Homeಮುಖಪುಟಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ,...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

- Advertisement -
- Advertisement -

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ಜಿಲ್ಲಾಡಳಿತದ ಪ್ರಕಾರ, ಪ್ರತಿಭಟನಾಕಾರರು ಜಿಂದಾಲ್ ಪವರ್ ಲಿಮಿಟೆಡ್‌ನ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ನುಗ್ಗಿ, ಒಂದು ಕನ್ವೇಯರ್ ಬೆಲ್ಟ್, ಎರಡು ಟ್ರ್ಯಾಕ್ಟರ್‌ಗಳು ಮತ್ತು ಇತರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಮತ್ತು ಕಚೇರಿ ಆವರಣವನ್ನು ಧ್ವಂಸಗೊಳಿಸಿದ್ದಾರೆ. ಘರ್ಷಣೆಯ ಸಮಯದಲ್ಲಿ ಪೊಲೀಸ್ ಬಸ್, ಜೀಪ್ ಮತ್ತು ಆಂಬ್ಯುಲೆನ್ಸ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಮತ್ತು ಬೆಂಕಿ ಹಚ್ಚಿದ ನಂತರ ಉದ್ವಿಗ್ನತೆ ಹೆಚ್ಚಾಯಿತು. ಇದರಿಂದಾಗಿ ಹಲವಾರು ಸರ್ಕಾರಿ ವಾಹನಗಳಿಗೆ ಹಾನಿಯಾಯಿತು. ಹಿರಿಯ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕರು ಸ್ಥಳಕ್ಕೆ ತಲುಪಿ ಜನರನ್ನು ಸಮಾಧಾನಪಡಿಸಿದ ನಂತರವೂ ಪರಿಸ್ಥಿತಿ ಉದ್ವಿಗ್ನವಾಗಿತ್ತು ಎಂದು ಆಡಳಿತ ಹೇಳಿದೆ.

ತಮ್ನಾರ್ ಪ್ರದೇಶದ ಗೇರ್ ಪೆಲ್ಮಾ ಸೆಕ್ಟರ್-Iರ ಕಲ್ಲಿದ್ದಲು ಬ್ಲಾಕ್‌ ಪ್ರದೇಶದ 14 ಹಳ್ಳಿಗಳ ಜನರು ಡಿಸೆಂಬರ್ 12 ರಿಂದ ಲಿಬ್ರಾ ಗ್ರಾಮದ ಸಿಎಚ್‌ಪಿ ಚೌಕ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ಪ್ರಸ್ತಾವಿತ ಗಣಿಗಾರಿಕೆ ಯೋಜನೆಗಾಗಿ ಡಿಸೆಂಬರ್ 8 ರಂದು ಧೌರಭಟದಲ್ಲಿ ನಡೆದ ಸಾರ್ವಜನಿಕ ಪರಿಶೀಲನೆಯ ವಿರುದ್ಧ ಈ ಆಂದೋಲನ ನಡೆಯುತ್ತಿದೆ. ಇದನ್ನು ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ನಡೆಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಡಿಸೆಂಬರ್ 4ರಂದು ರಾಜ್ಯದ ಸುರ್ಗುಜಾ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಸಂಬಂಧಿಸಿದಂತೆ ನಡೆದ ಮತ್ತೊಂದು ಪ್ರಮುಖ ಘರ್ಷಣೆಯ ನಂತರ ಈ ಹಿಂಸಾಚಾರ ಸಂಭವಿಸಿದೆ. ಪರ್ಸೋಡಿ ಕಲಾ ಗ್ರಾಮದಲ್ಲಿ ಅಮೇರಾ ಕಲ್ಲಿದ್ದಲು ಗಣಿ ವಿಸ್ತರಣಾ ಯೋಜನೆಯನ್ನು ಪ್ರತಿಭಟಿಸುತ್ತಿದ್ದ ಗ್ರಾಮಸ್ಥರೊಂದಿಗಿನ ಘರ್ಷಣೆಯಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಓಪನ್-ಕಾಸ್ಟ್ ಗಣಿ ವಿಸ್ತರಣೆಗೆ ಸಂಬಂಧಿಸಿದ ಪ್ರತಿಭಟನೆಯು ಹಿಂಸಾತ್ಮಕವಾಗಿ ಮಾರ್ಪಟ್ಟಿತ್ತು. ಪ್ರತಿಭಟನಾಕಾರರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿ ಅಶ್ರುವಾಯು ಪ್ರಯೋಗಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೇರ್ ಪೆಲ್ಮಾ ಕಲ್ಲಿದ್ದಲು ಬ್ಲಾಕ್ ಈಶಾನ್ಯ ಛತ್ತೀಸ್‌ಗಢದ ಪರಿಸರ ಸೂಕ್ಷ್ಮ ಭಾಗದಲ್ಲಿದೆ. ಇದು ದಟ್ಟವಾದ ಕಾಡುಗಳು, ಫಲವತ್ತಾದ ಕೃಷಿ ಭೂಮಿ ಮತ್ತು ಆದಿವಾಸಿ ಸಮುದಾಯಗಳು ಹೆಚ್ಚಿನ ಸಂಖ್ಯೆಲ್ಲಿರುವ ಪ್ರದೇಶವಾಗಿದೆ. ತಮ್ನಾರ್-ಧರಮ್‌ಜೈಗಢ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಕಲ್ಲಿದ್ದಲು ಗಣಿಗಾರಿಕೆಯು ಅರಣ್ಯನಾಶ, ಅಂತರ್ಜಲ ಕುಸಿತ, ವಾಯು ಮಾಲಿನ್ಯ, ಕೃಷಿ ಮತ್ತು ಕುಡಿಯುವ ನೀರಿನ ಅಗತ್ಯಗಳನ್ನು ಬೆಂಬಲಿಸುವ ಸ್ಥಳೀಯ ಹೊಳೆಗಳ ಮಾಲಿನ್ಯಕ್ಕೆ ಕಾರಣವಾಗಬಹುದು ಎಂದು ಪರಿಸರ ಗುಂಪುಗಳು ಎಚ್ಚರಿಸಿವೆ.

