Homeಮುಖಪುಟಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ.

ಸರ್ಕಾರದ ಹೊಸ ಶರಣಾಗತಿ ಮತ್ತು ಪುನರ್ವಸತಿ ನೀತಿ ಮತ್ತು ‘ಪೂನಾ ಮಾರ್ಗಂ’ (ಬಸ್ತರ್ ಶ್ರೇಣಿ ಪೊಲೀಸರ ಸಾಮಾಜಿಕ ಪುನರ್ವಸತಿ ಅಭಿಯಾನ) ನಿಂದ ಪ್ರಭಾವಿತರಾಗಿ 12 ಮಹಿಳೆಯರು ಸೇರಿದಂತೆ 41 ಮಂದಿ ನಕ್ಸಲರು ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ಶರಣಾದವರಲ್ಲಿ ನಾಲ್ವರು ಪಿಎಲ್‌ಜಿಎ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಬೆಟಾಲಿಯನ್ ನಂ.1 ಮತ್ತು ಮಾವೋವಾದಿಗಳ ವಿವಿಧ ಕಂಪನಿಗಳ ಸದಸ್ಯರು, ಮೂವರು ಪ್ರದೇಶ ಸಮಿತಿಗಳ ಸದಸ್ಯರು, 11 ಪ್ಲಟೂನ್ ಮತ್ತು ಪ್ರದೇಶ ಸಮಿತಿ ಪಕ್ಷದ ಸದಸ್ಯರು, ಇಬ್ಬರು ಪಿಎಲ್‌ಜಿಎ ಸದಸ್ಯರು, ನಾಲ್ವರು ಮಿಲಿಟಿಯಾ ಪ್ಲಟೂನ್ ಕಮಾಂಡರ್‌ಗಳು, ಒಬ್ಬ ಉಪ ಕಮಾಂಡರ್, ಆರು ಮಂದಿ ಮಿಲಿಟಿಯಾ ಪ್ಲಟೂನ್ ಸದಸ್ಯರು, ಮತ್ತು ಉಳಿದವರು ನಿಷೇಧಿತ ಸಿಪಿಐ (ಮಾವೋವಾದಿ) ನ ಮುಂಚೂಣಿ ಸಂಘಟನೆಗಳಿಗೆ ಸೇರಿದವರು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿವರಿಸಿದ್ದಾರೆ.

ಒಟ್ಟು 41 ಮಂದಿಯಲ್ಲಿ 39 ಜನರು ಮಾವೋವಾದಿಗಳ ದಕ್ಷಿಣ ಉಪ-ವಲಯ ಬ್ಯೂರೋಗೆ ಸೇರಿದವರು ಎಂದು ಹೇಳಿದ್ದಾರೆ.

ಶರಣಾದವರೆಲ್ಲರೂ ದಂಡಕಾರಣ್ಯ ವಿಶೇಷ ವಲಯ ಸಮಿತಿ, ತೆಲಂಗಾಣ ರಾಜ್ಯ ಸಮಿತಿ ಮತ್ತು ನಿಷೇಧಿತ ಸಂಘಟನೆಯ ಧಮ್ತಾರಿ-ಗರಿಯಾಬಂದ್-ನುವಾಪಾ ವಿಭಾಗಗಳೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಶರಣಾದವರು ಸಂವಿಧಾನದಲ್ಲಿ ನಂಬಿಕೆ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಘನತೆಯ ಮತ್ತು ಸುರಕ್ಷಿತ ಜೀವನವನ್ನು ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಪುನರ್ವಸತಿ ನೀತಿಯಡಿಯಲ್ಲಿ, ಪ್ರತಿ ಕೇಡರ್‌ಗೆ ಪ್ರೋತ್ಸಾಹ ಧನವಾಗಿ 50 ಸಾವಿರ ರೂಗಳ ತಕ್ಷಣದ ಆರ್ಥಿಕ ಸಹಾಯವನ್ನು ನೀಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.

