HomeUncategorized'ಮೈಚಾಂಗ್' ಹೊಡೆತಕ್ಕೆ ತತ್ತರಿಸಿದ ಚೆನ್ನೈ; ಮೃತರ ಸಂಖ್ಯೆ 12ಕ್ಕೆ ಏರಿಕೆ!

‘ಮೈಚಾಂಗ್’ ಹೊಡೆತಕ್ಕೆ ತತ್ತರಿಸಿದ ಚೆನ್ನೈ; ಮೃತರ ಸಂಖ್ಯೆ 12ಕ್ಕೆ ಏರಿಕೆ!

- Advertisement -
- Advertisement -

ಡಿಸೆಂಬರ್ 4 ಮತ್ತು 5ರಂದು ತಮಿಳುನಾಡಿನ ಉತ್ತರ ಕರಾವಳಿ ಪ್ರದೇಶಕ್ಕೆ ‘ಮೈಚಾಂಗ್ ಚಂಡಮಾರುತ’ ಅಪ್ಪಳಿಸಿದ್ದು, ಭಾರೀ ಮಳೆಗೆ ಚೆನ್ನೈ ನಗರ ಹಾಗೂ ಅಕ್ಕಪಕ್ಕದ ಜಿಲ್ಲೆಗಳು ತತ್ತರಿಸಿವೆ. ನಗರದ ಬಹುತೇಕ ರಸ್ತೆಗಳು ಹಾಗೂ ಜನವಸತಿ ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹಕ್ಕೆ ಸಿಲುಕಿರುವ ಜನರನ್ನು ಮೀನುಗಾರಿಕಾ ದೋಣಿಗಳು ಮತ್ತು ಕೃಷಿ ಟ್ರ್ಯಾಕ್ಟರ್‌ಗಳ ಮೂಲಕ ರಕ್ಷಿಸುವ ಕಾರ್ಯ ನಡೆಯುತ್ತಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಹನ್ನೆರಡು ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರವಾಹದಿಂದ ಗಾಯಗೊಂಡಿರುವ 11 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆನ್ನೈ ನಗರದಾದ್ಯಂತ ಎಲ್ಲ ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಹಲವಾರು ಜಿಲ್ಲಾ ವಿಪತ್ತು ಪ್ರತಿಕ್ರಿಯೆ ತಂಡಗಳನ್ನು (DDRT) ರಚಿಸಲಾಗಿದೆ.

ನಗರದ ಹೊರವಲಯದಲ್ಲಿರುವ ಮುತ್ಯಾಲಪೇಟೆ ಪ್ರದೇಶದಲ್ಲಿ 54 ಕುಟುಂಬಗಳನ್ನು ರಕ್ಷಿಸಲಾಗಿದ್ದು, ಹೆರಿಗೆಯಾದ ಮಹಿಳೆಯನ್ನು ನಗರದ ಸಾಲಿಗ್ರಾಮದಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ತಗ್ಗು ಪ್ರದೇಶದ 250ಕ್ಕೂ ಹೆಚ್ಚು ಜನರು ಕೊಟ್ಟೂರ್ಪುರಂನ ಶಾಲೆಯ ಆಶ್ರಯ ಪಡೆದಿದ್ದಾರೆ. ಮಳೆ ನೀರಿನಲ್ಲಿ ಸಿಲುಕಿದ್ದ ಬಸ್‌ನಲ್ಲಿದ್ದ 22 ಪ್ರಯಾಣಿಕರನ್ನು ಪಲ್ಲಾವರಂನ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಿರುವ ಪರಿಹಾರ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಚೆನ್ನೈನ ಚುಲೈ ಕಣ್ಣಪರ್ ನಲ್ಲಿ ಸ್ಥಾಪಿಸಿರುವ ಶಿಬಿರಕ್ಕೆ ಭೇಟಿ ನೀಡಿದ ಸಿಎಂ ಸ್ಟಾಲಿನ್, ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸಿದರು.

ಮಂಗಳವಾರ ಬೆಳಿಗ್ಗೆಯಿಂದ, ಚೆನ್ನೈನ ಹೆಚ್ಚಿನ ಭಾಗಗಳಲ್ಲಿ ಮಳೆ ಬಿಡುವು ಕೊಟ್ಟಿತ್ತು. ಈ ಸಂದರ್ಭದಲ್ಲಿ ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ರಕ್ಷಣಾ ಕಾರ್ಯಚರಣೆ ಮತ್ತು ಪರಿಹಾರ ಕಾರ್ಯವನ್ನು ಚುರುಕುಗೊಳಿಸಿದರು.

