Homeಮುಖಪುಟಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ.

ಸರ್ಕಾರದ ಹೊಸ ಶರಣಾಗತಿ ಮತ್ತು ಪುನರ್ವಸತಿ ನೀತಿ ಮತ್ತು ‘ಪೂನಾ ಮಾರ್ಗಂ’ (ಬಸ್ತರ್ ಶ್ರೇಣಿ ಪೊಲೀಸರ ಸಾಮಾಜಿಕ ಪುನರ್ವಸತಿ ಅಭಿಯಾನ) ನಿಂದ ಪ್ರಭಾವಿತರಾಗಿ 12 ಮಹಿಳೆಯರು ಸೇರಿದಂತೆ 41 ಮಂದಿ ನಕ್ಸಲರು ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ಶರಣಾದವರಲ್ಲಿ ನಾಲ್ವರು ಪಿಎಲ್‌ಜಿಎ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಬೆಟಾಲಿಯನ್ ನಂ.1 ಮತ್ತು ಮಾವೋವಾದಿಗಳ ವಿವಿಧ ಕಂಪನಿಗಳ ಸದಸ್ಯರು, ಮೂವರು ಪ್ರದೇಶ ಸಮಿತಿಗಳ ಸದಸ್ಯರು, 11 ಪ್ಲಟೂನ್ ಮತ್ತು ಪ್ರದೇಶ ಸಮಿತಿ ಪಕ್ಷದ ಸದಸ್ಯರು, ಇಬ್ಬರು ಪಿಎಲ್‌ಜಿಎ ಸದಸ್ಯರು, ನಾಲ್ವರು ಮಿಲಿಟಿಯಾ ಪ್ಲಟೂನ್ ಕಮಾಂಡರ್‌ಗಳು, ಒಬ್ಬ ಉಪ ಕಮಾಂಡರ್, ಆರು ಮಂದಿ ಮಿಲಿಟಿಯಾ ಪ್ಲಟೂನ್ ಸದಸ್ಯರು, ಮತ್ತು ಉಳಿದವರು ನಿಷೇಧಿತ ಸಿಪಿಐ (ಮಾವೋವಾದಿ) ನ ಮುಂಚೂಣಿ ಸಂಘಟನೆಗಳಿಗೆ ಸೇರಿದವರು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿವರಿಸಿದ್ದಾರೆ.

ಒಟ್ಟು 41 ಮಂದಿಯಲ್ಲಿ 39 ಜನರು ಮಾವೋವಾದಿಗಳ ದಕ್ಷಿಣ ಉಪ-ವಲಯ ಬ್ಯೂರೋಗೆ ಸೇರಿದವರು ಎಂದು ಹೇಳಿದ್ದಾರೆ.

ಶರಣಾದವರೆಲ್ಲರೂ ದಂಡಕಾರಣ್ಯ ವಿಶೇಷ ವಲಯ ಸಮಿತಿ, ತೆಲಂಗಾಣ ರಾಜ್ಯ ಸಮಿತಿ ಮತ್ತು ನಿಷೇಧಿತ ಸಂಘಟನೆಯ ಧಮ್ತಾರಿ-ಗರಿಯಾಬಂದ್-ನುವಾಪಾ ವಿಭಾಗಗಳೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಶರಣಾದವರು ಸಂವಿಧಾನದಲ್ಲಿ ನಂಬಿಕೆ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಘನತೆಯ ಮತ್ತು ಸುರಕ್ಷಿತ ಜೀವನವನ್ನು ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಪುನರ್ವಸತಿ ನೀತಿಯಡಿಯಲ್ಲಿ, ಪ್ರತಿ ಕೇಡರ್‌ಗೆ ಪ್ರೋತ್ಸಾಹ ಧನವಾಗಿ 50 ಸಾವಿರ ರೂಗಳ ತಕ್ಷಣದ ಆರ್ಥಿಕ ಸಹಾಯವನ್ನು ನೀಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.

