Homeಮುಖಪುಟಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

ಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

- Advertisement -
- Advertisement -

ಚೆನ್ನೈನಲ್ಲಿ ನಡೆದ ಭಾರತೀಯ ವಾಯುಪಡೆಯ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಲು ಆಗಮಿಸಿದ್ದ ಕನಿಷ್ಠ ಐವರು ಪ್ರೇಕ್ಷಕರು ಕಾರ್ಯಕ್ರಮದ ನಂತರ ಸಾವನ್ನಪ್ಪಿದ್ದಾರೆ ಎಂದು ಡಿಎಂಕೆ ಸಂಸದೆ ಕೆ ಕನಿಮೊಳಿ ಹೇಳಿದ್ದಾರೆ. ಅವರಲ್ಲಿ ಒಬ್ಬನನ್ನು ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದ ಎಂದು ಮೂಲಗಳು ತಿಳಿಸಿವೆ.

ಮತ್ತೊಬ್ಬ ವ್ಯಕ್ತಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಬಿಸಿಲಿನ ಝಳಕ್ಕೆ ತುತ್ತಾಗಿದ್ದಾನೆ ಎನ್ನಲಾಗಿದೆ. ಗೋಶಾ ಆಸ್ಪತ್ರೆ ಮತ್ತು ವಾಲಾಜಾ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೈಕ್ ಸವಾರ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡು ಅಸ್ವಸ್ಥರಾಗಿದ್ದರು ಎನ್ನಲಾಗಿದೆ.

“ಜನಸಂದಣಿಯ ನಡುವೆ ನಿಯಂತ್ರಣ ಕಳೆದುಕೊಂಡು ಸಿಲುಕಿದ್ದ ಅವರ ಸ್ಥಿತಿಯನ್ನು ಸ್ವಯಂಸೇವಕರು ಗುರುತಿಸಿದ್ದಾರೆ. ಕೂಡಲೇ ಅವರಿಗೆ ಬೈಕ್‌ನಿಂದ ಇಳಿಯಲು ಸಹಾಯ ಮಾಡಿದರು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮರಣೋತ್ತರ ಪರೀಕ್ಷೆಯ ನಂತರವೇ ಸಾವಿನ ಕಾರಣವನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹಿರಿಯ ವೈದ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಕನಿಮೋಳಿ, “ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಐಎಎಫ್‌ ಸಾಹಸ ಕಾರ್ಯಕ್ರಮವನ್ನು ವೀಕ್ಷಿಸಿದ ಸಾರ್ವಜನಿಕರು ಜನಸಂದಣಿಯಲ್ಲಿ ಸಿಲುಕಿದ್ದಾರೆ. ತಾಪಮಾನವು ಹೆಚ್ಚಾದಾಗ 5 ಜನರು ಸಾವನ್ನಪ್ಪಿರುವ ಸುದ್ದಿ ತುಂಬಾ ದುಃಖ ಮತ್ತು ನೋವಿನ ಸಂಗತಿಯಾಗಿದೆ” ಎಂದು ಹೇಳಿದ್ದಾರೆ.

15 ಲಕ್ಷ ವೀಕ್ಷಕರನ್ನು ಸಜ್ಜುಗೊಳಿಸುವ ಗುರಿಯೊಂದಿಗೆ ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಲು ಅಜ್ಜಾಗಿದ್ದ ಭಾರತೀಯ ವಾಯುಪಡೆಯು ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ದು, ಚೆನ್ನೈ ಸಿಟಿ ಪೊಲೀಸರ ಕಳಪೆ ಜನಸಂದಣಿ ಮತ್ತು ಟ್ರಾಫಿಕ್ ನಿರ್ವಹಣೆಯೇ ಘಟನೆಗೆ ಕಾರಣ ಎಂದು ಹೇಳಿದ್ದಾರೆ.

