Homeಮುಖಪುಟಮುಸ್ಲಿಮರು, ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

ಮುಸ್ಲಿಮರು, ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

- Advertisement -
- Advertisement -

ವಾಟ್ಸಾಪ್ ಗ್ರೂಪ್ ನಲ್ಲಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಸಂದೇಶ ಕಳುಹಿಸಿದ  ಆರೋಪದ ಮೇಲೆ ಚೆನ್ನೈನಲ್ಲಿ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಚೆನ್ನೈನ ಪುಲಿಯಾಂತೋಪ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ತನಿಖಾ ಇನ್ಸ್‌ಪೆಕ್ಟರ್ ಪಿ ರಾಜೇಂದ್ರನ್, ಕ್ರಿಶ್ಚಿಯನ್ ಮತ್ತು ಮುಸ್ಲಿಮರ ವಿರುದ್ಧ ವಾಟ್ಸಾಪ್ ಗ್ರೂಪ್‌ನಲ್ಲಿ ಆಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ವಾಟ್ಸಾಪ್  ಗ್ರೂಪ್ ನಲ್ಲಿ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಕ್ರಿಸ್ಟೋಫರ್ ಎಂಬವರು ತಮಿಳುನಾಡಿನ ಹಿಂದಿನ ಎಐಎಡಿಎಂಕೆ ಆಡಳಿತ, ಬಿಜೆಪಿ ಮತ್ತು ರಥಯಾತ್ರೆಯನ್ನು ಟೀಕಿಸುವ ಸಾಮಾಜಿಕ ಕಾರ್ಯಕರ್ತ ಎಸ್ ಶಿವದಾಸ್ ಅವರ ವೀಡಿಯೊ ಹಾಡನ್ನು ಹಂಚಿಕೊಂಡಿದ್ದರು. ತಮಿಳುನಾಡಿನಲ್ಲಿ ರಾಮರಾಜ್ಯ (ರಾಮನ ಆಳ್ವಿಕೆ) ನಡೆಯುವುದಿಲ್ಲ ಎಂಬ ಶಿವದಾಸ್ ಅವರ ವೀಡಿಯೊ ಹಾಡನ್ನು ಕೂಡ  ಕ್ರಿಸ್ಟೋಫರ್ ಹಂಚಿಕೊಂಡಿದ್ದರು ಎನ್ನಲಾಗಿದೆ.

ಇದಕ್ಕೆ ಪ್ರತಿಯಾಗಿ ಆಡಿಯೋ ಸಂದೇಶದಲ್ಲಿ, ರಾಜೇಂದ್ರನ್, ಇದು ಭಾರತ. ನಾವು ಮಸೀದಿಯನ್ನು ಕೆಡವಿ ರಾಮಜನ್ಮಭೂಮಿಯಲ್ಲಿ ಮಂದಿರ ಕಟ್ಟಿದ್ದೇವೆ. ಇದು ಭಾರತ ಮತ್ತು ಇದು ಸಾಧ್ಯ. ದೇವಾಲಯಗಳಲ್ಲಿ ಪ್ರಾರ್ಥನೆಗಳನ್ನು ಮಾಡಲಾಗುತ್ತದೆ, ಅಡಿಗಲ್ಲುಗಳನ್ನು ಹಾಕಲಾಗುತ್ತದೆ, ಮತ್ತು ನಾವು ಸಂಸತ್ತಿನಲ್ಲಿ ಸೆಂಗೋಲ್‌ ನ್ನು ಇಡುತ್ತೇವೆ. ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ನಮ್ಮನ್ನು ತಡೆಯಲು ಪ್ರಯತ್ನಿಸಲಿ. ಇಲ್ಲವಾದರೆ ಅವರು ಪಾಕಿಸ್ತಾನ ಅಥವಾ ಸೌದಿ ಅರೇಬಿಯಾಕ್ಕೆ ಹೋಗಿ ಎಂದು ರಾಜೇಂದ್ರನ್  ವಾಟ್ಸಾಪ್ ಗ್ರೂಪ್‌ಗೆ ಕಳುಹಿಸಿದ ಆಡಿಯೋ ಸಂದೇಶದಲ್ಲಿ ಹೇಳಿದ್ದರು.

ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವುದರಿಂದ ರಾಮರಾಜ್ಯ (ಭಗವಾನ್ ರಾಮನ ಆಳ್ವಿಕೆ) ಖಂಡಿತವಾಗಿಯೂ ಸಂಭವಿಸುತ್ತದೆ ಎಂದು ರಾಜೇಂದ್ರನ್ ಹೇಳಿದ್ದಾರೆ. ಇಂತಹ ವಿಡಿಯೋ ಹಾಡುಗಳನ್ನು ಶೇರ್ ಮಾಡಿ ಧರ್ಮದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಬೇಡಿ ಎಂದು ಕ್ರಿಸ್ಟೋಫರ್ ಗೆ ಎಚ್ಚರಿಕೆ ನೀಡಿದ್ದಾರೆ.

ಈ ಆಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ರಾಜೇಂದ್ರನ್ ಅವರನ್ನು ಗ್ರೇಟರ್ ಚೆನ್ನೈ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಅವರು ಅಮಾನತುಗೊಳಿಸಿದ್ದಾರೆ.ರಾಜೇಂದ್ರನ್ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲಾಗಿದೆ.

ರಾಜೇಂದ್ರನ್ ಅವರು ಸರ್ಕಾರಿ ನೌಕರನಾಗಿದ್ದು, ಧರ್ಮದ ವಿರುದ್ಧ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಮತ್ತು ಇದು ಸ್ವೀಕಾರಾರ್ಹವಲ್ಲ. ವಿವಾದಾತ್ಮಕ  ಹೇಳಿಕೆಯ ಹಿನ್ನೆಲೆ ಪೊಲೀಸ್ ಇನ್ಸ್ಪೆಕ್ಟರ್ ರಾಜೇಂದ್ರನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಗ್ರೇಟರ್ ಚೆನ್ನೈ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಹೇಳಿದ್ದಾರೆ.

ಇದನ್ನು ಓದಿ: ಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...