Homeಮುಖಪುಟಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

- Advertisement -
- Advertisement -

ಬಿಗ್ ಬಾಸ್ ತಮಿಳು ಸೀಸನ್ 3 ರಲ್ಲಿ ಭಾಗವಹಿಸಿದ್ದ ಮೀರಾ ಮಿಥುನ್ ಎಂಬ ನಟಿ, ಪರಿಶಿಷ್ಟ ಜಾತಿಯವರನ್ನು ನಿಂದಿಸಿ, ಅವಹೇಳನಕಾರಿ ಟೀಕೆಗಳನ್ನು ಮಾಡಿ ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಎಲ್ಲಾ ಪರಿಶಿಷ್ಟ ಜಾತಿ ಚಲನಚಿತ್ರ ಕೆಲಸಗಾರರನ್ನು ಉದ್ಯಮದಿಂದ ಹೊರಹಾಕಬೇಕು ಎಂದು ಹೇಳಿಕೆ ನೀಡಿದ್ದರು.

ಕೆಲವೇ ಚಿತ್ರಗಳಲ್ಲಿ ನಟಿಸಿ, ಬಿಗ್‌ಬಾಸ್‌ ಸೀಸನ್ 3 ರಲ್ಲಿ ಸ್ಫರ್ಧಿಸಿದ್ದ ಮೀರಾ ಮಿಥುನ್ ವಿರುದ್ಧ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಮೀರಾ ಮಿಥುನ್, “ಎಲ್ಲಾ ಪರಿಶಿಷ್ಟ ಸಮುದಾಯದ ಸದಸ್ಯರು ಕಾನೂನುಬಾಹಿರ ಚಟುವಟಿಕೆಗಳು ಮತ್ತು ಅಪರಾಧಗಳಲ್ಲಿ ತೊಡಗಿರುವ ಕಾರಣ ತೊಂದರೆ ಎದುರಿಸುತ್ತಾರೆ. ಯಾವುದೇ ಕಾರಣವಿಲ್ಲದೆ ಯಾರೂ ಅನಗತ್ಯವಾಗಿ ಕೆಟ್ಟದಾಗಿ ಮಾತನಾಡುವುದಿಲ್ಲ” ಎಂದಿದ್ದರು.

ಸಿನಿಮಾ ಉದ್ಯಮದಲ್ಲಿನ ಎಲ್ಲಾ ತಪ್ಪು ಚಟುವಟಿಕೆಗಳಿಗೆ ಪರಿಶಿಷ್ಟ ಜಾತಿಯ ನಿರ್ದೇಶಕರು ಮತ್ತು ಎಸ್ಸಿ ಸಮುದಾಯದ ಸದಸ್ಯರ ಕಾರಣ ಎಂದು ಮೀರಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂವಿಧಾನದ ಆಶಯಗಳೊಂದಿಗೆ ತೆರೆಗೆ ಬರಲು ಸಿದ್ಧವಾಗಿದೆ ’ಭಾರತದ ಪ್ರಜೆಗಳಾದ ನಾವು’

“ಸಿನಿಮಾ ಉದ್ಯಮದಲ್ಲಿನ ಎಲ್ಲಾ ಪರಿಶಿಷ್ಟ ಜಾತಿಯ ಜನರನ್ನು, ನಿರ್ದೇಶಕರನ್ನು ಹೊರಹಾಕುವ ಸಮಯ ಇದು ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ಜೊತೆಗೆ ಎಸ್‌ಸಿ ಸಮುದಾಯದ ನಿರ್ದೇಶಕರು ತಮ್ಮ ಫೋಟೋವನ್ನು ಅವರ ಚಲನಚಿತ್ರದ ಫಸ್ಟ್ ಲುಕ್‌ಗಾಗಿ ಬಳಸಿದ್ದಾರೆ ಎಂದು ಮೀರಾ ಹೇಳಿಕೊಂಡಿದ್ದಾರೆ.

ಆಕೆಯ ಸಂದರ್ಶನದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕೆಯ ಹೇಳಿಕೆಯನ್ನು ಅನೇಕರು ಖಂಡಿಸಿದರು. ಆಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸರಿಗೆ ಒತ್ತಾಯಿಸಿದ್ದರು.

ವಿಡುದಲೈ ಸಿರುತೈಗಲ್ ಕಚ್ಚಿಯ ಉಪ ಪ್ರಧಾನ ಕಾರ್ಯದರ್ಶಿ ವನ್ನಿ ಅರಸು ಅವರ ದೂರಿನ ಆಧಾರದ ಮೇಲೆ, ಚೆನ್ನೈ ಪೊಲೀಸರು ಐಪಿಸಿಯ 153, 153 ಎ (1) (ಎ), 505 (1) (ಬಿ) ಸೇರಿದಂತೆ SC ಮತ್ತು ST (ದೌರ್ಜನ್ಯ ತಡೆ) ಕಾಯಿದೆಯ 7 ಸೆಕ್ಷನ್‌ಗಳ ಅಡಿಯಲ್ಲಿ ಮೀರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸೈಬರ್ ಕ್ರೈಂ ವಿಭಾಗದ ಪೋಲಿಸರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೊದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪದರ್ಶಿ ಮತ್ತು ನಟಿ ಮೀರಾ ಮಿಥುನ್ ಅವರಿಗೆ ವಿಚಾರಣೆಗೆ ಬರುವಂತೆ ಬುಧವಾರ ನೋಟಿಸ್ ನೀಡಿದ್ದಾರೆ.

ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರು ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...