Homeಮುಖಪುಟಛತ್ತೀಸ್‌ಗಢ: 1.18 ಕೋಟಿ ರೂ. ಬಹುಮಾನ ಘೋಷಣೆಯಾಗಿದ್ದ 23 ನಕ್ಸಲರು ಪೊಲೀಸರಿಗೆ ಶರಣು

ಛತ್ತೀಸ್‌ಗಢ: 1.18 ಕೋಟಿ ರೂ. ಬಹುಮಾನ ಘೋಷಣೆಯಾಗಿದ್ದ 23 ನಕ್ಸಲರು ಪೊಲೀಸರಿಗೆ ಶರಣು

- Advertisement -
- Advertisement -

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ 23 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ. 14 ಪುರುಷರು ಮತ್ತು 9 ಮಹಿಳೆಯರ ಈ ತಂಡದ ಮೇಲೆ ಒಟ್ಟು 1.18 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ.

ನಿಷೇಧಿತ ಭಾರತ ಕಮ್ಯುನಿಸ್ಟ್ ಪಕ್ಷದ (ಮಾವೋವಾದಿ) ಸಶಸ್ತ್ರ ವಿಭಾಗವಾದ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ)ಯ ಬಲಿಷ್ಠ ಬೆಟಾಲಿಯನ್ 1ರ ಎಂಟು ಕಟ್ಟಾ ಮಾವೋವಾದಿಗಳು ಶರಣಾದವರಲ್ಲಿ ಸೇರಿದ್ದಾರೆ. ಶರಣಾಗುವಾಗ 23 ಜನರ ಪೈಕಿ ಯಾರ ಬಳಿಯೂ ಶಸ್ತ್ರಾಸ್ತ್ರಗಳು ಇರಲಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್.ಕಾಂ ವರದಿ ಮಾಡಿದೆ.

ಒಟ್ಟು 23 ನಕ್ಸಲರು ಶರಣಾಗಿದ್ದಾರೆ. ಅವರೆಲ್ಲರೂ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಸರ್ಕಾರದ ನಿಯಮಗಳ ಪ್ರಕಾರ ಅವರಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು. ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬರುವಂತೆ ನಾನು ಈ ಸಂದರ್ಭದಲ್ಲಿ ಮನವಿ ಮಾಡುತ್ತೇನೆ ಎಂದು ಸುಕ್ಮಾ ಎಸ್ಪಿ ಕಿರಣ್ ಚೌಹಾಣ್ ಹೇಳಿದ್ದಾರೆ.

ಶರಣಾದವರಲ್ಲಿ 35 ವರ್ಷದ ಲೋಕೇಶ್ ಅಲಿಯಾಸ್ ಪೋಡಿಯಂ ಭೀಮಾ ಎಂಬ ವಿಭಾಗೀಯ ಸಮಿತಿ ಸದಸ್ಯ (ಡಿವಿಸಿಎಂ) ಸೇರಿದ್ದಾರೆ. 2007ರಿಂದ, ಇವರು ಬಸ್ತಾರ್ ಪ್ರದೇಶದಲ್ಲಿ ಹಲವಾರು ಭದ್ರತಾ ಸಿಬ್ಬಂದಿಯನ್ನು ಕೊಂದ ಕನಿಷ್ಠ ಒಂಬತ್ತು ದಾಳಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಮಟ್ಟದಲ್ಲಿ, ದಂಡಕಾರಣ್ಯ ವಿಶೇಷ ವಲಯ ಸಮಿತಿಯು ಉನ್ನತ ಸಮಿತಿಯಾಗಿದ್ದು, ನಂತರ ಪ್ರತಿ ವಿಭಾಗದಲ್ಲಿ ಡಿವಿಸಿಎಂಗಳು ಇರುತ್ತಾರೆ ಎಂದು ಎಸ್ಪಿ ವಿವರಿಸಿದ್ದಾರೆ.

ಶರಣಾದ ಮತ್ತೊಬ್ಬ ಮಾವೋವಾದಿಯನ್ನು ರಮೇಶ್ ಅಲಿಯಾಸ್ ಕಲ್ಮು (35) ಎಂದು ಗುರುತಿಸಲಾಗಿದ್ದು, ಇವರು ಉನ್ನತ ಮಾವೋವಾದಿ ನಾಯಕ ಮದ್ವಿ ಹಿಡ್ಮಾ ಅವರ ಗಾರ್ಡ್ ಕಮಾಂಡರ್ ಆಗಿದ್ದರು. ಇಬ್ಬರ ಮೇಲೂ ತಲಾ 8 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ಶರಣಾದ ಪ್ರತಿಯೊಬ್ಬ ಮಾವೋವಾದಿಗೂ ಶರಣಾಗತಿ ಮೊತ್ತವಾಗಿ 50,000 ರೂ.ಗಳನ್ನು ನೀಡಲಾಗುತ್ತದೆ ಮತ್ತು ಕೌಶಲ್ಯ ತರಬೇತಿ ಒದಗಿಸಲಾಗುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್.ಕಾಂ ವರದಿ ಹೇಳಿದೆ

ಶುಕ್ರವಾರ, ಡಿವಿಸಿಎಂ ಸದಸ್ಯ ಸೇರಿದಂತೆ 37.50 ಲಕ್ಷ ರೂ. ಬಹುಮಾನ ಘೋಷಣೆಯಾಗಿದ್ದ 22 ಮಾವೋವಾದಿಗಳು ನಾರಾಯಣಪುರದಲ್ಲಿ ಶರಣಾಗಿದ್ದರು.

