Homeದಲಿತ್ ಫೈಲ್ಸ್ಚೆನ್ನೈ| ಅನ್ಯಜಾತಿ ಯುವತಿಯನ್ನು ಭೇಟಿಯಾದ ದಲಿತ ಅಪ್ರಾಪ್ತನನ್ನು ವಿವಸ್ತ್ರಗೊಳಿಸಿ ಹಲ್ಲೆ

ಚೆನ್ನೈ| ಅನ್ಯಜಾತಿ ಯುವತಿಯನ್ನು ಭೇಟಿಯಾದ ದಲಿತ ಅಪ್ರಾಪ್ತನನ್ನು ವಿವಸ್ತ್ರಗೊಳಿಸಿ ಹಲ್ಲೆ

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ತಡೆಗಟ್ಟುವ ಸಾಂವಿಧಾನಿಕ ರಕ್ಷಣೆ ಮತ್ತು ಪ್ರಬಲ ಕಾನೂನುಗಳ ಹೊರತಾಗಿಯೂ, ದೇಶದಾದ್ಯಂತ ದಲಿತರು ವ್ಯಾಪಕ ಕಿರುಕುಳ ಎದುರಿಸುತ್ತಿದ್ದಾರೆ. ಸಾಮಾಜಿಕವಾಗಿ ಅಂಚಿಗೆ ತಳ್ಳಲ್ಪಡುತ್ತಿದ್ದಾರೆ. ದಲಿತರ ಮೇಲೆ ಹೆಚ್ಚಾಗಿ ಹಿಂಸೆ, ಸಾಮಾಜಿಕ ಬಹಿಷ್ಕಾರ ಮತ್ತು ಆರ್ಥಿಕ ಶೋಷಣೆಗೆ ಒಳಪಡಿಸಲಾಗುತ್ತದೆ. ಪರಿಶಿಷ್ಟ ಸಮುದಾಯದ ಮೇಲೆ ನಡೆಯುತ್ತಿರುವ ನಿರಂತರ ಕಿರುಕುಳದ ಭಾಗವಾಗಿ 17 ವರ್ಷದ ಪರಿಶಿಷ್ಟ ಜಾತಿಯ ಹುಡುಗನನ್ನು ಅನ್ಯಜಾತಿಯ ಹುಡುಗಿಯನ್ನು ಭೇಟಿಯಾದ ಕಾರಣಕ್ಕಾಗಿ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದು, ಜಾತಿ ಹೆಸರಿಡಿದು ನಿಂದಿಸಲಾಗಿದೆ.

ಶುಕ್ರವಾರ (ಸೆಪ್ಟೆಂಬರ್ 12) ತಮಿಳುನಾಡಿನ ಚೆನ್ನೈನ ಸೆಕ್ರೆಟರಿಯೇಟ್ ಕಾಲೋನಿಯಲ್ಲಿರುವ ತನ್ನ ಸಂಬಂಧಿಕರ ಮನೆಯಲ್ಲಿ ಬಾಲಕ ಹುಡುಗಿಯನ್ನು ಭೇಟಿಯಾಗಲು ಹೋಗಿದ್ದ.

ಆರೋಪಿಗಳನ್ನು ಬಿಜೆಪಿಯ ಮಾಜಿ ಕಾರ್ಯಕರ್ತ ಎಂದು ಹೇಳಲಾಗುವ ಸರವಣನ್ ಮತ್ತು ಅವನ ಸಹೋದರ ಲೋಗೇಶ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಹುಡುಗಿಯ ಸಂಬಂಧಿಕರು ಹುಡುಗನನ್ನು ಒಂದು ಕೋಣೆಯಲ್ಲಿ ಬಂಧಿಸಿ, ನಂತರ ಸರವಣನ್ ಬಾಲಕನನ್ನು ಕರೆಸಿದರು. ಸಹೋದರನೊಂದಿಗೆ ಸೇರಿಕೊಂಡು ಹುಡುಗನ ಮೇಲೆ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪರಿಶಿಷ್ಟ ಜಾತಿ (ಆದಿ ದ್ರಾವಿಡರ್) ಸಮುದಾಯಕ್ಕೆ ಸೇರಿದ ಹುಡುಗ, ಅತ್ಯಂತ ಹಿಂದುಳಿದ ವರ್ಗ (ವನ್ನಿಯಾರ್) ಸಮುದಾಯದ ಹುಡುಗಿಯೊಂದಿಗೆ ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ. ಬೇರೆ ಬೇರೆ ಶಾಲೆಗಳಿಗೆ ಹೋದ ನಂತರವೂ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ.

“ಹುಡುಗನನ್ನು ಕೆಟ್ಟದಾಗಿ ಥಳಿಸಿ ಅವಮಾನಿಸಲಾಯಿತು. ಸರವಣನ್ ಅವನ ವಿರುದ್ಧ ಜಾತಿ ನಿಂದನೆಗಳನ್ನು ಮಾಡಿದ್ದಾನೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹದಿಹರೆಯದವರು ಈಗ ಕಿಲ್ಪಾಕ್ ವೈದ್ಯಕೀಯ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಜೊತೆಗೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ಹಲವು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಅಶ್ಲೀಲ ಕೃತ್ಯ, ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು, ಕೊಲೆಗೆ ಯತ್ನಿಸುವುದು ಮತ್ತು ಕ್ರಿಮಿನಲ್ ಬೆದರಿಕೆ ಆರೋಪಗಳು ಸೇರಿವೆ.

ತುಮಕೂರು ದಲಿತನ ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಭೂಮಿ, ಪರಿಹಾರ ನೀಡಲು ಹೋರಾಟಗಾರರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...