Homeಕರ್ನಾಟಕಚೇತನ್‌ ಬಂಧನ; ವಾಕ್ ಸ್ವಾತಂತ್ರ್ಯದ ಹರಣವೆಂದು ಜನಾಕ್ರೋಶ

ಚೇತನ್‌ ಬಂಧನ; ವಾಕ್ ಸ್ವಾತಂತ್ರ್ಯದ ಹರಣವೆಂದು ಜನಾಕ್ರೋಶ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರನ್ನು ಪ್ರಕರಣದಲ್ಲಿ ಸಿಲುಕಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಸಂಬಂಧ ಆಕ್ರೋಶ ವ್ಯಕ್ತವಾಗುತ್ತಿದೆ. ಅನೇಕ ಹೋರಾಟಗಾರರು, ಚಿಂತಕರು ಚೇತನ್‌ ಬಂಧನವನ್ನು ಖಂಡಿಸಿದ್ದಾರೆ.

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್: ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಲಿಂಗಾಯತ ಸಮುದಾಯದ ಮುಖಂಡರಾದ ಸಿದ್ದಪ್ಪ ಮೂಲಗೆಯವರು ಪ್ರತಿಕ್ರಿಯಿಸಿದ್ದು, “ಲಿಂಗಾಯತರ ಪ್ರಾತಿನಿಧಿಕ ಸಂಸ್ಥೆಯೆಂದು ಹೇಳಿಕೊಳ್ಳುವ ಜಾಗತಿಕ ಲಿಂಗಾಯತ ಮಹಾಸಭೆಯು ಸಮುದಾಯದ ನಟ ಚೇತನ್ ಬಂಧನವನ್ನು ಇಂದಾದರೂ ಖಂಡಿಸುತ್ತದೆಯೋ? ಅಥವಾ ಬಿಜೆಪಿ ಮೇಲಿನ ಪ್ರೀತಿ ಖಂಡಿಸದಂತೆ ತಡೆಯುತ್ತದೆಯೋ?” ಎಂದು ಪ್ರಶ್ನಿಸಿದ್ದಾರೆ.

