Homeಮುಖಪುಟಪೋಕ್ಸೋ ಪ್ರಕರಣದ ಆರೋಪಿಗೆ ರಕ್ಷಣೆ : ಮಹಿಳಾ ಇನ್‌ಸ್ಪೆಕ್ಟರ್, ಎಡಿಎಂಕೆ ಕಾರ್ಯಕರ್ತನ ಬಂಧನ

ಪೋಕ್ಸೋ ಪ್ರಕರಣದ ಆರೋಪಿಗೆ ರಕ್ಷಣೆ : ಮಹಿಳಾ ಇನ್‌ಸ್ಪೆಕ್ಟರ್, ಎಡಿಎಂಕೆ ಕಾರ್ಯಕರ್ತನ ಬಂಧನ

- Advertisement -
- Advertisement -

ಪೋಕ್ಸೋ ಪ್ರಕರಣದ ಆರೋಪಿಯನ್ನು ಬಂಧನದಿಂದ ರಕ್ಷಿಸಿ ಕಾನೂನುಬಾಹಿರ ಕೃತ್ಯವೆಸಗಿದ ಪ್ರಕರಣದಲ್ಲಿ ಚೆನ್ನೈನ ಅಣ್ಣಾ ನಗರ ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ.

ಅಣ್ಣಾ ನಗರ ಮಹಿಳಾ (ಎಲ್ಲಾ) ಠಾಣೆಯ ಇನ್‌ಸ್ಪೆಕ್ಟರ್ ರಾಜಿ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತ ಸುಧಾಕರ್ ಬಂಧನಕ್ಕೊಳಗಾದ ಆರೋಪಿಗಳು ಎಂದು ದಿ ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಇನ್‌ಸ್ಪೆಕ್ಟರ್‌ ರಾಜಿ ವಿರುದ್ದ ಸಂತ್ರಸ್ತೆಗೆ ಬೆದರಿಕೆ ಹಾಕಿ ಹೇಳಿಕೆ ಬದಲಿಸುವ ಮೂಲಕ ಪ್ರಕರಣದ ದಿಕ್ಕು ತಪ್ಪಿಸಿದ ಅಥವಾ ಕಳಪೆ ತನಿಖೆ ನಡೆಸಿದ ಆರೋಪವಿದೆ. ಎಐಎಡಿಎಂ ಕಾರ್ಯಕರ್ತ ಸುಧಾಕರ್ ವಿರುದ್ದ ಆರೋಪಿಗೆ ರಕ್ಷಣೆ ಒದಗಿಸಿರುವ ಆರೋಪವಿದೆ.

ಪ್ರಕರಣದ ಹಿನ್ನೆಲೆ : ಆರೋಗ್ಯ ಹದೆಗೆಟ್ಟ ಕಾರಣ ಆಗಸ್ಟ್ 29, 2024ರಂದು 10 ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷಿಸಿದ ವೈದ್ಯರು ಆಕೆಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ಹೇಳಿದ್ದರು. ಬಾಲಕಿಯನ್ನು ವಿಚಾರಿಸಿದಾಗ, ಆಕೆ ತನ್ನ ಪಕ್ಷದ ಮನೆಯ ನೀರು ವಿತರಕ 30 ವರ್ಷದ ಸತೀಶ್ ಎಂಬಾತ ಕೃತ್ಯವೆಸಗಿರುವುದಾಗಿ ಹೇಳಿದ್ದಳು.

ತಮ್ಮ ಮಗಳ ಮೇಲೆ ದೌರ್ಜನ್ಯ ನಡೆದಿರುವ ಕುರಿತು ದೂರು ನೀಡಲು ಬಾಲಕಿಯ ಪೋಷಕರು ಆಗಸ್ಟ್ 30, 2024ರಂದು ಅಣ್ಣಾ ನಗರ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇನ್‌ಸ್ಪೆಕ್ಟರ್ ರಾಜಿ ಅವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಳಿಕ ಪೋಷಕರಿಂದ ದೂರು ಪಡೆದುಕೊಂಡ ಪೊಲೀಸರು, ಅಂದೇ ಎಫ್‌ಐಆರ್ ದಾಖಲಿಸಿದ್ದರು. ಬಾಲಕಿ ಹೆಸರಿಸಿದ ಆರೋಪಿ ಸತೀಶ್ ವಿರುದ್ದ ಸೆಕ್ಷನ್ 5(ಐ),5(ಎಂ), ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ- 2012ರ ಸೆಕ್ಷನ್ 6ರ ಅಡಿಯಲ್ಲಿ ಆರೋಪ ಹೊರಿಸಿದ್ದರು. ರಾತ್ರಿ 10 ಗಂಟೆಯ ನಂತರ ಬಾಲಕಿ ದಾಖಲಾಗಿದ್ದ ಆಸ್ಪತ್ರೆಗೆ ತೆರಳಿ ಬಾಲಕಿಯಿಂದ ಹೇಳಿಕೆ ಪಡೆದಿದ್ದರು.

“ಬಾಲಕಿಯಿಂದ ಹೇಳಿಕೆ ಪಡೆಯವಾಗ, ಆರೋಪಿ ಸತೀಶ್ ಹೆಸರು ಹೇಳದಂತೆ ಪೊಲೀಸರು ಆಕೆಯನ್ನು ಹೆದರಿಸಿದ್ದಾರೆ. ಸತೀಶ್ ಹೆಸರು ಹೇಳಿದರೆ ನಿನ್ನ ತಂದೆ-ತಾಯಿ ಜೈಲಿಗೆ ಹೋಗುತ್ತಾರೆ. ನಂತರ ನಿನ್ನ ಸಹೋದರರು ಕೇರ್ ಹೋಮ್‌ನಲ್ಲಿ ಉಳಿಯಬೇಕಾಗುತ್ತದೆ ಎಂದು ಭಯ ಹುಟ್ಟಿಸಿದ್ದಾರೆ. ಇದರಿಂದ ಹೆದರಿದ ಬಾಲಕಿ ಆರಂಭದಲ್ಲಿ ಹೇಳಿದ್ದ ಸತೀಶ್ ಬದಲು, ಮತ್ತೊಬ್ಬ ಅಪ್ರಾಪ್ತನನ್ನು ಆರೋಪಿ ಎಂದು ಹೆಸರಿಸಿದ್ದಾಳೆ” ಎಂದು ಆಕೆಯ ತಾಯಿ ಆರೋಪಿಸಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ನಡುವೆ ಸಂತ್ರಸ್ತ ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ ಆಡಿಯೋ ಮತ್ತು ಪ್ರಕರಣದ ಎಫ್‌ಐಆರ್ ಮಾಹಿತಿ ಸೆಪ್ಟೆಂಬರ್ 2024ರಂದು ಪೊಲೀಸರು ಸೋರಿಕೆ ಮಾಡಿದ್ದರು.

ಮದ್ರಾಸ್ ಹೈಕೋರ್ಟ್ ಈ ಸಂಬಂಧ ಸೆಪ್ಟೆಂಬರ್‌ನಲ್ಲಿ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಅಕ್ಟೋಬರ್ 1ರಂದು ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಿತ್ತು.

ಉದ್ಯಮಿ ಬಾಬಿ ಚೆಮ್ಮನ್ನೂರ್ ವಿರುದ್ಧ ದೂರು ದಾಖಲಿಸಿದ ಮಲಯಾಳಂ ನಟಿ ಹನಿ ರೋಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...