Homeಮುಖಪುಟಮುಸ್ಲಿಮರು, ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

ಮುಸ್ಲಿಮರು, ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

- Advertisement -
- Advertisement -

ವಾಟ್ಸಾಪ್ ಗ್ರೂಪ್ ನಲ್ಲಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಸಂದೇಶ ಕಳುಹಿಸಿದ  ಆರೋಪದ ಮೇಲೆ ಚೆನ್ನೈನಲ್ಲಿ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಚೆನ್ನೈನ ಪುಲಿಯಾಂತೋಪ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ತನಿಖಾ ಇನ್ಸ್‌ಪೆಕ್ಟರ್ ಪಿ ರಾಜೇಂದ್ರನ್, ಕ್ರಿಶ್ಚಿಯನ್ ಮತ್ತು ಮುಸ್ಲಿಮರ ವಿರುದ್ಧ ವಾಟ್ಸಾಪ್ ಗ್ರೂಪ್‌ನಲ್ಲಿ ಆಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ವಾಟ್ಸಾಪ್  ಗ್ರೂಪ್ ನಲ್ಲಿ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಕ್ರಿಸ್ಟೋಫರ್ ಎಂಬವರು ತಮಿಳುನಾಡಿನ ಹಿಂದಿನ ಎಐಎಡಿಎಂಕೆ ಆಡಳಿತ, ಬಿಜೆಪಿ ಮತ್ತು ರಥಯಾತ್ರೆಯನ್ನು ಟೀಕಿಸುವ ಸಾಮಾಜಿಕ ಕಾರ್ಯಕರ್ತ ಎಸ್ ಶಿವದಾಸ್ ಅವರ ವೀಡಿಯೊ ಹಾಡನ್ನು ಹಂಚಿಕೊಂಡಿದ್ದರು. ತಮಿಳುನಾಡಿನಲ್ಲಿ ರಾಮರಾಜ್ಯ (ರಾಮನ ಆಳ್ವಿಕೆ) ನಡೆಯುವುದಿಲ್ಲ ಎಂಬ ಶಿವದಾಸ್ ಅವರ ವೀಡಿಯೊ ಹಾಡನ್ನು ಕೂಡ  ಕ್ರಿಸ್ಟೋಫರ್ ಹಂಚಿಕೊಂಡಿದ್ದರು ಎನ್ನಲಾಗಿದೆ.

ಇದಕ್ಕೆ ಪ್ರತಿಯಾಗಿ ಆಡಿಯೋ ಸಂದೇಶದಲ್ಲಿ, ರಾಜೇಂದ್ರನ್, ಇದು ಭಾರತ. ನಾವು ಮಸೀದಿಯನ್ನು ಕೆಡವಿ ರಾಮಜನ್ಮಭೂಮಿಯಲ್ಲಿ ಮಂದಿರ ಕಟ್ಟಿದ್ದೇವೆ. ಇದು ಭಾರತ ಮತ್ತು ಇದು ಸಾಧ್ಯ. ದೇವಾಲಯಗಳಲ್ಲಿ ಪ್ರಾರ್ಥನೆಗಳನ್ನು ಮಾಡಲಾಗುತ್ತದೆ, ಅಡಿಗಲ್ಲುಗಳನ್ನು ಹಾಕಲಾಗುತ್ತದೆ, ಮತ್ತು ನಾವು ಸಂಸತ್ತಿನಲ್ಲಿ ಸೆಂಗೋಲ್‌ ನ್ನು ಇಡುತ್ತೇವೆ. ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ನಮ್ಮನ್ನು ತಡೆಯಲು ಪ್ರಯತ್ನಿಸಲಿ. ಇಲ್ಲವಾದರೆ ಅವರು ಪಾಕಿಸ್ತಾನ ಅಥವಾ ಸೌದಿ ಅರೇಬಿಯಾಕ್ಕೆ ಹೋಗಿ ಎಂದು ರಾಜೇಂದ್ರನ್  ವಾಟ್ಸಾಪ್ ಗ್ರೂಪ್‌ಗೆ ಕಳುಹಿಸಿದ ಆಡಿಯೋ ಸಂದೇಶದಲ್ಲಿ ಹೇಳಿದ್ದರು.

ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವುದರಿಂದ ರಾಮರಾಜ್ಯ (ಭಗವಾನ್ ರಾಮನ ಆಳ್ವಿಕೆ) ಖಂಡಿತವಾಗಿಯೂ ಸಂಭವಿಸುತ್ತದೆ ಎಂದು ರಾಜೇಂದ್ರನ್ ಹೇಳಿದ್ದಾರೆ. ಇಂತಹ ವಿಡಿಯೋ ಹಾಡುಗಳನ್ನು ಶೇರ್ ಮಾಡಿ ಧರ್ಮದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಬೇಡಿ ಎಂದು ಕ್ರಿಸ್ಟೋಫರ್ ಗೆ ಎಚ್ಚರಿಕೆ ನೀಡಿದ್ದಾರೆ.

ಈ ಆಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ರಾಜೇಂದ್ರನ್ ಅವರನ್ನು ಗ್ರೇಟರ್ ಚೆನ್ನೈ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಅವರು ಅಮಾನತುಗೊಳಿಸಿದ್ದಾರೆ.ರಾಜೇಂದ್ರನ್ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲಾಗಿದೆ.

ರಾಜೇಂದ್ರನ್ ಅವರು ಸರ್ಕಾರಿ ನೌಕರನಾಗಿದ್ದು, ಧರ್ಮದ ವಿರುದ್ಧ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಮತ್ತು ಇದು ಸ್ವೀಕಾರಾರ್ಹವಲ್ಲ. ವಿವಾದಾತ್ಮಕ  ಹೇಳಿಕೆಯ ಹಿನ್ನೆಲೆ ಪೊಲೀಸ್ ಇನ್ಸ್ಪೆಕ್ಟರ್ ರಾಜೇಂದ್ರನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಗ್ರೇಟರ್ ಚೆನ್ನೈ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಹೇಳಿದ್ದಾರೆ.

ಇದನ್ನು ಓದಿ: ಪ್ರಧಾನಿ, ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: 8 ಯುಟ್ಯೂಬ್ ಚಾನೆಲ್‌ ಬ್ಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...