Homeಮುಖಪುಟಚೆನೈ: ಲೈಂಗಿಕ ಕಿರುಕುಳ ಆರೋಪದ ಮೇಲೆ ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕ ಅರೆಸ್ಟ್‌

ಚೆನೈ: ಲೈಂಗಿಕ ಕಿರುಕುಳ ಆರೋಪದ ಮೇಲೆ ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕ ಅರೆಸ್ಟ್‌

- Advertisement -
- Advertisement -

ಚೆನ್ನೈನ ಕಲಾಕ್ಷೇತ್ರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ರುಕ್ಮಿಣಿ ದೇವಿ ಫೈನ್ ಆರ್ಟ್ಸ್ ಕಾಲೇಜಿನ ಹಳೆಯ ವಿದ್ಯಾರ್ಥಿಯೊಬ್ಬರು ನೀಡಿದ ಲೈಂಗಿಕ ಕಿರುಕುಳದ ದೂರಿನ ಆಧಾರದ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಮಾರ್ಚ್ 31ರಂದು, ಕಲಾಕ್ಷೇತ್ರ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಹರಿ ಪದ್ಮನ್ ವಿರುದ್ಧ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ), 509 (ಪದಗಳು, ಸನ್ನೆಗಳು ಅಥವಾ ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಮಾಡಿದ ಕೃತ್ಯಗಳು) ಮತ್ತು ತಮಿಳುನಾಡು ಮಹಿಳೆಯರಿಗೆ ಕಿರುಕುಳದ ನಿಷೇಧದ ನಿಬಂಧನೆಗಳ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

”ಹೈದರಾಬಾದ್‌ನ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ಪದ್ಮನ್ ಅವರು ಹಿಂದಿರುಗಿದ ನಂತರ ತಲೆಮರೆಸಿಕೊಂಡಿದ್ದರು. ಪ್ರಯಾಣದ ಸಮಯದಲ್ಲಿ ಅವರು ತಮ್ಮ ಮೊಬೈಲ್ ಫೋನ್‌ನ್ನು ಏರ್‌ಪ್ಲೇನ್ ಮೋಡ್‌ನಲ್ಲಿ ಇರಿಸಿದ್ದರು ಆದರೆ ಭಾನುವಾರ ಬೆಳಿಗ್ಗೆ ಅವರು ಚೆನ್ನೈಗೆ ಹಿಂದಿರುಗಿದ ನಂತರ ತಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಲು ಫೋನ್ ಆನ್‌ ಮಾಡಿದ್ದರು. ಈ ಕರೆ ಅವರ ಇರುವಿಕೆಯ ಪತ್ತೆಗೆ ಸಹಾಯ ಮಾಡಿದೆ. ಬಂಧಿತ ಸಹಾಯಕ ಪ್ರಾಧ್ಯಾಪಕರನ್ನು ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಪೊಲೀಸರು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಚೆನ್ನೈ: ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕನ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲು

”ಹರಿ ಪದ್ಮನ್‌ ನೀಡುತ್ತಿದ್ದ ಲೈಂಗಿಕ ಕಿರುಕುಳ ಹಾಗೂ ಅವರ ನಿಂದನೆಯಿಂದಾಗಿ ಕೆಲವು ವರ್ಷಗಳ ಹಿಂದೆ ಕಲಾಕ್ಷೇತ್ರ ಫೌಂಡೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಕಾರ್ಯಕ್ರಮದಿಂದ ಹೊರಗುಳಿದಿದ್ದೆ” ಎಂದು ದೂರು ದಾಖಲಿಸಿದ ವಿದ್ಯಾರ್ಥಿನಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

”ಅವರು ಒಮ್ಮೆ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಿದರು. ಯಾರಿಗೂ ತಿಳಿಯುವುದಿಲ್ಲ, ಮನೆಗೆ ಬಾ ಎಂದು ನನ್ನನ್ನು ಕರೆದಿದ್ದರು” ಎಂದು ದೂರುದಾರರು ಹೇಳಿದ್ದಾರೆ.

”ಅವರ ಆ ಬೇಡಿಕೆಗೆ ನಾನು ಒಪ್ಪದಿದ್ದಾಗ ಅದರ ಪ್ರತೀಕಾರದ ಕ್ರಮವಾಗಿ, ಪ್ರಮುಖ ನೃತ್ಯ ಪಾತ್ರದಿಂದ ನನ್ನನ್ನು ತೆಗೆದುಹಾಕಲಾಯಿತು” ಎಂದು ಆ ವಿದ್ಯಾರ್ಥಿನಿ ಹೇಳಿಕೊಂಡಿದ್ದಾಳೆ.

ಸುಮಾರು 250 ವಿದ್ಯಾರ್ಥಿಗಳು ಮಾರ್ಚ್ 30ರಿಂದ ಪ್ರತಿಭಟನೆ ನಡೆಸುತ್ತಿದ್ದು, ಅನುಚಿತ ವರ್ತನೆ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಹರಿ ಸಹಾಯಕ ಪ್ರಾಧ್ಯಾಪಕ ಹರಿ ಪದ್ಮನ್‌ ಹಾಗೂ ಸಂಜಿತ್ ಲಾಲ್, ಸಾಯಿ ಕೃಷ್ಣನ್ ಮತ್ತು ಶ್ರೀನಾಥ್ ಎಂಬ ಸಿಬ್ಬಂದಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆಗೆ ದೂರು ನೀಡಿದ್ದರು.

”ನಾನು ಕಲಾಕ್ಷೇತ್ರ ಫೌಂಡೇಶನ್‌ನ ಕ್ಯಾಂಪಸ್‌ನಲ್ಲಿ ಐದು ಗಂಟೆಗಳ ವಿಚಾರಣೆ ನಡೆಸಿದಾಗ ಲೈಂಗಿಕ ಕಿರುಕುಳ ಮತ್ತು ಕಿರುಕುಳದ 90 ದೂರುಗಳು ವಿದ್ಯಾರ್ಥಿಗಳಿಂದ ಸ್ವೀಕರಿಸಿದ್ದಾರೆ” ಎಂದು ಶುಕ್ರವಾರ ತಮಿಳುನಾಡು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ಎಆರ್ ಕುಮಾರಿ ಅವರು ತಿಳಿಸಿದ್ದಾರೆ.

”ದೂರುಗಳಲ್ಲಿ ಹುಡುಗಿಯರು ಮತ್ತು ಹುಡುಗರ ಲೈಂಗಿಕ ದೌರ್ಜನ್ಯವೂ ಸೇರಿದೆ. ನಾನು ಜೂಮ್ ಆ್ಯಪ್ ಮೂಲಕ ಆರು ವಿದ್ಯಾರ್ಥಿಗಳನ್ನು ಸೇರಿದಂತೆ ಒಟ್ಟು 12 ವಿದ್ಯಾರ್ಥಿಗಳನ್ನು ಮಾತನಾಡಿಸಿ, ಎಲ್ಲರಲ್ಲೂ ಆತ್ಮವಿಶ್ವಾಸದಿಂದ ಇರಬೇಕು ಎಂದು ಹೇಳಿದ್ದೇನೆ. ಈ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತೇನೆ” ಎಂದು ಕುಮಾರಿ ಅವರು ಹೇಳಿದರು.

ತನಿಖೆಯ ಸಮಯದಲ್ಲಿ ಆರೋಪಿ ಸಿಬ್ಬಂದಿ ವಿರುದ್ಧ ಆರೋಪ ದೃಢಪಟ್ಟರೆ ಸರ್ಕಾರವು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...