Homeಮುಖಪುಟಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು

ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು

- Advertisement -
- Advertisement -

ಹಿಜಾಬ್‌ ವಿಚಾರವಾಗಿ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪನ್ನು ವಿರೋಧಿಸಿ ತಮಿಳುನಾಡಿನ ಚೆನ್ನೈನಲ್ಲಿರುವ ದಿ ನ್ಯೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ರಾಜ್ಯ ಹೈಕೋರ್ಟ್ ಮಂಗಳವಾರದಂದು ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ.

ಸಾವಿರಾರು ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದು, ಅವರು ಹಿಡಿದಿರುವ ಬಿತ್ತಿಪತ್ರಗಳಲ್ಲಿ, ‘ಸಾಂಸ್ಕೃತಿಕ ನರಮೇಧದ ವಿರುದ್ಧ ಹೋರಾಟ’ ಮತ್ತು ‘ನಾವು ಹಿಜಾಬ್ ಅನ್ನು ಬೆಂಬಲಿಸುತ್ತೇವೆ’ ಎಂದು ಬರೆಯಲಾಗಿದೆ.

ಇಂದು ಮುಂಜಾನೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ನೀಡಿದ ತೀರ್ಪಿನಲ್ಲಿ, “ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯಲ್ಲಿ ಅತ್ಯಗತ್ಯವಾದ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ನಾವು ಪರಿಗಣಿಸಿದ್ದೇವೆ” ಎಂದು ಹೇಳಿದ್ದಾರೆ

“ಶಾಲಾ ಸಮವಸ್ತ್ರದ ಸೂಚನೆಯನ್ನು ಅನ್ನು ವಿರೋಧಿಸಲು ಸಾಧ್ಯವಿಲ್ಲ, ಅದು ಸಮಂಜಸವಾದ ನಿರ್ಬಂಧವಾಗಿದೆ” ಎಂದು ಅವರು ತೀರ್ಪಿನಲ್ಲಿ ಹೇಳಿದ್ದಾರೆ.

ಹಿಜಾಬ್ ಪರವಾಗಿ ಮೊದಲು ಪ್ರತಿಭಟನೆ ಆರಂಭಿಸಿದ ಉಡುಪಿ ಕಾಲೇಜಿನ ವಿದ್ಯಾರ್ಥಿಗಳು ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ವಕೀಲ ಅನಸ್ ತನ್ವೀರ್ ಟ್ವೀಟ್ ಮಾಡಿದ್ದಾರೆ. “ಹಿಜಾಬ್ ವಿಚಾರವಾಗಿ ಉಡುಪಿಯ ನನ್ನ ಕಕ್ಷಿದಾರರನ್ನು ಭೇಟಿಯಾದೆ. ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಹೋಗುತ್ತಿದ್ದೇನೆ, ಇನ್ಶಾ ಅಲ್ಲಾಹ್. ಈ ಹುಡುಗಿಯರು ಹಿಜಾಬ್ ಧರಿಸುವ ತಮ್ಮ ಹಕ್ಕುಗಳನ್ನು ಚಲಾಯಿಸುತ್ತಲೇ ತಮ್ಮ ಶಿಕ್ಷಣವನ್ನು ಮುಂದುವರಿಸುತ್ತಾರೆ, ಇನ್ಶಾ ಅಲ್ಲಾಹ್‌. ಈ ಹುಡುಗಿಯರು ಸಂವಿಧಾನ ಮತ್ತು ನ್ಯಾಯಾಲಯದ ಮೇಲಿನ ಭರವಸೆ ಕಳೆದುಕೊಂಡಿಲ್ಲ…” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನ್ಯಾಯಾಂಗ ಉಲ್ಲಂಘನೆ ಆದಾರದ ಮೇಲೆ ಒದ್ದು ಒಳಗೆ ಹಾಕಬೇಕಿದೆ ಇವರಿಗೆ

  2. ಕಡ್ಡಿ ಇದ್ದನ್ನ ಗುಡ್ಡ ಮಾಡಿ ರಾಜಕಾರಿಣಿಗಳು ಮಜಾ ನೋಡ್ತಾ ಇದ್ದಾರೆ. ಹಿಂದೂ ಮುಸ್ಲಿಮ್ ಸಾಮರಸ್ಯದಿಂದ ಬದುಕುತಿದ್ದವರನ್ನ ವೈರಿಗಳನ್ನಾಗಿ ಮಾಡಿ ಮಜಾ ನೋಡ್ತಾ ಇದ್ದಾರೆ. ಮೊದಲು ಈ ರಾಜಕಾರಿಣಿಗಳು ಹಾಗೂ ಗೊಧಿ ಮೀಡಿಯಾದವರನ್ನ ಹಿಡಿತದಲ್ಲಿಡಬೇಕು..

  3. ಹೈಕೋರ್ಟಿನ ಈ ತೀರ್ಪಿನಿಂದ ಮುಸ್ಲಿಂ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಹಿನ್ನಡೆಯಾಗಲಿದೆ. ಮನುವಾದಿಗಳು ಬಯಸಿದ್ದೂ ಇದನ್ನೇ. ಇದು ಆಗಬಾರದಿತ್ತು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...