Homeಮುಖಪುಟಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

ಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

- Advertisement -
- Advertisement -

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 4 ಭದ್ರತಾ ಸಿಬ್ಬಂದಿ ತೀವ್ರ ಗಾಯಗೊಂಡಿದ್ದಾರೆ.

2013ರ ಬ್ಯಾಚ್‌ನ ರಾಜ್ಯ ಪೊಲೀಸ್ ಸೇವಾ ಅಧಿಕಾರಿ, ಕೊಂಟಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಆಕಾಶ್ ರಾವ್ ಗಿರೆಪುಂಜೆ ಅವರು ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಗೃಹ ಖಾತೆಯನ್ನೂ ಹೊಂದಿರುವ ರಾಜ್ಯದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ತಿಳಿಸಿದ್ದಾರೆ.

ಕೊಂಟಾ-ಎರ್ರಾಬೋರ್ ರಸ್ತೆಯ ಡೋಂಡ್ರಾ ಗ್ರಾಮದ ಬಳಿ ಘಟನೆ ಸಂಭವಿಸಿದಾಗ ಎಎಸ್‌ಪಿ ಮತ್ತು ಇತರ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸುಕ್ಮಾದ ಎಎಸ್ಪಿ ಆಕಾಶ್ ರಾವ್ ಗಿರೆಪುಂಜೆ ಕೊಂಟಾ ಎರ್ರಾಬೋರ್ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದರು.  ಆಗ ಈ ಸ್ಪೋಟ ಸಂಭವಿಸಿದೆ. ಈ ಐಇಡಿ ಸ್ಫೋಟದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಜವಾನರು ಕೂಡ ಗಾಯಗೊಂಡಿದ್ದಾರೆ ಮತ್ತು ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕೊಂಟಾ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಎಸ್ಪಿ ಆಕಾಶ್ ರಾವ್ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು. ಇತರ ಗಾಯಾಳುಗಳು  ಅಪಾಯದಿಂದ ಪಾರಾಗಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ .ಪಿ ಹೇಳಿದರು.

ಈ ಘಟನೆ ಸೋಮವಾರ ಬೆಳಿಗ್ಗೆ 9ರಿಂದ 10 ಗಂಟೆಯ ನಡುವೆ ನಡೆದಿದೆ ಎಂದು ಅವರು ಹೇಳಿದರು. ನಾಳೆ (ಮಂಗಳವಾರ) ನಕ್ಸಲರು ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಎಎಸ್ಪಿ ಆಕಾಶ್ ರಾವ್ ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ. ಅವರು ಧೈರ್ಯಶಾಲಿ ಅಧಿಕಾರಿಯಾಗಿದ್ದರು ಮತ್ತು ಶೌರ್ಯ ಪ್ರಶಸ್ತಿ ಪುರಸ್ಕೃತರಾಗಿದ್ದರು ಎಂದು ಉಪ ಮುಖ್ಯಮಂತ್ರಿ ಶರ್ಮಾ ನಾಗ್ಪುರದಲ್ಲಿ ತಿಳಿಸಿದರು.

ನಕ್ಸಲರು ಮತ್ತು ಸರ್ಕಾರದ ನಡುವೆ ಮಾತುಕತೆಗೆ ಪರಿಸ್ಥಿತಿ ಹೇಗೋ ಸೃಷ್ಟಿಯಾದರೆ, ಅದು ಇಂತಹ ಘಟನೆಗಳೊಂದಿಗೆ (ಸ್ಫೋಟವನ್ನು ಉಲ್ಲೇಖಿಸಿ) ಕೊನೆಗೊಳ್ಳುತ್ತದೆ ಎಂದು ಅವರು ಹೇಳಿದರು.

ಒಂದೇ ಒಂದು ಗುಂಡನ್ನು ಹಾರಿಸಲು ಬಯಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ಅವರು (ನಕ್ಸಲರು) ಮುಖ್ಯವಾಹಿನಿಗೆ ಬರಬೇಕು, ಪುನರ್ವಸತಿ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಮತ್ತು ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದರು.

2025ರಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಐಇಡಿ ಘಟನೆಗಳ ಪಟ್ಟಿ

• 30 ಮಾರ್ಚ್: ಬಿಜಾಪುರದಲ್ಲಿ ನಕ್ಸಲ್ ಎನ್‌ಕೌಂಟರ್‌ನ ಎರಡನೇ ದಿನದಂದು ಐಇಡಿ ಸ್ಫೋಟದಲ್ಲಿ ಮಹಿಳೆ ಸಾವನ್ನಪ್ಪಿದರು.

