Homeಮುಖಪುಟಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ,...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

- Advertisement -
- Advertisement -

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ಜಿಲ್ಲಾಡಳಿತದ ಪ್ರಕಾರ, ಪ್ರತಿಭಟನಾಕಾರರು ಜಿಂದಾಲ್ ಪವರ್ ಲಿಮಿಟೆಡ್‌ನ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ನುಗ್ಗಿ, ಒಂದು ಕನ್ವೇಯರ್ ಬೆಲ್ಟ್, ಎರಡು ಟ್ರ್ಯಾಕ್ಟರ್‌ಗಳು ಮತ್ತು ಇತರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಮತ್ತು ಕಚೇರಿ ಆವರಣವನ್ನು ಧ್ವಂಸಗೊಳಿಸಿದ್ದಾರೆ. ಘರ್ಷಣೆಯ ಸಮಯದಲ್ಲಿ ಪೊಲೀಸ್ ಬಸ್, ಜೀಪ್ ಮತ್ತು ಆಂಬ್ಯುಲೆನ್ಸ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಮತ್ತು ಬೆಂಕಿ ಹಚ್ಚಿದ ನಂತರ ಉದ್ವಿಗ್ನತೆ ಹೆಚ್ಚಾಯಿತು. ಇದರಿಂದಾಗಿ ಹಲವಾರು ಸರ್ಕಾರಿ ವಾಹನಗಳಿಗೆ ಹಾನಿಯಾಯಿತು. ಹಿರಿಯ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕರು ಸ್ಥಳಕ್ಕೆ ತಲುಪಿ ಜನರನ್ನು ಸಮಾಧಾನಪಡಿಸಿದ ನಂತರವೂ ಪರಿಸ್ಥಿತಿ ಉದ್ವಿಗ್ನವಾಗಿತ್ತು ಎಂದು ಆಡಳಿತ ಹೇಳಿದೆ.

ತಮ್ನಾರ್ ಪ್ರದೇಶದ ಗೇರ್ ಪೆಲ್ಮಾ ಸೆಕ್ಟರ್-Iರ ಕಲ್ಲಿದ್ದಲು ಬ್ಲಾಕ್‌ ಪ್ರದೇಶದ 14 ಹಳ್ಳಿಗಳ ಜನರು ಡಿಸೆಂಬರ್ 12 ರಿಂದ ಲಿಬ್ರಾ ಗ್ರಾಮದ ಸಿಎಚ್‌ಪಿ ಚೌಕ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ಪ್ರಸ್ತಾವಿತ ಗಣಿಗಾರಿಕೆ ಯೋಜನೆಗಾಗಿ ಡಿಸೆಂಬರ್ 8 ರಂದು ಧೌರಭಟದಲ್ಲಿ ನಡೆದ ಸಾರ್ವಜನಿಕ ಪರಿಶೀಲನೆಯ ವಿರುದ್ಧ ಈ ಆಂದೋಲನ ನಡೆಯುತ್ತಿದೆ. ಇದನ್ನು ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ನಡೆಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಡಿಸೆಂಬರ್ 4ರಂದು ರಾಜ್ಯದ ಸುರ್ಗುಜಾ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಸಂಬಂಧಿಸಿದಂತೆ ನಡೆದ ಮತ್ತೊಂದು ಪ್ರಮುಖ ಘರ್ಷಣೆಯ ನಂತರ ಈ ಹಿಂಸಾಚಾರ ಸಂಭವಿಸಿದೆ. ಪರ್ಸೋಡಿ ಕಲಾ ಗ್ರಾಮದಲ್ಲಿ ಅಮೇರಾ ಕಲ್ಲಿದ್ದಲು ಗಣಿ ವಿಸ್ತರಣಾ ಯೋಜನೆಯನ್ನು ಪ್ರತಿಭಟಿಸುತ್ತಿದ್ದ ಗ್ರಾಮಸ್ಥರೊಂದಿಗಿನ ಘರ್ಷಣೆಯಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಓಪನ್-ಕಾಸ್ಟ್ ಗಣಿ ವಿಸ್ತರಣೆಗೆ ಸಂಬಂಧಿಸಿದ ಪ್ರತಿಭಟನೆಯು ಹಿಂಸಾತ್ಮಕವಾಗಿ ಮಾರ್ಪಟ್ಟಿತ್ತು. ಪ್ರತಿಭಟನಾಕಾರರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿ ಅಶ್ರುವಾಯು ಪ್ರಯೋಗಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೇರ್ ಪೆಲ್ಮಾ ಕಲ್ಲಿದ್ದಲು ಬ್ಲಾಕ್ ಈಶಾನ್ಯ ಛತ್ತೀಸ್‌ಗಢದ ಪರಿಸರ ಸೂಕ್ಷ್ಮ ಭಾಗದಲ್ಲಿದೆ. ಇದು ದಟ್ಟವಾದ ಕಾಡುಗಳು, ಫಲವತ್ತಾದ ಕೃಷಿ ಭೂಮಿ ಮತ್ತು ಆದಿವಾಸಿ ಸಮುದಾಯಗಳು ಹೆಚ್ಚಿನ ಸಂಖ್ಯೆಲ್ಲಿರುವ ಪ್ರದೇಶವಾಗಿದೆ. ತಮ್ನಾರ್-ಧರಮ್‌ಜೈಗಢ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಕಲ್ಲಿದ್ದಲು ಗಣಿಗಾರಿಕೆಯು ಅರಣ್ಯನಾಶ, ಅಂತರ್ಜಲ ಕುಸಿತ, ವಾಯು ಮಾಲಿನ್ಯ, ಕೃಷಿ ಮತ್ತು ಕುಡಿಯುವ ನೀರಿನ ಅಗತ್ಯಗಳನ್ನು ಬೆಂಬಲಿಸುವ ಸ್ಥಳೀಯ ಹೊಳೆಗಳ ಮಾಲಿನ್ಯಕ್ಕೆ ಕಾರಣವಾಗಬಹುದು ಎಂದು ಪರಿಸರ ಗುಂಪುಗಳು ಎಚ್ಚರಿಸಿವೆ.

