Homeಮುಖಪುಟಚೆನ್ನೈ ಮಳೆ: ಪ್ರವಾಹಕ್ಕೆ ಹೆದರಿ ಫ್ಲೈಓವರ್‌ಗಳ ಮೇಲೆ ಕಾರು ಪಾರ್ಕ್‌ ಮಾಡುತ್ತಿರುವ ಮಾಲೀಕರು

ಚೆನ್ನೈ ಮಳೆ: ಪ್ರವಾಹಕ್ಕೆ ಹೆದರಿ ಫ್ಲೈಓವರ್‌ಗಳ ಮೇಲೆ ಕಾರು ಪಾರ್ಕ್‌ ಮಾಡುತ್ತಿರುವ ಮಾಲೀಕರು

- Advertisement -
- Advertisement -

ಭಾರೀ ಮಳೆಯ ನಡುವೆ, ಅನೇಕ ಚೆನ್ನೈ ನಿವಾಸಿಗಳು ಪ್ರವಾಹದಿಂದ ಹಾನಿಯಾಗದಂತೆ ತಡೆಯಲು ಫ್ಲೈಓವರ್‌ಗಳ ಮೇಲೆ ತಮ್ಮ ವಾಹನಗಳನ್ನು ನಿಲ್ಲಿಸಲು ಪ್ರಾರಂಭಿಸಿದ್ದಾರೆ. ನಗರವು ಪದೇಪದೆ ಪ್ರವಾಹವನ್ನು ಎದುರಿಸುತ್ತಿದ್ದು, ವಾಹನಗಳು ಮತ್ತು ಆಸ್ತಿಯ ಮೇಲೆ ಪರಿಣಾಮ ಬೀರುವ ಕಾರಣ, ಮುಳುಗಿದ ಕಾರುಗಳಿಂದ ಉಂಟಾಗುವ ದುಬಾರಿ ರಿಪೇರಿ ಮತ್ತು ಆರ್ಥಿಕ ನಷ್ಟವನ್ನು ತಪ್ಪಿಸಲು ನಿವಾಸಿಗಳು ಈ ಮುನ್ನೆಚ್ಚರಿಕೆ ವಹಿಸಿದ್ದಾರೆ.

ಅಕ್ಟೋಬರ್ 14 ರಿಂದ ಅಕ್ಟೋಬರ್ 17 ರವರೆಗೆ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ತಮಿಳುನಾಡು ಸಿಎಂ ಐಟಿ ಕಂಪನಿಗಳಿಗೆ ಸೂಚನೆ ನೀಡಿದ್ದು, ನಾಲ್ಕು ಜಿಲ್ಲೆಗಳಲ್ಲಿ ಮಂಗಳವಾರ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಸಂದರ್ಭದಲ್ಲಿ ಸಾಕಷ್ಟು ಆಹಾರ ಸರಬರಾಜು ಮಾಡುವಂತೆ ಆಹಾರ ಇಲಾಖೆಗೆ ಸೂಚಿಸಲಾಗಿದೆ. ಆವಿನ್ ಹಾಲು ಸಮರ್ಪಕವಾಗಿ ಹಾಲು ಪೂರೈಕೆಯಾಗುವಂತೆ ನೋಡಿಕೊಳ್ಳಲು ಕೋರಲಾಗಿದೆ.

ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕ್ರಮಗಳೊಂದಿಗೆ ಸನ್ನದ್ಧರಾಗಿರುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತುರ್ತು ಸಂದರ್ಭಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಟಿಎನ್‌ಡಿಆರ್‌ಎಫ್ ಸನ್ನದ್ಧ ಸ್ಥಿತಿಯಲ್ಲಿದೆ. ತಮಿಳುನಾಡು ವಿದ್ಯುಚ್ಛಕ್ತಿ ಮಂಡಳಿಗೆ ಹೆಚ್ಚುವರಿ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ತಂತಿಗಳು ತುಂಡಾದರೆ ತಕ್ಷಣ ಸರಿಪಡಿಸಲು ಸೂಚನೆ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಉದಯನಿತಿ ಸ್ಟಾಲಿನ್, “ಈಶಾನ್ಯ ಮಾನ್ಸೂನ್‌ಗಾಗಿ ನಾವು ಎಲ್ಲಾ ರೀತಿಯಲ್ಲಿ ಸನ್ನದ್ಧರಾಗಿದ್ದೇವೆ. ಇಂದು ಬೆಳಗ್ಗೆಯೂ ಸಿಎಂ ಎಲ್ಲ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಕಾದು ನೋಡೋಣ.. ಇದು ಸಹಜ ಸಂಗತಿ. ಅದು ನಮ್ಮ ಕೈಯಲ್ಲಿಲ್ಲ. ಐಎಂಡಿ ಏನು ಹೇಳಿದ್ದರೂ, ನಾವು ಅದಕ್ಕೆ ಎಲ್ಲ ರೀತಿಯಲ್ಲಿ ಸಿದ್ಧರಾಗಿದ್ದೇವೆ” ಎಂದರು.

ಚೆನ್ನೈ ಕಾರ್ಪೊರೇಷನ್ ಮೇಯರ್ ಪ್ರಿಯಾ ರಾಜನ್ ಮಾತನಾಡಿ, “ನಾವು ಉತ್ತಮವಾಗಿ ಸಿದ್ಧರಾಗಿದ್ದೇವೆ. ಸಿಎಂ ಮತ್ತು ಡಿಸಿಎಂ ಪರಿಶೀಲನಾ ಸಭೆ ನಡೆಸಿದ್ದಾರೆ. ಎಲ್ಲವೂ ನಿಯಂತ್ರಣದಲ್ಲಿದೆ. ಕಳೆದ ವರ್ಷ ಹೆಚ್ಚಾಗಿ ಹಾನಿಗೊಳಗಾದ ತಗ್ಗು ಪ್ರದೇಶಗಳ ಮೇಲೆ ನಾವು ಗಮನಹರಿಸಿದ್ದೇವೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ ನೀರು ತಕ್ಷಣವೇ ಬರಿದಾಗುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಜಲಾವೃತವಾಗುವುದನ್ನು ತಪ್ಪಿಸಲು 900 ಕ್ಕೂ ಹೆಚ್ಚು ಪಂಪ್‌ಗಳು, 57 ಮೋಟಾರ್‌ಗಳನ್ನು ನಗರ ಮಿತಿಯ ಸುತ್ತಲೂ ಇರಿಸಲಾಗಿದೆ” ಎಂದು ಹೇಳಿದರು.

“ನಗರದಾದ್ಯಂತ ಮಳೆನೀರು ಚರಂಡಿಗಳನ್ನು ನಿರ್ಮಿಸಲಾಗಿದೆ” ಎಂದು ಅವರು ಹೇಳಿದರು. “ಈ ವರ್ಷ ಜೂನ್‌ನಿಂದಲೇ ಹೂಳು ತೆಗೆಯುವ ಕಾಮಗಾರಿ ಆರಂಭಿಸಿದ್ದೇವೆ. ಚೆನ್ನೈನಲ್ಲಿ ನಮಗೆ 33 ಕಾಲುವೆಗಳಿವೆ. ಡಬ್ಲ್ಯುಆರ್‌ಡಿ ಎಲ್ಲದರಲ್ಲೂ ಡಿಸಿಲ್ಟಿಂಗ್ ಮಾಡಿದೆ. ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡುತ್ತಿವೆ. ಸಾರ್ವಜನಿಕರಲ್ಲಿ ಭಯವಿದೆ. ಆದರೆ, ಸರ್ಕಾರದ ಕಡೆಯಿಂದ ನಾವು ಅವರನ್ನು ಸುರಕ್ಷಿತವಾಗಿರಿಸಲು ಮತ್ತು ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ಪ್ರಿಯಾ ರಾಜನ್ ಹೇಳಿದರು.

ಇದನ್ನೂ ಓದಿ; ಮಣಿಪುರದ ಸುದೀರ್ಘ ಹಿಂಸಾಚಾರದ ಬಳಿಕ ಇಂದು ಕುಕಿ, ಮೈತೇಯಿ, ನಾಗಾ ಶಾಸಕರ ಮೊದಲ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...