Homeಮುಖಪುಟಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

ಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

- Advertisement -
- Advertisement -

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 4 ಭದ್ರತಾ ಸಿಬ್ಬಂದಿ ತೀವ್ರ ಗಾಯಗೊಂಡಿದ್ದಾರೆ.

2013ರ ಬ್ಯಾಚ್‌ನ ರಾಜ್ಯ ಪೊಲೀಸ್ ಸೇವಾ ಅಧಿಕಾರಿ, ಕೊಂಟಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಆಕಾಶ್ ರಾವ್ ಗಿರೆಪುಂಜೆ ಅವರು ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಗೃಹ ಖಾತೆಯನ್ನೂ ಹೊಂದಿರುವ ರಾಜ್ಯದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ತಿಳಿಸಿದ್ದಾರೆ.

ಕೊಂಟಾ-ಎರ್ರಾಬೋರ್ ರಸ್ತೆಯ ಡೋಂಡ್ರಾ ಗ್ರಾಮದ ಬಳಿ ಘಟನೆ ಸಂಭವಿಸಿದಾಗ ಎಎಸ್‌ಪಿ ಮತ್ತು ಇತರ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸುಕ್ಮಾದ ಎಎಸ್ಪಿ ಆಕಾಶ್ ರಾವ್ ಗಿರೆಪುಂಜೆ ಕೊಂಟಾ ಎರ್ರಾಬೋರ್ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದರು.  ಆಗ ಈ ಸ್ಪೋಟ ಸಂಭವಿಸಿದೆ. ಈ ಐಇಡಿ ಸ್ಫೋಟದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಜವಾನರು ಕೂಡ ಗಾಯಗೊಂಡಿದ್ದಾರೆ ಮತ್ತು ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕೊಂಟಾ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಎಸ್ಪಿ ಆಕಾಶ್ ರಾವ್ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು. ಇತರ ಗಾಯಾಳುಗಳು  ಅಪಾಯದಿಂದ ಪಾರಾಗಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ .ಪಿ ಹೇಳಿದರು.

ಈ ಘಟನೆ ಸೋಮವಾರ ಬೆಳಿಗ್ಗೆ 9ರಿಂದ 10 ಗಂಟೆಯ ನಡುವೆ ನಡೆದಿದೆ ಎಂದು ಅವರು ಹೇಳಿದರು. ನಾಳೆ (ಮಂಗಳವಾರ) ನಕ್ಸಲರು ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಎಎಸ್ಪಿ ಆಕಾಶ್ ರಾವ್ ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ. ಅವರು ಧೈರ್ಯಶಾಲಿ ಅಧಿಕಾರಿಯಾಗಿದ್ದರು ಮತ್ತು ಶೌರ್ಯ ಪ್ರಶಸ್ತಿ ಪುರಸ್ಕೃತರಾಗಿದ್ದರು ಎಂದು ಉಪ ಮುಖ್ಯಮಂತ್ರಿ ಶರ್ಮಾ ನಾಗ್ಪುರದಲ್ಲಿ ತಿಳಿಸಿದರು.

ನಕ್ಸಲರು ಮತ್ತು ಸರ್ಕಾರದ ನಡುವೆ ಮಾತುಕತೆಗೆ ಪರಿಸ್ಥಿತಿ ಹೇಗೋ ಸೃಷ್ಟಿಯಾದರೆ, ಅದು ಇಂತಹ ಘಟನೆಗಳೊಂದಿಗೆ (ಸ್ಫೋಟವನ್ನು ಉಲ್ಲೇಖಿಸಿ) ಕೊನೆಗೊಳ್ಳುತ್ತದೆ ಎಂದು ಅವರು ಹೇಳಿದರು.

ಒಂದೇ ಒಂದು ಗುಂಡನ್ನು ಹಾರಿಸಲು ಬಯಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ಅವರು (ನಕ್ಸಲರು) ಮುಖ್ಯವಾಹಿನಿಗೆ ಬರಬೇಕು, ಪುನರ್ವಸತಿ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಮತ್ತು ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದರು.

2025ರಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಐಇಡಿ ಘಟನೆಗಳ ಪಟ್ಟಿ

• 30 ಮಾರ್ಚ್: ಬಿಜಾಪುರದಲ್ಲಿ ನಕ್ಸಲ್ ಎನ್‌ಕೌಂಟರ್‌ನ ಎರಡನೇ ದಿನದಂದು ಐಇಡಿ ಸ್ಫೋಟದಲ್ಲಿ ಮಹಿಳೆ ಸಾವನ್ನಪ್ಪಿದರು.

