Homeಮುಖಪುಟಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ,...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

- Advertisement -
- Advertisement -

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ಜಿಲ್ಲಾಡಳಿತದ ಪ್ರಕಾರ, ಪ್ರತಿಭಟನಾಕಾರರು ಜಿಂದಾಲ್ ಪವರ್ ಲಿಮಿಟೆಡ್‌ನ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ನುಗ್ಗಿ, ಒಂದು ಕನ್ವೇಯರ್ ಬೆಲ್ಟ್, ಎರಡು ಟ್ರ್ಯಾಕ್ಟರ್‌ಗಳು ಮತ್ತು ಇತರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಮತ್ತು ಕಚೇರಿ ಆವರಣವನ್ನು ಧ್ವಂಸಗೊಳಿಸಿದ್ದಾರೆ. ಘರ್ಷಣೆಯ ಸಮಯದಲ್ಲಿ ಪೊಲೀಸ್ ಬಸ್, ಜೀಪ್ ಮತ್ತು ಆಂಬ್ಯುಲೆನ್ಸ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಮತ್ತು ಬೆಂಕಿ ಹಚ್ಚಿದ ನಂತರ ಉದ್ವಿಗ್ನತೆ ಹೆಚ್ಚಾಯಿತು. ಇದರಿಂದಾಗಿ ಹಲವಾರು ಸರ್ಕಾರಿ ವಾಹನಗಳಿಗೆ ಹಾನಿಯಾಯಿತು. ಹಿರಿಯ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕರು ಸ್ಥಳಕ್ಕೆ ತಲುಪಿ ಜನರನ್ನು ಸಮಾಧಾನಪಡಿಸಿದ ನಂತರವೂ ಪರಿಸ್ಥಿತಿ ಉದ್ವಿಗ್ನವಾಗಿತ್ತು ಎಂದು ಆಡಳಿತ ಹೇಳಿದೆ.

ತಮ್ನಾರ್ ಪ್ರದೇಶದ ಗೇರ್ ಪೆಲ್ಮಾ ಸೆಕ್ಟರ್-Iರ ಕಲ್ಲಿದ್ದಲು ಬ್ಲಾಕ್‌ ಪ್ರದೇಶದ 14 ಹಳ್ಳಿಗಳ ಜನರು ಡಿಸೆಂಬರ್ 12 ರಿಂದ ಲಿಬ್ರಾ ಗ್ರಾಮದ ಸಿಎಚ್‌ಪಿ ಚೌಕ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ಪ್ರಸ್ತಾವಿತ ಗಣಿಗಾರಿಕೆ ಯೋಜನೆಗಾಗಿ ಡಿಸೆಂಬರ್ 8 ರಂದು ಧೌರಭಟದಲ್ಲಿ ನಡೆದ ಸಾರ್ವಜನಿಕ ಪರಿಶೀಲನೆಯ ವಿರುದ್ಧ ಈ ಆಂದೋಲನ ನಡೆಯುತ್ತಿದೆ. ಇದನ್ನು ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ನಡೆಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಡಿಸೆಂಬರ್ 4ರಂದು ರಾಜ್ಯದ ಸುರ್ಗುಜಾ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಸಂಬಂಧಿಸಿದಂತೆ ನಡೆದ ಮತ್ತೊಂದು ಪ್ರಮುಖ ಘರ್ಷಣೆಯ ನಂತರ ಈ ಹಿಂಸಾಚಾರ ಸಂಭವಿಸಿದೆ. ಪರ್ಸೋಡಿ ಕಲಾ ಗ್ರಾಮದಲ್ಲಿ ಅಮೇರಾ ಕಲ್ಲಿದ್ದಲು ಗಣಿ ವಿಸ್ತರಣಾ ಯೋಜನೆಯನ್ನು ಪ್ರತಿಭಟಿಸುತ್ತಿದ್ದ ಗ್ರಾಮಸ್ಥರೊಂದಿಗಿನ ಘರ್ಷಣೆಯಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಓಪನ್-ಕಾಸ್ಟ್ ಗಣಿ ವಿಸ್ತರಣೆಗೆ ಸಂಬಂಧಿಸಿದ ಪ್ರತಿಭಟನೆಯು ಹಿಂಸಾತ್ಮಕವಾಗಿ ಮಾರ್ಪಟ್ಟಿತ್ತು. ಪ್ರತಿಭಟನಾಕಾರರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿ ಅಶ್ರುವಾಯು ಪ್ರಯೋಗಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೇರ್ ಪೆಲ್ಮಾ ಕಲ್ಲಿದ್ದಲು ಬ್ಲಾಕ್ ಈಶಾನ್ಯ ಛತ್ತೀಸ್‌ಗಢದ ಪರಿಸರ ಸೂಕ್ಷ್ಮ ಭಾಗದಲ್ಲಿದೆ. ಇದು ದಟ್ಟವಾದ ಕಾಡುಗಳು, ಫಲವತ್ತಾದ ಕೃಷಿ ಭೂಮಿ ಮತ್ತು ಆದಿವಾಸಿ ಸಮುದಾಯಗಳು ಹೆಚ್ಚಿನ ಸಂಖ್ಯೆಲ್ಲಿರುವ ಪ್ರದೇಶವಾಗಿದೆ. ತಮ್ನಾರ್-ಧರಮ್‌ಜೈಗಢ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಕಲ್ಲಿದ್ದಲು ಗಣಿಗಾರಿಕೆಯು ಅರಣ್ಯನಾಶ, ಅಂತರ್ಜಲ ಕುಸಿತ, ವಾಯು ಮಾಲಿನ್ಯ, ಕೃಷಿ ಮತ್ತು ಕುಡಿಯುವ ನೀರಿನ ಅಗತ್ಯಗಳನ್ನು ಬೆಂಬಲಿಸುವ ಸ್ಥಳೀಯ ಹೊಳೆಗಳ ಮಾಲಿನ್ಯಕ್ಕೆ ಕಾರಣವಾಗಬಹುದು ಎಂದು ಪರಿಸರ ಗುಂಪುಗಳು ಎಚ್ಚರಿಸಿವೆ.