ಜೂನ್ 18ರಂದು ಛತ್ತೀಸ್‌ಗಢದ ಅವಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮಾಪುರ-ಮುರ್ದಂಡ ರಸ್ತೆಯಲ್ಲಿ ನಕ್ಸಲರು ಇಟ್ಟಿದ್ದ ಐಇಡಿ ಸ್ಪೋಟಗೊಂಡು ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಜವಾನವರು ಗಾಯಗೊಂಡಿದ್ದರು.

ಅವಘಡ ನಡೆದಾಗ ಗಾಯಗೊಂಡ ಸಿರ್‌ಪಿಎಫ್ ಜವಾನರು ಕರ್ತವ್ಯದಲ್ಲಿದ್ದರು. ಅವರಿಗೆ ಘಟನಾ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಿಜಾಪುರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯವು ಶೀಘ್ರದಲ್ಲೇ ನಕ್ಸಲ್ ಹಿಂಸಾಚಾರದಿಂದ ಮುಕ್ತವಾಗಲಿದೆ. ನಕ್ಸಲ್ ಬಾಧಿತ ಪ್ರದೇಶಗಳು ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪಡೆಯಲಿದೆ ಎಂದು ಜುಲೈ 5ರಂದು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹೇಳಿದ್ದರು.

ಎಲ್ಲಾ ರೀತಿಯಲ್ಲೂ ನಮ್ಮ ರಾಜ್ಯ ಶ್ರೀಮಂತವಾಗಿದೆ. ಶೇಕಡ 44 ಕ್ಕಿಂತ ಹೆಚ್ಚಿನ ಭೂಮಿ ಅರಣ್ಯವನ್ನು ಹೊಂದಿದೆ. ಮಣ್ಣು ಫಲತ್ತವಾಗಿದೆ ಮತ್ತು ರೈತರು ಕಷ್ಟಪಟ್ಟು ದುಡಿಯುತ್ತಿದ್ದಾರೆ. ನಕ್ಸಲಿಸಂ ನಮ್ಮ ಅಭಿವೃದ್ದಿಗೆ ದೊಡ್ಡ ತಡೆಯಾಗಿದೆ. ಆದರೆ, ನಾವು ಅದರಿಂದ ಹೊರ ಬರುತ್ತೇವೆ. ಶರಣಾದ ನಕ್ಸಲರಿಗೆ ನಾವು ಅದ್ಬುತವಾದ ಪುನರ್ವಸತಿ ನಿಯಮಗಳನ್ನು ರೂಪಿಸಿದ್ದೇವೆ. ಶೀಘ್ರದಲ್ಲೇ ಛತ್ತೀಸ್‌ಗಢ ನಕ್ಸಲ್ ಹಿಂಸಾಚಾರ ಮುಕ್ತವಾಗಲಿದೆ ಮತ್ತು ಬಸ್ತಾರ್‌ನಂತಹ ಪ್ರದೇಶಗಳು ರಸ್ತೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪಡೆಯಲಿದೆ ಎಂದಿದ್ದರು.

ಕೇಂದ್ರ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ, 2024 ಒಂದರಲ್ಲೇ 290 ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ, 1,090 ಜನರನ್ನು ಬಂಧಿಸಲಾಗಿದೆ ಮತ್ತು 881 ಮಂದಿ ಶರಣಾಗಿದ್ದಾರೆ. ಇತ್ತೀಚಿನ ಕಾರ್ಯಾಚರಣೆ, ಅಂದರೆ 2025ರ ಮಾರ್ಚ್‌ ತಿಂಗಳಲ್ಲಿ ಬಿಜಾಪುರದಲ್ಲಿ 50 ನಕ್ಸಲರು ಶರಣಾಗಿದ್ದಾರೆ. ಸುಕ್ಮಾದಲ್ಲಿ 16, ಕನ್ಕೇರ್ ಮತ್ತು ಬಿಜಾಪುರದಲ್ಲಿ 22 ಜನರನ್ನು ಹತ್ಯೆ ಮಾಡಲಾಗಿದೆ. ಮಾರ್ಚ್ 31, 2026ರೊಳಗೆ ದೇಶದಲ್ಲಿ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡುವುದಾಗಿ ಸರ್ಕಾರ ಹೇಳಿಕೊಂಡಿದೆ.

ಐಐಎಂ-ಕಲ್ಕತ್ತಾ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ: ವಿದ್ಯಾರ್ಥಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...