Homeಮುಖಪುಟವಲಸೆ ಕಾರ್ಮಿಕರ ಮೇಲೆ ರಾಸಾಯನಿಕ ಸಿಂಪಡಣೆ: ಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಳ್ಳುತ್ತಿರುವ ಯುಪಿ ಪೊಲೀಸರು

ವಲಸೆ ಕಾರ್ಮಿಕರ ಮೇಲೆ ರಾಸಾಯನಿಕ ಸಿಂಪಡಣೆ: ಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಳ್ಳುತ್ತಿರುವ ಯುಪಿ ಪೊಲೀಸರು

- Advertisement -
- Advertisement -

ಲಾಕ್ ಡೌನ್ ಕಾರಣಕ್ಕೆ ದೆಹಲಿಯಿಂದ ಉತ್ತರ ಪ್ರದೇಶದ ಬರೇಲಿಗೆ ನಡೆದುಬಂದ ವಲಸೆ ಕಾರ್ಮಿಕರಿಗೆ ಪ್ರಾಣಿಗಳಿಗಿಂತಲೂ ಕಡೆಯಾಗಿ ರಾಸಾಯನಿಕ ಔಷಧಿ ಸಿಂಪಡಿಸಿತ್ತಿರುವ ಯುಪಿ ಪೊಲೀಸರ ಕ್ರಮಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.

ಲಾಕ್ ಡೌನ್ ಕಾರಣಕ್ಕೆ ದೆಹಲಿಯಿಂದ ಉತ್ತರ ಪ್ರದೇಶದ ಬರೇಲಿಗೆ ನಡೆದುಬಂದ ವಲಸೆ ಕಾರ್ಮಿಕರಿಗೆ ಪ್ರಾಣಿಗಳಿಗಿಂತಲೂ ಕಡೆಯಾಗಿ ರಾಸಾಯನಿಕ ಔಷಧಿ ಸಿಂಪಡಿಸಿತ್ತಿರುವ ಯುಪಿ ಪೊಲೀಸರ ಕ್ರಮಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.

Posted by Naanu Gauri on Monday, March 30, 2020

ವಲಸಿಗ ಕಾರ್ಮಿಕರನ್ನು ಉತ್ತರ ಪ್ರದೇಶದ ಬರೇಲಿಗೆ ಪ್ರವೇಶಿಸಲು ಅನುಮತಿಸುವ ಮೊದಲು ರಾಸಾಯನಿಕ ಸೋಂಕುನಿವಾರಕವನ್ನು ಸಿಂಪಡಿಸಲಾಗುತ್ತದೆ. ಅವರು ಆಹಾರ ಮತ್ತು ನೀರಿಲ್ಲದೆ ಕೆಲವು ದಿನಗಳ ಕಾಲ ನಡೆಯುವಂತೆ ಶಿಕ್ಷೆ ನೀಡಿದ ನಂತರವೂ ಅವರ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ.

ವಿದೇಶದಿಂದ ಹಾರಿಬಂದ ಪ್ರಯಾಣಿಕರಿಗೆ ಏಕೆ ಇದನ್ನು ಮಾಡಲಿಲ್ಲ? ನಾವು ಅವರನ್ನು ಪ್ರಾಣಿಗಳು ಅಥವಾ ಕೀಟಗಳಂತೆ ಪರಿಗಣಿಸಲಿಲ್ಲ. ನಾವು ಅವರನ್ನು ಇಟಲಿ ಮತ್ತು ಚೀನಾದಿಂದ ಹೇಗೆ ಸ್ವಾಗತಿಸಿದೆವು ಎಂಬುದನ್ನು ನೆನಪಿಡಿ. ಈ ದೇಶದಲ್ಲಿ ಎಲ್ಲಾ ನಾಗರಿಕರು ನಿಜವಾಗಿಯೂ ಸಮಾನರೆ ಎಂಬ ಟೀಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.

ಕೊರೊನಾ ದುರಂತದ ವಿರುದ್ಧ ನಾವೆಲ್ಲರೂ ಹೋರಾಡುತ್ತಿದ್ದೇವೆ ಎಂದು ಯುಪಿ ಸರ್ಕಾರ ಹೇಳಿದೆ. ಆದರೆ ದಯವಿಟ್ಟು ಇಂತಹ ಅಮಾನವೀಯ ಕೆಲಸಗಳನ್ನು ಮಾಡಬೇಡಿ.

ಈ ಕಾರ್ಮಿಕರು ಈಗಾಗಲೇ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅವರ ಮೇಲೆ ರಾಸಾಯನಿಕವನ್ನು ಸಿಂಪಡಿಸಬೇಡಿ. ಇದು ಅವರನ್ನು ಉಳಿಸುವುದಿಲ್ಲ ಬದಲಿಗೆ ಅವರ ಆರೋಗ್ಯಕ್ಕೆ ಹೆಚ್ಚಿನ ಹಾನಿಯುಂಟು ಮಾಡುತ್ತದೆ ಎಂದು ಪ್ರಿಯಾಂಕ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ವಿದೇಶಗಳಿಂದ ಬಂದವರಿಗೆ ಇದೇ ರೀತಿ ಮಾಡಿದ್ರಾ? ಬಡವರಿಗೆ ಹೇಗೆ ಬೇಕಾದರೂ ಅವಮಾನ ಮಾಡಬಹುದಲ್ವಾ? UP ಸರ್ಕಾಕ್ಕೆ ಸ್ವಲ್ಪನಾದರೂ ನಾಚಿಕೆ, ಮಾನ, ಮರ್ಯಾದೆ ಇದೆಯಾ ಸಾಮಾಜಿಕ ಕಾರ್ಯಕರ್ತ ಅನಿಲ್‌ ಕುಮಾರ್‌ ಪ್ರಶ್ನಿಸಿದ್ದಾರೆ.

ಯಾರನ್ನ ಸಾಯಿಸ್ತಿದ್ದಾರೆ, ವೈರಸ್ಸನ್ನ ಅಥ್ವ ಮನುಷ್ಯರನ್ನ? ಬಡವರು ಅಂದ್ರೆ ಏನು ಅವರಿಗೆ ಬೆಲೆ ಇಲ್ವ? ಎಂದು ಶರತ್‌ ಚಂದ್ರ ಎಂಬುವವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...