Homeಮುಖಪುಟಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

ಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

- Advertisement -
- Advertisement -

ಚೆನ್ನೈನಲ್ಲಿ ನಡೆದ ಭಾರತೀಯ ವಾಯುಪಡೆಯ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಲು ಆಗಮಿಸಿದ್ದ ಕನಿಷ್ಠ ಐವರು ಪ್ರೇಕ್ಷಕರು ಕಾರ್ಯಕ್ರಮದ ನಂತರ ಸಾವನ್ನಪ್ಪಿದ್ದಾರೆ ಎಂದು ಡಿಎಂಕೆ ಸಂಸದೆ ಕೆ ಕನಿಮೊಳಿ ಹೇಳಿದ್ದಾರೆ. ಅವರಲ್ಲಿ ಒಬ್ಬನನ್ನು ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದ ಎಂದು ಮೂಲಗಳು ತಿಳಿಸಿವೆ.

ಮತ್ತೊಬ್ಬ ವ್ಯಕ್ತಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಬಿಸಿಲಿನ ಝಳಕ್ಕೆ ತುತ್ತಾಗಿದ್ದಾನೆ ಎನ್ನಲಾಗಿದೆ. ಗೋಶಾ ಆಸ್ಪತ್ರೆ ಮತ್ತು ವಾಲಾಜಾ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೈಕ್ ಸವಾರ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡು ಅಸ್ವಸ್ಥರಾಗಿದ್ದರು ಎನ್ನಲಾಗಿದೆ.

“ಜನಸಂದಣಿಯ ನಡುವೆ ನಿಯಂತ್ರಣ ಕಳೆದುಕೊಂಡು ಸಿಲುಕಿದ್ದ ಅವರ ಸ್ಥಿತಿಯನ್ನು ಸ್ವಯಂಸೇವಕರು ಗುರುತಿಸಿದ್ದಾರೆ. ಕೂಡಲೇ ಅವರಿಗೆ ಬೈಕ್‌ನಿಂದ ಇಳಿಯಲು ಸಹಾಯ ಮಾಡಿದರು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮರಣೋತ್ತರ ಪರೀಕ್ಷೆಯ ನಂತರವೇ ಸಾವಿನ ಕಾರಣವನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹಿರಿಯ ವೈದ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಕನಿಮೋಳಿ, “ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಐಎಎಫ್‌ ಸಾಹಸ ಕಾರ್ಯಕ್ರಮವನ್ನು ವೀಕ್ಷಿಸಿದ ಸಾರ್ವಜನಿಕರು ಜನಸಂದಣಿಯಲ್ಲಿ ಸಿಲುಕಿದ್ದಾರೆ. ತಾಪಮಾನವು ಹೆಚ್ಚಾದಾಗ 5 ಜನರು ಸಾವನ್ನಪ್ಪಿರುವ ಸುದ್ದಿ ತುಂಬಾ ದುಃಖ ಮತ್ತು ನೋವಿನ ಸಂಗತಿಯಾಗಿದೆ” ಎಂದು ಹೇಳಿದ್ದಾರೆ.

15 ಲಕ್ಷ ವೀಕ್ಷಕರನ್ನು ಸಜ್ಜುಗೊಳಿಸುವ ಗುರಿಯೊಂದಿಗೆ ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಲು ಅಜ್ಜಾಗಿದ್ದ ಭಾರತೀಯ ವಾಯುಪಡೆಯು ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ದು, ಚೆನ್ನೈ ಸಿಟಿ ಪೊಲೀಸರ ಕಳಪೆ ಜನಸಂದಣಿ ಮತ್ತು ಟ್ರಾಫಿಕ್ ನಿರ್ವಹಣೆಯೇ ಘಟನೆಗೆ ಕಾರಣ ಎಂದು ಹೇಳಿದ್ದಾರೆ.

