Homeಮುಖಪುಟಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

ಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

- Advertisement -
- Advertisement -

ಚೆನ್ನೈನಲ್ಲಿ ನಡೆದ ಭಾರತೀಯ ವಾಯುಪಡೆಯ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಲು ಆಗಮಿಸಿದ್ದ ಕನಿಷ್ಠ ಐವರು ಪ್ರೇಕ್ಷಕರು ಕಾರ್ಯಕ್ರಮದ ನಂತರ ಸಾವನ್ನಪ್ಪಿದ್ದಾರೆ ಎಂದು ಡಿಎಂಕೆ ಸಂಸದೆ ಕೆ ಕನಿಮೊಳಿ ಹೇಳಿದ್ದಾರೆ. ಅವರಲ್ಲಿ ಒಬ್ಬನನ್ನು ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದ ಎಂದು ಮೂಲಗಳು ತಿಳಿಸಿವೆ.

ಮತ್ತೊಬ್ಬ ವ್ಯಕ್ತಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಬಿಸಿಲಿನ ಝಳಕ್ಕೆ ತುತ್ತಾಗಿದ್ದಾನೆ ಎನ್ನಲಾಗಿದೆ. ಗೋಶಾ ಆಸ್ಪತ್ರೆ ಮತ್ತು ವಾಲಾಜಾ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೈಕ್ ಸವಾರ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡು ಅಸ್ವಸ್ಥರಾಗಿದ್ದರು ಎನ್ನಲಾಗಿದೆ.

“ಜನಸಂದಣಿಯ ನಡುವೆ ನಿಯಂತ್ರಣ ಕಳೆದುಕೊಂಡು ಸಿಲುಕಿದ್ದ ಅವರ ಸ್ಥಿತಿಯನ್ನು ಸ್ವಯಂಸೇವಕರು ಗುರುತಿಸಿದ್ದಾರೆ. ಕೂಡಲೇ ಅವರಿಗೆ ಬೈಕ್‌ನಿಂದ ಇಳಿಯಲು ಸಹಾಯ ಮಾಡಿದರು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮರಣೋತ್ತರ ಪರೀಕ್ಷೆಯ ನಂತರವೇ ಸಾವಿನ ಕಾರಣವನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹಿರಿಯ ವೈದ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಕನಿಮೋಳಿ, “ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಐಎಎಫ್‌ ಸಾಹಸ ಕಾರ್ಯಕ್ರಮವನ್ನು ವೀಕ್ಷಿಸಿದ ಸಾರ್ವಜನಿಕರು ಜನಸಂದಣಿಯಲ್ಲಿ ಸಿಲುಕಿದ್ದಾರೆ. ತಾಪಮಾನವು ಹೆಚ್ಚಾದಾಗ 5 ಜನರು ಸಾವನ್ನಪ್ಪಿರುವ ಸುದ್ದಿ ತುಂಬಾ ದುಃಖ ಮತ್ತು ನೋವಿನ ಸಂಗತಿಯಾಗಿದೆ” ಎಂದು ಹೇಳಿದ್ದಾರೆ.

15 ಲಕ್ಷ ವೀಕ್ಷಕರನ್ನು ಸಜ್ಜುಗೊಳಿಸುವ ಗುರಿಯೊಂದಿಗೆ ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಲು ಅಜ್ಜಾಗಿದ್ದ ಭಾರತೀಯ ವಾಯುಪಡೆಯು ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ದು, ಚೆನ್ನೈ ಸಿಟಿ ಪೊಲೀಸರ ಕಳಪೆ ಜನಸಂದಣಿ ಮತ್ತು ಟ್ರಾಫಿಕ್ ನಿರ್ವಹಣೆಯೇ ಘಟನೆಗೆ ಕಾರಣ ಎಂದು ಹೇಳಿದ್ದಾರೆ.