ಶರಣಾದವರಲ್ಲಿ ಪಾಂಡ್ರು ಹಪಕ ಅಲಿಯಾಸ್ ಮೋಹನ್ (37), ಬಂಡಿ ಹಪ್ಕಾ (35), ಲಕ್ಕು ಕೊರ್ಸ (37), ಬದ್ರು ಪುಣೆಂ (35), ಸುಖರಾಮ್ ಹೇಮ್ಲಾ (27), ಮಂಜುಳಾ ಹೇಮ್ಲಾ (25), ಮಂಗಳಿ ಮದ್ವಿ ಅಲಿಯಾಸ್ ಶಾಂತಿ (29), ಜೈರಾಮ್ ಕಡಿಯಂ (28) ಈ ಎಲ್ಲರ ತಲೆಗೂ ತಲಾ 8 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು.

ಇದಲ್ಲದೆ, ಮೂವರು ಕೇಡರ್‌ಗಳ ತಲೆಗೆ ತಲಾ 5 ಲಕ್ಷ ರೂ., 12 ಕೇಡರ್‌ಗಳ ತಲೆಗೆ ತಲಾ 2 ಲಕ್ಷ ರೂ. ಮತ್ತು 8 ಕೇಡರ್‌ಗಳ ತಲೆಗೆ ತಲಾ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಪುನರ್ವಸತಿ ನೀತಿಯು ಮಾವೋವಾದಿಗಳು ಹಿಂಸಾಚಾರವನ್ನು ತ್ಯಜಿಸಿ ಮುಖ್ಯವಾಹಿನಿಗೆ ಮರಳಲು ಪ್ರೋತ್ಸಾಹಿಸುತ್ತಿದೆ ಎಂದು ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದು, ಉಳಿದ ಮಾವೋವಾದಿಗಳು ಹಿಂಸಾಚಾರದ ಮಾರ್ಗವನ್ನು ತ್ಯಜಿಸುವಂತೆ ಮನವಿ ಮಾಡಿದ್ದಾರೆ.

ಮಾವೋವಾದಿಗಳು ದಾರಿತಪ್ಪಿಸುವ ಮತ್ತು ಹಿಂಸಾತ್ಮಕ ಸಿದ್ಧಾಂತಗಳನ್ನು ತ್ಯಜಿಸಿ ಭಯವಿಲ್ಲದೆ ಸಮಾಜಕ್ಕೆ ಮರಳಬೇಕು. ‘ಪೂನಾ ಮಾರ್ಗಂ’ ಅಭಿಯಾನವು ಶರಣಾಗುವವರಿಗೆ ಸುರಕ್ಷಿತ, ಗೌರವಾನ್ವಿತ ಮತ್ತು ಸ್ವಾವಲಂಬಿ ಭವಿಷ್ಯವನ್ನು ಖಾತ್ರಿಗೊಳಿಸುತ್ತದೆ. ಈ ಶರಣಾಗತಿಯೊಂದಿಗೆ, ಜನವರಿ 2024 ರಿಂದ ಇದುವರೆಗೆ ಜಿಲ್ಲೆಯಲ್ಲಿ ಹಿಂಸಾಚಾರವನ್ನು ತೊರೆದು ಮುಖ್ಯವಾಹಿನಿಗೆ ಸೇರಿದ ಮಾವೋವಾದಿಗಳ ಸಂಖ್ಯೆ 790ಕ್ಕೆ ಏರಿಕೆಯಾಗಿದೆ ಎಂದು ಜಿತೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.

ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ 202 ನಕ್ಸಲರು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತರಾಗಿದ್ದಾರೆ ಮತ್ತು 1,031 ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಕಳೆದ 23 ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ಉನ್ನತ ಕೇಡರ್‌ಗಳು ಸೇರಿದಂತೆ 2,200 ಕ್ಕೂ ಹೆಚ್ಚು ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...