• 4 ಏಪ್ರಿಲ್: ನಾರಾಯಣಪುರದಲ್ಲಿ ನಕ್ಸಲರ ಐಇಡಿ ಸ್ಫೋಟಕ್ಕೆ ಒಬ್ಬ ಮೃತಪಟ್ಟು, ಒಬ್ಬ ಗಾಯಗೊಂಡಿದ್ದರು.

• 7 ಏಪ್ರಿಲ್: ಅಬುಜ್ಮದ್ ಕಾಡುಗಳಲ್ಲಿ ಐಇಡಿ ಸ್ಫೋಟದಲ್ಲಿ ಒಬ್ಬ ಗ್ರಾಮಸ್ಥರಿಗೆ ಗಾಯಗೊಂಡಿದ್ದರು.

• 9 ಏಪ್ರಿಲ್: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಜವಾನನು ಗೊಂಡಿದ್ದರು.

• 10 ಏಪ್ರಿಲ್: ಬಿಜಾಪುರದ ಅರಣ್ಯ ರಸ್ತೆಯಲ್ಲಿ ನಕ್ಸಲರು ಇರಿಸಿದ್ದ ಐಇಡಿಯನ್ನು ಯೋಧರು ನಿಷ್ಕ್ರಿಯಗೊಳಿಸಿದರು.

• 13 ಏಪ್ರಿಲ್: ಬಿಜಾಪುರದ ರಾಣಿಬೋಡ್ಲಿ ಕಟ್ಟೂರ್ ರಸ್ತೆಯಲ್ಲಿ 20 ಕೆಜಿ ಐಇಡಿ ನಿಷ್ಕ್ರಿಯಗೊಳಿಸಲಾಗಿದೆ.

• 14 ಏಪ್ರಿಲ್: ಯೋಧರು ಇರಿಸಿದ್ದ 5 ಐಇಡಿಗಳನ್ನು ನಾಶಪಡಿಸಿದ ನಕ್ಸಲರು.

• ಏಪ್ರಿಲ್ 18: ಬಿಜಾಪುರದ ಕೋಬ್ರಾ ಬೆಟಾಲಿಯನ್‌ನಲ್ಲಿ ಮಾವೋವಾದಿಯೊಬ್ಬನ ಬಂಧನ. ಆತ ಬಿಯರ್ ಬಾಟಲಿಗಳಲ್ಲಿ ತಯಾರಿಸಿದ 8 ಐಇಡಿಗಳ ವಶ.

• ಏಪ್ರಿಲ್ 21: ಬಿಜಾಪುರದಲ್ಲಿ ನಕ್ಸಲರು ಇರಿಸಿದ್ದ ಐಇಡಿ ಸ್ಫೋಟದಲ್ಲಿ ಸಿಎಎಫ್ ಜವಾನ್ ಸಾವು.

• ಏಪ್ರಿಲ್ 26: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಜವಾನನಿಗೆ ಗಾಯ

• ಮೇ 6: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಅಧಿಕಾರಿಗೆ ಗಾಯ.

• ಮೇ 19: ಗೌರ್ಮುಂಡ್ ಗ್ರಾಮದ ಕಾಡುಗಳಲ್ಲಿ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್)ದಿಂದ 5 ಕೆಜಿ ತೂಕದ ಎರಡು ಐಇಡಿಗಳ ನಾಶ.

• ಮೇ 30: ಬಿಜಾಪುರದ ಮದ್ದೀದ್ ರಾಷ್ಟ್ರೀಯ ಉದ್ಯಾನವನದಲ್ಲಿ ಐಇಡಿ ಸ್ಫೋಟದಲ್ಲಿ ಮೂವರು ಗ್ರಾಮಸ್ಥರಿಗೆ ಗಾಯ.

• ಮೇ 31: ಗುರ್ಮಕಾ ಮತ್ತು ಖೋಡ್‌ಪರ್ ಗ್ರಾಮದ ಅರಣ್ಯ ಮಾರ್ಗದಲ್ಲಿ ಭದ್ರತಾ ಪಡೆಗಳಿಂದ 10 ಐಇಡಿಗಳ ನಿಷ್ಕ್ರಿಯ.

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...