HomeUncategorized'ಮೈಚಾಂಗ್' ಹೊಡೆತಕ್ಕೆ ತತ್ತರಿಸಿದ ಚೆನ್ನೈ; ಮೃತರ ಸಂಖ್ಯೆ 12ಕ್ಕೆ ಏರಿಕೆ!

‘ಮೈಚಾಂಗ್’ ಹೊಡೆತಕ್ಕೆ ತತ್ತರಿಸಿದ ಚೆನ್ನೈ; ಮೃತರ ಸಂಖ್ಯೆ 12ಕ್ಕೆ ಏರಿಕೆ!

- Advertisement -
- Advertisement -

ಡಿಸೆಂಬರ್ 4 ಮತ್ತು 5ರಂದು ತಮಿಳುನಾಡಿನ ಉತ್ತರ ಕರಾವಳಿ ಪ್ರದೇಶಕ್ಕೆ ‘ಮೈಚಾಂಗ್ ಚಂಡಮಾರುತ’ ಅಪ್ಪಳಿಸಿದ್ದು, ಭಾರೀ ಮಳೆಗೆ ಚೆನ್ನೈ ನಗರ ಹಾಗೂ ಅಕ್ಕಪಕ್ಕದ ಜಿಲ್ಲೆಗಳು ತತ್ತರಿಸಿವೆ. ನಗರದ ಬಹುತೇಕ ರಸ್ತೆಗಳು ಹಾಗೂ ಜನವಸತಿ ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹಕ್ಕೆ ಸಿಲುಕಿರುವ ಜನರನ್ನು ಮೀನುಗಾರಿಕಾ ದೋಣಿಗಳು ಮತ್ತು ಕೃಷಿ ಟ್ರ್ಯಾಕ್ಟರ್‌ಗಳ ಮೂಲಕ ರಕ್ಷಿಸುವ ಕಾರ್ಯ ನಡೆಯುತ್ತಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಹನ್ನೆರಡು ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರವಾಹದಿಂದ ಗಾಯಗೊಂಡಿರುವ 11 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆನ್ನೈ ನಗರದಾದ್ಯಂತ ಎಲ್ಲ ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಹಲವಾರು ಜಿಲ್ಲಾ ವಿಪತ್ತು ಪ್ರತಿಕ್ರಿಯೆ ತಂಡಗಳನ್ನು (DDRT) ರಚಿಸಲಾಗಿದೆ.

ನಗರದ ಹೊರವಲಯದಲ್ಲಿರುವ ಮುತ್ಯಾಲಪೇಟೆ ಪ್ರದೇಶದಲ್ಲಿ 54 ಕುಟುಂಬಗಳನ್ನು ರಕ್ಷಿಸಲಾಗಿದ್ದು, ಹೆರಿಗೆಯಾದ ಮಹಿಳೆಯನ್ನು ನಗರದ ಸಾಲಿಗ್ರಾಮದಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ತಗ್ಗು ಪ್ರದೇಶದ 250ಕ್ಕೂ ಹೆಚ್ಚು ಜನರು ಕೊಟ್ಟೂರ್ಪುರಂನ ಶಾಲೆಯ ಆಶ್ರಯ ಪಡೆದಿದ್ದಾರೆ. ಮಳೆ ನೀರಿನಲ್ಲಿ ಸಿಲುಕಿದ್ದ ಬಸ್‌ನಲ್ಲಿದ್ದ 22 ಪ್ರಯಾಣಿಕರನ್ನು ಪಲ್ಲಾವರಂನ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಿರುವ ಪರಿಹಾರ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಚೆನ್ನೈನ ಚುಲೈ ಕಣ್ಣಪರ್ ನಲ್ಲಿ ಸ್ಥಾಪಿಸಿರುವ ಶಿಬಿರಕ್ಕೆ ಭೇಟಿ ನೀಡಿದ ಸಿಎಂ ಸ್ಟಾಲಿನ್, ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸಿದರು.

ಮಂಗಳವಾರ ಬೆಳಿಗ್ಗೆಯಿಂದ, ಚೆನ್ನೈನ ಹೆಚ್ಚಿನ ಭಾಗಗಳಲ್ಲಿ ಮಳೆ ಬಿಡುವು ಕೊಟ್ಟಿತ್ತು. ಈ ಸಂದರ್ಭದಲ್ಲಿ ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ರಕ್ಷಣಾ ಕಾರ್ಯಚರಣೆ ಮತ್ತು ಪರಿಹಾರ ಕಾರ್ಯವನ್ನು ಚುರುಕುಗೊಳಿಸಿದರು.

