ್ಣಮೃಗ, ಜಿಂಕೆ ಮೊದಲಾದ ಪ್ರಾಣಿಗಳನ್ನು ಬೇರೆ ಕಡೆಯಿಂದ ತರಬೇಕಾಗುತ್ತದೆ. ಅದಕ್ಕೂ ಕಾನೂನಿನಲ್ಲಿ ಅವಕಾಶವಿಲ್ಲ. ಒಂದು ವೇಳೆ ಒಂದೆರಡು ಸಾವಿರ ಜಿಂಕೆಗಳನ್ನು ತಂದು ಇಲ್ಲಿಗೆ ಬಿಟ್ಟೆವೆಂದೂ ತಿಳಿಯೋಣ. ಆದರೆ ಅಲ್ಲಿ ಈಗಾಗಲೇ ಕತ್ತೆಕಿರುಬ, ಚಿರತೆಗಳಿವೆ. ಇವುಗಳೇ ಜಿಂಕೆಗಳನ್ನು ತಿಂದು ಮುಗಿಸುತ್ತವೆ. ಚೀತಾಗಳಿಗಿಂತ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತದೆ” ಎಂದು ಹೇಳಿದರು.

May be an image of 1 person
ನಾಗೇಶ ಹೆಗಡೆ

“ಚೀತಾಕ್ಕೆ ಹೋಲಿಸಿದರೆ ಚಿರತೆ ಅತ್ಯಂತ ಅಪಾಯಕಾರಿ ಪ್ರಾಣಿ. ಚಿರತೆಯಂತೆ ಮರ ಹತ್ತಲೂ ಬಾರದ ಪ್ರಾಣಿ ಇದು. ವೇಗವಾಗಿ ಓಡಬಲ್ಲವು ಅಷ್ಟೇ. ಆದರೆ ಚಿರತೆ ಹೊಂಚಿಹಾಕಿ ಭೇಟಿಯಾಡುತ್ತದೆ” ಎಂದು ತಿಳಿಸಿದರು.

“ನಮ್ಮಲ್ಲಿ ಸಾಕಷ್ಟು ಅಳಿವಿನಂಚಿನಲ್ಲಿರುವ ಪ್ರಾಣಿ, ಪಕ್ಷಿಗಳಿವೆ. ಅವುಗಳ ಉಳಿವಿಗಾಗಿ ಮೋದಿಯವರು ಏನನ್ನೂ ಮಾಡಿಲ್ಲ. ವನ್ಯಜೀವಿ ಮಂಡಳಿಗೆ ಮೋದಿಯವರೇ ಅಧ್ಯಕ್ಷರಾಗಿದ್ದಾರೆ. ಆದರೆ ಕಳೆದ ಎಂಟು ವರ್ಷಗಳಿಂದ ಸಣ್ಣದೊಂದು ಸಭೆ ಮಾಡಿದ್ದು ಕಾಣಲಿಲ್ಲ” ಎಂದು ವಿಷಾದಿಸಲಿಲ್ಲ.

“ಗುಜರಾತ್‌ನಲ್ಲಿ ಒಂದೇ ಗುಂಪಿನಲ್ಲಿ ಸಿಂಹಗಳಿವೆ. ರೋಗರುಜಿನ ಬಂದರೆ ಒಮ್ಮೆಲೇ ಸಾಯುತ್ತವೆ. ಹೀಗಾಗಿ ಒಂದಿಷ್ಟು ಸಿಂಹಗಳನ್ನು ಕುನೋಗೆ ತರಬೇಕೆಂದಿದ್ದರು. ಇದಕ್ಕೆ ಗುಜರಾತ್‌ ಸರ್ಕಾರ ಇದಕ್ಕೆ ಸಿದ್ಧವಿರಲಿಲ್ಲ. ಮೋದಿಯವರು ಗುಜರಾತ್‌ನಿಂದ ಸಿಂಹಗಳನ್ನು ತಂದು ಇಲ್ಲಿ ಬಿಡಬಹುದಿತ್ತು. ಆದರೆ ನಮೀಬಿಯಾದಿಂದ ಚೀತಾಗಳನ್ನು ತಂದಿದ್ದಾರೆ” ಎಂದರು.

ಕುನೋ ರಾಷ್ಟ್ರೀಯ ಉದ್ಯಾನ ಭಾಗದಲ್ಲಿನ ಆದಿವಾಸಿಗಳ ಪರಿಸ್ಥಿತಿಯ ಕುರಿತು ಮಾತನಾಡಿದ ಅವರು, “ಈ ಭಾಗದಲ್ಲಿ ಸುಮಾರು 150 ಹಳ್ಳಿಗಳಿವೆ. ಅಲ್ಲಿನ ಆದಿವಾಸಿಗಳನ್ನು ಬೇರೆ ಕಡೆ ಕಳುಹಿಸಬೇಕು. ಸರಿಯಾಗಿ ಪುನರ್‌ವಸತಿ ಕಲ್ಪಿಸಿದರೆ ತಾವಾಗಿಯೇ ಖುಷಿಯಿಂದ ಆದಿವಾಸಿಗಳು ಹೊರಗೆ ಹೋಗಬಹುದು. ಆದರೆ ನಮ್ಮ ದೇಶದಲ್ಲಿ ಸರಿಯಾದ ಮೂಲಸೌಕರ್ಯ ಕಲ್ಪಿಸಿ ಪುನರ್‌ವಸತಿ ಮಾಡಿದ್ದೇ ಅಪರೂಪ. ಎಲ್ಲೋ ಒಂದು ಕಡೆ ತಗಡಿನ ಶೆಡ್ಡು ನಿರ್ಮಿಸಿ ಆದಿವಾಸಿಗಳನ್ನು ಅಲ್ಲಿಗೆ ತಂದು ಬಿಸಾಡುತ್ತಾರೆ. ಮತ್ತೆ ಆದಿವಾಸಿಗಳು ಅತಂತ್ರರಾಗುತ್ತಾರೆ. ಯಾವುದಾದರೂ ಚೀತಾ ಸತ್ತರೆ ಮತ್ತೆ ಈ ಜನರಿಗೆ ತೊಂದರೆ ಕೊಡುತ್ತಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...