Homeಮುಖಪುಟಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

- Advertisement -
- Advertisement -

ಚೆನ್ನೈನ ಮಹಿಳಾ ನ್ಯಾಯಾಲಯವು ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಜ್ಞಾನಶೇಖರನ್ ತಪ್ಪಿತಸ್ಥ ಎಂದು ಬುಧವಾರ (ಮೇ.28) ಘೋಷಿಸಿದೆ.

ಜ್ಞಾನಶೇಖರನ್ ವಿರುದ್ಧದ ಎಲ್ಲಾ 11 ಆರೋಪಗಳು ವಿಧಿವಿಜ್ಞಾನ ಸಾಕ್ಷ್ಯಗಳು ಮತ್ತು ಇತರ ಪುರಾವೆಗಳ ಮೂಲಕ ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣವು ಕಳೆದ ವರ್ಷ ಡಿಸೆಂಬರ್ 23ರಂದು ರಾತ್ರಿ 8 ಗಂಟೆ ಸುಮಾರಿಗೆ ನಡೆದ ಘಟನೆಗೆ ಸಂಬಂಧಿಸಿದೆ. ಅಂದು ಕ್ಯಾಂಪಸ್ ಬಳಿ ಬಿರಿಯಾನಿ ಅಂಗಡಿ ನಡೆಸುತ್ತಿದ್ದ ಕೊಟ್ಟೂರು ನಿವಾಸಿ ಜ್ಞಾನಶೇಖರನ್, ವಿಶ್ವವಿದ್ಯಾಲಯದ ಆವರಣಕ್ಕೆ ನುಗ್ಗಿ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯ ಪುರುಷ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗ್ರೇಟರ್ ಚೆನ್ನೈ ಪೊಲೀಸರು ಜ್ಞಾನಶೇಖರನ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಪೊಲೀಸರ ಪ್ರಕಾರ, ಆರೋಪಿ ತನ್ನ ದುಷ್ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನನ್ನು ಬ್ಲ್ಯಾಕ್‌ಮೇಲ್ ಮಾಡಿದ್ದ ಎನ್ನಲಾಗಿದೆ.

ಜ್ಞಾನಶೇಖರನ್ ಬಂಧನದ ನಂತರ, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಕಾರ್ಯಕರ್ತರೊಂದಿಗೆ ಆತ ಇದ್ದ ಫೋಟೋಗಳು ವೈರಲ್ ಆಗಿತ್ತು. ಇದು ಪ್ರಕರಣ ರಾಜಕೀಯ ತಿರುವು ಪಡೆಯಲು ಕಾರಣವಾಗಿತ್ತು. ಡಿಎಂಕೆ ಆರಂಭದಲ್ಲಿ ಆರೋಪಿಯೊಂದಿಗಿನ ಸಂಬಂಧವನ್ನು ನಿರಾಕರಿಸಿದರೂ, ವಿರೋಧ ಪಕ್ಷಗಳು ಆತ ಡಿಎಂಕೆ ಪಕ್ಷದಲ್ಲಿ ಸ್ಥಾನ ಹೊಂದಿದ್ದಾರೆಂದು ಆರೋಪಿಸಿ ಫೋಟೋಗಳನ್ನು ಬಿಡುಗಡೆ ಮಾಡಿತ್ತು.

ಬಿಜೆಪಿ ರಾಜ್ಯ ಘಟಕದ ನಾಯಕ ಕೆ. ಅಣ್ಣಾಮಲೈ ಅವರು ಜ್ಞಾನಶೇಖರನ್ ಡಿಎಂಕೆ ವಿದ್ಯಾರ್ಥಿ ವಿಭಾಗದ ಪದಾಧಿಕಾರಿ ಎಂದು ಆರೋಪಿಸಿದ್ದರು ಮತ್ತು ಡಿಎಂಕೆ ನಾಯಕರೊಂದಿಗೆ ಆರೋಪಿ ಇದ್ದ ಫೋಟೋಗಳನ್ನು ಹಂಚಿಕೊಂಡಿದ್ದರು.

ತಮಿಳುನಾಡು ಕಾನೂನು ಸಚಿವ ಎಸ್. ರೆಗುಪತಿ ಅವರು ಜ್ಞಾನಶೇಖರನ್ ಪಕ್ಷದ ಪದಾಧಿಕಾರಿಯಲ್ಲ ಎಂದು ಹೇಳುವ ಮೂಲಕ ಈ ಆರೋಪಗಳನ್ನು ನಿರಾಕರಿಸಿದ್ದರು. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ ವಿಧಾನಸಭೆಯಲ್ಲಿ ಆರೋಪಿ ಡಿಎಂಕೆ ಸದಸ್ಯರಲ್ಲದಿದ್ದರೂ, ಅವರು ಡಿಎಂಕೆ ಪರ ಸಹಾನುಭೂತಿ ಹೊಂದಿದ್ದರು ಎಂದು ಸ್ಪಷ್ಟಪಡಿಸಿದ್ದರು.

“ಚೆನ್ನೈ ವಿದ್ಯಾರ್ಥಿನಿಯ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿ ಡಿಎಂಕೆ ಸದಸ್ಯರಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಅವರು ಡಿಎಂಕೆ ಬೆಂಬಲಿಗರು, ನಾವು ಅದನ್ನು ನಿರಾಕರಿಸುವುದಿಲ್ಲ” ಎಂದು ಸ್ಟಾಲಿನ್ ಹೇಳಿದ್ದರು.

ಈ ಹಿಂದೆ ಜ್ಞಾನಶೇಖರನ್ ಅವರು ಪ್ರಕರಣದಿಂದ ತನ್ನನ್ನು ಮುಕ್ತಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ತನ್ನ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಅನುಮಾನದ ಮೇಲೆ ಬಂಧಿಸಲಾಗಿದೆ ಎಂದು ಹೇಳಿದ್ದರು. ತಮಿಳುನಾಡು ಪೊಲೀಸರು ಆರೋಪಿಯ ಅರ್ಜಿಗೆ ಪ್ರತಿ ಅರ್ಜಿ ಸಲ್ಲಿಸಿದ್ದರು. ಎರಡೂ ಕಡೆಯ ವಾದಗಳನ್ನು ನ್ಯಾಯಾಲಯ ಆಲಿಸಿತ್ತು.

ಮದ್ರಾಸ್ ಹೈಕೋರ್ಟ್ ನಿರ್ದೇಶನದಂತೆ, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ನಂತರ ಎಸ್‌ಐಟಿ ಮಹಿಳಾ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು.

ಮಹಿಳಾ ನ್ಯಾಯಾಲಯವು ಜ್ಞಾನಶೇಖರನ್ ವಿರುದ್ಧ ಲೈಂಗಿಕ ಕಿರುಕುಳ, ಬಿಎನ್‌ಎಸ್‌ಎಸ್, ಐಟಿ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳಡಿ ಆರೋಪಗಳನ್ನು ಹೊರಿಸಿದೆ.

ತನ್ನ ತಾಯಿಯ ಅನಾರೋಗ್ಯದ ಕಾರಣ ನೀಡಿ ಶಿಕ್ಷೆಯಲ್ಲಿ ವಿನಾಯ್ತಿ ನೀಡುವಂತೆ ಜ್ಞಾನಶೇಖರನ್ ಕೋರಿದ್ದಾರೆ. ಜೂನ್ 2ರಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...