Homeಮುಖಪುಟಚೆನೈ: ಲೈಂಗಿಕ ಕಿರುಕುಳ ಆರೋಪದ ಮೇಲೆ ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕ ಅರೆಸ್ಟ್‌

ಚೆನೈ: ಲೈಂಗಿಕ ಕಿರುಕುಳ ಆರೋಪದ ಮೇಲೆ ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕ ಅರೆಸ್ಟ್‌

- Advertisement -
- Advertisement -

ಚೆನ್ನೈನ ಕಲಾಕ್ಷೇತ್ರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ರುಕ್ಮಿಣಿ ದೇವಿ ಫೈನ್ ಆರ್ಟ್ಸ್ ಕಾಲೇಜಿನ ಹಳೆಯ ವಿದ್ಯಾರ್ಥಿಯೊಬ್ಬರು ನೀಡಿದ ಲೈಂಗಿಕ ಕಿರುಕುಳದ ದೂರಿನ ಆಧಾರದ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಮಾರ್ಚ್ 31ರಂದು, ಕಲಾಕ್ಷೇತ್ರ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಹರಿ ಪದ್ಮನ್ ವಿರುದ್ಧ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ), 509 (ಪದಗಳು, ಸನ್ನೆಗಳು ಅಥವಾ ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಮಾಡಿದ ಕೃತ್ಯಗಳು) ಮತ್ತು ತಮಿಳುನಾಡು ಮಹಿಳೆಯರಿಗೆ ಕಿರುಕುಳದ ನಿಷೇಧದ ನಿಬಂಧನೆಗಳ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

”ಹೈದರಾಬಾದ್‌ನ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ಪದ್ಮನ್ ಅವರು ಹಿಂದಿರುಗಿದ ನಂತರ ತಲೆಮರೆಸಿಕೊಂಡಿದ್ದರು. ಪ್ರಯಾಣದ ಸಮಯದಲ್ಲಿ ಅವರು ತಮ್ಮ ಮೊಬೈಲ್ ಫೋನ್‌ನ್ನು ಏರ್‌ಪ್ಲೇನ್ ಮೋಡ್‌ನಲ್ಲಿ ಇರಿಸಿದ್ದರು ಆದರೆ ಭಾನುವಾರ ಬೆಳಿಗ್ಗೆ ಅವರು ಚೆನ್ನೈಗೆ ಹಿಂದಿರುಗಿದ ನಂತರ ತಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಲು ಫೋನ್ ಆನ್‌ ಮಾಡಿದ್ದರು. ಈ ಕರೆ ಅವರ ಇರುವಿಕೆಯ ಪತ್ತೆಗೆ ಸಹಾಯ ಮಾಡಿದೆ. ಬಂಧಿತ ಸಹಾಯಕ ಪ್ರಾಧ್ಯಾಪಕರನ್ನು ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಪೊಲೀಸರು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಚೆನ್ನೈ: ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕನ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲು

”ಹರಿ ಪದ್ಮನ್‌ ನೀಡುತ್ತಿದ್ದ ಲೈಂಗಿಕ ಕಿರುಕುಳ ಹಾಗೂ ಅವರ ನಿಂದನೆಯಿಂದಾಗಿ ಕೆಲವು ವರ್ಷಗಳ ಹಿಂದೆ ಕಲಾಕ್ಷೇತ್ರ ಫೌಂಡೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಕಾರ್ಯಕ್ರಮದಿಂದ ಹೊರಗುಳಿದಿದ್ದೆ” ಎಂದು ದೂರು ದಾಖಲಿಸಿದ ವಿದ್ಯಾರ್ಥಿನಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

”ಅವರು ಒಮ್ಮೆ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಿದರು. ಯಾರಿಗೂ ತಿಳಿಯುವುದಿಲ್ಲ, ಮನೆಗೆ ಬಾ ಎಂದು ನನ್ನನ್ನು ಕರೆದಿದ್ದರು” ಎಂದು ದೂರುದಾರರು ಹೇಳಿದ್ದಾರೆ.

”ಅವರ ಆ ಬೇಡಿಕೆಗೆ ನಾನು ಒಪ್ಪದಿದ್ದಾಗ ಅದರ ಪ್ರತೀಕಾರದ ಕ್ರಮವಾಗಿ, ಪ್ರಮುಖ ನೃತ್ಯ ಪಾತ್ರದಿಂದ ನನ್ನನ್ನು ತೆಗೆದುಹಾಕಲಾಯಿತು” ಎಂದು ಆ ವಿದ್ಯಾರ್ಥಿನಿ ಹೇಳಿಕೊಂಡಿದ್ದಾಳೆ.

ಸುಮಾರು 250 ವಿದ್ಯಾರ್ಥಿಗಳು ಮಾರ್ಚ್ 30ರಿಂದ ಪ್ರತಿಭಟನೆ ನಡೆಸುತ್ತಿದ್ದು, ಅನುಚಿತ ವರ್ತನೆ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಹರಿ ಸಹಾಯಕ ಪ್ರಾಧ್ಯಾಪಕ ಹರಿ ಪದ್ಮನ್‌ ಹಾಗೂ ಸಂಜಿತ್ ಲಾಲ್, ಸಾಯಿ ಕೃಷ್ಣನ್ ಮತ್ತು ಶ್ರೀನಾಥ್ ಎಂಬ ಸಿಬ್ಬಂದಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆಗೆ ದೂರು ನೀಡಿದ್ದರು.

”ನಾನು ಕಲಾಕ್ಷೇತ್ರ ಫೌಂಡೇಶನ್‌ನ ಕ್ಯಾಂಪಸ್‌ನಲ್ಲಿ ಐದು ಗಂಟೆಗಳ ವಿಚಾರಣೆ ನಡೆಸಿದಾಗ ಲೈಂಗಿಕ ಕಿರುಕುಳ ಮತ್ತು ಕಿರುಕುಳದ 90 ದೂರುಗಳು ವಿದ್ಯಾರ್ಥಿಗಳಿಂದ ಸ್ವೀಕರಿಸಿದ್ದಾರೆ” ಎಂದು ಶುಕ್ರವಾರ ತಮಿಳುನಾಡು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ಎಆರ್ ಕುಮಾರಿ ಅವರು ತಿಳಿಸಿದ್ದಾರೆ.

”ದೂರುಗಳಲ್ಲಿ ಹುಡುಗಿಯರು ಮತ್ತು ಹುಡುಗರ ಲೈಂಗಿಕ ದೌರ್ಜನ್ಯವೂ ಸೇರಿದೆ. ನಾನು ಜೂಮ್ ಆ್ಯಪ್ ಮೂಲಕ ಆರು ವಿದ್ಯಾರ್ಥಿಗಳನ್ನು ಸೇರಿದಂತೆ ಒಟ್ಟು 12 ವಿದ್ಯಾರ್ಥಿಗಳನ್ನು ಮಾತನಾಡಿಸಿ, ಎಲ್ಲರಲ್ಲೂ ಆತ್ಮವಿಶ್ವಾಸದಿಂದ ಇರಬೇಕು ಎಂದು ಹೇಳಿದ್ದೇನೆ. ಈ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತೇನೆ” ಎಂದು ಕುಮಾರಿ ಅವರು ಹೇಳಿದರು.

ತನಿಖೆಯ ಸಮಯದಲ್ಲಿ ಆರೋಪಿ ಸಿಬ್ಬಂದಿ ವಿರುದ್ಧ ಆರೋಪ ದೃಢಪಟ್ಟರೆ ಸರ್ಕಾರವು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...