ಕಲ್ಲಿದ್ದಲು ನಿರ್ವಹಣಾ ಘಟಕಗಳು, ರೈಲು ಕಾರಿಡಾರ್‌ಗಳು ಮತ್ತು ಬೂದಿ ಕೊಳಗಳು ಸೇರಿದಂತೆ ಗಣಿಗಾರಿಕೆ ಸಂಬಂಧಿತ ಮೂಲಸೌಕರ್ಯಗಳು ವೇಗವಾಗಿ ವಿಸ್ತರಿಸುತ್ತಿದ್ದರೂ, ಈ ಪ್ರದೇಶದಲ್ಲಿ ಬಹು ಕಲ್ಲಿದ್ದಲು ಬ್ಲಾಕ್‌ಗಳ ಸಂಚಿತ ಪರಿಸರ ಪರಿಣಾಮವನ್ನು ಸಮರ್ಪಕವಾಗಿ ನಿರ್ಣಯಿಸಲಾಗಿಲ್ಲ ಎಂದು ಹೋರಾಟಗಾರರು ವಾದಿಸುತ್ತಾರೆ.

ಭಾರತದ ಕಲ್ಲಿದ್ದಲು ಉತ್ಪಾದನೆಗೆ ಛತ್ತೀಸ್‌ಗಢವು ಈಗಾಗಲೇ ಹೆಚ್ಚಿನ ಕೊಡುಗೆ ನೀಡುತ್ತಿದೆ ಎಂದು ಹೋರಾಟಗಾರರು ಬೆಟ್ಟು ಮಾಡುತ್ತಾರೆ. ಹವಾಮಾನ ಬದಲಾವಣೆ ಮತ್ತು ಸಾರ್ವಜನಿಕ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಅನುಮತಿಗಳ ಅಗತ್ಯವನ್ನು ಪ್ರಶ್ನಿಸಿದ್ದಾರೆ.