ಚಿಂತಕರಾದ ಆದಿತ್ಯ ಜೆ.ಬಿದನೂರು ಪೋಸ್ಟ್‌ ಮಾಡಿದ್ದು, “ಈ ಕೆಳಗಿನ ಪೋಸ್ಟಿಗಾಗಿ ಚೇತನ್ ಅಹಿಂಸಾನನ್ನು ಬಂಧಿಸಲಾಗಿದೆ ಅನ್ನುವುದಾದರೆ, ಅದು ಉರಿಗೌಡ-ನಂಜೇಗೌಡ ವಿಚಾರದಲ್ಲಿ ಸಂಘ ಪರಿವಾರಕ್ಕೆ ಆದ ಹಿನ್ನಡೆಯನ್ನು ಮರೆಮಾಚುವ, ‘ಚುನಾವಣೆಯ ಸಮಯದಲ್ಲಿ ಹಿಂದುತ್ವದ ಝೋಂಭೀ ಪಡೆ ಮತ್ತು ಆಡಿಯನ್ಸಿನ ಮತಾಂಧತೆ, ಉತ್ಸಾಹವನ್ನು ಈವರೆಗಿನ ಮೊಮೆಂಟಮ್‌ನಲ್ಲೇ ಮೇಂಟೇನ್ ಮಾಡುವ ಕಾರ್ಯಾಚಾರಣೆ ಅಷ್ಟೇ. ಯಾಕೆಂದರೆ, ಈ ಕೆಳಗಿನವು ಹಿಂದುತ್ವಕ್ಕೆ ಸಂಬಂಧಿಸಿದಂತೆ ಬೇಸಿಕ್ ಫ್ಯಾಕ್ಟುಗಳು. ಒಪೀನಿಯನ್ ಕೂಡ ಅಲ್ಲ! ಎಫ್ಐಆರ್ ರದ್ದು ಮಾಡದೇ ಅಥವಾ ಕೊನೆಯಪಕ್ಷ ಜಾಮೀನು ಮಂಜೂರು ಮಾಡದೇ ಕಸ್ಟಡಿಗೆ ಕೊಡಲಾಗಿದೆ ಅಂದರೆ, ಇದು ಶುದ್ಧ ಪೊಲಿಟಿಕಲ್ ಕೇಸು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಬರಹಗಾರ ಅಕ್ರಂ ಪೀರ್‌‌ ಈ ಕುರಿತು ಪೋಸ್ಟ್‌ ಮಾಡಿದ್ದು, “ಬಿಜೆಪಿಯ ಸುಳ್ಳುಗಳ ಬಗ್ಗೆ ಪೋಸ್ಟ್ ಹಾಕಿದ್ದಕ್ಕೆ ದೂರು ಕೊಟ್ಟ ತಕ್ಷಣ ನಟ ಚೇತನ್ ಅವರನ್ನು ಪೊಲೀಸರು ಅರೆಸ್ಟ್ ಮಾಡ್ತಾರೆ, ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನ ಅಂತ ಆದೇಶ ನೀಡ್ತಾರೆ. ಲೋಕಾಯುಕ್ತ ದಾಳಿ ವೇಳೆ ಕೋಟಿಗಟ್ಟಲೆ ಅಕ್ರಮ‌ ಹಣದ ಜೊತೆ ಸಿಕ್ಕಿಹಾಕಿಕೊಂಡ ಶಾಸಕ ಮಾಡಾಳ್ ವಿರೂಪಾಕ್ಷರನ್ನು ಪೊಲೀಸರು ಬಂಧಿಸಲ್ಲ. ಕೋರ್ಟ್ ನಿರೀಕ್ಷಣಾ ಜಾಮೀನು ಕೊಡುತ್ತದೆ. ಸುಳ್ಯದ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರತೀಕಾರವಾಗಿ ಸುರತ್ಕಲ್‌ನ ಮುಸ್ಲಿಂ ಯುವಕ ಫಾಜಿಲ್‌ನ ಹತ್ಯೆ ಮಾಡಿದ್ದೇವೆ ಎಂದು ಘಂಟಾಘೋಷವಾಗಿ ಮೈಕ್ ಮುಂದೆ ಕಿರುಚಿ ಹೇಳಿದ ಶರಣ್ ಪಂಪ್‌ವೆಲ್‌ ವಿರುದ್ಧ ಫಾಜಿಲ್ ತಂದೆಯೇ ದೂರು ಕೊಟ್ಟರೂ ಬಂಧನವಾಗಿಲ್ಲ. ಎಲ್ಲಿದೆನ್ಯಾಯ?” ಎಂದು ಕೇಳಿದ್ದಾರೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್‌ ಕಾಟಿಪಳ್ಳ ಪ್ರತಿಕ್ರಿಯಿಸಿ, “ನಟ ಚೇತನ್ ಬಂಧನ ಖಂಡನೀಯ. ಬಿಜೆಪಿಯ ಸಿದ್ದಾಂತವನ್ನು ಪ್ರಶ್ನಿಸಿದರೆ, ಟೀಕಿಸಿದರೆ ಜೈಲಿಗೆ ಹಾಕುವುದಾದರೆ ಪ್ರಜಾಪ್ರಭುತ್ವ ಎಲ್ಲಿ ಉಳಿಯಿತು? ಚೇತನ್ ಫೇಸ್ ಬುಕ್ ಪೋಸ್ಟ್‌ನಲ್ಲಿ ಬಂಧನ ನಡೆಸುವಂತಹ ವಿಚಾರ ಏನಿತ್ತು ಎಂದು ಮುಖ್ಯಮಂತ್ರಿಗಳು ಜನತೆಗೆ ವಿವರಿಸಲಿ. ಬಿಜೆಪಿ ಇಡೀ ದೇಶವನ್ನು ಜೈಲಾಗಿ ಪರಿವರ್ತಿಸುತ್ತಿದೆ. ಬಾಯಿ ತೆರೆದರೆ ಇಲ್ಲಿ ಜೈಲು ಭಾಗ್ಯ. ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಚೇತನ್ ಬಂಧನವನ್ನು ಖಂಡಿಸುತ್ತದೆ. ಬಿಡುಗಡೆಗೆ ಆಗ್ರಹಿಸುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...