Homeಮುಖಪುಟಚೆನ್ನೈ: ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕನ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲು

ಚೆನ್ನೈ: ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕನ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲು

- Advertisement -
- Advertisement -

ಚೆನ್ನೈನ ಕಲಾಕ್ಷೇತ್ರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ರುಕ್ಮಿಣಿ ದೇವಿ ಫೈನ್ ಆರ್ಟ್ಸ್ ಕಾಲೇಜಿನ ಬೋಧಕ ಸಿಬ್ಬಂದಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ನಂತರ ಸಹಾಯಕ ಪ್ರಾಧ್ಯಾಪಕ ಹರಿಪದ್ಮನ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಸ್ಥೆಯ ಮಾಜಿ ವಿದ್ಯಾರ್ಥಿನಿಯೊಬ್ಬರು ಪ್ರಾಧ್ಯಾಪಕ ಮತ್ತು ಮೂವರು ಸಿಬ್ಬಂದಿಗಳ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಇದಕ್ಕೂ ಮುನ್ನ ಸಂಸ್ಥೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಸಂಸ್ಥೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು. ಸದ್ಯ ಏಪ್ರಿಲ್ 6ರವರೆಗೂ ಕಾಲೇಜು ಅನ್ನು ಮುಚ್ಚಲಾಗಿದೆ.

ಹರಿಪದ್ಮನ್‌, ಸಂಜಿತ್ ಲಾಲ್, ಸಾಯಿ ಕೃಷ್ಣನ್ ಮತ್ತು ಶ್ರೀನಾಥ್ ಎಂಬ ಸಿಬ್ಬಂದಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸುಮಾರು 90 ವಿದ್ಯಾರ್ಥಿಗಳು ಮಾರ್ಚ್‌ 31ರಂದು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆಗೆ ದೂರು ನೀಡಿದ್ದರು.

“ನಾವು ಹಲವು ವರ್ಷಗಳಿಂದ ಕಲಾಕ್ಷೇತ್ರ ಕಾಲೇಜುಗಳಲ್ಲಿ ಲೈಂಗಿಕ ದೌರ್ಜನ್ಯ, ನಿಂದನೆ ಮತ್ತು ಚರ್ಮದ ಬಣ್ಣದ ಆಧಾರದ ಮೇಲೆ ತಾರತಮ್ಯ ಅನುಭವಿಸುತ್ತಿದ್ದೇವೆ. ಆದರೆ ಈ ಬಗ್ಗೆ ದೂರು ನೀಡಿದರೆ ಸಂಸ್ಥೆಯು ಅಸಡ್ಡೆ ಹಾಗೂ ನಿರ್ಲಕ್ಷ್ಯ ಧೋರಣೆ ತಾಳಿದೆ. ಕ್ರಮ ಕೈಗೊಳ್ಳದ ನಿರ್ದೇಶಕಿ ರೇವತಿ ರಾಮಚಂದ್ರನ್‌ ಅವರನ್ನು ವಜಾಗೊಳಿಸಿ ಆಂತರಿಕ ದೂರು ಸಮಿತಿ ಪುನರ್‌ರಚಿಸಬೇಕು” ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಪತ್ರವನ್ನು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್‌ ರೆಡ್ಡಿ ಮತ್ತು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ಗೂ ಕೂಡ ಕಳಿಸಲಾಗಿತ್ತು.

ತಮಿಳುನಾಡು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ಎ.ಆರ್ ಕುಮಾರಿ ಅವರು ಕ್ಯಾಂಪಸ್‌ನಲ್ಲಿ ಐದು ಗಂಟೆಗಳ ವಿಚಾರಣೆಯ ನಂತರ ಕಲಾಕ್ಷೇತ್ರ ಫೌಂಡೇಶನ್‌ನಲ್ಲಿ ವಿದ್ಯಾರ್ಥಿನಿರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ 90 ದೂರುಗಳನ್ನು ಸ್ವೀಕರಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ರವರು ಈ ಕುರಿತು ಸಮರ್ಪಕ ತನಿಖೆ ನಡೆಸುವುದಾಗಿ ಮತ್ತು ತಪ್ಪಿತಸ್ಥರೆಂದು ಕಂಡುಬಂದಲ್ಲಿ ಸೂಕ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಆರೋಪಿ ಅಧ್ಯಾಪಕನ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಆಗ್ರಹಿಸಿ ಕಾಲೇಜಿನ ಆವರಣದಲ್ಲಿರುವ ಆಲದ ಮರದ ಕೆಳಗೆ ವಿದ್ಯಾರ್ಥಿಗಳು ಗುರುವಾರ ಬೆಳಿಗ್ಗೆಯಿಂದ ಮೌನ ಪ್ರತಿಭಟನೆ ನಡೆಸಿದರು. ಸಂಜೆಯ ನಂತರ ಕಾಲೇಜಿನಿಂದ ತಿರುವನ್ಮಯೂರ್ ರಸ್ತೆಯವರೆಗೆ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಇದನ್ನೂ ಓದಿ; ಬೆಂಗಳೂರಿನಲ್ಲಿ ನಾಲ್ವರು ಕಾಮುಕರಿಂದ ಯುವತಿಯ ಮೇಲೆ ಗ್ಯಾಂಗ್ ರೇಪ್; ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...