ಶನಿವಾರ ಬೆಳಿಗ್ಗೆ ಸುಮಾರು 300 ಪ್ರತಿಭಟನಾಕಾರರು ಸ್ಥಳದಲ್ಲಿ ಜಮಾಯಿಸಿದ್ದರು, ಕೆಲವರು ರಸ್ತೆಗಳನ್ನು ತಡೆದು ಸಂಚಾರಕ್ಕೆ ಅಡ್ಡಿಪಡಿಸಿದರು ಎಂದು ಜಿಲ್ಲಾಡಳಿತ ಹೇಳಿಕೆಯಲ್ಲಿ ತಿಳಿಸಿದೆ. ಹಿರಿಯ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಬೆಳಿಗ್ಗೆ 10 ಗಂಟೆ ಸುಮಾರಿಗೆ ಮಧ್ಯಪ್ರವೇಶಿಸಿ ಅವರನ್ನು ತಮ್ಮ ಗೊತ್ತುಪಡಿಸಿದ ಪ್ರತಿಭಟನಾ ಪ್ರದೇಶಕ್ಕೆ ಮರಳುವಂತೆ ಮನವೊಲಿಸಿದರು ಎಂದು ಹೇಳಿದೆ.

ಆದಾಗ್ಯೂ, ಹತ್ತಿರದ ಹಳ್ಳಿಗಳ ಜನರು ಆಂದೋಲನದಲ್ಲಿ ಸೇರಿಕೊಂಡಾಗ ಜನಸಮೂಹ ಸುಮಾರು 1,000 ಕ್ಕೆ ಏರಿತು. ಶಾಂತಿ ಕಾಪಾಡುವಂತೆ ಅಧಿಕಾರಿಗಳು ಪದೇ ಪದೇ ಮನವಿ ಮಾಡಿದರೂ, ಮಧ್ಯಾಹ್ನ 2.30 ರ ಸುಮಾರಿಗೆ ಜನಸಮೂಹ ಹಿಂಸಾತ್ಮಕವಾಗಿ ತಿರುಗಿ, ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಕಲ್ಲು ಮತ್ತು ಕೋಲುಗಳಿಂದ ಸಿಬ್ಬಂದಿ ಮೇಲೆ ದಾಳಿ ಮಾಡಿತು ಎಂದು ತಿಳಿಸಿದೆ.

ಉಪವಿಭಾಗೀಯ ಪೊಲೀಸ್ ಅಧಿಕಾರಿ ಅನಿಲ್ ವಿಶ್ವಕರ್ಮ, ತಮ್ನಾರ್ ಪೊಲೀಸ್ ಠಾಣೆಯ ಉಸ್ತುವಾರಿ ಕಮಲಾ ಪುಸಮ್ ಮತ್ತು ಒಬ್ಬ ಕಾನ್‌ಸ್ಟೆಬಲ್ ಗಂಭೀರ ಗಾಯಗೊಂಡಿದ್ದು, ಮಹಿಳಾ ಸಿಬ್ಬಂದಿ ಸೇರಿದಂತೆ ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದ್ದು, ಕೆಲವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಗಢಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿಭಟನೆಯ ನಂತರ ಜನರ ಗುಂಪು ಜಿಂದಾಲ್ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ನುಗ್ಗಿ, ಯಂತ್ರೋಪಕರಣಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ, ಕಚೇರಿಗಳನ್ನು ಧ್ವಂಸಗೊಳಿಸಿತು ಎಂದು ಆಡಳಿತ ತಿಳಿಸಿದೆ. ರಾಯ್‌ಗಢ ಜಿಲ್ಲಾಧಿಕಾರಿ ಮಾಯಂಕ್ ಚತುರ್ವೇದಿ, ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಂಗ್ ಪಟೇಲ್ ಮತ್ತು ಸ್ಥಳೀಯ ಶಾಸಕಿ ವಿದ್ಯಾವತಿ ಸಿದರ್ ಪರಿಸ್ಥಿತಿಯನ್ನು ಶಾಂತಗೊಳಿಸಲು ಆಗಮಿಸಿದ ನಂತರವೂ ಮತ್ತೆ ಕಲ್ಲು ತೂರಾಟ ನಡೆಯಿತು. ಘಟಕದೊಳಗೆ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ ಎಂದು ಹೇಳಿದೆ.

ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಪ್ರದೇಶದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...