Homeಮುಖಪುಟಚೆನೈ: ಲೈಂಗಿಕ ಕಿರುಕುಳ ಆರೋಪದ ಮೇಲೆ ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕ ಅರೆಸ್ಟ್‌

ಚೆನೈ: ಲೈಂಗಿಕ ಕಿರುಕುಳ ಆರೋಪದ ಮೇಲೆ ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕ ಅರೆಸ್ಟ್‌

- Advertisement -
- Advertisement -

ಚೆನ್ನೈನ ಕಲಾಕ್ಷೇತ್ರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ರುಕ್ಮಿಣಿ ದೇವಿ ಫೈನ್ ಆರ್ಟ್ಸ್ ಕಾಲೇಜಿನ ಹಳೆಯ ವಿದ್ಯಾರ್ಥಿಯೊಬ್ಬರು ನೀಡಿದ ಲೈಂಗಿಕ ಕಿರುಕುಳದ ದೂರಿನ ಆಧಾರದ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಮಾರ್ಚ್ 31ರಂದು, ಕಲಾಕ್ಷೇತ್ರ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಹರಿ ಪದ್ಮನ್ ವಿರುದ್ಧ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ), 509 (ಪದಗಳು, ಸನ್ನೆಗಳು ಅಥವಾ ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಮಾಡಿದ ಕೃತ್ಯಗಳು) ಮತ್ತು ತಮಿಳುನಾಡು ಮಹಿಳೆಯರಿಗೆ ಕಿರುಕುಳದ ನಿಷೇಧದ ನಿಬಂಧನೆಗಳ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

”ಹೈದರಾಬಾದ್‌ನ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ಪದ್ಮನ್ ಅವರು ಹಿಂದಿರುಗಿದ ನಂತರ ತಲೆಮರೆಸಿಕೊಂಡಿದ್ದರು. ಪ್ರಯಾಣದ ಸಮಯದಲ್ಲಿ ಅವರು ತಮ್ಮ ಮೊಬೈಲ್ ಫೋನ್‌ನ್ನು ಏರ್‌ಪ್ಲೇನ್ ಮೋಡ್‌ನಲ್ಲಿ ಇರಿಸಿದ್ದರು ಆದರೆ ಭಾನುವಾರ ಬೆಳಿಗ್ಗೆ ಅವರು ಚೆನ್ನೈಗೆ ಹಿಂದಿರುಗಿದ ನಂತರ ತಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಲು ಫೋನ್ ಆನ್‌ ಮಾಡಿದ್ದರು. ಈ ಕರೆ ಅವರ ಇರುವಿಕೆಯ ಪತ್ತೆಗೆ ಸಹಾಯ ಮಾಡಿದೆ. ಬಂಧಿತ ಸಹಾಯಕ ಪ್ರಾಧ್ಯಾಪಕರನ್ನು ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಪೊಲೀಸರು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಚೆನ್ನೈ: ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕನ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲು

”ಹರಿ ಪದ್ಮನ್‌ ನೀಡುತ್ತಿದ್ದ ಲೈಂಗಿಕ ಕಿರುಕುಳ ಹಾಗೂ ಅವರ ನಿಂದನೆಯಿಂದಾಗಿ ಕೆಲವು ವರ್ಷಗಳ ಹಿಂದೆ ಕಲಾಕ್ಷೇತ್ರ ಫೌಂಡೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಕಾರ್ಯಕ್ರಮದಿಂದ ಹೊರಗುಳಿದಿದ್ದೆ” ಎಂದು ದೂರು ದಾಖಲಿಸಿದ ವಿದ್ಯಾರ್ಥಿನಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

”ಅವರು ಒಮ್ಮೆ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಿದರು. ಯಾರಿಗೂ ತಿಳಿಯುವುದಿಲ್ಲ, ಮನೆಗೆ ಬಾ ಎಂದು ನನ್ನನ್ನು ಕರೆದಿದ್ದರು” ಎಂದು ದೂರುದಾರರು ಹೇಳಿದ್ದಾರೆ.

”ಅವರ ಆ ಬೇಡಿಕೆಗೆ ನಾನು ಒಪ್ಪದಿದ್ದಾಗ ಅದರ ಪ್ರತೀಕಾರದ ಕ್ರಮವಾಗಿ, ಪ್ರಮುಖ ನೃತ್ಯ ಪಾತ್ರದಿಂದ ನನ್ನನ್ನು ತೆಗೆದುಹಾಕಲಾಯಿತು” ಎಂದು ಆ ವಿದ್ಯಾರ್ಥಿನಿ ಹೇಳಿಕೊಂಡಿದ್ದಾಳೆ.

ಸುಮಾರು 250 ವಿದ್ಯಾರ್ಥಿಗಳು ಮಾರ್ಚ್ 30ರಿಂದ ಪ್ರತಿಭಟನೆ ನಡೆಸುತ್ತಿದ್ದು, ಅನುಚಿತ ವರ್ತನೆ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಹರಿ ಸಹಾಯಕ ಪ್ರಾಧ್ಯಾಪಕ ಹರಿ ಪದ್ಮನ್‌ ಹಾಗೂ ಸಂಜಿತ್ ಲಾಲ್, ಸಾಯಿ ಕೃಷ್ಣನ್ ಮತ್ತು ಶ್ರೀನಾಥ್ ಎಂಬ ಸಿಬ್ಬಂದಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆಗೆ ದೂರು ನೀಡಿದ್ದರು.

”ನಾನು ಕಲಾಕ್ಷೇತ್ರ ಫೌಂಡೇಶನ್‌ನ ಕ್ಯಾಂಪಸ್‌ನಲ್ಲಿ ಐದು ಗಂಟೆಗಳ ವಿಚಾರಣೆ ನಡೆಸಿದಾಗ ಲೈಂಗಿಕ ಕಿರುಕುಳ ಮತ್ತು ಕಿರುಕುಳದ 90 ದೂರುಗಳು ವಿದ್ಯಾರ್ಥಿಗಳಿಂದ ಸ್ವೀಕರಿಸಿದ್ದಾರೆ” ಎಂದು ಶುಕ್ರವಾರ ತಮಿಳುನಾಡು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ಎಆರ್ ಕುಮಾರಿ ಅವರು ತಿಳಿಸಿದ್ದಾರೆ.

”ದೂರುಗಳಲ್ಲಿ ಹುಡುಗಿಯರು ಮತ್ತು ಹುಡುಗರ ಲೈಂಗಿಕ ದೌರ್ಜನ್ಯವೂ ಸೇರಿದೆ. ನಾನು ಜೂಮ್ ಆ್ಯಪ್ ಮೂಲಕ ಆರು ವಿದ್ಯಾರ್ಥಿಗಳನ್ನು ಸೇರಿದಂತೆ ಒಟ್ಟು 12 ವಿದ್ಯಾರ್ಥಿಗಳನ್ನು ಮಾತನಾಡಿಸಿ, ಎಲ್ಲರಲ್ಲೂ ಆತ್ಮವಿಶ್ವಾಸದಿಂದ ಇರಬೇಕು ಎಂದು ಹೇಳಿದ್ದೇನೆ. ಈ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತೇನೆ” ಎಂದು ಕುಮಾರಿ ಅವರು ಹೇಳಿದರು.

ತನಿಖೆಯ ಸಮಯದಲ್ಲಿ ಆರೋಪಿ ಸಿಬ್ಬಂದಿ ವಿರುದ್ಧ ಆರೋಪ ದೃಢಪಟ್ಟರೆ ಸರ್ಕಾರವು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...