ಚೆನ್ನೈ ಕಾರ್ಪೊರೇಷನ್ ಪ್ರಧಾನ ಕಛೇರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರನ್ನು ರಕ್ಷಿಸಲು ಹಾಗೂ ಪರಿಹಾರ ಕಾರ್ಯಗಳಿಗಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

‘ಚೆನ್ನೈ ಸೇರಿದಂತೆ ಒಂಬತ್ತು ಚಂಡಮಾರುತ ಪೀಡಿತ ಜಿಲ್ಲೆಗಳಲ್ಲಿ ಸಾಕಷ್ಟು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ ಅಂದಾಜು 11 ಲಕ್ಷ ಆಹಾರ ಪ್ಯಾಕೆಟ್‌ಗಳು ಮತ್ತು ಒಂದು ಲಕ್ಷ ಹಾಲಿನ ಪ್ಯಾಕೆಟ್‌ಗಳನ್ನು ವಿತರಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

‘ಹಂತ ಹಂತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ. 2015ರ ಪ್ರವಾಹಕ್ಕೆ ಹೋಲಿಸಿದರೆ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ನಾವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ನಗರದ ಹೊರವಲಯದಲ್ಲಿರುವ ಚೆಂಬರಂಬಾಕ್ಕಂ ಜಲಾಶಯದಿಂದ ಅಡ್ಯಾರ್ ನದಿಗೆ ಮುನ್ಸೂಚನೆ ನೀಡದೆ ಒಂದು ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ್ದರಿಂದ 2015ರಲ್ಲಿ ಮಾನವ ನಿರ್ಮಿತ ಪ್ರವಾಹಕ್ಕೆ ಕಾರಣವಾಯಿತು. ಪ್ರಸ್ತುತ ಪರಿಸ್ಥಿತಿ ಹಾಗೂ ಧಾರಾಕಾರ ಮಳೆಯಿಂದ ಉಂಟಾದ ನೈಸರ್ಗಿಕ ಪ್ರವಾಹವನ್ನು ರಾಜ್ಯವು ಸಮರ್ಥವಾಗಿ ನಿರ್ವಹಿಸಿದೆ’ ಎಂದು ಹೇಳಿದರು.

‘ಮಳೆ ಸಂಬಂಧಿತ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡ 12 ಜನರಲ್ಲಿ ಫೋರ್ಶೋರ್ ಎಸ್ಟೇಟ್‌ನಲ್ಲಿ 60 ವರ್ಷದ ಮಹಿಳೆ ಮತ್ತು ಇಂಟೆಗ್ರಲ್ ಕೋಚ್ ಫ್ಯಾಕ್ಟರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದ 48 ವರ್ಷದ ವ್ಯಕ್ತಿ ಸೇರಿದ್ದಾರೆ’ ಎಂದು ಅಧಿಕಾರಿಯೊಬ್ಬರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

‘ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಫೆಡರೇಶನ್ ಲಿಮಿಟೆಡ್‌ನ ಅಂಬತ್ತೂರು ಡೈರಿಯು ಸಂಪೂರ್ಣ ಮುಳುಗಡೆಯಾದ ಕಾರಣ ಐದು ಲಕ್ಷ ಲೀಟರ್ ಸಾಮರ್ಥ್ಯದ ಹಾಲಿನ ಘಟಕದ ಕಾರ್ಯಾಚರಣೆಗೆ ತೊಂದರೆಯಾಗಿದೆ’ ಎಂದು ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವ ಟಿ ಮನೋ ತಂಗರಾಜ್ ಹೇಳಿದ್ದಾರೆ.

ನಗರದಲ್ಲಿ ಪ್ರವಾಹ ತಗ್ಗಿಸುವ ಕಾರ್ಯಗಳಿಗಾಗಿ ಚೆನ್ನೈ ಕಾರ್ಪೊರೇಷನ್ ಅಧಿಕಾರಿಗಳು ನೆರೆಯ ಜಿಲ್ಲೆಗಳಿಂದ 5000 ಕಾರ್ಮಿಕರನ್ನು ಕರೆತಂದಿದ್ದಾರೆ. ಈ ಕಾರ್ಮಿಕರು ಕೃಷಿ ಟ್ರ್ಯಾಕ್ಟರ್‌ಗಳು ಮತ್ತು ಮೀನುಗಾರಿಕಾ ದೋಣಿಗಳನ್ನು ಬಳಸಿಕೊಂಡು ಪೆರಿಯಾಮೆಟ್ ಮತ್ತು ಉತ್ತರ ಚೆನ್ನೈನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಹಾಗೂ ಪರಿಹಾರ ಸಾಮಗ್ರಿಗಳನ್ನು ವಿತರಿಸುತ್ತಿದ್ದಾರೆ.

ಚೆನ್ನೈ ಉಪನಗರ ತಾಂಬರಂ, ಅಶೋಕ್ ನಗರ, ಕಟ್ಟುಪಾಕ್ಕಂ ಮತ್ತು ಪೆರುಂಗುಡಿ ಮುಂತಾದ ಪ್ರದೇಶಗಳಲ್ಲಿ ಹಲವಾರು ಗಂಟೆಗಳ ಕಾಲ ಮಳೆ ನಿಂತಿದ್ದರೂ ವಿದ್ಯುತ್ ಮರುಸ್ಥಾಪನೆಯಾಗಿಲ್ಲ. ಈ ಪ್ರದೇಶ ಪ್ರಮುಖ ರಸ್ತೆಗಳಲ್ಲಿ ನೀರು ಇಳಿಮುಖವಾಗಿದ್ದರೂ ವಿದ್ಯುತ್ ಸಂಪರ್ಕ ಮರು ಸ್ಥಾಪಿಸಿಲ್ಲ ಎಂದು ಅಶೋಕನಗರ ನಿವಾಸಿಗಳು ಸಂಕಷ್ಟ ತೋಡಿಕೊಂಡಿದ್ದಾರೆ.

ಇದನ್ನೂ ಓದಿ; ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ, ಇದರಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...