Homeಮುಖಪುಟಚೆನ್ನೈ ಮಳೆ: ಪ್ರವಾಹಕ್ಕೆ ಹೆದರಿ ಫ್ಲೈಓವರ್‌ಗಳ ಮೇಲೆ ಕಾರು ಪಾರ್ಕ್‌ ಮಾಡುತ್ತಿರುವ ಮಾಲೀಕರು

ಚೆನ್ನೈ ಮಳೆ: ಪ್ರವಾಹಕ್ಕೆ ಹೆದರಿ ಫ್ಲೈಓವರ್‌ಗಳ ಮೇಲೆ ಕಾರು ಪಾರ್ಕ್‌ ಮಾಡುತ್ತಿರುವ ಮಾಲೀಕರು

- Advertisement -
- Advertisement -

ಭಾರೀ ಮಳೆಯ ನಡುವೆ, ಅನೇಕ ಚೆನ್ನೈ ನಿವಾಸಿಗಳು ಪ್ರವಾಹದಿಂದ ಹಾನಿಯಾಗದಂತೆ ತಡೆಯಲು ಫ್ಲೈಓವರ್‌ಗಳ ಮೇಲೆ ತಮ್ಮ ವಾಹನಗಳನ್ನು ನಿಲ್ಲಿಸಲು ಪ್ರಾರಂಭಿಸಿದ್ದಾರೆ. ನಗರವು ಪದೇಪದೆ ಪ್ರವಾಹವನ್ನು ಎದುರಿಸುತ್ತಿದ್ದು, ವಾಹನಗಳು ಮತ್ತು ಆಸ್ತಿಯ ಮೇಲೆ ಪರಿಣಾಮ ಬೀರುವ ಕಾರಣ, ಮುಳುಗಿದ ಕಾರುಗಳಿಂದ ಉಂಟಾಗುವ ದುಬಾರಿ ರಿಪೇರಿ ಮತ್ತು ಆರ್ಥಿಕ ನಷ್ಟವನ್ನು ತಪ್ಪಿಸಲು ನಿವಾಸಿಗಳು ಈ ಮುನ್ನೆಚ್ಚರಿಕೆ ವಹಿಸಿದ್ದಾರೆ.

ಅಕ್ಟೋಬರ್ 14 ರಿಂದ ಅಕ್ಟೋಬರ್ 17 ರವರೆಗೆ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ತಮಿಳುನಾಡು ಸಿಎಂ ಐಟಿ ಕಂಪನಿಗಳಿಗೆ ಸೂಚನೆ ನೀಡಿದ್ದು, ನಾಲ್ಕು ಜಿಲ್ಲೆಗಳಲ್ಲಿ ಮಂಗಳವಾರ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಸಂದರ್ಭದಲ್ಲಿ ಸಾಕಷ್ಟು ಆಹಾರ ಸರಬರಾಜು ಮಾಡುವಂತೆ ಆಹಾರ ಇಲಾಖೆಗೆ ಸೂಚಿಸಲಾಗಿದೆ. ಆವಿನ್ ಹಾಲು ಸಮರ್ಪಕವಾಗಿ ಹಾಲು ಪೂರೈಕೆಯಾಗುವಂತೆ ನೋಡಿಕೊಳ್ಳಲು ಕೋರಲಾಗಿದೆ.

ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕ್ರಮಗಳೊಂದಿಗೆ ಸನ್ನದ್ಧರಾಗಿರುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತುರ್ತು ಸಂದರ್ಭಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಟಿಎನ್‌ಡಿಆರ್‌ಎಫ್ ಸನ್ನದ್ಧ ಸ್ಥಿತಿಯಲ್ಲಿದೆ. ತಮಿಳುನಾಡು ವಿದ್ಯುಚ್ಛಕ್ತಿ ಮಂಡಳಿಗೆ ಹೆಚ್ಚುವರಿ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ತಂತಿಗಳು ತುಂಡಾದರೆ ತಕ್ಷಣ ಸರಿಪಡಿಸಲು ಸೂಚನೆ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಉದಯನಿತಿ ಸ್ಟಾಲಿನ್, “ಈಶಾನ್ಯ ಮಾನ್ಸೂನ್‌ಗಾಗಿ ನಾವು ಎಲ್ಲಾ ರೀತಿಯಲ್ಲಿ ಸನ್ನದ್ಧರಾಗಿದ್ದೇವೆ. ಇಂದು ಬೆಳಗ್ಗೆಯೂ ಸಿಎಂ ಎಲ್ಲ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಕಾದು ನೋಡೋಣ.. ಇದು ಸಹಜ ಸಂಗತಿ. ಅದು ನಮ್ಮ ಕೈಯಲ್ಲಿಲ್ಲ. ಐಎಂಡಿ ಏನು ಹೇಳಿದ್ದರೂ, ನಾವು ಅದಕ್ಕೆ ಎಲ್ಲ ರೀತಿಯಲ್ಲಿ ಸಿದ್ಧರಾಗಿದ್ದೇವೆ” ಎಂದರು.

ಚೆನ್ನೈ ಕಾರ್ಪೊರೇಷನ್ ಮೇಯರ್ ಪ್ರಿಯಾ ರಾಜನ್ ಮಾತನಾಡಿ, “ನಾವು ಉತ್ತಮವಾಗಿ ಸಿದ್ಧರಾಗಿದ್ದೇವೆ. ಸಿಎಂ ಮತ್ತು ಡಿಸಿಎಂ ಪರಿಶೀಲನಾ ಸಭೆ ನಡೆಸಿದ್ದಾರೆ. ಎಲ್ಲವೂ ನಿಯಂತ್ರಣದಲ್ಲಿದೆ. ಕಳೆದ ವರ್ಷ ಹೆಚ್ಚಾಗಿ ಹಾನಿಗೊಳಗಾದ ತಗ್ಗು ಪ್ರದೇಶಗಳ ಮೇಲೆ ನಾವು ಗಮನಹರಿಸಿದ್ದೇವೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ ನೀರು ತಕ್ಷಣವೇ ಬರಿದಾಗುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಜಲಾವೃತವಾಗುವುದನ್ನು ತಪ್ಪಿಸಲು 900 ಕ್ಕೂ ಹೆಚ್ಚು ಪಂಪ್‌ಗಳು, 57 ಮೋಟಾರ್‌ಗಳನ್ನು ನಗರ ಮಿತಿಯ ಸುತ್ತಲೂ ಇರಿಸಲಾಗಿದೆ” ಎಂದು ಹೇಳಿದರು.

“ನಗರದಾದ್ಯಂತ ಮಳೆನೀರು ಚರಂಡಿಗಳನ್ನು ನಿರ್ಮಿಸಲಾಗಿದೆ” ಎಂದು ಅವರು ಹೇಳಿದರು. “ಈ ವರ್ಷ ಜೂನ್‌ನಿಂದಲೇ ಹೂಳು ತೆಗೆಯುವ ಕಾಮಗಾರಿ ಆರಂಭಿಸಿದ್ದೇವೆ. ಚೆನ್ನೈನಲ್ಲಿ ನಮಗೆ 33 ಕಾಲುವೆಗಳಿವೆ. ಡಬ್ಲ್ಯುಆರ್‌ಡಿ ಎಲ್ಲದರಲ್ಲೂ ಡಿಸಿಲ್ಟಿಂಗ್ ಮಾಡಿದೆ. ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡುತ್ತಿವೆ. ಸಾರ್ವಜನಿಕರಲ್ಲಿ ಭಯವಿದೆ. ಆದರೆ, ಸರ್ಕಾರದ ಕಡೆಯಿಂದ ನಾವು ಅವರನ್ನು ಸುರಕ್ಷಿತವಾಗಿರಿಸಲು ಮತ್ತು ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ಪ್ರಿಯಾ ರಾಜನ್ ಹೇಳಿದರು.

ಇದನ್ನೂ ಓದಿ; ಮಣಿಪುರದ ಸುದೀರ್ಘ ಹಿಂಸಾಚಾರದ ಬಳಿಕ ಇಂದು ಕುಕಿ, ಮೈತೇಯಿ, ನಾಗಾ ಶಾಸಕರ ಮೊದಲ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...