ಕಾರ್ಯಕ್ರಮವು ಮುಂದೆ ಎಲ್ಲವೂ ಸುಗಮವಾಗಿ ನಡೆಯುತ್ತಿತ್ತು, ದೊಡ್ಡ ಪ್ರಮಾಣದ ಟ್ರಾಫಿಕ್ ಡೈವರ್ಶನ್ ಮತ್ತು ಪಾರ್ಕಿಂಗ್ ನಿಯಮಗಳಿದ್ದವು. ಆದರೆ, ಏರ್ ಶೋ 11 ಗಂಟೆಗೆ ನಿಗದಿಯಾಗಿತ್ತು. ಜನಸಂದಣಿಯು ತುಂಬಾ ದೊಡ್ಡದಾಯಿತು, ಮರೀನಾ ಬೀಚ್ ರಸ್ತೆಯು ಜನರ ಸಮುದ್ರವಾಗಿ ಮಾರ್ಪಟ್ಟವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರ್ಯಕ್ರಮದ ನಂತರ ಇಡೀ ಗುಂಪು ಚದುರಲು ಪ್ರಾರಂಭಿಸಿದಾಗ ಗೊಂದಲವು ಉಂಟಾಯಿತು. ಬೀಚ್ ರಸ್ತೆಯ ಇಂಚಿಂಚೂ ಜಾಗವನ್ನು ಜನ ಮತ್ತು ವಾಹನಗಳು ಆಕ್ರಮಿಸಿಕೊಂಡಿದೆ. ಪ್ರೇಕ್ಷಕರ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮರ್ಪಕ ವ್ಯವಸ್ಥೆ ಇರಲಿಲ್ಲ. ತಾಪಮಾನ ಏರಿಕೆ ಮತ್ತು ಸಾರ್ವಜನಿಕ ಸಾರಿಗೆ ಇಲ್ಲದ ಕಾರಣ, ನೂರಾರು ಜನರು ಯಾವುದೇ ಸಾರ್ವಜನಿಕ ಸಾರಿಗೆಯನ್ನು ಪಡೆಯಲು ಅಥವಾ ತಮ್ಮ ವಾಹನಗಳನ್ನು ತೆಗೆದುಕೊಳ್ಳಲು ಜಾಮ್ ಆಗಿದ್ದ ರಸ್ತೆಗಳಲ್ಲಿ ಮೂರರಿಂದ ನಾಲ್ಕು ಕಿಲೋಮೀಟರ್ ನಡೆಯಬೇಕಾಯಿತು.

ಅವರಲ್ಲಿ ಅನೇಕರು ಮಕ್ಕಳು ಮತ್ತು ವೃದ್ಧರಿದ್ದರು. ನಿರ್ಜಲೀಕರಣದ ಕಾರಣಕ್ಕೆ ಅವರೆಲ್ಲರೂ ಕಾಲುದಾರಿಯ ಮೇಲೆ ಕುಳಿತುಕೊಂಡರು. ಅನೇಕರು ಮೂರ್ಛೆಹೋಗಿದ್ದು, ಅಲ್ಲಿದ್ದವರು ಅವರಿಗೆ ನೆರವಾಗುತ್ತಿದ್ದರು.

ಮೈದಾನದಲ್ಲಿ ಯಾವುದೇ ಪರಿಣಾಮಕಾರಿ ಪೊಲೀಸ್ ನಿಯಂತ್ರಣವಿಲ್ಲದೆ, ವಾಹನಗಳು ಮತ್ತು ದ್ವಿಚಕ್ರ ವಾಹನಗಳು ಅಡ್ಡಾದಿಡ್ಡಿಯಾಗಿ ಎರಡೂ ಮಾರ್ಗಗಳನ್ನು ಪ್ರವೇಶಿಸಿದವು ಎನ್ನಲಾಗಿದ್ದು, ಹೆಚ್ಚಿನ ರಸ್ತೆಗಳಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಜಾಮ್ ಆಗಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಸಂದರ್ಭದಲ್ಲಿ ಅನೇಕ ಪೊಲೀಸ್ ಸಿಬ್ಬಂದಿ ಮೂಕಪ್ರೇಕ್ಷಕರಾಗಿ ತಮ್ಮ ದ್ವಿಚಕ್ರ ವಾಹನಗಳಲ್ಲಿ ಹಿಂತಿರುಗುವುದರಲ್ಲಿ ನಿರತರಾಗಿದ್ದರು. ಸಾರ್ವಜನಿಕ ಗಲಾಟೆಯಾಗುವವರೆಗೂ ಅವರು ಪರಿಸ್ಥಿತಿಯನ್ನು ನಿಯಂತ್ರಿಸಲಿಲ್ಲ ಅಥವಾ ಸಿಕ್ಕಿಬಿದ್ದ ಆಂಬ್ಯುಲೆನ್ಸ್‌ಗಳಿಗೆ ಸಹಾಯ ಮಾಡಲು ಮಧ್ಯಪ್ರವೇಶಿಸಲಿಲ್ಲ ಎಂದು ಜನರು ಆರೋಪಿಸಿದ್ದಾರೆ.

ರಸ್ತೆಯುದ್ದಕ್ಕೂ ಕುಡಿಯುವ ನೀರಿನ ಕೇಂದ್ರಗಳಿರಲಿಲ್ಲ. ಈ ಪ್ರದೇಶದಲ್ಲಿ ಹೆಚ್ಚಿನ ತಿನಿಸು ಅಂಗಡಿಗಳು ಮುಚ್ಚಲ್ಪಟ್ಟವು. ತೆರೆದಿದ್ದ ಅಂಗಡಿಗಳಲ್ಲಿ ನೀರು ಮತ್ತು ತಂಪು ಪಾನೀಯಗಳು ಖಾಲಿಯಾಗಿದ್ದವು.

ಇದನ್ನೂ ಓದಿ; ರೈಲು ಹಳಿಗಳಲ್ಲಿ ಕುಕ್ಕರ್ ಬಾಂಬ್ | 6 ದುಷ್ಕರ್ಮಿಗಳಿಗೆ ಜೈಲು ಶಿಕ್ಷೆ ವಿಧಿಸಿದ INA ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...