• 4 ಏಪ್ರಿಲ್: ನಾರಾಯಣಪುರದಲ್ಲಿ ನಕ್ಸಲರ ಐಇಡಿ ಸ್ಫೋಟಕ್ಕೆ ಒಬ್ಬ ಮೃತಪಟ್ಟು, ಒಬ್ಬ ಗಾಯಗೊಂಡಿದ್ದರು.

• 7 ಏಪ್ರಿಲ್: ಅಬುಜ್ಮದ್ ಕಾಡುಗಳಲ್ಲಿ ಐಇಡಿ ಸ್ಫೋಟದಲ್ಲಿ ಒಬ್ಬ ಗ್ರಾಮಸ್ಥರಿಗೆ ಗಾಯಗೊಂಡಿದ್ದರು.

• 9 ಏಪ್ರಿಲ್: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಜವಾನನು ಗೊಂಡಿದ್ದರು.

• 10 ಏಪ್ರಿಲ್: ಬಿಜಾಪುರದ ಅರಣ್ಯ ರಸ್ತೆಯಲ್ಲಿ ನಕ್ಸಲರು ಇರಿಸಿದ್ದ ಐಇಡಿಯನ್ನು ಯೋಧರು ನಿಷ್ಕ್ರಿಯಗೊಳಿಸಿದರು.

• 13 ಏಪ್ರಿಲ್: ಬಿಜಾಪುರದ ರಾಣಿಬೋಡ್ಲಿ ಕಟ್ಟೂರ್ ರಸ್ತೆಯಲ್ಲಿ 20 ಕೆಜಿ ಐಇಡಿ ನಿಷ್ಕ್ರಿಯಗೊಳಿಸಲಾಗಿದೆ.

• 14 ಏಪ್ರಿಲ್: ಯೋಧರು ಇರಿಸಿದ್ದ 5 ಐಇಡಿಗಳನ್ನು ನಾಶಪಡಿಸಿದ ನಕ್ಸಲರು.

• ಏಪ್ರಿಲ್ 18: ಬಿಜಾಪುರದ ಕೋಬ್ರಾ ಬೆಟಾಲಿಯನ್‌ನಲ್ಲಿ ಮಾವೋವಾದಿಯೊಬ್ಬನ ಬಂಧನ. ಆತ ಬಿಯರ್ ಬಾಟಲಿಗಳಲ್ಲಿ ತಯಾರಿಸಿದ 8 ಐಇಡಿಗಳ ವಶ.

• ಏಪ್ರಿಲ್ 21: ಬಿಜಾಪುರದಲ್ಲಿ ನಕ್ಸಲರು ಇರಿಸಿದ್ದ ಐಇಡಿ ಸ್ಫೋಟದಲ್ಲಿ ಸಿಎಎಫ್ ಜವಾನ್ ಸಾವು.

• ಏಪ್ರಿಲ್ 26: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಜವಾನನಿಗೆ ಗಾಯ

• ಮೇ 6: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಅಧಿಕಾರಿಗೆ ಗಾಯ.

• ಮೇ 19: ಗೌರ್ಮುಂಡ್ ಗ್ರಾಮದ ಕಾಡುಗಳಲ್ಲಿ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್)ದಿಂದ 5 ಕೆಜಿ ತೂಕದ ಎರಡು ಐಇಡಿಗಳ ನಾಶ.

• ಮೇ 30: ಬಿಜಾಪುರದ ಮದ್ದೀದ್ ರಾಷ್ಟ್ರೀಯ ಉದ್ಯಾನವನದಲ್ಲಿ ಐಇಡಿ ಸ್ಫೋಟದಲ್ಲಿ ಮೂವರು ಗ್ರಾಮಸ್ಥರಿಗೆ ಗಾಯ.

• ಮೇ 31: ಗುರ್ಮಕಾ ಮತ್ತು ಖೋಡ್‌ಪರ್ ಗ್ರಾಮದ ಅರಣ್ಯ ಮಾರ್ಗದಲ್ಲಿ ಭದ್ರತಾ ಪಡೆಗಳಿಂದ 10 ಐಇಡಿಗಳ ನಿಷ್ಕ್ರಿಯ.

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...