ಕಾರ್ಯಕ್ರಮವು ಮುಂದೆ ಎಲ್ಲವೂ ಸುಗಮವಾಗಿ ನಡೆಯುತ್ತಿತ್ತು, ದೊಡ್ಡ ಪ್ರಮಾಣದ ಟ್ರಾಫಿಕ್ ಡೈವರ್ಶನ್ ಮತ್ತು ಪಾರ್ಕಿಂಗ್ ನಿಯಮಗಳಿದ್ದವು. ಆದರೆ, ಏರ್ ಶೋ 11 ಗಂಟೆಗೆ ನಿಗದಿಯಾಗಿತ್ತು. ಜನಸಂದಣಿಯು ತುಂಬಾ ದೊಡ್ಡದಾಯಿತು, ಮರೀನಾ ಬೀಚ್ ರಸ್ತೆಯು ಜನರ ಸಮುದ್ರವಾಗಿ ಮಾರ್ಪಟ್ಟವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರ್ಯಕ್ರಮದ ನಂತರ ಇಡೀ ಗುಂಪು ಚದುರಲು ಪ್ರಾರಂಭಿಸಿದಾಗ ಗೊಂದಲವು ಉಂಟಾಯಿತು. ಬೀಚ್ ರಸ್ತೆಯ ಇಂಚಿಂಚೂ ಜಾಗವನ್ನು ಜನ ಮತ್ತು ವಾಹನಗಳು ಆಕ್ರಮಿಸಿಕೊಂಡಿದೆ. ಪ್ರೇಕ್ಷಕರ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮರ್ಪಕ ವ್ಯವಸ್ಥೆ ಇರಲಿಲ್ಲ. ತಾಪಮಾನ ಏರಿಕೆ ಮತ್ತು ಸಾರ್ವಜನಿಕ ಸಾರಿಗೆ ಇಲ್ಲದ ಕಾರಣ, ನೂರಾರು ಜನರು ಯಾವುದೇ ಸಾರ್ವಜನಿಕ ಸಾರಿಗೆಯನ್ನು ಪಡೆಯಲು ಅಥವಾ ತಮ್ಮ ವಾಹನಗಳನ್ನು ತೆಗೆದುಕೊಳ್ಳಲು ಜಾಮ್ ಆಗಿದ್ದ ರಸ್ತೆಗಳಲ್ಲಿ ಮೂರರಿಂದ ನಾಲ್ಕು ಕಿಲೋಮೀಟರ್ ನಡೆಯಬೇಕಾಯಿತು.

ಅವರಲ್ಲಿ ಅನೇಕರು ಮಕ್ಕಳು ಮತ್ತು ವೃದ್ಧರಿದ್ದರು. ನಿರ್ಜಲೀಕರಣದ ಕಾರಣಕ್ಕೆ ಅವರೆಲ್ಲರೂ ಕಾಲುದಾರಿಯ ಮೇಲೆ ಕುಳಿತುಕೊಂಡರು. ಅನೇಕರು ಮೂರ್ಛೆಹೋಗಿದ್ದು, ಅಲ್ಲಿದ್ದವರು ಅವರಿಗೆ ನೆರವಾಗುತ್ತಿದ್ದರು.

ಮೈದಾನದಲ್ಲಿ ಯಾವುದೇ ಪರಿಣಾಮಕಾರಿ ಪೊಲೀಸ್ ನಿಯಂತ್ರಣವಿಲ್ಲದೆ, ವಾಹನಗಳು ಮತ್ತು ದ್ವಿಚಕ್ರ ವಾಹನಗಳು ಅಡ್ಡಾದಿಡ್ಡಿಯಾಗಿ ಎರಡೂ ಮಾರ್ಗಗಳನ್ನು ಪ್ರವೇಶಿಸಿದವು ಎನ್ನಲಾಗಿದ್ದು, ಹೆಚ್ಚಿನ ರಸ್ತೆಗಳಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಜಾಮ್ ಆಗಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಸಂದರ್ಭದಲ್ಲಿ ಅನೇಕ ಪೊಲೀಸ್ ಸಿಬ್ಬಂದಿ ಮೂಕಪ್ರೇಕ್ಷಕರಾಗಿ ತಮ್ಮ ದ್ವಿಚಕ್ರ ವಾಹನಗಳಲ್ಲಿ ಹಿಂತಿರುಗುವುದರಲ್ಲಿ ನಿರತರಾಗಿದ್ದರು. ಸಾರ್ವಜನಿಕ ಗಲಾಟೆಯಾಗುವವರೆಗೂ ಅವರು ಪರಿಸ್ಥಿತಿಯನ್ನು ನಿಯಂತ್ರಿಸಲಿಲ್ಲ ಅಥವಾ ಸಿಕ್ಕಿಬಿದ್ದ ಆಂಬ್ಯುಲೆನ್ಸ್‌ಗಳಿಗೆ ಸಹಾಯ ಮಾಡಲು ಮಧ್ಯಪ್ರವೇಶಿಸಲಿಲ್ಲ ಎಂದು ಜನರು ಆರೋಪಿಸಿದ್ದಾರೆ.

ರಸ್ತೆಯುದ್ದಕ್ಕೂ ಕುಡಿಯುವ ನೀರಿನ ಕೇಂದ್ರಗಳಿರಲಿಲ್ಲ. ಈ ಪ್ರದೇಶದಲ್ಲಿ ಹೆಚ್ಚಿನ ತಿನಿಸು ಅಂಗಡಿಗಳು ಮುಚ್ಚಲ್ಪಟ್ಟವು. ತೆರೆದಿದ್ದ ಅಂಗಡಿಗಳಲ್ಲಿ ನೀರು ಮತ್ತು ತಂಪು ಪಾನೀಯಗಳು ಖಾಲಿಯಾಗಿದ್ದವು.

ಇದನ್ನೂ ಓದಿ; ರೈಲು ಹಳಿಗಳಲ್ಲಿ ಕುಕ್ಕರ್ ಬಾಂಬ್ | 6 ದುಷ್ಕರ್ಮಿಗಳಿಗೆ ಜೈಲು ಶಿಕ್ಷೆ ವಿಧಿಸಿದ INA ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....