ಕಲ್ಲಿದ್ದಲು ನಿರ್ವಹಣಾ ಘಟಕಗಳು, ರೈಲು ಕಾರಿಡಾರ್‌ಗಳು ಮತ್ತು ಬೂದಿ ಕೊಳಗಳು ಸೇರಿದಂತೆ ಗಣಿಗಾರಿಕೆ ಸಂಬಂಧಿತ ಮೂಲಸೌಕರ್ಯಗಳು ವೇಗವಾಗಿ ವಿಸ್ತರಿಸುತ್ತಿದ್ದರೂ, ಈ ಪ್ರದೇಶದಲ್ಲಿ ಬಹು ಕಲ್ಲಿದ್ದಲು ಬ್ಲಾಕ್‌ಗಳ ಸಂಚಿತ ಪರಿಸರ ಪರಿಣಾಮವನ್ನು ಸಮರ್ಪಕವಾಗಿ ನಿರ್ಣಯಿಸಲಾಗಿಲ್ಲ ಎಂದು ಹೋರಾಟಗಾರರು ವಾದಿಸುತ್ತಾರೆ.

ಭಾರತದ ಕಲ್ಲಿದ್ದಲು ಉತ್ಪಾದನೆಗೆ ಛತ್ತೀಸ್‌ಗಢವು ಈಗಾಗಲೇ ಹೆಚ್ಚಿನ ಕೊಡುಗೆ ನೀಡುತ್ತಿದೆ ಎಂದು ಹೋರಾಟಗಾರರು ಬೆಟ್ಟು ಮಾಡುತ್ತಾರೆ. ಹವಾಮಾನ ಬದಲಾವಣೆ ಮತ್ತು ಸಾರ್ವಜನಿಕ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಅನುಮತಿಗಳ ಅಗತ್ಯವನ್ನು ಪ್ರಶ್ನಿಸಿದ್ದಾರೆ.