ಚೆನ್ನೈ ಕಾರ್ಪೊರೇಷನ್ ಪ್ರಧಾನ ಕಛೇರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರನ್ನು ರಕ್ಷಿಸಲು ಹಾಗೂ ಪರಿಹಾರ ಕಾರ್ಯಗಳಿಗಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

‘ಚೆನ್ನೈ ಸೇರಿದಂತೆ ಒಂಬತ್ತು ಚಂಡಮಾರುತ ಪೀಡಿತ ಜಿಲ್ಲೆಗಳಲ್ಲಿ ಸಾಕಷ್ಟು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ ಅಂದಾಜು 11 ಲಕ್ಷ ಆಹಾರ ಪ್ಯಾಕೆಟ್‌ಗಳು ಮತ್ತು ಒಂದು ಲಕ್ಷ ಹಾಲಿನ ಪ್ಯಾಕೆಟ್‌ಗಳನ್ನು ವಿತರಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

‘ಹಂತ ಹಂತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ. 2015ರ ಪ್ರವಾಹಕ್ಕೆ ಹೋಲಿಸಿದರೆ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ನಾವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ನಗರದ ಹೊರವಲಯದಲ್ಲಿರುವ ಚೆಂಬರಂಬಾಕ್ಕಂ ಜಲಾಶಯದಿಂದ ಅಡ್ಯಾರ್ ನದಿಗೆ ಮುನ್ಸೂಚನೆ ನೀಡದೆ ಒಂದು ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ್ದರಿಂದ 2015ರಲ್ಲಿ ಮಾನವ ನಿರ್ಮಿತ ಪ್ರವಾಹಕ್ಕೆ ಕಾರಣವಾಯಿತು. ಪ್ರಸ್ತುತ ಪರಿಸ್ಥಿತಿ ಹಾಗೂ ಧಾರಾಕಾರ ಮಳೆಯಿಂದ ಉಂಟಾದ ನೈಸರ್ಗಿಕ ಪ್ರವಾಹವನ್ನು ರಾಜ್ಯವು ಸಮರ್ಥವಾಗಿ ನಿರ್ವಹಿಸಿದೆ’ ಎಂದು ಹೇಳಿದರು.

‘ಮಳೆ ಸಂಬಂಧಿತ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡ 12 ಜನರಲ್ಲಿ ಫೋರ್ಶೋರ್ ಎಸ್ಟೇಟ್‌ನಲ್ಲಿ 60 ವರ್ಷದ ಮಹಿಳೆ ಮತ್ತು ಇಂಟೆಗ್ರಲ್ ಕೋಚ್ ಫ್ಯಾಕ್ಟರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದ 48 ವರ್ಷದ ವ್ಯಕ್ತಿ ಸೇರಿದ್ದಾರೆ’ ಎಂದು ಅಧಿಕಾರಿಯೊಬ್ಬರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

‘ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಫೆಡರೇಶನ್ ಲಿಮಿಟೆಡ್‌ನ ಅಂಬತ್ತೂರು ಡೈರಿಯು ಸಂಪೂರ್ಣ ಮುಳುಗಡೆಯಾದ ಕಾರಣ ಐದು ಲಕ್ಷ ಲೀಟರ್ ಸಾಮರ್ಥ್ಯದ ಹಾಲಿನ ಘಟಕದ ಕಾರ್ಯಾಚರಣೆಗೆ ತೊಂದರೆಯಾಗಿದೆ’ ಎಂದು ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವ ಟಿ ಮನೋ ತಂಗರಾಜ್ ಹೇಳಿದ್ದಾರೆ.

ನಗರದಲ್ಲಿ ಪ್ರವಾಹ ತಗ್ಗಿಸುವ ಕಾರ್ಯಗಳಿಗಾಗಿ ಚೆನ್ನೈ ಕಾರ್ಪೊರೇಷನ್ ಅಧಿಕಾರಿಗಳು ನೆರೆಯ ಜಿಲ್ಲೆಗಳಿಂದ 5000 ಕಾರ್ಮಿಕರನ್ನು ಕರೆತಂದಿದ್ದಾರೆ. ಈ ಕಾರ್ಮಿಕರು ಕೃಷಿ ಟ್ರ್ಯಾಕ್ಟರ್‌ಗಳು ಮತ್ತು ಮೀನುಗಾರಿಕಾ ದೋಣಿಗಳನ್ನು ಬಳಸಿಕೊಂಡು ಪೆರಿಯಾಮೆಟ್ ಮತ್ತು ಉತ್ತರ ಚೆನ್ನೈನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಹಾಗೂ ಪರಿಹಾರ ಸಾಮಗ್ರಿಗಳನ್ನು ವಿತರಿಸುತ್ತಿದ್ದಾರೆ.

ಚೆನ್ನೈ ಉಪನಗರ ತಾಂಬರಂ, ಅಶೋಕ್ ನಗರ, ಕಟ್ಟುಪಾಕ್ಕಂ ಮತ್ತು ಪೆರುಂಗುಡಿ ಮುಂತಾದ ಪ್ರದೇಶಗಳಲ್ಲಿ ಹಲವಾರು ಗಂಟೆಗಳ ಕಾಲ ಮಳೆ ನಿಂತಿದ್ದರೂ ವಿದ್ಯುತ್ ಮರುಸ್ಥಾಪನೆಯಾಗಿಲ್ಲ. ಈ ಪ್ರದೇಶ ಪ್ರಮುಖ ರಸ್ತೆಗಳಲ್ಲಿ ನೀರು ಇಳಿಮುಖವಾಗಿದ್ದರೂ ವಿದ್ಯುತ್ ಸಂಪರ್ಕ ಮರು ಸ್ಥಾಪಿಸಿಲ್ಲ ಎಂದು ಅಶೋಕನಗರ ನಿವಾಸಿಗಳು ಸಂಕಷ್ಟ ತೋಡಿಕೊಂಡಿದ್ದಾರೆ.

ಇದನ್ನೂ ಓದಿ; ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ, ಇದರಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...