ಕಾರ್ಯಕ್ರಮವು ಮುಂದೆ ಎಲ್ಲವೂ ಸುಗಮವಾಗಿ ನಡೆಯುತ್ತಿತ್ತು, ದೊಡ್ಡ ಪ್ರಮಾಣದ ಟ್ರಾಫಿಕ್ ಡೈವರ್ಶನ್ ಮತ್ತು ಪಾರ್ಕಿಂಗ್ ನಿಯಮಗಳಿದ್ದವು. ಆದರೆ, ಏರ್ ಶೋ 11 ಗಂಟೆಗೆ ನಿಗದಿಯಾಗಿತ್ತು. ಜನಸಂದಣಿಯು ತುಂಬಾ ದೊಡ್ಡದಾಯಿತು, ಮರೀನಾ ಬೀಚ್ ರಸ್ತೆಯು ಜನರ ಸಮುದ್ರವಾಗಿ ಮಾರ್ಪಟ್ಟವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರ್ಯಕ್ರಮದ ನಂತರ ಇಡೀ ಗುಂಪು ಚದುರಲು ಪ್ರಾರಂಭಿಸಿದಾಗ ಗೊಂದಲವು ಉಂಟಾಯಿತು. ಬೀಚ್ ರಸ್ತೆಯ ಇಂಚಿಂಚೂ ಜಾಗವನ್ನು ಜನ ಮತ್ತು ವಾಹನಗಳು ಆಕ್ರಮಿಸಿಕೊಂಡಿದೆ. ಪ್ರೇಕ್ಷಕರ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮರ್ಪಕ ವ್ಯವಸ್ಥೆ ಇರಲಿಲ್ಲ. ತಾಪಮಾನ ಏರಿಕೆ ಮತ್ತು ಸಾರ್ವಜನಿಕ ಸಾರಿಗೆ ಇಲ್ಲದ ಕಾರಣ, ನೂರಾರು ಜನರು ಯಾವುದೇ ಸಾರ್ವಜನಿಕ ಸಾರಿಗೆಯನ್ನು ಪಡೆಯಲು ಅಥವಾ ತಮ್ಮ ವಾಹನಗಳನ್ನು ತೆಗೆದುಕೊಳ್ಳಲು ಜಾಮ್ ಆಗಿದ್ದ ರಸ್ತೆಗಳಲ್ಲಿ ಮೂರರಿಂದ ನಾಲ್ಕು ಕಿಲೋಮೀಟರ್ ನಡೆಯಬೇಕಾಯಿತು.

ಅವರಲ್ಲಿ ಅನೇಕರು ಮಕ್ಕಳು ಮತ್ತು ವೃದ್ಧರಿದ್ದರು. ನಿರ್ಜಲೀಕರಣದ ಕಾರಣಕ್ಕೆ ಅವರೆಲ್ಲರೂ ಕಾಲುದಾರಿಯ ಮೇಲೆ ಕುಳಿತುಕೊಂಡರು. ಅನೇಕರು ಮೂರ್ಛೆಹೋಗಿದ್ದು, ಅಲ್ಲಿದ್ದವರು ಅವರಿಗೆ ನೆರವಾಗುತ್ತಿದ್ದರು.

ಮೈದಾನದಲ್ಲಿ ಯಾವುದೇ ಪರಿಣಾಮಕಾರಿ ಪೊಲೀಸ್ ನಿಯಂತ್ರಣವಿಲ್ಲದೆ, ವಾಹನಗಳು ಮತ್ತು ದ್ವಿಚಕ್ರ ವಾಹನಗಳು ಅಡ್ಡಾದಿಡ್ಡಿಯಾಗಿ ಎರಡೂ ಮಾರ್ಗಗಳನ್ನು ಪ್ರವೇಶಿಸಿದವು ಎನ್ನಲಾಗಿದ್ದು, ಹೆಚ್ಚಿನ ರಸ್ತೆಗಳಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಜಾಮ್ ಆಗಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಸಂದರ್ಭದಲ್ಲಿ ಅನೇಕ ಪೊಲೀಸ್ ಸಿಬ್ಬಂದಿ ಮೂಕಪ್ರೇಕ್ಷಕರಾಗಿ ತಮ್ಮ ದ್ವಿಚಕ್ರ ವಾಹನಗಳಲ್ಲಿ ಹಿಂತಿರುಗುವುದರಲ್ಲಿ ನಿರತರಾಗಿದ್ದರು. ಸಾರ್ವಜನಿಕ ಗಲಾಟೆಯಾಗುವವರೆಗೂ ಅವರು ಪರಿಸ್ಥಿತಿಯನ್ನು ನಿಯಂತ್ರಿಸಲಿಲ್ಲ ಅಥವಾ ಸಿಕ್ಕಿಬಿದ್ದ ಆಂಬ್ಯುಲೆನ್ಸ್‌ಗಳಿಗೆ ಸಹಾಯ ಮಾಡಲು ಮಧ್ಯಪ್ರವೇಶಿಸಲಿಲ್ಲ ಎಂದು ಜನರು ಆರೋಪಿಸಿದ್ದಾರೆ.

ರಸ್ತೆಯುದ್ದಕ್ಕೂ ಕುಡಿಯುವ ನೀರಿನ ಕೇಂದ್ರಗಳಿರಲಿಲ್ಲ. ಈ ಪ್ರದೇಶದಲ್ಲಿ ಹೆಚ್ಚಿನ ತಿನಿಸು ಅಂಗಡಿಗಳು ಮುಚ್ಚಲ್ಪಟ್ಟವು. ತೆರೆದಿದ್ದ ಅಂಗಡಿಗಳಲ್ಲಿ ನೀರು ಮತ್ತು ತಂಪು ಪಾನೀಯಗಳು ಖಾಲಿಯಾಗಿದ್ದವು.

ಇದನ್ನೂ ಓದಿ; ರೈಲು ಹಳಿಗಳಲ್ಲಿ ಕುಕ್ಕರ್ ಬಾಂಬ್ | 6 ದುಷ್ಕರ್ಮಿಗಳಿಗೆ ಜೈಲು ಶಿಕ್ಷೆ ವಿಧಿಸಿದ INA ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...