ಶನಿವಾರ ಬೆಳಿಗ್ಗೆ ಸುಮಾರು 300 ಪ್ರತಿಭಟನಾಕಾರರು ಸ್ಥಳದಲ್ಲಿ ಜಮಾಯಿಸಿದ್ದರು, ಕೆಲವರು ರಸ್ತೆಗಳನ್ನು ತಡೆದು ಸಂಚಾರಕ್ಕೆ ಅಡ್ಡಿಪಡಿಸಿದರು ಎಂದು ಜಿಲ್ಲಾಡಳಿತ ಹೇಳಿಕೆಯಲ್ಲಿ ತಿಳಿಸಿದೆ. ಹಿರಿಯ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಬೆಳಿಗ್ಗೆ 10 ಗಂಟೆ ಸುಮಾರಿಗೆ ಮಧ್ಯಪ್ರವೇಶಿಸಿ ಅವರನ್ನು ತಮ್ಮ ಗೊತ್ತುಪಡಿಸಿದ ಪ್ರತಿಭಟನಾ ಪ್ರದೇಶಕ್ಕೆ ಮರಳುವಂತೆ ಮನವೊಲಿಸಿದರು ಎಂದು ಹೇಳಿದೆ.

ಆದಾಗ್ಯೂ, ಹತ್ತಿರದ ಹಳ್ಳಿಗಳ ಜನರು ಆಂದೋಲನದಲ್ಲಿ ಸೇರಿಕೊಂಡಾಗ ಜನಸಮೂಹ ಸುಮಾರು 1,000 ಕ್ಕೆ ಏರಿತು. ಶಾಂತಿ ಕಾಪಾಡುವಂತೆ ಅಧಿಕಾರಿಗಳು ಪದೇ ಪದೇ ಮನವಿ ಮಾಡಿದರೂ, ಮಧ್ಯಾಹ್ನ 2.30 ರ ಸುಮಾರಿಗೆ ಜನಸಮೂಹ ಹಿಂಸಾತ್ಮಕವಾಗಿ ತಿರುಗಿ, ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಕಲ್ಲು ಮತ್ತು ಕೋಲುಗಳಿಂದ ಸಿಬ್ಬಂದಿ ಮೇಲೆ ದಾಳಿ ಮಾಡಿತು ಎಂದು ತಿಳಿಸಿದೆ.

ಉಪವಿಭಾಗೀಯ ಪೊಲೀಸ್ ಅಧಿಕಾರಿ ಅನಿಲ್ ವಿಶ್ವಕರ್ಮ, ತಮ್ನಾರ್ ಪೊಲೀಸ್ ಠಾಣೆಯ ಉಸ್ತುವಾರಿ ಕಮಲಾ ಪುಸಮ್ ಮತ್ತು ಒಬ್ಬ ಕಾನ್‌ಸ್ಟೆಬಲ್ ಗಂಭೀರ ಗಾಯಗೊಂಡಿದ್ದು, ಮಹಿಳಾ ಸಿಬ್ಬಂದಿ ಸೇರಿದಂತೆ ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದ್ದು, ಕೆಲವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಗಢಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿಭಟನೆಯ ನಂತರ ಜನರ ಗುಂಪು ಜಿಂದಾಲ್ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ನುಗ್ಗಿ, ಯಂತ್ರೋಪಕರಣಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ, ಕಚೇರಿಗಳನ್ನು ಧ್ವಂಸಗೊಳಿಸಿತು ಎಂದು ಆಡಳಿತ ತಿಳಿಸಿದೆ. ರಾಯ್‌ಗಢ ಜಿಲ್ಲಾಧಿಕಾರಿ ಮಾಯಂಕ್ ಚತುರ್ವೇದಿ, ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಂಗ್ ಪಟೇಲ್ ಮತ್ತು ಸ್ಥಳೀಯ ಶಾಸಕಿ ವಿದ್ಯಾವತಿ ಸಿದರ್ ಪರಿಸ್ಥಿತಿಯನ್ನು ಶಾಂತಗೊಳಿಸಲು ಆಗಮಿಸಿದ ನಂತರವೂ ಮತ್ತೆ ಕಲ್ಲು ತೂರಾಟ ನಡೆಯಿತು. ಘಟಕದೊಳಗೆ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ ಎಂದು ಹೇಳಿದೆ.

ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಪ್ರದೇಶದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...