Homeಮುಖಪುಟಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

- Advertisement -
- Advertisement -

ಚೆನ್ನೈನ ಮಹಿಳಾ ನ್ಯಾಯಾಲಯವು ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಜ್ಞಾನಶೇಖರನ್ ತಪ್ಪಿತಸ್ಥ ಎಂದು ಬುಧವಾರ (ಮೇ.28) ಘೋಷಿಸಿದೆ.

ಜ್ಞಾನಶೇಖರನ್ ವಿರುದ್ಧದ ಎಲ್ಲಾ 11 ಆರೋಪಗಳು ವಿಧಿವಿಜ್ಞಾನ ಸಾಕ್ಷ್ಯಗಳು ಮತ್ತು ಇತರ ಪುರಾವೆಗಳ ಮೂಲಕ ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣವು ಕಳೆದ ವರ್ಷ ಡಿಸೆಂಬರ್ 23ರಂದು ರಾತ್ರಿ 8 ಗಂಟೆ ಸುಮಾರಿಗೆ ನಡೆದ ಘಟನೆಗೆ ಸಂಬಂಧಿಸಿದೆ. ಅಂದು ಕ್ಯಾಂಪಸ್ ಬಳಿ ಬಿರಿಯಾನಿ ಅಂಗಡಿ ನಡೆಸುತ್ತಿದ್ದ ಕೊಟ್ಟೂರು ನಿವಾಸಿ ಜ್ಞಾನಶೇಖರನ್, ವಿಶ್ವವಿದ್ಯಾಲಯದ ಆವರಣಕ್ಕೆ ನುಗ್ಗಿ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯ ಪುರುಷ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗ್ರೇಟರ್ ಚೆನ್ನೈ ಪೊಲೀಸರು ಜ್ಞಾನಶೇಖರನ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಪೊಲೀಸರ ಪ್ರಕಾರ, ಆರೋಪಿ ತನ್ನ ದುಷ್ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನನ್ನು ಬ್ಲ್ಯಾಕ್‌ಮೇಲ್ ಮಾಡಿದ್ದ ಎನ್ನಲಾಗಿದೆ.

ಜ್ಞಾನಶೇಖರನ್ ಬಂಧನದ ನಂತರ, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಕಾರ್ಯಕರ್ತರೊಂದಿಗೆ ಆತ ಇದ್ದ ಫೋಟೋಗಳು ವೈರಲ್ ಆಗಿತ್ತು. ಇದು ಪ್ರಕರಣ ರಾಜಕೀಯ ತಿರುವು ಪಡೆಯಲು ಕಾರಣವಾಗಿತ್ತು. ಡಿಎಂಕೆ ಆರಂಭದಲ್ಲಿ ಆರೋಪಿಯೊಂದಿಗಿನ ಸಂಬಂಧವನ್ನು ನಿರಾಕರಿಸಿದರೂ, ವಿರೋಧ ಪಕ್ಷಗಳು ಆತ ಡಿಎಂಕೆ ಪಕ್ಷದಲ್ಲಿ ಸ್ಥಾನ ಹೊಂದಿದ್ದಾರೆಂದು ಆರೋಪಿಸಿ ಫೋಟೋಗಳನ್ನು ಬಿಡುಗಡೆ ಮಾಡಿತ್ತು.

ಬಿಜೆಪಿ ರಾಜ್ಯ ಘಟಕದ ನಾಯಕ ಕೆ. ಅಣ್ಣಾಮಲೈ ಅವರು ಜ್ಞಾನಶೇಖರನ್ ಡಿಎಂಕೆ ವಿದ್ಯಾರ್ಥಿ ವಿಭಾಗದ ಪದಾಧಿಕಾರಿ ಎಂದು ಆರೋಪಿಸಿದ್ದರು ಮತ್ತು ಡಿಎಂಕೆ ನಾಯಕರೊಂದಿಗೆ ಆರೋಪಿ ಇದ್ದ ಫೋಟೋಗಳನ್ನು ಹಂಚಿಕೊಂಡಿದ್ದರು.

ತಮಿಳುನಾಡು ಕಾನೂನು ಸಚಿವ ಎಸ್. ರೆಗುಪತಿ ಅವರು ಜ್ಞಾನಶೇಖರನ್ ಪಕ್ಷದ ಪದಾಧಿಕಾರಿಯಲ್ಲ ಎಂದು ಹೇಳುವ ಮೂಲಕ ಈ ಆರೋಪಗಳನ್ನು ನಿರಾಕರಿಸಿದ್ದರು. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ ವಿಧಾನಸಭೆಯಲ್ಲಿ ಆರೋಪಿ ಡಿಎಂಕೆ ಸದಸ್ಯರಲ್ಲದಿದ್ದರೂ, ಅವರು ಡಿಎಂಕೆ ಪರ ಸಹಾನುಭೂತಿ ಹೊಂದಿದ್ದರು ಎಂದು ಸ್ಪಷ್ಟಪಡಿಸಿದ್ದರು.

“ಚೆನ್ನೈ ವಿದ್ಯಾರ್ಥಿನಿಯ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿ ಡಿಎಂಕೆ ಸದಸ್ಯರಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಅವರು ಡಿಎಂಕೆ ಬೆಂಬಲಿಗರು, ನಾವು ಅದನ್ನು ನಿರಾಕರಿಸುವುದಿಲ್ಲ” ಎಂದು ಸ್ಟಾಲಿನ್ ಹೇಳಿದ್ದರು.

ಈ ಹಿಂದೆ ಜ್ಞಾನಶೇಖರನ್ ಅವರು ಪ್ರಕರಣದಿಂದ ತನ್ನನ್ನು ಮುಕ್ತಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ತನ್ನ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಅನುಮಾನದ ಮೇಲೆ ಬಂಧಿಸಲಾಗಿದೆ ಎಂದು ಹೇಳಿದ್ದರು. ತಮಿಳುನಾಡು ಪೊಲೀಸರು ಆರೋಪಿಯ ಅರ್ಜಿಗೆ ಪ್ರತಿ ಅರ್ಜಿ ಸಲ್ಲಿಸಿದ್ದರು. ಎರಡೂ ಕಡೆಯ ವಾದಗಳನ್ನು ನ್ಯಾಯಾಲಯ ಆಲಿಸಿತ್ತು.

ಮದ್ರಾಸ್ ಹೈಕೋರ್ಟ್ ನಿರ್ದೇಶನದಂತೆ, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ನಂತರ ಎಸ್‌ಐಟಿ ಮಹಿಳಾ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು.

ಮಹಿಳಾ ನ್ಯಾಯಾಲಯವು ಜ್ಞಾನಶೇಖರನ್ ವಿರುದ್ಧ ಲೈಂಗಿಕ ಕಿರುಕುಳ, ಬಿಎನ್‌ಎಸ್‌ಎಸ್, ಐಟಿ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳಡಿ ಆರೋಪಗಳನ್ನು ಹೊರಿಸಿದೆ.

ತನ್ನ ತಾಯಿಯ ಅನಾರೋಗ್ಯದ ಕಾರಣ ನೀಡಿ ಶಿಕ್ಷೆಯಲ್ಲಿ ವಿನಾಯ್ತಿ ನೀಡುವಂತೆ ಜ್ಞಾನಶೇಖರನ್ ಕೋರಿದ್ದಾರೆ. ಜೂನ್ 2ರಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...