Homeಮುಖಪುಟಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು

ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು

- Advertisement -
- Advertisement -

ಹಿಜಾಬ್‌ ವಿಚಾರವಾಗಿ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪನ್ನು ವಿರೋಧಿಸಿ ತಮಿಳುನಾಡಿನ ಚೆನ್ನೈನಲ್ಲಿರುವ ದಿ ನ್ಯೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ರಾಜ್ಯ ಹೈಕೋರ್ಟ್ ಮಂಗಳವಾರದಂದು ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ.

ಸಾವಿರಾರು ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದು, ಅವರು ಹಿಡಿದಿರುವ ಬಿತ್ತಿಪತ್ರಗಳಲ್ಲಿ, ‘ಸಾಂಸ್ಕೃತಿಕ ನರಮೇಧದ ವಿರುದ್ಧ ಹೋರಾಟ’ ಮತ್ತು ‘ನಾವು ಹಿಜಾಬ್ ಅನ್ನು ಬೆಂಬಲಿಸುತ್ತೇವೆ’ ಎಂದು ಬರೆಯಲಾಗಿದೆ.

ಇಂದು ಮುಂಜಾನೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ನೀಡಿದ ತೀರ್ಪಿನಲ್ಲಿ, “ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯಲ್ಲಿ ಅತ್ಯಗತ್ಯವಾದ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ನಾವು ಪರಿಗಣಿಸಿದ್ದೇವೆ” ಎಂದು ಹೇಳಿದ್ದಾರೆ

“ಶಾಲಾ ಸಮವಸ್ತ್ರದ ಸೂಚನೆಯನ್ನು ಅನ್ನು ವಿರೋಧಿಸಲು ಸಾಧ್ಯವಿಲ್ಲ, ಅದು ಸಮಂಜಸವಾದ ನಿರ್ಬಂಧವಾಗಿದೆ” ಎಂದು ಅವರು ತೀರ್ಪಿನಲ್ಲಿ ಹೇಳಿದ್ದಾರೆ.

ಹಿಜಾಬ್ ಪರವಾಗಿ ಮೊದಲು ಪ್ರತಿಭಟನೆ ಆರಂಭಿಸಿದ ಉಡುಪಿ ಕಾಲೇಜಿನ ವಿದ್ಯಾರ್ಥಿಗಳು ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ವಕೀಲ ಅನಸ್ ತನ್ವೀರ್ ಟ್ವೀಟ್ ಮಾಡಿದ್ದಾರೆ. “ಹಿಜಾಬ್ ವಿಚಾರವಾಗಿ ಉಡುಪಿಯ ನನ್ನ ಕಕ್ಷಿದಾರರನ್ನು ಭೇಟಿಯಾದೆ. ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಹೋಗುತ್ತಿದ್ದೇನೆ, ಇನ್ಶಾ ಅಲ್ಲಾಹ್. ಈ ಹುಡುಗಿಯರು ಹಿಜಾಬ್ ಧರಿಸುವ ತಮ್ಮ ಹಕ್ಕುಗಳನ್ನು ಚಲಾಯಿಸುತ್ತಲೇ ತಮ್ಮ ಶಿಕ್ಷಣವನ್ನು ಮುಂದುವರಿಸುತ್ತಾರೆ, ಇನ್ಶಾ ಅಲ್ಲಾಹ್‌. ಈ ಹುಡುಗಿಯರು ಸಂವಿಧಾನ ಮತ್ತು ನ್ಯಾಯಾಲಯದ ಮೇಲಿನ ಭರವಸೆ ಕಳೆದುಕೊಂಡಿಲ್ಲ…” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನ್ಯಾಯಾಂಗ ಉಲ್ಲಂಘನೆ ಆದಾರದ ಮೇಲೆ ಒದ್ದು ಒಳಗೆ ಹಾಕಬೇಕಿದೆ ಇವರಿಗೆ

  2. ಕಡ್ಡಿ ಇದ್ದನ್ನ ಗುಡ್ಡ ಮಾಡಿ ರಾಜಕಾರಿಣಿಗಳು ಮಜಾ ನೋಡ್ತಾ ಇದ್ದಾರೆ. ಹಿಂದೂ ಮುಸ್ಲಿಮ್ ಸಾಮರಸ್ಯದಿಂದ ಬದುಕುತಿದ್ದವರನ್ನ ವೈರಿಗಳನ್ನಾಗಿ ಮಾಡಿ ಮಜಾ ನೋಡ್ತಾ ಇದ್ದಾರೆ. ಮೊದಲು ಈ ರಾಜಕಾರಿಣಿಗಳು ಹಾಗೂ ಗೊಧಿ ಮೀಡಿಯಾದವರನ್ನ ಹಿಡಿತದಲ್ಲಿಡಬೇಕು..

  3. ಹೈಕೋರ್ಟಿನ ಈ ತೀರ್ಪಿನಿಂದ ಮುಸ್ಲಿಂ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಹಿನ್ನಡೆಯಾಗಲಿದೆ. ಮನುವಾದಿಗಳು ಬಯಸಿದ್ದೂ ಇದನ್ನೇ. ಇದು ಆಗಬಾರದಿತ್ತು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...