Homeಮುಖಪುಟಮುಸ್ಲಿಮರು, ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

ಮುಸ್ಲಿಮರು, ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

- Advertisement -
- Advertisement -

ವಾಟ್ಸಾಪ್ ಗ್ರೂಪ್ ನಲ್ಲಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಸಂದೇಶ ಕಳುಹಿಸಿದ  ಆರೋಪದ ಮೇಲೆ ಚೆನ್ನೈನಲ್ಲಿ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಚೆನ್ನೈನ ಪುಲಿಯಾಂತೋಪ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ತನಿಖಾ ಇನ್ಸ್‌ಪೆಕ್ಟರ್ ಪಿ ರಾಜೇಂದ್ರನ್, ಕ್ರಿಶ್ಚಿಯನ್ ಮತ್ತು ಮುಸ್ಲಿಮರ ವಿರುದ್ಧ ವಾಟ್ಸಾಪ್ ಗ್ರೂಪ್‌ನಲ್ಲಿ ಆಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ವಾಟ್ಸಾಪ್  ಗ್ರೂಪ್ ನಲ್ಲಿ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಕ್ರಿಸ್ಟೋಫರ್ ಎಂಬವರು ತಮಿಳುನಾಡಿನ ಹಿಂದಿನ ಎಐಎಡಿಎಂಕೆ ಆಡಳಿತ, ಬಿಜೆಪಿ ಮತ್ತು ರಥಯಾತ್ರೆಯನ್ನು ಟೀಕಿಸುವ ಸಾಮಾಜಿಕ ಕಾರ್ಯಕರ್ತ ಎಸ್ ಶಿವದಾಸ್ ಅವರ ವೀಡಿಯೊ ಹಾಡನ್ನು ಹಂಚಿಕೊಂಡಿದ್ದರು. ತಮಿಳುನಾಡಿನಲ್ಲಿ ರಾಮರಾಜ್ಯ (ರಾಮನ ಆಳ್ವಿಕೆ) ನಡೆಯುವುದಿಲ್ಲ ಎಂಬ ಶಿವದಾಸ್ ಅವರ ವೀಡಿಯೊ ಹಾಡನ್ನು ಕೂಡ  ಕ್ರಿಸ್ಟೋಫರ್ ಹಂಚಿಕೊಂಡಿದ್ದರು ಎನ್ನಲಾಗಿದೆ.

ಇದಕ್ಕೆ ಪ್ರತಿಯಾಗಿ ಆಡಿಯೋ ಸಂದೇಶದಲ್ಲಿ, ರಾಜೇಂದ್ರನ್, ಇದು ಭಾರತ. ನಾವು ಮಸೀದಿಯನ್ನು ಕೆಡವಿ ರಾಮಜನ್ಮಭೂಮಿಯಲ್ಲಿ ಮಂದಿರ ಕಟ್ಟಿದ್ದೇವೆ. ಇದು ಭಾರತ ಮತ್ತು ಇದು ಸಾಧ್ಯ. ದೇವಾಲಯಗಳಲ್ಲಿ ಪ್ರಾರ್ಥನೆಗಳನ್ನು ಮಾಡಲಾಗುತ್ತದೆ, ಅಡಿಗಲ್ಲುಗಳನ್ನು ಹಾಕಲಾಗುತ್ತದೆ, ಮತ್ತು ನಾವು ಸಂಸತ್ತಿನಲ್ಲಿ ಸೆಂಗೋಲ್‌ ನ್ನು ಇಡುತ್ತೇವೆ. ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ನಮ್ಮನ್ನು ತಡೆಯಲು ಪ್ರಯತ್ನಿಸಲಿ. ಇಲ್ಲವಾದರೆ ಅವರು ಪಾಕಿಸ್ತಾನ ಅಥವಾ ಸೌದಿ ಅರೇಬಿಯಾಕ್ಕೆ ಹೋಗಿ ಎಂದು ರಾಜೇಂದ್ರನ್  ವಾಟ್ಸಾಪ್ ಗ್ರೂಪ್‌ಗೆ ಕಳುಹಿಸಿದ ಆಡಿಯೋ ಸಂದೇಶದಲ್ಲಿ ಹೇಳಿದ್ದರು.

ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವುದರಿಂದ ರಾಮರಾಜ್ಯ (ಭಗವಾನ್ ರಾಮನ ಆಳ್ವಿಕೆ) ಖಂಡಿತವಾಗಿಯೂ ಸಂಭವಿಸುತ್ತದೆ ಎಂದು ರಾಜೇಂದ್ರನ್ ಹೇಳಿದ್ದಾರೆ. ಇಂತಹ ವಿಡಿಯೋ ಹಾಡುಗಳನ್ನು ಶೇರ್ ಮಾಡಿ ಧರ್ಮದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಬೇಡಿ ಎಂದು ಕ್ರಿಸ್ಟೋಫರ್ ಗೆ ಎಚ್ಚರಿಕೆ ನೀಡಿದ್ದಾರೆ.

ಈ ಆಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ರಾಜೇಂದ್ರನ್ ಅವರನ್ನು ಗ್ರೇಟರ್ ಚೆನ್ನೈ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಅವರು ಅಮಾನತುಗೊಳಿಸಿದ್ದಾರೆ.ರಾಜೇಂದ್ರನ್ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲಾಗಿದೆ.

ರಾಜೇಂದ್ರನ್ ಅವರು ಸರ್ಕಾರಿ ನೌಕರನಾಗಿದ್ದು, ಧರ್ಮದ ವಿರುದ್ಧ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಮತ್ತು ಇದು ಸ್ವೀಕಾರಾರ್ಹವಲ್ಲ. ವಿವಾದಾತ್ಮಕ  ಹೇಳಿಕೆಯ ಹಿನ್ನೆಲೆ ಪೊಲೀಸ್ ಇನ್ಸ್ಪೆಕ್ಟರ್ ರಾಜೇಂದ್ರನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಗ್ರೇಟರ್ ಚೆನ್ನೈ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಹೇಳಿದ್ದಾರೆ.

ಇದನ್ನು ಓದಿ: ಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....