Homeಮುಖಪುಟಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ.

ಸರ್ಕಾರದ ಹೊಸ ಶರಣಾಗತಿ ಮತ್ತು ಪುನರ್ವಸತಿ ನೀತಿ ಮತ್ತು ‘ಪೂನಾ ಮಾರ್ಗಂ’ (ಬಸ್ತರ್ ಶ್ರೇಣಿ ಪೊಲೀಸರ ಸಾಮಾಜಿಕ ಪುನರ್ವಸತಿ ಅಭಿಯಾನ) ನಿಂದ ಪ್ರಭಾವಿತರಾಗಿ 12 ಮಹಿಳೆಯರು ಸೇರಿದಂತೆ 41 ಮಂದಿ ನಕ್ಸಲರು ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ಶರಣಾದವರಲ್ಲಿ ನಾಲ್ವರು ಪಿಎಲ್‌ಜಿಎ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಬೆಟಾಲಿಯನ್ ನಂ.1 ಮತ್ತು ಮಾವೋವಾದಿಗಳ ವಿವಿಧ ಕಂಪನಿಗಳ ಸದಸ್ಯರು, ಮೂವರು ಪ್ರದೇಶ ಸಮಿತಿಗಳ ಸದಸ್ಯರು, 11 ಪ್ಲಟೂನ್ ಮತ್ತು ಪ್ರದೇಶ ಸಮಿತಿ ಪಕ್ಷದ ಸದಸ್ಯರು, ಇಬ್ಬರು ಪಿಎಲ್‌ಜಿಎ ಸದಸ್ಯರು, ನಾಲ್ವರು ಮಿಲಿಟಿಯಾ ಪ್ಲಟೂನ್ ಕಮಾಂಡರ್‌ಗಳು, ಒಬ್ಬ ಉಪ ಕಮಾಂಡರ್, ಆರು ಮಂದಿ ಮಿಲಿಟಿಯಾ ಪ್ಲಟೂನ್ ಸದಸ್ಯರು, ಮತ್ತು ಉಳಿದವರು ನಿಷೇಧಿತ ಸಿಪಿಐ (ಮಾವೋವಾದಿ) ನ ಮುಂಚೂಣಿ ಸಂಘಟನೆಗಳಿಗೆ ಸೇರಿದವರು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿವರಿಸಿದ್ದಾರೆ.

ಒಟ್ಟು 41 ಮಂದಿಯಲ್ಲಿ 39 ಜನರು ಮಾವೋವಾದಿಗಳ ದಕ್ಷಿಣ ಉಪ-ವಲಯ ಬ್ಯೂರೋಗೆ ಸೇರಿದವರು ಎಂದು ಹೇಳಿದ್ದಾರೆ.

ಶರಣಾದವರೆಲ್ಲರೂ ದಂಡಕಾರಣ್ಯ ವಿಶೇಷ ವಲಯ ಸಮಿತಿ, ತೆಲಂಗಾಣ ರಾಜ್ಯ ಸಮಿತಿ ಮತ್ತು ನಿಷೇಧಿತ ಸಂಘಟನೆಯ ಧಮ್ತಾರಿ-ಗರಿಯಾಬಂದ್-ನುವಾಪಾ ವಿಭಾಗಗಳೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಶರಣಾದವರು ಸಂವಿಧಾನದಲ್ಲಿ ನಂಬಿಕೆ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಘನತೆಯ ಮತ್ತು ಸುರಕ್ಷಿತ ಜೀವನವನ್ನು ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಪುನರ್ವಸತಿ ನೀತಿಯಡಿಯಲ್ಲಿ, ಪ್ರತಿ ಕೇಡರ್‌ಗೆ ಪ್ರೋತ್ಸಾಹ ಧನವಾಗಿ 50 ಸಾವಿರ ರೂಗಳ ತಕ್ಷಣದ ಆರ್ಥಿಕ ಸಹಾಯವನ್ನು ನೀಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.