ಕಲ್ಲಿದ್ದಲು ನಿರ್ವಹಣಾ ಘಟಕಗಳು, ರೈಲು ಕಾರಿಡಾರ್‌ಗಳು ಮತ್ತು ಬೂದಿ ಕೊಳಗಳು ಸೇರಿದಂತೆ ಗಣಿಗಾರಿಕೆ ಸಂಬಂಧಿತ ಮೂಲಸೌಕರ್ಯಗಳು ವೇಗವಾಗಿ ವಿಸ್ತರಿಸುತ್ತಿದ್ದರೂ, ಈ ಪ್ರದೇಶದಲ್ಲಿ ಬಹು ಕಲ್ಲಿದ್ದಲು ಬ್ಲಾಕ್‌ಗಳ ಸಂಚಿತ ಪರಿಸರ ಪರಿಣಾಮವನ್ನು ಸಮರ್ಪಕವಾಗಿ ನಿರ್ಣಯಿಸಲಾಗಿಲ್ಲ ಎಂದು ಹೋರಾಟಗಾರರು ವಾದಿಸುತ್ತಾರೆ.

ಭಾರತದ ಕಲ್ಲಿದ್ದಲು ಉತ್ಪಾದನೆಗೆ ಛತ್ತೀಸ್‌ಗಢವು ಈಗಾಗಲೇ ಹೆಚ್ಚಿನ ಕೊಡುಗೆ ನೀಡುತ್ತಿದೆ ಎಂದು ಹೋರಾಟಗಾರರು ಬೆಟ್ಟು ಮಾಡುತ್ತಾರೆ. ಹವಾಮಾನ ಬದಲಾವಣೆ ಮತ್ತು ಸಾರ್ವಜನಿಕ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಅನುಮತಿಗಳ ಅಗತ್ಯವನ್ನು ಪ್ರಶ್ನಿಸಿದ್ದಾರೆ.

