Homeಮುಖಪುಟಛತ್ತೀಸ್‌ಗಢ: 1.18 ಕೋಟಿ ರೂ. ಬಹುಮಾನ ಘೋಷಣೆಯಾಗಿದ್ದ 23 ನಕ್ಸಲರು ಪೊಲೀಸರಿಗೆ ಶರಣು

ಛತ್ತೀಸ್‌ಗಢ: 1.18 ಕೋಟಿ ರೂ. ಬಹುಮಾನ ಘೋಷಣೆಯಾಗಿದ್ದ 23 ನಕ್ಸಲರು ಪೊಲೀಸರಿಗೆ ಶರಣು

- Advertisement -
- Advertisement -

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ 23 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ. 14 ಪುರುಷರು ಮತ್ತು 9 ಮಹಿಳೆಯರ ಈ ತಂಡದ ಮೇಲೆ ಒಟ್ಟು 1.18 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ.

ನಿಷೇಧಿತ ಭಾರತ ಕಮ್ಯುನಿಸ್ಟ್ ಪಕ್ಷದ (ಮಾವೋವಾದಿ) ಸಶಸ್ತ್ರ ವಿಭಾಗವಾದ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ)ಯ ಬಲಿಷ್ಠ ಬೆಟಾಲಿಯನ್ 1ರ ಎಂಟು ಕಟ್ಟಾ ಮಾವೋವಾದಿಗಳು ಶರಣಾದವರಲ್ಲಿ ಸೇರಿದ್ದಾರೆ. ಶರಣಾಗುವಾಗ 23 ಜನರ ಪೈಕಿ ಯಾರ ಬಳಿಯೂ ಶಸ್ತ್ರಾಸ್ತ್ರಗಳು ಇರಲಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್.ಕಾಂ ವರದಿ ಮಾಡಿದೆ.

ಒಟ್ಟು 23 ನಕ್ಸಲರು ಶರಣಾಗಿದ್ದಾರೆ. ಅವರೆಲ್ಲರೂ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಸರ್ಕಾರದ ನಿಯಮಗಳ ಪ್ರಕಾರ ಅವರಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು. ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬರುವಂತೆ ನಾನು ಈ ಸಂದರ್ಭದಲ್ಲಿ ಮನವಿ ಮಾಡುತ್ತೇನೆ ಎಂದು ಸುಕ್ಮಾ ಎಸ್ಪಿ ಕಿರಣ್ ಚೌಹಾಣ್ ಹೇಳಿದ್ದಾರೆ.

ಶರಣಾದವರಲ್ಲಿ 35 ವರ್ಷದ ಲೋಕೇಶ್ ಅಲಿಯಾಸ್ ಪೋಡಿಯಂ ಭೀಮಾ ಎಂಬ ವಿಭಾಗೀಯ ಸಮಿತಿ ಸದಸ್ಯ (ಡಿವಿಸಿಎಂ) ಸೇರಿದ್ದಾರೆ. 2007ರಿಂದ, ಇವರು ಬಸ್ತಾರ್ ಪ್ರದೇಶದಲ್ಲಿ ಹಲವಾರು ಭದ್ರತಾ ಸಿಬ್ಬಂದಿಯನ್ನು ಕೊಂದ ಕನಿಷ್ಠ ಒಂಬತ್ತು ದಾಳಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಮಟ್ಟದಲ್ಲಿ, ದಂಡಕಾರಣ್ಯ ವಿಶೇಷ ವಲಯ ಸಮಿತಿಯು ಉನ್ನತ ಸಮಿತಿಯಾಗಿದ್ದು, ನಂತರ ಪ್ರತಿ ವಿಭಾಗದಲ್ಲಿ ಡಿವಿಸಿಎಂಗಳು ಇರುತ್ತಾರೆ ಎಂದು ಎಸ್ಪಿ ವಿವರಿಸಿದ್ದಾರೆ.

ಶರಣಾದ ಮತ್ತೊಬ್ಬ ಮಾವೋವಾದಿಯನ್ನು ರಮೇಶ್ ಅಲಿಯಾಸ್ ಕಲ್ಮು (35) ಎಂದು ಗುರುತಿಸಲಾಗಿದ್ದು, ಇವರು ಉನ್ನತ ಮಾವೋವಾದಿ ನಾಯಕ ಮದ್ವಿ ಹಿಡ್ಮಾ ಅವರ ಗಾರ್ಡ್ ಕಮಾಂಡರ್ ಆಗಿದ್ದರು. ಇಬ್ಬರ ಮೇಲೂ ತಲಾ 8 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ಶರಣಾದ ಪ್ರತಿಯೊಬ್ಬ ಮಾವೋವಾದಿಗೂ ಶರಣಾಗತಿ ಮೊತ್ತವಾಗಿ 50,000 ರೂ.ಗಳನ್ನು ನೀಡಲಾಗುತ್ತದೆ ಮತ್ತು ಕೌಶಲ್ಯ ತರಬೇತಿ ಒದಗಿಸಲಾಗುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್.ಕಾಂ ವರದಿ ಹೇಳಿದೆ

ಶುಕ್ರವಾರ, ಡಿವಿಸಿಎಂ ಸದಸ್ಯ ಸೇರಿದಂತೆ 37.50 ಲಕ್ಷ ರೂ. ಬಹುಮಾನ ಘೋಷಣೆಯಾಗಿದ್ದ 22 ಮಾವೋವಾದಿಗಳು ನಾರಾಯಣಪುರದಲ್ಲಿ ಶರಣಾಗಿದ್ದರು.