ಶರಣಾದವರಲ್ಲಿ ಪಾಂಡ್ರು ಹಪಕ ಅಲಿಯಾಸ್ ಮೋಹನ್ (37), ಬಂಡಿ ಹಪ್ಕಾ (35), ಲಕ್ಕು ಕೊರ್ಸ (37), ಬದ್ರು ಪುಣೆಂ (35), ಸುಖರಾಮ್ ಹೇಮ್ಲಾ (27), ಮಂಜುಳಾ ಹೇಮ್ಲಾ (25), ಮಂಗಳಿ ಮದ್ವಿ ಅಲಿಯಾಸ್ ಶಾಂತಿ (29), ಜೈರಾಮ್ ಕಡಿಯಂ (28) ಈ ಎಲ್ಲರ ತಲೆಗೂ ತಲಾ 8 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು.

ಇದಲ್ಲದೆ, ಮೂವರು ಕೇಡರ್‌ಗಳ ತಲೆಗೆ ತಲಾ 5 ಲಕ್ಷ ರೂ., 12 ಕೇಡರ್‌ಗಳ ತಲೆಗೆ ತಲಾ 2 ಲಕ್ಷ ರೂ. ಮತ್ತು 8 ಕೇಡರ್‌ಗಳ ತಲೆಗೆ ತಲಾ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಪುನರ್ವಸತಿ ನೀತಿಯು ಮಾವೋವಾದಿಗಳು ಹಿಂಸಾಚಾರವನ್ನು ತ್ಯಜಿಸಿ ಮುಖ್ಯವಾಹಿನಿಗೆ ಮರಳಲು ಪ್ರೋತ್ಸಾಹಿಸುತ್ತಿದೆ ಎಂದು ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದು, ಉಳಿದ ಮಾವೋವಾದಿಗಳು ಹಿಂಸಾಚಾರದ ಮಾರ್ಗವನ್ನು ತ್ಯಜಿಸುವಂತೆ ಮನವಿ ಮಾಡಿದ್ದಾರೆ.

ಮಾವೋವಾದಿಗಳು ದಾರಿತಪ್ಪಿಸುವ ಮತ್ತು ಹಿಂಸಾತ್ಮಕ ಸಿದ್ಧಾಂತಗಳನ್ನು ತ್ಯಜಿಸಿ ಭಯವಿಲ್ಲದೆ ಸಮಾಜಕ್ಕೆ ಮರಳಬೇಕು. ‘ಪೂನಾ ಮಾರ್ಗಂ’ ಅಭಿಯಾನವು ಶರಣಾಗುವವರಿಗೆ ಸುರಕ್ಷಿತ, ಗೌರವಾನ್ವಿತ ಮತ್ತು ಸ್ವಾವಲಂಬಿ ಭವಿಷ್ಯವನ್ನು ಖಾತ್ರಿಗೊಳಿಸುತ್ತದೆ. ಈ ಶರಣಾಗತಿಯೊಂದಿಗೆ, ಜನವರಿ 2024 ರಿಂದ ಇದುವರೆಗೆ ಜಿಲ್ಲೆಯಲ್ಲಿ ಹಿಂಸಾಚಾರವನ್ನು ತೊರೆದು ಮುಖ್ಯವಾಹಿನಿಗೆ ಸೇರಿದ ಮಾವೋವಾದಿಗಳ ಸಂಖ್ಯೆ 790ಕ್ಕೆ ಏರಿಕೆಯಾಗಿದೆ ಎಂದು ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.

ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ 202 ನಕ್ಸಲರು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತರಾಗಿದ್ದಾರೆ ಮತ್ತು 1,031 ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಕಳೆದ 23 ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ಉನ್ನತ ಕೇಡರ್‌ಗಳು ಸೇರಿದಂತೆ 2,200 ಕ್ಕೂ ಹೆಚ್ಚು ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...