Homeಮುಖಪುಟಪೋಕ್ಸೋ ಪ್ರಕರಣದ ಆರೋಪಿಗೆ ರಕ್ಷಣೆ : ಮಹಿಳಾ ಇನ್‌ಸ್ಪೆಕ್ಟರ್, ಎಡಿಎಂಕೆ ಕಾರ್ಯಕರ್ತನ ಬಂಧನ

ಪೋಕ್ಸೋ ಪ್ರಕರಣದ ಆರೋಪಿಗೆ ರಕ್ಷಣೆ : ಮಹಿಳಾ ಇನ್‌ಸ್ಪೆಕ್ಟರ್, ಎಡಿಎಂಕೆ ಕಾರ್ಯಕರ್ತನ ಬಂಧನ

- Advertisement -
- Advertisement -

ಪೋಕ್ಸೋ ಪ್ರಕರಣದ ಆರೋಪಿಯನ್ನು ಬಂಧನದಿಂದ ರಕ್ಷಿಸಿ ಕಾನೂನುಬಾಹಿರ ಕೃತ್ಯವೆಸಗಿದ ಪ್ರಕರಣದಲ್ಲಿ ಚೆನ್ನೈನ ಅಣ್ಣಾ ನಗರ ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ.

ಅಣ್ಣಾ ನಗರ ಮಹಿಳಾ (ಎಲ್ಲಾ) ಠಾಣೆಯ ಇನ್‌ಸ್ಪೆಕ್ಟರ್ ರಾಜಿ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತ ಸುಧಾಕರ್ ಬಂಧನಕ್ಕೊಳಗಾದ ಆರೋಪಿಗಳು ಎಂದು ದಿ ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಇನ್‌ಸ್ಪೆಕ್ಟರ್‌ ರಾಜಿ ವಿರುದ್ದ ಸಂತ್ರಸ್ತೆಗೆ ಬೆದರಿಕೆ ಹಾಕಿ ಹೇಳಿಕೆ ಬದಲಿಸುವ ಮೂಲಕ ಪ್ರಕರಣದ ದಿಕ್ಕು ತಪ್ಪಿಸಿದ ಅಥವಾ ಕಳಪೆ ತನಿಖೆ ನಡೆಸಿದ ಆರೋಪವಿದೆ. ಎಐಎಡಿಎಂ ಕಾರ್ಯಕರ್ತ ಸುಧಾಕರ್ ವಿರುದ್ದ ಆರೋಪಿಗೆ ರಕ್ಷಣೆ ಒದಗಿಸಿರುವ ಆರೋಪವಿದೆ.

ಪ್ರಕರಣದ ಹಿನ್ನೆಲೆ : ಆರೋಗ್ಯ ಹದೆಗೆಟ್ಟ ಕಾರಣ ಆಗಸ್ಟ್ 29, 2024ರಂದು 10 ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷಿಸಿದ ವೈದ್ಯರು ಆಕೆಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ಹೇಳಿದ್ದರು. ಬಾಲಕಿಯನ್ನು ವಿಚಾರಿಸಿದಾಗ, ಆಕೆ ತನ್ನ ಪಕ್ಷದ ಮನೆಯ ನೀರು ವಿತರಕ 30 ವರ್ಷದ ಸತೀಶ್ ಎಂಬಾತ ಕೃತ್ಯವೆಸಗಿರುವುದಾಗಿ ಹೇಳಿದ್ದಳು.

ತಮ್ಮ ಮಗಳ ಮೇಲೆ ದೌರ್ಜನ್ಯ ನಡೆದಿರುವ ಕುರಿತು ದೂರು ನೀಡಲು ಬಾಲಕಿಯ ಪೋಷಕರು ಆಗಸ್ಟ್ 30, 2024ರಂದು ಅಣ್ಣಾ ನಗರ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇನ್‌ಸ್ಪೆಕ್ಟರ್ ರಾಜಿ ಅವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಳಿಕ ಪೋಷಕರಿಂದ ದೂರು ಪಡೆದುಕೊಂಡ ಪೊಲೀಸರು, ಅಂದೇ ಎಫ್‌ಐಆರ್ ದಾಖಲಿಸಿದ್ದರು. ಬಾಲಕಿ ಹೆಸರಿಸಿದ ಆರೋಪಿ ಸತೀಶ್ ವಿರುದ್ದ ಸೆಕ್ಷನ್ 5(ಐ),5(ಎಂ), ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ- 2012ರ ಸೆಕ್ಷನ್ 6ರ ಅಡಿಯಲ್ಲಿ ಆರೋಪ ಹೊರಿಸಿದ್ದರು. ರಾತ್ರಿ 10 ಗಂಟೆಯ ನಂತರ ಬಾಲಕಿ ದಾಖಲಾಗಿದ್ದ ಆಸ್ಪತ್ರೆಗೆ ತೆರಳಿ ಬಾಲಕಿಯಿಂದ ಹೇಳಿಕೆ ಪಡೆದಿದ್ದರು.

“ಬಾಲಕಿಯಿಂದ ಹೇಳಿಕೆ ಪಡೆಯವಾಗ, ಆರೋಪಿ ಸತೀಶ್ ಹೆಸರು ಹೇಳದಂತೆ ಪೊಲೀಸರು ಆಕೆಯನ್ನು ಹೆದರಿಸಿದ್ದಾರೆ. ಸತೀಶ್ ಹೆಸರು ಹೇಳಿದರೆ ನಿನ್ನ ತಂದೆ-ತಾಯಿ ಜೈಲಿಗೆ ಹೋಗುತ್ತಾರೆ. ನಂತರ ನಿನ್ನ ಸಹೋದರರು ಕೇರ್ ಹೋಮ್‌ನಲ್ಲಿ ಉಳಿಯಬೇಕಾಗುತ್ತದೆ ಎಂದು ಭಯ ಹುಟ್ಟಿಸಿದ್ದಾರೆ. ಇದರಿಂದ ಹೆದರಿದ ಬಾಲಕಿ ಆರಂಭದಲ್ಲಿ ಹೇಳಿದ್ದ ಸತೀಶ್ ಬದಲು, ಮತ್ತೊಬ್ಬ ಅಪ್ರಾಪ್ತನನ್ನು ಆರೋಪಿ ಎಂದು ಹೆಸರಿಸಿದ್ದಾಳೆ” ಎಂದು ಆಕೆಯ ತಾಯಿ ಆರೋಪಿಸಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ನಡುವೆ ಸಂತ್ರಸ್ತ ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ ಆಡಿಯೋ ಮತ್ತು ಪ್ರಕರಣದ ಎಫ್‌ಐಆರ್ ಮಾಹಿತಿ ಸೆಪ್ಟೆಂಬರ್ 2024ರಂದು ಪೊಲೀಸರು ಸೋರಿಕೆ ಮಾಡಿದ್ದರು.

ಮದ್ರಾಸ್ ಹೈಕೋರ್ಟ್ ಈ ಸಂಬಂಧ ಸೆಪ್ಟೆಂಬರ್‌ನಲ್ಲಿ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಅಕ್ಟೋಬರ್ 1ರಂದು ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಿತ್ತು.

ಉದ್ಯಮಿ ಬಾಬಿ ಚೆಮ್ಮನ್ನೂರ್ ವಿರುದ್ಧ ದೂರು ದಾಖಲಿಸಿದ ಮಲಯಾಳಂ ನಟಿ ಹನಿ ರೋಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...