ಜೂನ್ 18ರಂದು ಛತ್ತೀಸ್‌ಗಢದ ಅವಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮಾಪುರ-ಮುರ್ದಂಡ ರಸ್ತೆಯಲ್ಲಿ ನಕ್ಸಲರು ಇಟ್ಟಿದ್ದ ಐಇಡಿ ಸ್ಪೋಟಗೊಂಡು ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಜವಾನವರು ಗಾಯಗೊಂಡಿದ್ದರು.

ಅವಘಡ ನಡೆದಾಗ ಗಾಯಗೊಂಡ ಸಿರ್‌ಪಿಎಫ್ ಜವಾನರು ಕರ್ತವ್ಯದಲ್ಲಿದ್ದರು. ಅವರಿಗೆ ಘಟನಾ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಿಜಾಪುರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯವು ಶೀಘ್ರದಲ್ಲೇ ನಕ್ಸಲ್ ಹಿಂಸಾಚಾರದಿಂದ ಮುಕ್ತವಾಗಲಿದೆ. ನಕ್ಸಲ್ ಬಾಧಿತ ಪ್ರದೇಶಗಳು ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪಡೆಯಲಿದೆ ಎಂದು ಜುಲೈ 5ರಂದು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹೇಳಿದ್ದರು.

ಎಲ್ಲಾ ರೀತಿಯಲ್ಲೂ ನಮ್ಮ ರಾಜ್ಯ ಶ್ರೀಮಂತವಾಗಿದೆ. ಶೇಕಡ 44 ಕ್ಕಿಂತ ಹೆಚ್ಚಿನ ಭೂಮಿ ಅರಣ್ಯವನ್ನು ಹೊಂದಿದೆ. ಮಣ್ಣು ಫಲತ್ತವಾಗಿದೆ ಮತ್ತು ರೈತರು ಕಷ್ಟಪಟ್ಟು ದುಡಿಯುತ್ತಿದ್ದಾರೆ. ನಕ್ಸಲಿಸಂ ನಮ್ಮ ಅಭಿವೃದ್ದಿಗೆ ದೊಡ್ಡ ತಡೆಯಾಗಿದೆ. ಆದರೆ, ನಾವು ಅದರಿಂದ ಹೊರ ಬರುತ್ತೇವೆ. ಶರಣಾದ ನಕ್ಸಲರಿಗೆ ನಾವು ಅದ್ಬುತವಾದ ಪುನರ್ವಸತಿ ನಿಯಮಗಳನ್ನು ರೂಪಿಸಿದ್ದೇವೆ. ಶೀಘ್ರದಲ್ಲೇ ಛತ್ತೀಸ್‌ಗಢ ನಕ್ಸಲ್ ಹಿಂಸಾಚಾರ ಮುಕ್ತವಾಗಲಿದೆ ಮತ್ತು ಬಸ್ತಾರ್‌ನಂತಹ ಪ್ರದೇಶಗಳು ರಸ್ತೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪಡೆಯಲಿದೆ ಎಂದಿದ್ದರು.

ಕೇಂದ್ರ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ, 2024 ಒಂದರಲ್ಲೇ 290 ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ, 1,090 ಜನರನ್ನು ಬಂಧಿಸಲಾಗಿದೆ ಮತ್ತು 881 ಮಂದಿ ಶರಣಾಗಿದ್ದಾರೆ. ಇತ್ತೀಚಿನ ಕಾರ್ಯಾಚರಣೆ, ಅಂದರೆ 2025ರ ಮಾರ್ಚ್‌ ತಿಂಗಳಲ್ಲಿ ಬಿಜಾಪುರದಲ್ಲಿ 50 ನಕ್ಸಲರು ಶರಣಾಗಿದ್ದಾರೆ. ಸುಕ್ಮಾದಲ್ಲಿ 16, ಕನ್ಕೇರ್ ಮತ್ತು ಬಿಜಾಪುರದಲ್ಲಿ 22 ಜನರನ್ನು ಹತ್ಯೆ ಮಾಡಲಾಗಿದೆ. ಮಾರ್ಚ್ 31, 2026ರೊಳಗೆ ದೇಶದಲ್ಲಿ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡುವುದಾಗಿ ಸರ್ಕಾರ ಹೇಳಿಕೊಂಡಿದೆ.

ಐಐಎಂ-ಕಲ್ಕತ್ತಾ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ: ವಿದ್ಯಾರ್ಥಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...