Homeಮುಖಪುಟಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

- Advertisement -
- Advertisement -

ಚೆನ್ನೈನ ಮಹಿಳಾ ನ್ಯಾಯಾಲಯವು ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಜ್ಞಾನಶೇಖರನ್ ತಪ್ಪಿತಸ್ಥ ಎಂದು ಬುಧವಾರ (ಮೇ.28) ಘೋಷಿಸಿದೆ.

ಜ್ಞಾನಶೇಖರನ್ ವಿರುದ್ಧದ ಎಲ್ಲಾ 11 ಆರೋಪಗಳು ವಿಧಿವಿಜ್ಞಾನ ಸಾಕ್ಷ್ಯಗಳು ಮತ್ತು ಇತರ ಪುರಾವೆಗಳ ಮೂಲಕ ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣವು ಕಳೆದ ವರ್ಷ ಡಿಸೆಂಬರ್ 23ರಂದು ರಾತ್ರಿ 8 ಗಂಟೆ ಸುಮಾರಿಗೆ ನಡೆದ ಘಟನೆಗೆ ಸಂಬಂಧಿಸಿದೆ. ಅಂದು ಕ್ಯಾಂಪಸ್ ಬಳಿ ಬಿರಿಯಾನಿ ಅಂಗಡಿ ನಡೆಸುತ್ತಿದ್ದ ಕೊಟ್ಟೂರು ನಿವಾಸಿ ಜ್ಞಾನಶೇಖರನ್, ವಿಶ್ವವಿದ್ಯಾಲಯದ ಆವರಣಕ್ಕೆ ನುಗ್ಗಿ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯ ಪುರುಷ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗ್ರೇಟರ್ ಚೆನ್ನೈ ಪೊಲೀಸರು ಜ್ಞಾನಶೇಖರನ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಪೊಲೀಸರ ಪ್ರಕಾರ, ಆರೋಪಿ ತನ್ನ ದುಷ್ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನನ್ನು ಬ್ಲ್ಯಾಕ್‌ಮೇಲ್ ಮಾಡಿದ್ದ ಎನ್ನಲಾಗಿದೆ.

ಜ್ಞಾನಶೇಖರನ್ ಬಂಧನದ ನಂತರ, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಕಾರ್ಯಕರ್ತರೊಂದಿಗೆ ಆತ ಇದ್ದ ಫೋಟೋಗಳು ವೈರಲ್ ಆಗಿತ್ತು. ಇದು ಪ್ರಕರಣ ರಾಜಕೀಯ ತಿರುವು ಪಡೆಯಲು ಕಾರಣವಾಗಿತ್ತು. ಡಿಎಂಕೆ ಆರಂಭದಲ್ಲಿ ಆರೋಪಿಯೊಂದಿಗಿನ ಸಂಬಂಧವನ್ನು ನಿರಾಕರಿಸಿದರೂ, ವಿರೋಧ ಪಕ್ಷಗಳು ಆತ ಡಿಎಂಕೆ ಪಕ್ಷದಲ್ಲಿ ಸ್ಥಾನ ಹೊಂದಿದ್ದಾರೆಂದು ಆರೋಪಿಸಿ ಫೋಟೋಗಳನ್ನು ಬಿಡುಗಡೆ ಮಾಡಿತ್ತು.

ಬಿಜೆಪಿ ರಾಜ್ಯ ಘಟಕದ ನಾಯಕ ಕೆ. ಅಣ್ಣಾಮಲೈ ಅವರು ಜ್ಞಾನಶೇಖರನ್ ಡಿಎಂಕೆ ವಿದ್ಯಾರ್ಥಿ ವಿಭಾಗದ ಪದಾಧಿಕಾರಿ ಎಂದು ಆರೋಪಿಸಿದ್ದರು ಮತ್ತು ಡಿಎಂಕೆ ನಾಯಕರೊಂದಿಗೆ ಆರೋಪಿ ಇದ್ದ ಫೋಟೋಗಳನ್ನು ಹಂಚಿಕೊಂಡಿದ್ದರು.

ತಮಿಳುನಾಡು ಕಾನೂನು ಸಚಿವ ಎಸ್. ರೆಗುಪತಿ ಅವರು ಜ್ಞಾನಶೇಖರನ್ ಪಕ್ಷದ ಪದಾಧಿಕಾರಿಯಲ್ಲ ಎಂದು ಹೇಳುವ ಮೂಲಕ ಈ ಆರೋಪಗಳನ್ನು ನಿರಾಕರಿಸಿದ್ದರು. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ ವಿಧಾನಸಭೆಯಲ್ಲಿ ಆರೋಪಿ ಡಿಎಂಕೆ ಸದಸ್ಯರಲ್ಲದಿದ್ದರೂ, ಅವರು ಡಿಎಂಕೆ ಪರ ಸಹಾನುಭೂತಿ ಹೊಂದಿದ್ದರು ಎಂದು ಸ್ಪಷ್ಟಪಡಿಸಿದ್ದರು.

“ಚೆನ್ನೈ ವಿದ್ಯಾರ್ಥಿನಿಯ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿ ಡಿಎಂಕೆ ಸದಸ್ಯರಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಅವರು ಡಿಎಂಕೆ ಬೆಂಬಲಿಗರು, ನಾವು ಅದನ್ನು ನಿರಾಕರಿಸುವುದಿಲ್ಲ” ಎಂದು ಸ್ಟಾಲಿನ್ ಹೇಳಿದ್ದರು.

ಈ ಹಿಂದೆ ಜ್ಞಾನಶೇಖರನ್ ಅವರು ಪ್ರಕರಣದಿಂದ ತನ್ನನ್ನು ಮುಕ್ತಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ತನ್ನ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಅನುಮಾನದ ಮೇಲೆ ಬಂಧಿಸಲಾಗಿದೆ ಎಂದು ಹೇಳಿದ್ದರು. ತಮಿಳುನಾಡು ಪೊಲೀಸರು ಆರೋಪಿಯ ಅರ್ಜಿಗೆ ಪ್ರತಿ ಅರ್ಜಿ ಸಲ್ಲಿಸಿದ್ದರು. ಎರಡೂ ಕಡೆಯ ವಾದಗಳನ್ನು ನ್ಯಾಯಾಲಯ ಆಲಿಸಿತ್ತು.

ಮದ್ರಾಸ್ ಹೈಕೋರ್ಟ್ ನಿರ್ದೇಶನದಂತೆ, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ನಂತರ ಎಸ್‌ಐಟಿ ಮಹಿಳಾ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು.

ಮಹಿಳಾ ನ್ಯಾಯಾಲಯವು ಜ್ಞಾನಶೇಖರನ್ ವಿರುದ್ಧ ಲೈಂಗಿಕ ಕಿರುಕುಳ, ಬಿಎನ್‌ಎಸ್‌ಎಸ್, ಐಟಿ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳಡಿ ಆರೋಪಗಳನ್ನು ಹೊರಿಸಿದೆ.

ತನ್ನ ತಾಯಿಯ ಅನಾರೋಗ್ಯದ ಕಾರಣ ನೀಡಿ ಶಿಕ್ಷೆಯಲ್ಲಿ ವಿನಾಯ್ತಿ ನೀಡುವಂತೆ ಜ್ಞಾನಶೇಖರನ್ ಕೋರಿದ್ದಾರೆ. ಜೂನ್ 2ರಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...