ಶರಣಾದವರಲ್ಲಿ ಪಾಂಡ್ರು ಹಪಕ ಅಲಿಯಾಸ್ ಮೋಹನ್ (37), ಬಂಡಿ ಹಪ್ಕಾ (35), ಲಕ್ಕು ಕೊರ್ಸ (37), ಬದ್ರು ಪುಣೆಂ (35), ಸುಖರಾಮ್ ಹೇಮ್ಲಾ (27), ಮಂಜುಳಾ ಹೇಮ್ಲಾ (25), ಮಂಗಳಿ ಮದ್ವಿ ಅಲಿಯಾಸ್ ಶಾಂತಿ (29), ಜೈರಾಮ್ ಕಡಿಯಂ (28) ಈ ಎಲ್ಲರ ತಲೆಗೂ ತಲಾ 8 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು.

ಇದಲ್ಲದೆ, ಮೂವರು ಕೇಡರ್‌ಗಳ ತಲೆಗೆ ತಲಾ 5 ಲಕ್ಷ ರೂ., 12 ಕೇಡರ್‌ಗಳ ತಲೆಗೆ ತಲಾ 2 ಲಕ್ಷ ರೂ. ಮತ್ತು 8 ಕೇಡರ್‌ಗಳ ತಲೆಗೆ ತಲಾ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಪುನರ್ವಸತಿ ನೀತಿಯು ಮಾವೋವಾದಿಗಳು ಹಿಂಸಾಚಾರವನ್ನು ತ್ಯಜಿಸಿ ಮುಖ್ಯವಾಹಿನಿಗೆ ಮರಳಲು ಪ್ರೋತ್ಸಾಹಿಸುತ್ತಿದೆ ಎಂದು ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದು, ಉಳಿದ ಮಾವೋವಾದಿಗಳು ಹಿಂಸಾಚಾರದ ಮಾರ್ಗವನ್ನು ತ್ಯಜಿಸುವಂತೆ ಮನವಿ ಮಾಡಿದ್ದಾರೆ.

ಮಾವೋವಾದಿಗಳು ದಾರಿತಪ್ಪಿಸುವ ಮತ್ತು ಹಿಂಸಾತ್ಮಕ ಸಿದ್ಧಾಂತಗಳನ್ನು ತ್ಯಜಿಸಿ ಭಯವಿಲ್ಲದೆ ಸಮಾಜಕ್ಕೆ ಮರಳಬೇಕು. ‘ಪೂನಾ ಮಾರ್ಗಂ’ ಅಭಿಯಾನವು ಶರಣಾಗುವವರಿಗೆ ಸುರಕ್ಷಿತ, ಗೌರವಾನ್ವಿತ ಮತ್ತು ಸ್ವಾವಲಂಬಿ ಭವಿಷ್ಯವನ್ನು ಖಾತ್ರಿಗೊಳಿಸುತ್ತದೆ. ಈ ಶರಣಾಗತಿಯೊಂದಿಗೆ, ಜನವರಿ 2024 ರಿಂದ ಇದುವರೆಗೆ ಜಿಲ್ಲೆಯಲ್ಲಿ ಹಿಂಸಾಚಾರವನ್ನು ತೊರೆದು ಮುಖ್ಯವಾಹಿನಿಗೆ ಸೇರಿದ ಮಾವೋವಾದಿಗಳ ಸಂಖ್ಯೆ 790ಕ್ಕೆ ಏರಿಕೆಯಾಗಿದೆ ಎಂದು ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.

ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ 202 ನಕ್ಸಲರು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತರಾಗಿದ್ದಾರೆ ಮತ್ತು 1,031 ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಕಳೆದ 23 ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ಉನ್ನತ ಕೇಡರ್‌ಗಳು ಸೇರಿದಂತೆ 2,200 ಕ್ಕೂ ಹೆಚ್ಚು ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...