ಶನಿವಾರ ಬೆಳಿಗ್ಗೆ ಸುಮಾರು 300 ಪ್ರತಿಭಟನಾಕಾರರು ಸ್ಥಳದಲ್ಲಿ ಜಮಾಯಿಸಿದ್ದರು, ಕೆಲವರು ರಸ್ತೆಗಳನ್ನು ತಡೆದು ಸಂಚಾರಕ್ಕೆ ಅಡ್ಡಿಪಡಿಸಿದರು ಎಂದು ಜಿಲ್ಲಾಡಳಿತ ಹೇಳಿಕೆಯಲ್ಲಿ ತಿಳಿಸಿದೆ. ಹಿರಿಯ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಬೆಳಿಗ್ಗೆ 10 ಗಂಟೆ ಸುಮಾರಿಗೆ ಮಧ್ಯಪ್ರವೇಶಿಸಿ ಅವರನ್ನು ತಮ್ಮ ಗೊತ್ತುಪಡಿಸಿದ ಪ್ರತಿಭಟನಾ ಪ್ರದೇಶಕ್ಕೆ ಮರಳುವಂತೆ ಮನವೊಲಿಸಿದರು ಎಂದು ಹೇಳಿದೆ.

ಆದಾಗ್ಯೂ, ಹತ್ತಿರದ ಹಳ್ಳಿಗಳ ಜನರು ಆಂದೋಲನದಲ್ಲಿ ಸೇರಿಕೊಂಡಾಗ ಜನಸಮೂಹ ಸುಮಾರು 1,000 ಕ್ಕೆ ಏರಿತು. ಶಾಂತಿ ಕಾಪಾಡುವಂತೆ ಅಧಿಕಾರಿಗಳು ಪದೇ ಪದೇ ಮನವಿ ಮಾಡಿದರೂ, ಮಧ್ಯಾಹ್ನ 2.30 ರ ಸುಮಾರಿಗೆ ಜನಸಮೂಹ ಹಿಂಸಾತ್ಮಕವಾಗಿ ತಿರುಗಿ, ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಕಲ್ಲು ಮತ್ತು ಕೋಲುಗಳಿಂದ ಸಿಬ್ಬಂದಿ ಮೇಲೆ ದಾಳಿ ಮಾಡಿತು ಎಂದು ತಿಳಿಸಿದೆ.

ಉಪವಿಭಾಗೀಯ ಪೊಲೀಸ್ ಅಧಿಕಾರಿ ಅನಿಲ್ ವಿಶ್ವಕರ್ಮ, ತಮ್ನಾರ್ ಪೊಲೀಸ್ ಠಾಣೆಯ ಉಸ್ತುವಾರಿ ಕಮಲಾ ಪುಸಮ್ ಮತ್ತು ಒಬ್ಬ ಕಾನ್‌ಸ್ಟೆಬಲ್ ಗಂಭೀರ ಗಾಯಗೊಂಡಿದ್ದು, ಮಹಿಳಾ ಸಿಬ್ಬಂದಿ ಸೇರಿದಂತೆ ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದ್ದು, ಕೆಲವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಗಢಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿಭಟನೆಯ ನಂತರ ಜನರ ಗುಂಪು ಜಿಂದಾಲ್ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ನುಗ್ಗಿ, ಯಂತ್ರೋಪಕರಣಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ, ಕಚೇರಿಗಳನ್ನು ಧ್ವಂಸಗೊಳಿಸಿತು ಎಂದು ಆಡಳಿತ ತಿಳಿಸಿದೆ. ರಾಯ್‌ಗಢ ಜಿಲ್ಲಾಧಿಕಾರಿ ಮಾಯಂಕ್ ಚತುರ್ವೇದಿ, ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಂಗ್ ಪಟೇಲ್ ಮತ್ತು ಸ್ಥಳೀಯ ಶಾಸಕಿ ವಿದ್ಯಾವತಿ ಸಿದರ್ ಪರಿಸ್ಥಿತಿಯನ್ನು ಶಾಂತಗೊಳಿಸಲು ಆಗಮಿಸಿದ ನಂತರವೂ ಮತ್ತೆ ಕಲ್ಲು ತೂರಾಟ ನಡೆಯಿತು. ಘಟಕದೊಳಗೆ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ ಎಂದು ಹೇಳಿದೆ.

ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಪ್ರದೇಶದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....